Homeಕರ್ನಾಟಕಮೈಸೂರು: ಹಿರಿಯ ಪತ್ರಕರ್ತ ‘ಹಾಡುಪಾಡು ರಾಮು’ ನಿಧನ

ಮೈಸೂರು: ಹಿರಿಯ ಪತ್ರಕರ್ತ ‘ಹಾಡುಪಾಡು ರಾಮು’ ನಿಧನ

- Advertisement -
- Advertisement -

ಮೈಸೂರಿನ ಪ್ರಾದೇಶಿಕ ದಿನಪತ್ರಿಕೆಯಾದ ‘ಆಂದೋಲನ’ದ ‘ಹಾಡುಪಾಡು’ ಸಂಚಿಕೆಗೆ ವಿಶೇಷತೆಯನ್ನು ತಂದುಕೊಟ್ಟು ‘ಹಾಡುಪಾಡು ರಾಮು’ ಎಂದೇ ಖ್ಯಾತರಾಗಿದ್ದ, ಹಿರಿಯ ಪತ್ರಕರ್ತ ಟಿ.ಎಸ್.ರಾಮಸ್ವಾಮಿ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ.

ಹೃದಯದಂತಿರುವ ಹಾಡುಪಾಡು ಸಂಚಿಕೆಯ ಆರಂಭಕ್ಕೆ ಮೇಟಿಯಾಗಿದ್ದ ‘ಹಾಡುಪಾಡು ರಾಮು’ ಎಂದೇ ಖ್ಯಾತಿಯಾಗಿದ್ದ ಹಿರಿಯ ಪತ್ರಕರ್ತ ಟಿ.ಎಸ್.ರಾಮಸ್ವಾಮಿ (69) ಅವರು ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ.

ನಗರದ ಸರಸ್ವತಿಪುರಂನ 9ನೇ ಕ್ರಾಸ್‌ನಲ್ಲಿರುವ ಸ್ವಗೃಹದಲ್ಲಿ ಮುಂಜಾನೆ 3.20ರ ಸಮಯದಲ್ಲಿ ಹೃದಯಾಘಾತಕ್ಕೊಳಗಾಗಿದ್ದಾರೆ.

ಪತ್ರಕರ್ತ ಟಿ ಎಸ್ ರಾಮಸ್ವಾಮಿ ಅವರು ಸೋದರಿ ರಾಜಲಕ್ಷ್ಮಿ, ಸೋದರ ಟಿ ಎಸ್ ವೇಣುಗೋಪಾಲ್, ನಾದಿನಿ ಶೈಲಜಾ, ಸೋದರಿಯ ಪತಿ ಡಾ. ಎಸ್ ತುಕಾರಾಮ್, ಮತ್ತೊಬ್ಬ ಸೋದರಿ ದಿ. ಕುಮುದವಲ್ಲಿ ಅವರ ಪತಿ ರಾಘವೇಂದ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಅವಿವಾಹಿತರಾಗಿದ್ದ ರಾಮು ಅವರು, ಪತ್ರಿಕಾರಂಗದಲ್ಲಿ ಪ್ರಾಮಾಣಿಕತೆಗೆ ಮಾದರಿಯಾಗಿದ್ದರು. ನೊಂದವರು, ಬಡವರ ಏಳಿಗೆಗೆ ಪತ್ರಿಕೆಗಳು ಸ್ಪಂದಿಸಬೇಕಾದ ಬಗೆಯನ್ನು ಪ್ರತಿಕ್ಷಣ ಚಿಂತಿಸುತ್ತಿದ್ದರು. ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡುತ್ತಿದ್ದರು. ರಾಮು ಅವರ ಗರಡಿಯಲ್ಲಿ ಪಳಗಿದ ದೊಡ್ಡ ಸಂಖ್ಯೆಯ ಪತ್ರಕರ್ತರು ಮೈಸೂರು ಸೇರಿದಂತೆ ರಾಜ್ಯಾದ್ಯಂತ ಇದ್ದಾರೆ.

ಅಗ್ನಿಸೂಕ್ತ, ವಿಷ್ಣುಕ್ರಾಂತಿ ಮತ್ತು ಇತರ ಪದ್ಯಗಳು, ರಾಮು ಕವಿತೆಗಳು ಅವರ ಪ್ರಕಟಿತ ಕವನ ಸಂಕಲನಗಳು, ‘ರಾಮು ಕವಿತೆಗಳು’ ಕೃತಿಯನ್ನು ಋತುಮಾನ ಪ್ರಕಾಶನ ಸಂಸ್ಥೆಯು ಪ್ರಕಟಿಸಿದಾಗ ತಮ್ಮ ಹೆಸರನ್ನು ಉಲ್ಲೇಖಿಸದಂತೆ ಅವರು ಹೇಳಿದ್ದರು.

