Homeಮುಖಪುಟಬಿಜೆಪಿ ಬಿಟ್ಟು ಮತ್ತೆ ಟಿಎಂಸಿ ಸೇರಲಿರುವ ಮುಕುಲ್ ರಾಯ್: ಮತ್ತಷ್ಟು ಜನ ಬರಲಿದ್ದಾರೆ ಎಂದ ಮಮತಾ...

ಬಿಜೆಪಿ ಬಿಟ್ಟು ಮತ್ತೆ ಟಿಎಂಸಿ ಸೇರಲಿರುವ ಮುಕುಲ್ ರಾಯ್: ಮತ್ತಷ್ಟು ಜನ ಬರಲಿದ್ದಾರೆ ಎಂದ ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಈಗ ಪಕ್ಷಾಂತರ ಪರ್ವ ಆರಂಭವಾಗಿದೆ. ಒಂದಾದ ಮೇಲೊಂದರಂತೆ ವಲಸೆ ಹಕ್ಕಿಗಳು ತಮ್ಮ ಹಳೆಯ ಗೂಡುಗಳಿಗೆ ಮರಳಲಾರಾಂಭಿಸಿವೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುತ್ತಿದ್ದಂತೆ ಹಿಂದೆ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೆರಿದ್ದ ನಾಯಕರು ಮತ್ತೆ ತಮ್ಮ ಹಳೆಯ ಪಕ್ಷಗಳಿಗೆ ಮರಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ನಾಯಕರ ದೊಡ್ಡ ಹಿಂಡೇ ಈಗ ತೃಣಮೂಲ ಕಾಂಗ್ರೆಸ್ ಪಕ್ಷದ ಕದ ತಟ್ಟುತ್ತಿದೆ. ಅದರ ಮೊದಲ ಭಾಗವಾಗಿ ಪಶ್ಚಿಮ ಬಂಗಾಳ ಬಿಜೆಪಿಯ ಹಿರಿಯ ನಾಯಕ ಮುಕುಲ್ ರಾಯ್ ಇಂದು ತಮ್ಮ ಪುತ್ರ ಸುಭ್ರಾಂಶು ರೊಯ್ ಅವರೊಂದಿಗೆ ತೃಣಮೂಲ್ ಕಾಂಗ್ರೆಸ್ ನ ಕೇಂದ್ರ ಕಚೇರಿಯಲ್ಲಿ ಸಿಎಂ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಿ ಪಕ್ಷ ಸೇರುವುದಾಗಿ ಘೋಷಿಸಿದ್ದಾರೆ.

ಇಷ್ಟುದಿನ ಮುಕುಲ್ ರಾಯ್ ಬಿಜೆಪಿ ತೊರೆಯಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಜೊತೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಮುಕುಲ್ ರಾಯ್ ಈ ಕುರಿತು ಸ್ಪಷ್ಟನೆ ನೀಡಿರಲಿಲ್ಲ. ಅದು ಪಶ್ಚಿಮ ಬಂಗಾಳ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಇಂದು ಮುಕುಲ್ ರಾಯ್ ಎಲ್ಲಾ ಕುತೂಹಲಗಳಿಗೆ ಮತ್ತು ವದಂತಿಗಳಿಗೆ ತೆರೆ ಎಳೆದಿದ್ದಾರೆ. ತೃಣಮೂಲ ಕಾಂಗ್ರೆಸ್ ಸೇರ್ಪಡೆ ಕುರಿತು ಅಧಿಕೃತವಾಗಿ ತಮ್ಮ ನಡೆಯನ್ನು ಬಹಿರಂಗಗೊಳಿಸಿದ್ದಾರೆ.

ಇನ್ನು ಮಮತಾ ಬ್ಯಾನರ್ಜಿಯವರು “ಮುಕುಲ್ ರಾಯ್ ವಾಪಸ್ ಬಂದಿದ್ದಾರೆ. ಅವರು ಎಂದಿಗೂ ಇತರರಂತೆ ದ್ರೋಹವೆಸಗಲಿಲ್ಲ” ಎಂದಿದ್ದಾರೆ. ಅಲ್ಲದೇ ಮತ್ತಷ್ಟು ಜನರು ಬಿಜೆಪಿಯಿಂದ ಬರಲಿದ್ದಾರೆ ಎಂದು ಹೇಳಿದ್ದಾರೆ.

