Homeಮುಖಪುಟಬಿಜೆಪಿ ಬಿಟ್ಟು ಮತ್ತೆ ಟಿಎಂಸಿ ಸೇರಲಿರುವ ಮುಕುಲ್ ರಾಯ್: ಮತ್ತಷ್ಟು ಜನ ಬರಲಿದ್ದಾರೆ ಎಂದ ಮಮತಾ...

ಬಿಜೆಪಿ ಬಿಟ್ಟು ಮತ್ತೆ ಟಿಎಂಸಿ ಸೇರಲಿರುವ ಮುಕುಲ್ ರಾಯ್: ಮತ್ತಷ್ಟು ಜನ ಬರಲಿದ್ದಾರೆ ಎಂದ ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಈಗ ಪಕ್ಷಾಂತರ ಪರ್ವ ಆರಂಭವಾಗಿದೆ. ಒಂದಾದ ಮೇಲೊಂದರಂತೆ ವಲಸೆ ಹಕ್ಕಿಗಳು ತಮ್ಮ ಹಳೆಯ ಗೂಡುಗಳಿಗೆ ಮರಳಲಾರಾಂಭಿಸಿವೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುತ್ತಿದ್ದಂತೆ ಹಿಂದೆ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೆರಿದ್ದ ನಾಯಕರು ಮತ್ತೆ ತಮ್ಮ ಹಳೆಯ ಪಕ್ಷಗಳಿಗೆ ಮರಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ನಾಯಕರ ದೊಡ್ಡ ಹಿಂಡೇ ಈಗ ತೃಣಮೂಲ ಕಾಂಗ್ರೆಸ್ ಪಕ್ಷದ ಕದ ತಟ್ಟುತ್ತಿದೆ. ಅದರ ಮೊದಲ ಭಾಗವಾಗಿ ಪಶ್ಚಿಮ ಬಂಗಾಳ ಬಿಜೆಪಿಯ ಹಿರಿಯ ನಾಯಕ ಮುಕುಲ್ ರಾಯ್ ಇಂದು ತಮ್ಮ ಪುತ್ರ ಸುಭ್ರಾಂಶು ರೊಯ್ ಅವರೊಂದಿಗೆ ತೃಣಮೂಲ್ ಕಾಂಗ್ರೆಸ್ ನ ಕೇಂದ್ರ ಕಚೇರಿಯಲ್ಲಿ ಸಿಎಂ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಿ ಪಕ್ಷ ಸೇರುವುದಾಗಿ ಘೋಷಿಸಿದ್ದಾರೆ.

ಇಷ್ಟುದಿನ ಮುಕುಲ್ ರಾಯ್ ಬಿಜೆಪಿ ತೊರೆಯಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಜೊತೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಮುಕುಲ್ ರಾಯ್ ಈ ಕುರಿತು ಸ್ಪಷ್ಟನೆ ನೀಡಿರಲಿಲ್ಲ. ಅದು ಪಶ್ಚಿಮ ಬಂಗಾಳ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಇಂದು ಮುಕುಲ್ ರಾಯ್ ಎಲ್ಲಾ ಕುತೂಹಲಗಳಿಗೆ ಮತ್ತು ವದಂತಿಗಳಿಗೆ ತೆರೆ ಎಳೆದಿದ್ದಾರೆ. ತೃಣಮೂಲ ಕಾಂಗ್ರೆಸ್ ಸೇರ್ಪಡೆ ಕುರಿತು ಅಧಿಕೃತವಾಗಿ ತಮ್ಮ ನಡೆಯನ್ನು ಬಹಿರಂಗಗೊಳಿಸಿದ್ದಾರೆ.

ಇನ್ನು ಮಮತಾ ಬ್ಯಾನರ್ಜಿಯವರು “ಮುಕುಲ್ ರಾಯ್ ವಾಪಸ್ ಬಂದಿದ್ದಾರೆ. ಅವರು ಎಂದಿಗೂ ಇತರರಂತೆ ದ್ರೋಹವೆಸಗಲಿಲ್ಲ” ಎಂದಿದ್ದಾರೆ. ಅಲ್ಲದೇ ಮತ್ತಷ್ಟು ಜನರು ಬಿಜೆಪಿಯಿಂದ ಬರಲಿದ್ದಾರೆ ಎಂದು ಹೇಳಿದ್ದಾರೆ.

