Homeಮುಖಪುಟಬಿಜೆಪಿ ಬಿಟ್ಟು ಮತ್ತೆ ಟಿಎಂಸಿ ಸೇರಲಿರುವ ಮುಕುಲ್ ರಾಯ್: ಮತ್ತಷ್ಟು ಜನ ಬರಲಿದ್ದಾರೆ ಎಂದ ಮಮತಾ...

ಬಿಜೆಪಿ ಬಿಟ್ಟು ಮತ್ತೆ ಟಿಎಂಸಿ ಸೇರಲಿರುವ ಮುಕುಲ್ ರಾಯ್: ಮತ್ತಷ್ಟು ಜನ ಬರಲಿದ್ದಾರೆ ಎಂದ ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಈಗ ಪಕ್ಷಾಂತರ ಪರ್ವ ಆರಂಭವಾಗಿದೆ. ಒಂದಾದ ಮೇಲೊಂದರಂತೆ ವಲಸೆ ಹಕ್ಕಿಗಳು ತಮ್ಮ ಹಳೆಯ ಗೂಡುಗಳಿಗೆ ಮರಳಲಾರಾಂಭಿಸಿವೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುತ್ತಿದ್ದಂತೆ ಹಿಂದೆ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೆರಿದ್ದ ನಾಯಕರು ಮತ್ತೆ ತಮ್ಮ ಹಳೆಯ ಪಕ್ಷಗಳಿಗೆ ಮರಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ನಾಯಕರ ದೊಡ್ಡ ಹಿಂಡೇ ಈಗ ತೃಣಮೂಲ ಕಾಂಗ್ರೆಸ್ ಪಕ್ಷದ ಕದ ತಟ್ಟುತ್ತಿದೆ. ಅದರ ಮೊದಲ ಭಾಗವಾಗಿ ಪಶ್ಚಿಮ ಬಂಗಾಳ ಬಿಜೆಪಿಯ ಹಿರಿಯ ನಾಯಕ ಮುಕುಲ್ ರಾಯ್ ಇಂದು ತಮ್ಮ ಪುತ್ರ ಸುಭ್ರಾಂಶು ರೊಯ್ ಅವರೊಂದಿಗೆ ತೃಣಮೂಲ್ ಕಾಂಗ್ರೆಸ್ ನ ಕೇಂದ್ರ ಕಚೇರಿಯಲ್ಲಿ ಸಿಎಂ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಿ ಪಕ್ಷ ಸೇರುವುದಾಗಿ ಘೋಷಿಸಿದ್ದಾರೆ.

ಇಷ್ಟುದಿನ ಮುಕುಲ್ ರಾಯ್ ಬಿಜೆಪಿ ತೊರೆಯಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಜೊತೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಮುಕುಲ್ ರಾಯ್ ಈ ಕುರಿತು ಸ್ಪಷ್ಟನೆ ನೀಡಿರಲಿಲ್ಲ. ಅದು ಪಶ್ಚಿಮ ಬಂಗಾಳ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಇಂದು ಮುಕುಲ್ ರಾಯ್ ಎಲ್ಲಾ ಕುತೂಹಲಗಳಿಗೆ ಮತ್ತು ವದಂತಿಗಳಿಗೆ ತೆರೆ ಎಳೆದಿದ್ದಾರೆ. ತೃಣಮೂಲ ಕಾಂಗ್ರೆಸ್ ಸೇರ್ಪಡೆ ಕುರಿತು ಅಧಿಕೃತವಾಗಿ ತಮ್ಮ ನಡೆಯನ್ನು ಬಹಿರಂಗಗೊಳಿಸಿದ್ದಾರೆ.

ಇನ್ನು ಮಮತಾ ಬ್ಯಾನರ್ಜಿಯವರು “ಮುಕುಲ್ ರಾಯ್ ವಾಪಸ್ ಬಂದಿದ್ದಾರೆ. ಅವರು ಎಂದಿಗೂ ಇತರರಂತೆ ದ್ರೋಹವೆಸಗಲಿಲ್ಲ” ಎಂದಿದ್ದಾರೆ. ಅಲ್ಲದೇ ಮತ್ತಷ್ಟು ಜನರು ಬಿಜೆಪಿಯಿಂದ ಬರಲಿದ್ದಾರೆ ಎಂದು ಹೇಳಿದ್ದಾರೆ.

