Homeಕರ್ನಾಟಕಮೈಸೂರು: ಹಿರಿಯ ಪತ್ರಕರ್ತ ‘ಹಾಡುಪಾಡು ರಾಮು’ ನಿಧನ

ಮೈಸೂರು: ಹಿರಿಯ ಪತ್ರಕರ್ತ ‘ಹಾಡುಪಾಡು ರಾಮು’ ನಿಧನ

- Advertisement -
- Advertisement -

ಮೈಸೂರಿನ ಪ್ರಾದೇಶಿಕ ದಿನಪತ್ರಿಕೆಯಾದ ‘ಆಂದೋಲನ’ದ ‘ಹಾಡುಪಾಡು’ ಸಂಚಿಕೆಗೆ ವಿಶೇಷತೆಯನ್ನು ತಂದುಕೊಟ್ಟು ‘ಹಾಡುಪಾಡು ರಾಮು’ ಎಂದೇ ಖ್ಯಾತರಾಗಿದ್ದ, ಹಿರಿಯ ಪತ್ರಕರ್ತ ಟಿ.ಎಸ್.ರಾಮಸ್ವಾಮಿ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ.

ಹೃದಯದಂತಿರುವ ಹಾಡುಪಾಡು ಸಂಚಿಕೆಯ ಆರಂಭಕ್ಕೆ ಮೇಟಿಯಾಗಿದ್ದ ‘ಹಾಡುಪಾಡು ರಾಮು’ ಎಂದೇ ಖ್ಯಾತಿಯಾಗಿದ್ದ ಹಿರಿಯ ಪತ್ರಕರ್ತ ಟಿ.ಎಸ್.ರಾಮಸ್ವಾಮಿ (69) ಅವರು ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ.

ನಗರದ ಸರಸ್ವತಿಪುರಂನ 9ನೇ ಕ್ರಾಸ್‌ನಲ್ಲಿರುವ ಸ್ವಗೃಹದಲ್ಲಿ ಮುಂಜಾನೆ 3.20ರ ಸಮಯದಲ್ಲಿ ಹೃದಯಾಘಾತಕ್ಕೊಳಗಾಗಿದ್ದಾರೆ.

ಪತ್ರಕರ್ತ ಟಿ ಎಸ್ ರಾಮಸ್ವಾಮಿ ಅವರು ಸೋದರಿ ರಾಜಲಕ್ಷ್ಮಿ, ಸೋದರ ಟಿ ಎಸ್ ವೇಣುಗೋಪಾಲ್, ನಾದಿನಿ ಶೈಲಜಾ, ಸೋದರಿಯ ಪತಿ ಡಾ. ಎಸ್ ತುಕಾರಾಮ್, ಮತ್ತೊಬ್ಬ ಸೋದರಿ ದಿ. ಕುಮುದವಲ್ಲಿ ಅವರ ಪತಿ ರಾಘವೇಂದ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಅವಿವಾಹಿತರಾಗಿದ್ದ ರಾಮು ಅವರು, ಪತ್ರಿಕಾರಂಗದಲ್ಲಿ ಪ್ರಾಮಾಣಿಕತೆಗೆ ಮಾದರಿಯಾಗಿದ್ದರು. ನೊಂದವರು, ಬಡವರ ಏಳಿಗೆಗೆ ಪತ್ರಿಕೆಗಳು ಸ್ಪಂದಿಸಬೇಕಾದ ಬಗೆಯನ್ನು ಪ್ರತಿಕ್ಷಣ ಚಿಂತಿಸುತ್ತಿದ್ದರು. ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡುತ್ತಿದ್ದರು. ರಾಮು ಅವರ ಗರಡಿಯಲ್ಲಿ ಪಳಗಿದ ದೊಡ್ಡ ಸಂಖ್ಯೆಯ ಪತ್ರಕರ್ತರು ಮೈಸೂರು ಸೇರಿದಂತೆ ರಾಜ್ಯಾದ್ಯಂತ ಇದ್ದಾರೆ.

ಅಗ್ನಿಸೂಕ್ತ, ವಿಷ್ಣುಕ್ರಾಂತಿ ಮತ್ತು ಇತರ ಪದ್ಯಗಳು, ರಾಮು ಕವಿತೆಗಳು ಅವರ ಪ್ರಕಟಿತ ಕವನ ಸಂಕಲನಗಳು, ‘ರಾಮು ಕವಿತೆಗಳು’ ಕೃತಿಯನ್ನು ಋತುಮಾನ ಪ್ರಕಾಶನ ಸಂಸ್ಥೆಯು ಪ್ರಕಟಿಸಿದಾಗ ತಮ್ಮ ಹೆಸರನ್ನು ಉಲ್ಲೇಖಿಸದಂತೆ ಅವರು ಹೇಳಿದ್ದರು.