ಮುಕುಲ್ ರಾಯ್ ಮಾತನಾಡಿ “ಬಿಜೆಪಿಯನ್ನು ತೊರೆದ ನಂತರ ನನ್ನ ಹಳೆಯ ಸಹೋದ್ಯೋಗಿಗಳನ್ನು ನೋಡುವುದರಲ್ಲಿ ನನಗೆ ತುಂಬಾ ಖುಷಿ ಇದೆ. ನಾನು ಬಿಜೆಪಿಯಲ್ಲಿ ಇರಲು ಸಾಧ್ಯವಿಲ್ಲ. ಮಮತಾ ಬ್ಯಾನರ್ಜಿ ಬಂಗಾಳದ ಮತ್ತು ಭಾರತದ ಏಕೈಕ ನಾಯಕಿ” ಎಂದು ಬಣ್ಣಿಸಿದ್ದಾರೆ.

ಮುಕುಲ್ ರಾಯ್ ಬಿಜೆಪಿ ತೊರೆಯಲು ಕಾರಣಗಳೇನು?

ತೃಣಮೂಲ ಕಾಂಗ್ರೆಸ್ ನಿಂದ ಮೊಟ್ಟ ಮೊದಲ ಬಾರಿಗೆ‌ ಬಿಜೆಪಿ ಸೇರಿದ ನಾಯಕರೆಂದರೆ ಅದು ಮುಕುಲ್ ರಾಯ್. 2017 ರಲ್ಲಿ ಮುಕುಲ್ ರಾಯ್ TMC ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಅದಾದನಂತರ ಮುಕುಲ್ ರಾಯ್ ಅವರನ್ನು ಬಿಜೆಪಿ ಪಶ್ಚಿಮ ಬಂಗಾಳದ ರಾಜ್ಯಾಧ್ಯಕ್ಷರನ್ನಾಗಿಯೂ ನೇಮಿಸಿತ್ತು. ಆದರೆ ದಿನ ಕಳೆದಂತೆ ಮುಕುಲ್ ರಾಯ್ ಅವರಿಗೆ ಬಿಜೆಪಿಯಲ್ಲಿ ಮೊದಲಿದ್ದ ಸ್ಥಾನಮಾನ ಮತ್ತು ಗೌರವ ಉಳಿಯಲಿಲ್ಲ.

ಬಿಜೆಪಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸೋತ ಕಾರಣಕ್ಕಾಗಿ ಮಾತ್ರ ಮುಕುಲ್ ರಾಯ್ ಬಿಜೆಪಿಯನ್ನು ತೊರೆಯುತ್ತಿಲ್ಲ. ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ನ ತೃಣಮೂಲ ತೊರೆದು ಬಿಜೆಪಿ ಸೇರಿದ ನಾಯಕರ ದಂಡಿನ ಪ್ರಭಾವವೂ ಮುಕುಲ್ ರಾಯ್ ಅವರನ್ನು ಬಿಜೆಪಿಯಲ್ಲಿ ಮೂಲೆಗುಂಪಾಗಿಸಿದೆ. ಮುಖ್ಯವಾಗಿ ಒಂದು ಕಾಲದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆತ್ಮೀಯರಾಗಿದ್ದ ಸುವೇಂಧು ಅಧಿಕಾರಿ ಬಿಜೆಪಿ ಸೇರಿ ರಾಜ್ಯದ ಅಗ್ರ ನಾಯಕರಾಗಿ ಬೆಳೆದಿರುವುದು ಮುಕುಲ್ ರಾಯ್ ಅವರಿಗೆ ಇರಿಸು ಮುರುಸು ಉಂಟುಮಾಡಿದೆ. ಈ ಕುರಿತು ಅವರು ತಮ್ಮ ಆಪ್ತರಲ್ಲಿ ಹೇಳಿಕೊಂಡಿದ್ದಾರೆ. ಬಿಜೆಪಿಯಲ್ಲಿನ ಉಸಿರುಕಟ್ಟಿಸುವ ವಾತಾವರಣದಿಂದಾಗಿ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದೇನೆ ಎಂದು ಮುಕುಲ್ ರಾಯ್ ಹೇಳಿಕೊಂಡಿದ್ದಾರೆ.