ಮುಕುಲ್ ರಾಯ್ ಮಾತನಾಡಿ “ಬಿಜೆಪಿಯನ್ನು ತೊರೆದ ನಂತರ ನನ್ನ ಹಳೆಯ ಸಹೋದ್ಯೋಗಿಗಳನ್ನು ನೋಡುವುದರಲ್ಲಿ ನನಗೆ ತುಂಬಾ ಖುಷಿ ಇದೆ. ನಾನು ಬಿಜೆಪಿಯಲ್ಲಿ ಇರಲು ಸಾಧ್ಯವಿಲ್ಲ. ಮಮತಾ ಬ್ಯಾನರ್ಜಿ ಬಂಗಾಳದ ಮತ್ತು ಭಾರತದ ಏಕೈಕ ನಾಯಕಿ” ಎಂದು ಬಣ್ಣಿಸಿದ್ದಾರೆ.

ಮುಕುಲ್ ರಾಯ್ ಬಿಜೆಪಿ ತೊರೆಯಲು ಕಾರಣಗಳೇನು?

ತೃಣಮೂಲ ಕಾಂಗ್ರೆಸ್ ನಿಂದ ಮೊಟ್ಟ ಮೊದಲ ಬಾರಿಗೆ‌ ಬಿಜೆಪಿ ಸೇರಿದ ನಾಯಕರೆಂದರೆ ಅದು ಮುಕುಲ್ ರಾಯ್. 2017 ರಲ್ಲಿ ಮುಕುಲ್ ರಾಯ್ TMC ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಅದಾದನಂತರ ಮುಕುಲ್ ರಾಯ್ ಅವರನ್ನು ಬಿಜೆಪಿ ಪಶ್ಚಿಮ ಬಂಗಾಳದ ರಾಜ್ಯಾಧ್ಯಕ್ಷರನ್ನಾಗಿಯೂ ನೇಮಿಸಿತ್ತು. ಆದರೆ ದಿನ ಕಳೆದಂತೆ ಮುಕುಲ್ ರಾಯ್ ಅವರಿಗೆ ಬಿಜೆಪಿಯಲ್ಲಿ ಮೊದಲಿದ್ದ ಸ್ಥಾನಮಾನ ಮತ್ತು ಗೌರವ ಉಳಿಯಲಿಲ್ಲ.

ಬಿಜೆಪಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸೋತ ಕಾರಣಕ್ಕಾಗಿ ಮಾತ್ರ ಮುಕುಲ್ ರಾಯ್ ಬಿಜೆಪಿಯನ್ನು ತೊರೆಯುತ್ತಿಲ್ಲ. ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ನ ತೃಣಮೂಲ ತೊರೆದು ಬಿಜೆಪಿ ಸೇರಿದ ನಾಯಕರ ದಂಡಿನ ಪ್ರಭಾವವೂ ಮುಕುಲ್ ರಾಯ್ ಅವರನ್ನು ಬಿಜೆಪಿಯಲ್ಲಿ ಮೂಲೆಗುಂಪಾಗಿಸಿದೆ. ಮುಖ್ಯವಾಗಿ ಒಂದು ಕಾಲದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆತ್ಮೀಯರಾಗಿದ್ದ ಸುವೇಂಧು ಅಧಿಕಾರಿ ಬಿಜೆಪಿ ಸೇರಿ ರಾಜ್ಯದ ಅಗ್ರ ನಾಯಕರಾಗಿ ಬೆಳೆದಿರುವುದು ಮುಕುಲ್ ರಾಯ್ ಅವರಿಗೆ ಇರಿಸು ಮುರುಸು ಉಂಟುಮಾಡಿದೆ. ಈ ಕುರಿತು ಅವರು ತಮ್ಮ ಆಪ್ತರಲ್ಲಿ ಹೇಳಿಕೊಂಡಿದ್ದಾರೆ. ಬಿಜೆಪಿಯಲ್ಲಿನ ಉಸಿರುಕಟ್ಟಿಸುವ ವಾತಾವರಣದಿಂದಾಗಿ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದೇನೆ ಎಂದು ಮುಕುಲ್ ರಾಯ್ ಹೇಳಿಕೊಂಡಿದ್ದಾರೆ.

