Homeಕರ್ನಾಟಕಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ 'ವಡ್ಡರ್ಸೆ ರಘುರಾಮಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ'

ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ ‘ವಡ್ಡರ್ಸೆ ರಘುರಾಮಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’

- Advertisement -
- Advertisement -

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಈ ವರ್ಷದಿಂದ ಆರಂಭಿಸಿರುವ ‘ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ’ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರು ಭಾಜನರಾಗಿದ್ದಾರೆ.

ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಈ ಬಗ್ಗೆ ಮಾಹಿತಿ ನೀಡಿದ್ದು, “ನ್ಯಾ.ಅಶೋಕ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಶಸ್ತಿ ಆಯ್ಕೆ ಸಮಿತಿಯು ಒಮ್ಮತದಿಂದ ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು ‘ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ’ಗೆ ಆಯ್ಕೆ ಮಾಡಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಯು ₹2 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ, ವಿಶೇಷ ಲೇಖನಗಳ ಪ್ರಕಟಣೆ ಗುರುತಿಸಿ, ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ ‘ವಡ್ಡರ್ಸೆ ರಘುರಾಮಶೆಟ್ಟಿ’ ಹೆಸರಿನಲ್ಲಿ ‘ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ’ ಘೋಷಿಸಿದ್ದರು.

ಡಿ.ಉಮಾಪತಿ ಅವರ ಕುರಿತು

ಮಾರ್ಚ್ 18,1959 ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಜನಿಸಿದ ಡಿ.ಉಮಾಪತಿ ಅವರು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಬಿ.ಎ, ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಎರಡನೆ ರ‍್ಯಾಂಕ್ ಮೂಲಕ ಪಡೆದಿದ್ದಾರೆ.

ಕನ್ನಡಪ್ರಭದಲ್ಲಿ ಇಂಟರ್ನ್‌ಶಿಪ್‌ಗಾಗಿ ಸೇರಿದ ಅವರಿಗೆ, ಪ್ರತಿಭೆ ಹಾಗೂ ಸಾಮರ್ಥ್ಯದ ಕಾರಣಕ್ಕೆ ಅಲ್ಲಿ ಖಾಯಂ ಕೆಲಸ ಲಭಿಸಿತ್ತು. ‘ನ್ಯೂ ಇಂಡಿಯನ್ ಎಕ್ಸಪ್ರೆಸ್’ ಸಮೂಹ ಸಂಸ್ಥೆಯ ‘ಕನ್ನಡ ಪ್ರಭ’ದಲ್ಲಿ ಪತ್ರಕರ್ತರಾಗಿ ಕೆಲಸ ಆರಂಭಿಸಿದರು. ನಂತರ ದೆಹಲಿಗೆ ತೆರಳಿ ಕನ್ನಡ ಪ್ರಭ, ವಿಜಯ ಕರ್ನಾಟಕ ಹಾಗೂ ಪ್ರಜಾವಾಣಿ ಪತ್ರಿಕೆಗಳಿಗೆ ದೆಹಲಿ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ಪಾರ್ಲಿಮೆಂಟ್ ವರದಿ, ಚುನಾವಣಾ ವಿಶ್ಲೇಷಣೆಗಳು, ಸುಪ್ರೀಂ ಕೋರ್ಟುಗಳಲ್ಲಿನ ನದಿ ನೀರು ನ್ಯಾಯಾಧೀಕರಣ ವ್ಯಾಜ್ಯಗಳ, ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳು, ಪ್ರಧಾನ ಮಂತ್ರಿಗಳು ಹಾಗೂ ವಿದೇಶಾಂಗ ಸಚಿವರ ವಿದೇಶ ಪ್ರವಾಸದ ಜೊತೆಗೂಡಿ ರಾಜತಾಂತ್ರಿಕ ವರದಿಗಾರಿಕೆಯಲ್ಲಿ ವಿಶಿಷ್ಟ ಅನುಭವ ಇವರದ್ದಾಗಿದೆ.

ಡಿ. ಉಮಾಪತಿ ಅವರು ಪ್ರೆಸ್ ಕ್ಲಬ್ ಆಫ್ ಇಂಡಿಯಾದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು. ಆಂದೋಲನ, ರೈತ ಚಳವಳಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿಯೂ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ‘ನ್ಯಾಯಪಥ’ (ಗೌರಿ ಮಿಡಿಯಾ) ಮತ್ತು ’ಈ ದಿನ.ಕಾಮ್‌’ ಮಾಧ್ಯಮ ಸಂಸ್ಥೆಯ ಕನ್ಸಲ್ಟಿಂಗ್ ಎಡಿಟರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ದೆಹಲಿ ನೋಟ’, ’ಪದಕುಸಿಯೇ ನೆಲವಿಲ್ಲ’ ಉಮಾಪತಿ ಅವರ ಎರಡು ಮಹತ್ವದ ಕೃತಿಗಳು ಪ್ರಕಟವಾಗಿವೆ.

ಇದನ್ನೂ ಓದಿ; ಕಾಂಗ್ರೆಸ್ ‘ಜನಕಲ್ಯಾಣ ಸಮಾವೇಶ’ಕ್ಕೆ ಹರಿದುಬಂದ ಜನಸಾಗರ; ದೇವೇಗೌಡರ ತವರಿನಲ್ಲಿ ‘ಕೈ’ ನಾಯಕರ ಶಕ್ತಿ ಪ್ರದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...