ಇನ್ನೊಂದು ಮುಖ್ಯ ವಿಚಾರವೆಂದರೆ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿಯ ಭರ್ಜರಿ ಗೆಲುವಿನ ನಂತರ ಬಿಜೆಪಿಯ ಇತರ ನಾಯಕರಂತೆ ಮುಕುಲ್ ರಾಯ್ ಅವರಿಗೂ ತಮ್ಮ ರಾಜಕೀಯ ಭವಿಷ್ಯದ ಕುರಿತು ಅನಿಶ್ಚಿತತೆ ಕಾಡಲು ಆರಂಭವಾಗಿದೆ. ಮಮತಾ ಬ್ಯಾನರ್ಜಿಯವರಿಗೆ ಬಂಗಾಳದ ನಾಡಿ ಮಿಡಿತ ಗೊತ್ತಿದೆ. ಬಿಜೆಪಿ ಎಷ್ಟು ದೊಡ್ಡ ಪಕ್ಷವಾದರೂ ಬಂಗಾಳಕ್ಕೆ ಹೊರಗಿನ ಪಕ್ಷವೇ. ಬೆಂಗಾಳಿಗಳು ಬಿಜೆಪಿಯನ್ನು ಒಪ್ಪಲು ತಯಾರಿಲ್ಲ ಎಂಬ ಭಾವನೆ  ಮುಕುಲ್ ರಾಯ್ ಸೇರಿ ಪಕ್ಷ ತೊರೆಯಲು ಸಿದ್ಧರಾಗಿರುವ ಬಿಜೆಪಿಯ ಹಿರಿಯ ನಾಯಕರಲ್ಲಿ ಬೆಳೆಯತೊಡಗಿದೆ. ಈ ಎಲ್ಲ ಕಾರಣಗಳಿಂದ ಮುಕುಲ್ ರೊಯ್ ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್ ಕದತಟ್ಟಲು ಕಾರಣಗಳೆಂದು ಹೇಳಲಾಗುತ್ತಿದೆ.

ಕಳೆದ ವಾರ ಮುಕುಲ್ ರಾಯ್ ಕೊಲ್ಕತ್ತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮಮತಾ ಬ್ಯಾನರ್ಜಿ ಅವರ ಸಂಬಂಧಿ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ ಮುಕುಲ್ ರಾಯ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಆಗಲೇ ಮುಕುಲ್ ರಾಯ್ ಬಿಜೆಪಿ ತೊರೆಯುವ ನಿರ್ಧಾರಕ್ಕೆ ಬಂದಿದ್ದರೆಂದು ಹೇಳಲಾಗುತ್ತಿದೆ. ಮಾರನೇ ದಿನ ಪ್ರಧಾನಿ ಮೋದಿಯವರು ರಾಯ್ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದಾಗ ಮುಕುಲ್ ರಾಯ್ ಬಿಜೆಪಿ ತೊರೆಯುವ ಕುರಿತು ಸಂದೇಹಗಳು ಹುಟ್ಟಿಕೊಂಡಿದ್ದವು. ಇಂದು ಮುಕುಲ್ ರೊಯ್ ತಮ್ಮ ಪುತ್ರ  ಸುಭ್ರಾಂಶು ರೊಯ್ ಅವರೊಂದಿಗೆ ತೃಣಮೂಲ ರಾಜ್ಯ ಕಚೇರಿಗೆ ಭೇಟಿ ನೀಡುವ ಮೂಲಕ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಎದ್ದಿರುವ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.


ಇದನ್ನೂ ಓದಿ : ಬಹುಶಃ ಸಚಿನ್ ತೆಂಡೂಲ್ಕರ್ ಜೊತೆ ಮಾತನಾಡಿರಬಹುದು: ಸಚಿನ್ ಪೈಲಟ್ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...