Homeಮುಖಪುಟದಿವಂಗತ ಮುಮ್ತಾಜ್ ಬೇಗಂ ಅವರ 'ಸ್ವಾತಂತ್ರ್ಯದ ಕಹಳೆ' ಕೃತಿಗೆ ಮುಸ್ಲಿಂ ಸಾಹಿತ್ಯ ಪ್ರಶಸ್ತಿ

ದಿವಂಗತ ಮುಮ್ತಾಜ್ ಬೇಗಂ ಅವರ ‘ಸ್ವಾತಂತ್ರ್ಯದ ಕಹಳೆ’ ಕೃತಿಗೆ ಮುಸ್ಲಿಂ ಸಾಹಿತ್ಯ ಪ್ರಶಸ್ತಿ

- Advertisement -
- Advertisement -

ಕನ್ನಡ ಸಾಹಿತ್ಯದ ಕೆಲವೇ ಕೆಲವು ಖ್ಯಾತ ಮುಸ್ಲಿಂ ಲೇಖಕಿಯರಲ್ಲಿ ಮುಮ್ತಾಜ್ ಬೇಗಂ (73) ಕೂಡ ಒಬ್ಬರು. ದುರದೃಷ್ಟವಶಾತ್ ಕಳೆದ ಏಪ್ರಿಲ್ 06 ರಂದು ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿರುವಾಗಲೇ ಅವರು ಕೋವಿಡ್ ಸೋಂಕಿನ ಕಾರಣದಿಂದ ಮೃತಪಟ್ಟಿದ್ದರು. ಅವರ ಮರಣದ ನಂತರ ಈಗ ಅವರ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಕರ್ನಾಟಕ ಮುಸ್ಲಿಂ ಲೇಖಕರ ಸಂಘವು ಮುಮ್ತಾಜ್ ಬೇಗಂ ಅವರ ‘ಸ್ವಾತಂತ್ರ್ಯ ಕಹಳೆ’ ಕೃತಿಯನ್ನು ‘2019 ನೇ ಸಾಲಿನ ಮುಸ್ಲಿಂ ಸಾಹಿತ್ಯ ಪ್ರಶಸ್ತಿಗೆ’ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಗಾಗಿ 36 ಕೃತಿಗಳು ಬಂದಿದ್ದು ಅದರಲ್ಲಿ ಬೇಗಂ ಅವರ ಸ್ವಾತಂತ್ರ್ಯದ ಕಹಳೆ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿದೆ.

ಮುಮ್ತಾಜ್ ಬೇಗಂ ಅವರು ಕಳೆದ ಮೂರು ದಶಕಗಳಿಂದ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು ಹತ್ತಾರು ಸಾಹಿತ್ಯಿಕ ಕೃತಿಗಳನ್ನು ರಚಿಸಿದ್ದಾರೆ. ಕಥೆ, ಕಾದಂಬರಿ, ಕಾವ್ಯ, ಮಕ್ಕಳ ಸಾಹಿತ್ಯ ಹೀಗೆ ಮುಮ್ತಾಜ್ ಬೇಗಂ ವೈವಿಧ್ಯಮಯ ಸಾಹಿತ್ಯಿಕ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಅವ್ಯಕ್ತ ಮತ್ತು ಅಂಕುರ, ಸರ್ವ ಋತುಗಳು ನಿನಗಾಗಿ ಎಂಬ ಕವನ ಸಂಕಲನಗಳನ್ನೂ, ವರ್ತುಲ, ಬಂದಳಿಕೆ ಎಂಬ ಕಾದಂಬರಿಗಳನ್ನು, ಚಿಂಪಿ ಎಂಬ ಮಕ್ಕಳ ಸಾಹಿತ್ಯದ ಕೃತಿಗಳನ್ನು ಹಾಗೂ ‘ಟು ದಿ ಅನ್‌ನೌನ್ ಡೆಸ್ಟಿನೇಶನ್’ ಎಂಬ ಇಂಗ್ಲೀಷ್ ಕಾದಂಬರಿಯನ್ನು ರಚಿಸಿದ್ದಾರೆ.

2021 ರ ಮಾರ್ಚ್‌ ನಲ್ಲಿ ಮುಮ್ತಾಜ್ ಬೇಗಂ ಅವರ ‘ಸೂರ್ಯಾಸ್ತ’ ಕೃತಿ ಅನಾವರಣಗೊಂಡಿತ್ತು. ಇದೇ ಸಂದರ್ಭದಲ್ಲಿ ಅವರಿಗೆ ಕೊರೋನಾ ಸೊಂಕು ತಗುಲಿ ಅದರಿಂದ ಚೇತರಿಸಿಕೊಳ್ಳಲಾಗದೇ ತಮ್ಮ 73 ನೇ ವಯಸ್ಸಿನಲ್ಲಿ ಅವರು ಮೃತಪಟ್ಟಿದ್ದರು. ವಿದ್ಯಾರ್ಥಿ ದೆಸೆಯಲ್ಲೇ ಬರವಣಿಗೆಯ ಹವ್ಯಾಸ ಮೈಗೂಡಿಸಿಕೊಂಡಿದ್ದು, ನಾಡಿನ ಅನೇಕ ಪ್ರಸಿದ್ಧ ಪತ್ರಿಕೆಗಳು ಮತ್ತು ನಿಯತಕಾಲಿಕಗಳಲ್ಲಿ ಇವರ ಬರಹಗಳು ಪ್ರಕಟಗೊಂಡಿವೆ.