ಮುಕುಲ್ ರಾಯ್ ಮಾತನಾಡಿ “ಬಿಜೆಪಿಯನ್ನು ತೊರೆದ ನಂತರ ನನ್ನ ಹಳೆಯ ಸಹೋದ್ಯೋಗಿಗಳನ್ನು ನೋಡುವುದರಲ್ಲಿ ನನಗೆ ತುಂಬಾ ಖುಷಿ ಇದೆ. ನಾನು ಬಿಜೆಪಿಯಲ್ಲಿ ಇರಲು ಸಾಧ್ಯವಿಲ್ಲ. ಮಮತಾ ಬ್ಯಾನರ್ಜಿ ಬಂಗಾಳದ ಮತ್ತು ಭಾರತದ ಏಕೈಕ ನಾಯಕಿ” ಎಂದು ಬಣ್ಣಿಸಿದ್ದಾರೆ.

ಮುಕುಲ್ ರಾಯ್ ಬಿಜೆಪಿ ತೊರೆಯಲು ಕಾರಣಗಳೇನು?

ತೃಣಮೂಲ ಕಾಂಗ್ರೆಸ್ ನಿಂದ ಮೊಟ್ಟ ಮೊದಲ ಬಾರಿಗೆ‌ ಬಿಜೆಪಿ ಸೇರಿದ ನಾಯಕರೆಂದರೆ ಅದು ಮುಕುಲ್ ರಾಯ್. 2017 ರಲ್ಲಿ ಮುಕುಲ್ ರಾಯ್ TMC ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಅದಾದನಂತರ ಮುಕುಲ್ ರಾಯ್ ಅವರನ್ನು ಬಿಜೆಪಿ ಪಶ್ಚಿಮ ಬಂಗಾಳದ ರಾಜ್ಯಾಧ್ಯಕ್ಷರನ್ನಾಗಿಯೂ ನೇಮಿಸಿತ್ತು. ಆದರೆ ದಿನ ಕಳೆದಂತೆ ಮುಕುಲ್ ರಾಯ್ ಅವರಿಗೆ ಬಿಜೆಪಿಯಲ್ಲಿ ಮೊದಲಿದ್ದ ಸ್ಥಾನಮಾನ ಮತ್ತು ಗೌರವ ಉಳಿಯಲಿಲ್ಲ.

ಬಿಜೆಪಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸೋತ ಕಾರಣಕ್ಕಾಗಿ ಮಾತ್ರ ಮುಕುಲ್ ರಾಯ್ ಬಿಜೆಪಿಯನ್ನು ತೊರೆಯುತ್ತಿಲ್ಲ. ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ನ ತೃಣಮೂಲ ತೊರೆದು ಬಿಜೆಪಿ ಸೇರಿದ ನಾಯಕರ ದಂಡಿನ ಪ್ರಭಾವವೂ ಮುಕುಲ್ ರಾಯ್ ಅವರನ್ನು ಬಿಜೆಪಿಯಲ್ಲಿ ಮೂಲೆಗುಂಪಾಗಿಸಿದೆ. ಮುಖ್ಯವಾಗಿ ಒಂದು ಕಾಲದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆತ್ಮೀಯರಾಗಿದ್ದ ಸುವೇಂಧು ಅಧಿಕಾರಿ ಬಿಜೆಪಿ ಸೇರಿ ರಾಜ್ಯದ ಅಗ್ರ ನಾಯಕರಾಗಿ ಬೆಳೆದಿರುವುದು ಮುಕುಲ್ ರಾಯ್ ಅವರಿಗೆ ಇರಿಸು ಮುರುಸು ಉಂಟುಮಾಡಿದೆ. ಈ ಕುರಿತು ಅವರು ತಮ್ಮ ಆಪ್ತರಲ್ಲಿ ಹೇಳಿಕೊಂಡಿದ್ದಾರೆ. ಬಿಜೆಪಿಯಲ್ಲಿನ ಉಸಿರುಕಟ್ಟಿಸುವ ವಾತಾವರಣದಿಂದಾಗಿ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದೇನೆ ಎಂದು ಮುಕುಲ್ ರಾಯ್ ಹೇಳಿಕೊಂಡಿದ್ದಾರೆ.