ಆಂದೋಲನ ಪತ್ರಿಕೆಯ ‘ಹಾಡು ಪಾಡು’ ಪುರವಣಿ ಅವರ ನೇತೃತ್ವದಲ್ಲಿ ರೂಪುಗೊಳ್ಳುತ್ತಿತ್ತು. ಅದರಿಂದ ಆಂದೋಲನ ‘ಹಾಡುಪಾಡು ರಾಮು’ ಎಂದೇ ಅವರನ್ನು ಓದುಗರು ಕರೆಯುತ್ತಿದ್ದರು. ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು. ಚಿಂತಕ ದೇವನೂರ ಮಹದೇವ, ವಿಮರ್ಶಕ ಓ.ಎಲ್.ನಾಗಭೂಷಣಸ್ವಾಮಿ, ಎಚ್.ಎಸ್.ರಾಘವೇಂದ್ರ ರಾವ್‌ ಸೇರಿದಂತೆ ಸಾಹಿತ್ಯ ಲೋಕದ ಹಲವರ ಒಡನಾಡಿಗಳಾಗಿದ್ದರು.

ಅವರ ಅಂತ್ಯಕ್ರಿಯೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಧ್ಯಾಹ್ನ 1.30ಕ್ಕೆ ನಿಗದಿಯಾಗಿತ್ತು.

ರಾಮು ನಿಧನರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದು, “ರಾಮು ಎಂದೇ ಜನಪ್ರಿಯರಾಗಿದ್ದ ಪತ್ರಕರ್ತ ಮತ್ತು ಕವಿ ಟಿ ಎಸ್ ರಾಮಸ್ವಾಮಿ ಅವರ ಅನಿರೀಕ್ಷಿತ ಸಾವು ನನ್ನನ್ನು ಆಘಾತಕ್ಕೀಡು ಮಾಡಿದೆ. ಮೈಸೂರಿನ ಸಾಹಿತ್ಯ, ಸಾಂಸ್ಕೃತಿಕ ಮತ್ತು ಮಾಧ್ಯಮ ಕ್ಷೇತ್ರ ರಾಮು ಅವರ ಅಗಲಿಕೆಯಿಂದ ಬಡವಾಗಿದೆ. ಹಲವಾರು ಬರಹಗಾರರು ಮತ್ತು ಪತ್ರಕರ್ತರನ್ನು ಸಲಹಿ ಬೆಳೆಸಿದ್ದ ರಾಮು ನನಗೂ ಆತ್ಮೀಯ ಸ್ನೇಹಿತರಾಗಿದ್ದರು. ರಾಮು ಅವರ ಸಾವಿನಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಗೆಳೆಯರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಸಂತಾಪ ಸೂಚಿಸಿದ್ದಾರೆ.

ಸಾಹಿತಿ ದೇವನೂರ ಮಹಾದೇವ ಅವರ ಬರಹ, ಚಿಂತನೆಗಳಿಗೆ ವೇದಿಕೆಯಾದ ‘ನಮ್ಮ ಬನವಾಸಿ’ ಫೇಸ್‌ಬುಕ್‌ ಪೇಜ್‌ನಲ್ಲಿ ಸಂತಾಪ ಸೂಚಿಸಲಾಗಿದೆ. “ದೇವನೂರರ ಆಪ್ತ ಸಖ, ‘ನಮ್ಮ ಬನವಾಸಿ’ ಬಳಗದ/ ಅಂತರ್ಜಾಲ ತಾಣದ ಹಿಂದಿನ ಚೈತನ್ಯ ಶಕ್ತಿ, ಆಂದೋಲನ ಪತ್ರಿಕೆಯ ‘ಹಾಡುಪಾಡು ರಾಮು’, ಹೆಚ್ಚಿನವರಿಂದ ‘ರಾಮುಕಾಕ’, ‘ರಾಮು ಮಾಮ’ ಎಂದೇ ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಪತ್ರಕರ್ತ, ಕವಿ, ಮೈಸೂರಿನ ‘ರಾಮು’ ಅವರಿಗೆ ನಮ್ಮ ಬನವಾಸಿ ಬಳಗದಿಂದ ಹೃದಯಪೂರ್ವಕ, ದುಃಖತಪ್ತ ಅಂತಿಮ‌ ನಮನಗಳು” ಎಂದು ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...