ಆಂದೋಲನ ಪತ್ರಿಕೆಯ ‘ಹಾಡು ಪಾಡು’ ಪುರವಣಿ ಅವರ ನೇತೃತ್ವದಲ್ಲಿ ರೂಪುಗೊಳ್ಳುತ್ತಿತ್ತು. ಅದರಿಂದ ಆಂದೋಲನ ‘ಹಾಡುಪಾಡು ರಾಮು’ ಎಂದೇ ಅವರನ್ನು ಓದುಗರು ಕರೆಯುತ್ತಿದ್ದರು. ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು. ಚಿಂತಕ ದೇವನೂರ ಮಹದೇವ, ವಿಮರ್ಶಕ ಓ.ಎಲ್.ನಾಗಭೂಷಣಸ್ವಾಮಿ, ಎಚ್.ಎಸ್.ರಾಘವೇಂದ್ರ ರಾವ್‌ ಸೇರಿದಂತೆ ಸಾಹಿತ್ಯ ಲೋಕದ ಹಲವರ ಒಡನಾಡಿಗಳಾಗಿದ್ದರು.

ಅವರ ಅಂತ್ಯಕ್ರಿಯೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಧ್ಯಾಹ್ನ 1.30ಕ್ಕೆ ನಿಗದಿಯಾಗಿತ್ತು.

ರಾಮು ನಿಧನರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದು, “ರಾಮು ಎಂದೇ ಜನಪ್ರಿಯರಾಗಿದ್ದ ಪತ್ರಕರ್ತ ಮತ್ತು ಕವಿ ಟಿ ಎಸ್ ರಾಮಸ್ವಾಮಿ ಅವರ ಅನಿರೀಕ್ಷಿತ ಸಾವು ನನ್ನನ್ನು ಆಘಾತಕ್ಕೀಡು ಮಾಡಿದೆ. ಮೈಸೂರಿನ ಸಾಹಿತ್ಯ, ಸಾಂಸ್ಕೃತಿಕ ಮತ್ತು ಮಾಧ್ಯಮ ಕ್ಷೇತ್ರ ರಾಮು ಅವರ ಅಗಲಿಕೆಯಿಂದ ಬಡವಾಗಿದೆ. ಹಲವಾರು ಬರಹಗಾರರು ಮತ್ತು ಪತ್ರಕರ್ತರನ್ನು ಸಲಹಿ ಬೆಳೆಸಿದ್ದ ರಾಮು ನನಗೂ ಆತ್ಮೀಯ ಸ್ನೇಹಿತರಾಗಿದ್ದರು. ರಾಮು ಅವರ ಸಾವಿನಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಗೆಳೆಯರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಸಂತಾಪ ಸೂಚಿಸಿದ್ದಾರೆ.

ಸಾಹಿತಿ ದೇವನೂರ ಮಹಾದೇವ ಅವರ ಬರಹ, ಚಿಂತನೆಗಳಿಗೆ ವೇದಿಕೆಯಾದ ‘ನಮ್ಮ ಬನವಾಸಿ’ ಫೇಸ್‌ಬುಕ್‌ ಪೇಜ್‌ನಲ್ಲಿ ಸಂತಾಪ ಸೂಚಿಸಲಾಗಿದೆ. “ದೇವನೂರರ ಆಪ್ತ ಸಖ, ‘ನಮ್ಮ ಬನವಾಸಿ’ ಬಳಗದ/ ಅಂತರ್ಜಾಲ ತಾಣದ ಹಿಂದಿನ ಚೈತನ್ಯ ಶಕ್ತಿ, ಆಂದೋಲನ ಪತ್ರಿಕೆಯ ‘ಹಾಡುಪಾಡು ರಾಮು’, ಹೆಚ್ಚಿನವರಿಂದ ‘ರಾಮುಕಾಕ’, ‘ರಾಮು ಮಾಮ’ ಎಂದೇ ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಪತ್ರಕರ್ತ, ಕವಿ, ಮೈಸೂರಿನ ‘ರಾಮು’ ಅವರಿಗೆ ನಮ್ಮ ಬನವಾಸಿ ಬಳಗದಿಂದ ಹೃದಯಪೂರ್ವಕ, ದುಃಖತಪ್ತ ಅಂತಿಮ‌ ನಮನಗಳು” ಎಂದು ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...