ಇನ್ನೊಂದು ಮುಖ್ಯ ವಿಚಾರವೆಂದರೆ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿಯ ಭರ್ಜರಿ ಗೆಲುವಿನ ನಂತರ ಬಿಜೆಪಿಯ ಇತರ ನಾಯಕರಂತೆ ಮುಕುಲ್ ರಾಯ್ ಅವರಿಗೂ ತಮ್ಮ ರಾಜಕೀಯ ಭವಿಷ್ಯದ ಕುರಿತು ಅನಿಶ್ಚಿತತೆ ಕಾಡಲು ಆರಂಭವಾಗಿದೆ. ಮಮತಾ ಬ್ಯಾನರ್ಜಿಯವರಿಗೆ ಬಂಗಾಳದ ನಾಡಿ ಮಿಡಿತ ಗೊತ್ತಿದೆ. ಬಿಜೆಪಿ ಎಷ್ಟು ದೊಡ್ಡ ಪಕ್ಷವಾದರೂ ಬಂಗಾಳಕ್ಕೆ ಹೊರಗಿನ ಪಕ್ಷವೇ. ಬೆಂಗಾಳಿಗಳು ಬಿಜೆಪಿಯನ್ನು ಒಪ್ಪಲು ತಯಾರಿಲ್ಲ ಎಂಬ ಭಾವನೆ  ಮುಕುಲ್ ರಾಯ್ ಸೇರಿ ಪಕ್ಷ ತೊರೆಯಲು ಸಿದ್ಧರಾಗಿರುವ ಬಿಜೆಪಿಯ ಹಿರಿಯ ನಾಯಕರಲ್ಲಿ ಬೆಳೆಯತೊಡಗಿದೆ. ಈ ಎಲ್ಲ ಕಾರಣಗಳಿಂದ ಮುಕುಲ್ ರೊಯ್ ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್ ಕದತಟ್ಟಲು ಕಾರಣಗಳೆಂದು ಹೇಳಲಾಗುತ್ತಿದೆ.

ಕಳೆದ ವಾರ ಮುಕುಲ್ ರಾಯ್ ಕೊಲ್ಕತ್ತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮಮತಾ ಬ್ಯಾನರ್ಜಿ ಅವರ ಸಂಬಂಧಿ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ ಮುಕುಲ್ ರಾಯ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಆಗಲೇ ಮುಕುಲ್ ರಾಯ್ ಬಿಜೆಪಿ ತೊರೆಯುವ ನಿರ್ಧಾರಕ್ಕೆ ಬಂದಿದ್ದರೆಂದು ಹೇಳಲಾಗುತ್ತಿದೆ. ಮಾರನೇ ದಿನ ಪ್ರಧಾನಿ ಮೋದಿಯವರು ರಾಯ್ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದಾಗ ಮುಕುಲ್ ರಾಯ್ ಬಿಜೆಪಿ ತೊರೆಯುವ ಕುರಿತು ಸಂದೇಹಗಳು ಹುಟ್ಟಿಕೊಂಡಿದ್ದವು. ಇಂದು ಮುಕುಲ್ ರೊಯ್ ತಮ್ಮ ಪುತ್ರ  ಸುಭ್ರಾಂಶು ರೊಯ್ ಅವರೊಂದಿಗೆ ತೃಣಮೂಲ ರಾಜ್ಯ ಕಚೇರಿಗೆ ಭೇಟಿ ನೀಡುವ ಮೂಲಕ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಎದ್ದಿರುವ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.


ಇದನ್ನೂ ಓದಿ : ಬಹುಶಃ ಸಚಿನ್ ತೆಂಡೂಲ್ಕರ್ ಜೊತೆ ಮಾತನಾಡಿರಬಹುದು: ಸಚಿನ್ ಪೈಲಟ್ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...