Homeಮುಖಪುಟಬಿಜೆಪಿ ಬಿಟ್ಟು ಮತ್ತೆ ಟಿಎಂಸಿ ಸೇರಲಿರುವ ಮುಕುಲ್ ರಾಯ್: ಮತ್ತಷ್ಟು ಜನ ಬರಲಿದ್ದಾರೆ ಎಂದ ಮಮತಾ...

ಬಿಜೆಪಿ ಬಿಟ್ಟು ಮತ್ತೆ ಟಿಎಂಸಿ ಸೇರಲಿರುವ ಮುಕುಲ್ ರಾಯ್: ಮತ್ತಷ್ಟು ಜನ ಬರಲಿದ್ದಾರೆ ಎಂದ ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಈಗ ಪಕ್ಷಾಂತರ ಪರ್ವ ಆರಂಭವಾಗಿದೆ. ಒಂದಾದ ಮೇಲೊಂದರಂತೆ ವಲಸೆ ಹಕ್ಕಿಗಳು ತಮ್ಮ ಹಳೆಯ ಗೂಡುಗಳಿಗೆ ಮರಳಲಾರಾಂಭಿಸಿವೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುತ್ತಿದ್ದಂತೆ ಹಿಂದೆ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೆರಿದ್ದ ನಾಯಕರು ಮತ್ತೆ ತಮ್ಮ ಹಳೆಯ ಪಕ್ಷಗಳಿಗೆ ಮರಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ನಾಯಕರ ದೊಡ್ಡ ಹಿಂಡೇ ಈಗ ತೃಣಮೂಲ ಕಾಂಗ್ರೆಸ್ ಪಕ್ಷದ ಕದ ತಟ್ಟುತ್ತಿದೆ. ಅದರ ಮೊದಲ ಭಾಗವಾಗಿ ಪಶ್ಚಿಮ ಬಂಗಾಳ ಬಿಜೆಪಿಯ ಹಿರಿಯ ನಾಯಕ ಮುಕುಲ್ ರಾಯ್ ಇಂದು ತಮ್ಮ ಪುತ್ರ ಸುಭ್ರಾಂಶು ರೊಯ್ ಅವರೊಂದಿಗೆ ತೃಣಮೂಲ್ ಕಾಂಗ್ರೆಸ್ ನ ಕೇಂದ್ರ ಕಚೇರಿಯಲ್ಲಿ ಸಿಎಂ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಿ ಪಕ್ಷ ಸೇರುವುದಾಗಿ ಘೋಷಿಸಿದ್ದಾರೆ.

ಇಷ್ಟುದಿನ ಮುಕುಲ್ ರಾಯ್ ಬಿಜೆಪಿ ತೊರೆಯಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಜೊತೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಮುಕುಲ್ ರಾಯ್ ಈ ಕುರಿತು ಸ್ಪಷ್ಟನೆ ನೀಡಿರಲಿಲ್ಲ. ಅದು ಪಶ್ಚಿಮ ಬಂಗಾಳ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಇಂದು ಮುಕುಲ್ ರಾಯ್ ಎಲ್ಲಾ ಕುತೂಹಲಗಳಿಗೆ ಮತ್ತು ವದಂತಿಗಳಿಗೆ ತೆರೆ ಎಳೆದಿದ್ದಾರೆ. ತೃಣಮೂಲ ಕಾಂಗ್ರೆಸ್ ಸೇರ್ಪಡೆ ಕುರಿತು ಅಧಿಕೃತವಾಗಿ ತಮ್ಮ ನಡೆಯನ್ನು ಬಹಿರಂಗಗೊಳಿಸಿದ್ದಾರೆ.

ಇನ್ನು ಮಮತಾ ಬ್ಯಾನರ್ಜಿಯವರು “ಮುಕುಲ್ ರಾಯ್ ವಾಪಸ್ ಬಂದಿದ್ದಾರೆ. ಅವರು ಎಂದಿಗೂ ಇತರರಂತೆ ದ್ರೋಹವೆಸಗಲಿಲ್ಲ” ಎಂದಿದ್ದಾರೆ. ಅಲ್ಲದೇ ಮತ್ತಷ್ಟು ಜನರು ಬಿಜೆಪಿಯಿಂದ ಬರಲಿದ್ದಾರೆ ಎಂದು ಹೇಳಿದ್ದಾರೆ.

