Homeಮುಖಪುಟಬಿಜೆಪಿ ಬಿಟ್ಟು ಮತ್ತೆ ಟಿಎಂಸಿ ಸೇರಲಿರುವ ಮುಕುಲ್ ರಾಯ್: ಮತ್ತಷ್ಟು ಜನ ಬರಲಿದ್ದಾರೆ ಎಂದ ಮಮತಾ...

ಬಿಜೆಪಿ ಬಿಟ್ಟು ಮತ್ತೆ ಟಿಎಂಸಿ ಸೇರಲಿರುವ ಮುಕುಲ್ ರಾಯ್: ಮತ್ತಷ್ಟು ಜನ ಬರಲಿದ್ದಾರೆ ಎಂದ ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಈಗ ಪಕ್ಷಾಂತರ ಪರ್ವ ಆರಂಭವಾಗಿದೆ. ಒಂದಾದ ಮೇಲೊಂದರಂತೆ ವಲಸೆ ಹಕ್ಕಿಗಳು ತಮ್ಮ ಹಳೆಯ ಗೂಡುಗಳಿಗೆ ಮರಳಲಾರಾಂಭಿಸಿವೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುತ್ತಿದ್ದಂತೆ ಹಿಂದೆ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೆರಿದ್ದ ನಾಯಕರು ಮತ್ತೆ ತಮ್ಮ ಹಳೆಯ ಪಕ್ಷಗಳಿಗೆ ಮರಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ನಾಯಕರ ದೊಡ್ಡ ಹಿಂಡೇ ಈಗ ತೃಣಮೂಲ ಕಾಂಗ್ರೆಸ್ ಪಕ್ಷದ ಕದ ತಟ್ಟುತ್ತಿದೆ. ಅದರ ಮೊದಲ ಭಾಗವಾಗಿ ಪಶ್ಚಿಮ ಬಂಗಾಳ ಬಿಜೆಪಿಯ ಹಿರಿಯ ನಾಯಕ ಮುಕುಲ್ ರಾಯ್ ಇಂದು ತಮ್ಮ ಪುತ್ರ ಸುಭ್ರಾಂಶು ರೊಯ್ ಅವರೊಂದಿಗೆ ತೃಣಮೂಲ್ ಕಾಂಗ್ರೆಸ್ ನ ಕೇಂದ್ರ ಕಚೇರಿಯಲ್ಲಿ ಸಿಎಂ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಿ ಪಕ್ಷ ಸೇರುವುದಾಗಿ ಘೋಷಿಸಿದ್ದಾರೆ.

ಇಷ್ಟುದಿನ ಮುಕುಲ್ ರಾಯ್ ಬಿಜೆಪಿ ತೊರೆಯಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಜೊತೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಮುಕುಲ್ ರಾಯ್ ಈ ಕುರಿತು ಸ್ಪಷ್ಟನೆ ನೀಡಿರಲಿಲ್ಲ. ಅದು ಪಶ್ಚಿಮ ಬಂಗಾಳ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಇಂದು ಮುಕುಲ್ ರಾಯ್ ಎಲ್ಲಾ ಕುತೂಹಲಗಳಿಗೆ ಮತ್ತು ವದಂತಿಗಳಿಗೆ ತೆರೆ ಎಳೆದಿದ್ದಾರೆ. ತೃಣಮೂಲ ಕಾಂಗ್ರೆಸ್ ಸೇರ್ಪಡೆ ಕುರಿತು ಅಧಿಕೃತವಾಗಿ ತಮ್ಮ ನಡೆಯನ್ನು ಬಹಿರಂಗಗೊಳಿಸಿದ್ದಾರೆ.

ಇನ್ನು ಮಮತಾ ಬ್ಯಾನರ್ಜಿಯವರು “ಮುಕುಲ್ ರಾಯ್ ವಾಪಸ್ ಬಂದಿದ್ದಾರೆ. ಅವರು ಎಂದಿಗೂ ಇತರರಂತೆ ದ್ರೋಹವೆಸಗಲಿಲ್ಲ” ಎಂದಿದ್ದಾರೆ. ಅಲ್ಲದೇ ಮತ್ತಷ್ಟು ಜನರು ಬಿಜೆಪಿಯಿಂದ ಬರಲಿದ್ದಾರೆ ಎಂದು ಹೇಳಿದ್ದಾರೆ.