ಇನ್ನೊಂದು ಮುಖ್ಯ ವಿಚಾರವೆಂದರೆ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿಯ ಭರ್ಜರಿ ಗೆಲುವಿನ ನಂತರ ಬಿಜೆಪಿಯ ಇತರ ನಾಯಕರಂತೆ ಮುಕುಲ್ ರಾಯ್ ಅವರಿಗೂ ತಮ್ಮ ರಾಜಕೀಯ ಭವಿಷ್ಯದ ಕುರಿತು ಅನಿಶ್ಚಿತತೆ ಕಾಡಲು ಆರಂಭವಾಗಿದೆ. ಮಮತಾ ಬ್ಯಾನರ್ಜಿಯವರಿಗೆ ಬಂಗಾಳದ ನಾಡಿ ಮಿಡಿತ ಗೊತ್ತಿದೆ. ಬಿಜೆಪಿ ಎಷ್ಟು ದೊಡ್ಡ ಪಕ್ಷವಾದರೂ ಬಂಗಾಳಕ್ಕೆ ಹೊರಗಿನ ಪಕ್ಷವೇ. ಬೆಂಗಾಳಿಗಳು ಬಿಜೆಪಿಯನ್ನು ಒಪ್ಪಲು ತಯಾರಿಲ್ಲ ಎಂಬ ಭಾವನೆ  ಮುಕುಲ್ ರಾಯ್ ಸೇರಿ ಪಕ್ಷ ತೊರೆಯಲು ಸಿದ್ಧರಾಗಿರುವ ಬಿಜೆಪಿಯ ಹಿರಿಯ ನಾಯಕರಲ್ಲಿ ಬೆಳೆಯತೊಡಗಿದೆ. ಈ ಎಲ್ಲ ಕಾರಣಗಳಿಂದ ಮುಕುಲ್ ರೊಯ್ ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್ ಕದತಟ್ಟಲು ಕಾರಣಗಳೆಂದು ಹೇಳಲಾಗುತ್ತಿದೆ.

ಕಳೆದ ವಾರ ಮುಕುಲ್ ರಾಯ್ ಕೊಲ್ಕತ್ತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮಮತಾ ಬ್ಯಾನರ್ಜಿ ಅವರ ಸಂಬಂಧಿ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ ಮುಕುಲ್ ರಾಯ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಆಗಲೇ ಮುಕುಲ್ ರಾಯ್ ಬಿಜೆಪಿ ತೊರೆಯುವ ನಿರ್ಧಾರಕ್ಕೆ ಬಂದಿದ್ದರೆಂದು ಹೇಳಲಾಗುತ್ತಿದೆ. ಮಾರನೇ ದಿನ ಪ್ರಧಾನಿ ಮೋದಿಯವರು ರಾಯ್ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದಾಗ ಮುಕುಲ್ ರಾಯ್ ಬಿಜೆಪಿ ತೊರೆಯುವ ಕುರಿತು ಸಂದೇಹಗಳು ಹುಟ್ಟಿಕೊಂಡಿದ್ದವು. ಇಂದು ಮುಕುಲ್ ರೊಯ್ ತಮ್ಮ ಪುತ್ರ  ಸುಭ್ರಾಂಶು ರೊಯ್ ಅವರೊಂದಿಗೆ ತೃಣಮೂಲ ರಾಜ್ಯ ಕಚೇರಿಗೆ ಭೇಟಿ ನೀಡುವ ಮೂಲಕ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಎದ್ದಿರುವ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.


ಇದನ್ನೂ ಓದಿ : ಬಹುಶಃ ಸಚಿನ್ ತೆಂಡೂಲ್ಕರ್ ಜೊತೆ ಮಾತನಾಡಿರಬಹುದು: ಸಚಿನ್ ಪೈಲಟ್ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....