ಮುಕುಲ್ ರಾಯ್ ಮಾತನಾಡಿ “ಬಿಜೆಪಿಯನ್ನು ತೊರೆದ ನಂತರ ನನ್ನ ಹಳೆಯ ಸಹೋದ್ಯೋಗಿಗಳನ್ನು ನೋಡುವುದರಲ್ಲಿ ನನಗೆ ತುಂಬಾ ಖುಷಿ ಇದೆ. ನಾನು ಬಿಜೆಪಿಯಲ್ಲಿ ಇರಲು ಸಾಧ್ಯವಿಲ್ಲ. ಮಮತಾ ಬ್ಯಾನರ್ಜಿ ಬಂಗಾಳದ ಮತ್ತು ಭಾರತದ ಏಕೈಕ ನಾಯಕಿ” ಎಂದು ಬಣ್ಣಿಸಿದ್ದಾರೆ.

ಮುಕುಲ್ ರಾಯ್ ಬಿಜೆಪಿ ತೊರೆಯಲು ಕಾರಣಗಳೇನು?

ತೃಣಮೂಲ ಕಾಂಗ್ರೆಸ್ ನಿಂದ ಮೊಟ್ಟ ಮೊದಲ ಬಾರಿಗೆ‌ ಬಿಜೆಪಿ ಸೇರಿದ ನಾಯಕರೆಂದರೆ ಅದು ಮುಕುಲ್ ರಾಯ್. 2017 ರಲ್ಲಿ ಮುಕುಲ್ ರಾಯ್ TMC ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಅದಾದನಂತರ ಮುಕುಲ್ ರಾಯ್ ಅವರನ್ನು ಬಿಜೆಪಿ ಪಶ್ಚಿಮ ಬಂಗಾಳದ ರಾಜ್ಯಾಧ್ಯಕ್ಷರನ್ನಾಗಿಯೂ ನೇಮಿಸಿತ್ತು. ಆದರೆ ದಿನ ಕಳೆದಂತೆ ಮುಕುಲ್ ರಾಯ್ ಅವರಿಗೆ ಬಿಜೆಪಿಯಲ್ಲಿ ಮೊದಲಿದ್ದ ಸ್ಥಾನಮಾನ ಮತ್ತು ಗೌರವ ಉಳಿಯಲಿಲ್ಲ.

ಬಿಜೆಪಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸೋತ ಕಾರಣಕ್ಕಾಗಿ ಮಾತ್ರ ಮುಕುಲ್ ರಾಯ್ ಬಿಜೆಪಿಯನ್ನು ತೊರೆಯುತ್ತಿಲ್ಲ. ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ನ ತೃಣಮೂಲ ತೊರೆದು ಬಿಜೆಪಿ ಸೇರಿದ ನಾಯಕರ ದಂಡಿನ ಪ್ರಭಾವವೂ ಮುಕುಲ್ ರಾಯ್ ಅವರನ್ನು ಬಿಜೆಪಿಯಲ್ಲಿ ಮೂಲೆಗುಂಪಾಗಿಸಿದೆ. ಮುಖ್ಯವಾಗಿ ಒಂದು ಕಾಲದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆತ್ಮೀಯರಾಗಿದ್ದ ಸುವೇಂಧು ಅಧಿಕಾರಿ ಬಿಜೆಪಿ ಸೇರಿ ರಾಜ್ಯದ ಅಗ್ರ ನಾಯಕರಾಗಿ ಬೆಳೆದಿರುವುದು ಮುಕುಲ್ ರಾಯ್ ಅವರಿಗೆ ಇರಿಸು ಮುರುಸು ಉಂಟುಮಾಡಿದೆ. ಈ ಕುರಿತು ಅವರು ತಮ್ಮ ಆಪ್ತರಲ್ಲಿ ಹೇಳಿಕೊಂಡಿದ್ದಾರೆ. ಬಿಜೆಪಿಯಲ್ಲಿನ ಉಸಿರುಕಟ್ಟಿಸುವ ವಾತಾವರಣದಿಂದಾಗಿ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದೇನೆ ಎಂದು ಮುಕುಲ್ ರಾಯ್ ಹೇಳಿಕೊಂಡಿದ್ದಾರೆ.