ಮುಕುಲ್ ರಾಯ್ ಮಾತನಾಡಿ “ಬಿಜೆಪಿಯನ್ನು ತೊರೆದ ನಂತರ ನನ್ನ ಹಳೆಯ ಸಹೋದ್ಯೋಗಿಗಳನ್ನು ನೋಡುವುದರಲ್ಲಿ ನನಗೆ ತುಂಬಾ ಖುಷಿ ಇದೆ. ನಾನು ಬಿಜೆಪಿಯಲ್ಲಿ ಇರಲು ಸಾಧ್ಯವಿಲ್ಲ. ಮಮತಾ ಬ್ಯಾನರ್ಜಿ ಬಂಗಾಳದ ಮತ್ತು ಭಾರತದ ಏಕೈಕ ನಾಯಕಿ” ಎಂದು ಬಣ್ಣಿಸಿದ್ದಾರೆ.

ಮುಕುಲ್ ರಾಯ್ ಬಿಜೆಪಿ ತೊರೆಯಲು ಕಾರಣಗಳೇನು?

ತೃಣಮೂಲ ಕಾಂಗ್ರೆಸ್ ನಿಂದ ಮೊಟ್ಟ ಮೊದಲ ಬಾರಿಗೆ‌ ಬಿಜೆಪಿ ಸೇರಿದ ನಾಯಕರೆಂದರೆ ಅದು ಮುಕುಲ್ ರಾಯ್. 2017 ರಲ್ಲಿ ಮುಕುಲ್ ರಾಯ್ TMC ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಅದಾದನಂತರ ಮುಕುಲ್ ರಾಯ್ ಅವರನ್ನು ಬಿಜೆಪಿ ಪಶ್ಚಿಮ ಬಂಗಾಳದ ರಾಜ್ಯಾಧ್ಯಕ್ಷರನ್ನಾಗಿಯೂ ನೇಮಿಸಿತ್ತು. ಆದರೆ ದಿನ ಕಳೆದಂತೆ ಮುಕುಲ್ ರಾಯ್ ಅವರಿಗೆ ಬಿಜೆಪಿಯಲ್ಲಿ ಮೊದಲಿದ್ದ ಸ್ಥಾನಮಾನ ಮತ್ತು ಗೌರವ ಉಳಿಯಲಿಲ್ಲ.

ಬಿಜೆಪಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸೋತ ಕಾರಣಕ್ಕಾಗಿ ಮಾತ್ರ ಮುಕುಲ್ ರಾಯ್ ಬಿಜೆಪಿಯನ್ನು ತೊರೆಯುತ್ತಿಲ್ಲ. ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ನ ತೃಣಮೂಲ ತೊರೆದು ಬಿಜೆಪಿ ಸೇರಿದ ನಾಯಕರ ದಂಡಿನ ಪ್ರಭಾವವೂ ಮುಕುಲ್ ರಾಯ್ ಅವರನ್ನು ಬಿಜೆಪಿಯಲ್ಲಿ ಮೂಲೆಗುಂಪಾಗಿಸಿದೆ. ಮುಖ್ಯವಾಗಿ ಒಂದು ಕಾಲದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆತ್ಮೀಯರಾಗಿದ್ದ ಸುವೇಂಧು ಅಧಿಕಾರಿ ಬಿಜೆಪಿ ಸೇರಿ ರಾಜ್ಯದ ಅಗ್ರ ನಾಯಕರಾಗಿ ಬೆಳೆದಿರುವುದು ಮುಕುಲ್ ರಾಯ್ ಅವರಿಗೆ ಇರಿಸು ಮುರುಸು ಉಂಟುಮಾಡಿದೆ. ಈ ಕುರಿತು ಅವರು ತಮ್ಮ ಆಪ್ತರಲ್ಲಿ ಹೇಳಿಕೊಂಡಿದ್ದಾರೆ. ಬಿಜೆಪಿಯಲ್ಲಿನ ಉಸಿರುಕಟ್ಟಿಸುವ ವಾತಾವರಣದಿಂದಾಗಿ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದೇನೆ ಎಂದು ಮುಕುಲ್ ರಾಯ್ ಹೇಳಿಕೊಂಡಿದ್ದಾರೆ.