ಇನ್ನೊಂದು ಮುಖ್ಯ ವಿಚಾರವೆಂದರೆ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿಯ ಭರ್ಜರಿ ಗೆಲುವಿನ ನಂತರ ಬಿಜೆಪಿಯ ಇತರ ನಾಯಕರಂತೆ ಮುಕುಲ್ ರಾಯ್ ಅವರಿಗೂ ತಮ್ಮ ರಾಜಕೀಯ ಭವಿಷ್ಯದ ಕುರಿತು ಅನಿಶ್ಚಿತತೆ ಕಾಡಲು ಆರಂಭವಾಗಿದೆ. ಮಮತಾ ಬ್ಯಾನರ್ಜಿಯವರಿಗೆ ಬಂಗಾಳದ ನಾಡಿ ಮಿಡಿತ ಗೊತ್ತಿದೆ. ಬಿಜೆಪಿ ಎಷ್ಟು ದೊಡ್ಡ ಪಕ್ಷವಾದರೂ ಬಂಗಾಳಕ್ಕೆ ಹೊರಗಿನ ಪಕ್ಷವೇ. ಬೆಂಗಾಳಿಗಳು ಬಿಜೆಪಿಯನ್ನು ಒಪ್ಪಲು ತಯಾರಿಲ್ಲ ಎಂಬ ಭಾವನೆ  ಮುಕುಲ್ ರಾಯ್ ಸೇರಿ ಪಕ್ಷ ತೊರೆಯಲು ಸಿದ್ಧರಾಗಿರುವ ಬಿಜೆಪಿಯ ಹಿರಿಯ ನಾಯಕರಲ್ಲಿ ಬೆಳೆಯತೊಡಗಿದೆ. ಈ ಎಲ್ಲ ಕಾರಣಗಳಿಂದ ಮುಕುಲ್ ರೊಯ್ ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್ ಕದತಟ್ಟಲು ಕಾರಣಗಳೆಂದು ಹೇಳಲಾಗುತ್ತಿದೆ.

ಕಳೆದ ವಾರ ಮುಕುಲ್ ರಾಯ್ ಕೊಲ್ಕತ್ತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮಮತಾ ಬ್ಯಾನರ್ಜಿ ಅವರ ಸಂಬಂಧಿ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ ಮುಕುಲ್ ರಾಯ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಆಗಲೇ ಮುಕುಲ್ ರಾಯ್ ಬಿಜೆಪಿ ತೊರೆಯುವ ನಿರ್ಧಾರಕ್ಕೆ ಬಂದಿದ್ದರೆಂದು ಹೇಳಲಾಗುತ್ತಿದೆ. ಮಾರನೇ ದಿನ ಪ್ರಧಾನಿ ಮೋದಿಯವರು ರಾಯ್ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದಾಗ ಮುಕುಲ್ ರಾಯ್ ಬಿಜೆಪಿ ತೊರೆಯುವ ಕುರಿತು ಸಂದೇಹಗಳು ಹುಟ್ಟಿಕೊಂಡಿದ್ದವು. ಇಂದು ಮುಕುಲ್ ರೊಯ್ ತಮ್ಮ ಪುತ್ರ  ಸುಭ್ರಾಂಶು ರೊಯ್ ಅವರೊಂದಿಗೆ ತೃಣಮೂಲ ರಾಜ್ಯ ಕಚೇರಿಗೆ ಭೇಟಿ ನೀಡುವ ಮೂಲಕ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಎದ್ದಿರುವ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.


ಇದನ್ನೂ ಓದಿ : ಬಹುಶಃ ಸಚಿನ್ ತೆಂಡೂಲ್ಕರ್ ಜೊತೆ ಮಾತನಾಡಿರಬಹುದು: ಸಚಿನ್ ಪೈಲಟ್ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...