ಇನ್ನೊಂದು ಮುಖ್ಯ ವಿಚಾರವೆಂದರೆ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿಯ ಭರ್ಜರಿ ಗೆಲುವಿನ ನಂತರ ಬಿಜೆಪಿಯ ಇತರ ನಾಯಕರಂತೆ ಮುಕುಲ್ ರಾಯ್ ಅವರಿಗೂ ತಮ್ಮ ರಾಜಕೀಯ ಭವಿಷ್ಯದ ಕುರಿತು ಅನಿಶ್ಚಿತತೆ ಕಾಡಲು ಆರಂಭವಾಗಿದೆ. ಮಮತಾ ಬ್ಯಾನರ್ಜಿಯವರಿಗೆ ಬಂಗಾಳದ ನಾಡಿ ಮಿಡಿತ ಗೊತ್ತಿದೆ. ಬಿಜೆಪಿ ಎಷ್ಟು ದೊಡ್ಡ ಪಕ್ಷವಾದರೂ ಬಂಗಾಳಕ್ಕೆ ಹೊರಗಿನ ಪಕ್ಷವೇ. ಬೆಂಗಾಳಿಗಳು ಬಿಜೆಪಿಯನ್ನು ಒಪ್ಪಲು ತಯಾರಿಲ್ಲ ಎಂಬ ಭಾವನೆ  ಮುಕುಲ್ ರಾಯ್ ಸೇರಿ ಪಕ್ಷ ತೊರೆಯಲು ಸಿದ್ಧರಾಗಿರುವ ಬಿಜೆಪಿಯ ಹಿರಿಯ ನಾಯಕರಲ್ಲಿ ಬೆಳೆಯತೊಡಗಿದೆ. ಈ ಎಲ್ಲ ಕಾರಣಗಳಿಂದ ಮುಕುಲ್ ರೊಯ್ ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್ ಕದತಟ್ಟಲು ಕಾರಣಗಳೆಂದು ಹೇಳಲಾಗುತ್ತಿದೆ.

ಕಳೆದ ವಾರ ಮುಕುಲ್ ರಾಯ್ ಕೊಲ್ಕತ್ತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮಮತಾ ಬ್ಯಾನರ್ಜಿ ಅವರ ಸಂಬಂಧಿ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ ಮುಕುಲ್ ರಾಯ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಆಗಲೇ ಮುಕುಲ್ ರಾಯ್ ಬಿಜೆಪಿ ತೊರೆಯುವ ನಿರ್ಧಾರಕ್ಕೆ ಬಂದಿದ್ದರೆಂದು ಹೇಳಲಾಗುತ್ತಿದೆ. ಮಾರನೇ ದಿನ ಪ್ರಧಾನಿ ಮೋದಿಯವರು ರಾಯ್ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದಾಗ ಮುಕುಲ್ ರಾಯ್ ಬಿಜೆಪಿ ತೊರೆಯುವ ಕುರಿತು ಸಂದೇಹಗಳು ಹುಟ್ಟಿಕೊಂಡಿದ್ದವು. ಇಂದು ಮುಕುಲ್ ರೊಯ್ ತಮ್ಮ ಪುತ್ರ  ಸುಭ್ರಾಂಶು ರೊಯ್ ಅವರೊಂದಿಗೆ ತೃಣಮೂಲ ರಾಜ್ಯ ಕಚೇರಿಗೆ ಭೇಟಿ ನೀಡುವ ಮೂಲಕ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಎದ್ದಿರುವ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.


ಇದನ್ನೂ ಓದಿ : ಬಹುಶಃ ಸಚಿನ್ ತೆಂಡೂಲ್ಕರ್ ಜೊತೆ ಮಾತನಾಡಿರಬಹುದು: ಸಚಿನ್ ಪೈಲಟ್ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...