ಮುಮ್ತಾಜ್ ಅವರ 5 ದಶಕಗಳ ಸಾಹಿತ್ಯ ಸೇವೆಗೆ ಹಲವು ಪ್ರಶಸ್ತಿಗಳು ಹುಡಕಿಕೊಂಡು ಬಂದಿವೆ.ಇವರ ಸಾಹಿತ್ಯ, ಬರಹ ಕ್ಷೇತ್ರದ ಗಣನೀಯ ಸಾಧನೆಗಾಗಿ ಹಲವು ರಾಷ್ಟ್ರ ಮತ್ತು ರಾಜ್ಯ ಮಟ್ಟದ ಪ್ರತಿಷ್ಠಿತ ಗೌರವ ಮತ್ತು ಸನ್ಮಾನಗಳಿಗೆ ಭಾಜನರಾಗಿದ್ದಾರೆ. ಅತ್ತಿಮಬ್ಬೆ, ಚೆನ್ನಶ್ರೀ, ಜಿಲ್ಲಾ ರಾಜ್ಯೋತ್ಸವ, ಕಿತ್ತೂರ ರಾಣಿ ಚೆನ್ನಮ್ಮ, ಬಸವ ಜ್ಯೋತಿ, ಹಿರಿಯ ನಾಗರಿಕರ ಸಾಹಿತ್ಯ ಸಾಧಕಿ ಮತ್ತು ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿಗಳಿಂದ ಪುರಸ್ಕೃತರಾದ ಇವರಿಗೆ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಗ್ರಂಥ ಬಹುಮಾನ ಮತ್ತು ಮೇವುಂಡಿ ಮಲ್ಲಾರಿ ಮಕ್ಕಳ ಕಥಾ ಪುರಸ್ಕಾರ ಸೇರಿದಂತೆ ಇನ್ನೂ ಅನೇಕ ಪ್ರಶಸ್ತಿಗಳು ಪ್ರಾಪ್ತವಾಗಿವೆ.

ಮುಮ್ತಾಜ್ ಬೇಗಂ ಅವರು ಸಾಹಿತ್ಯ ಮಾತ್ರವಲ್ಲದೇ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಸಂಘ ಸಂಸ್ಥೆಗಳಲ್ಲಿ ವಿವಿಧ ಆಡಳಿತಾತ್ಮಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಕತಾರ್‌ನಲ್ಲಿರುವ ಯುನೆಸ್ಕೋ ಸಂಸ್ಥೆಯ ಆರ್ಥಿಕ ಮತ್ತು ಆಡಳಿತ ಸಹಾಯಕರಾಗಿ ಅನೇಕ ವರ್ಷ ಕಾರ್ಯ ನಿರ್ವಹಿಸಿದ್ದ ಮುಮ್ತಾಜ್ ಬೇಗಂ ಅವರು ದುಬೈನ ಅಲ್ ಮೀರ್ ಸಂಸ್ಥೆ ಮತ್ತು ‘ಫ್ಯೂಜಿ ಗಾರ್ಮೆಂಟ್ಸ್’ನ ಕಾರ್ಯದರ್ಶಿಯಾಗಿ ಕೂಡ ಕೆಲವು ವರ್ಷ ಸೇವೆ ಸಲ್ಲಿಸಿದ್ದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕರಾವಳಿ ಲೇಖಕಿ ಮತ್ತು ವಾಚಕಿಯರ ಸಂಘದ ಸಕ್ರಿಯ ಸದಸ್ಯರಾಗಿಯೂ ಅವರು ಕನ್ನಡ ಸಾಹಿತ್ಯವನ್ನು ಕಟ್ಟುವ ಕ್ರಿಯೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ತಮ್ಮ ಇಳಿವಯಸ್ಸಿನಲ್ಲಿ ಗುಜರಾತ್‌ನಲ್ಲಿ ವೈದ್ಯೆಯಾಗಿರುವ ಪುತ್ರಿಯ ಮನೆಯಲ್ಲಿ ವಾಸವಾಗಿದ್ದ ಮುಮ್ತಾಜ್ ಬೇಗಂ ಕಳೆದ ಏಪ್ರಿಲ್‌ನಲ್ಲಿ ಇಹಲೋಕವನ್ನು ತ್ಯಜಿಸಿದ್ದರು.

ಮುಸ್ಲಿಂ ಸಾಹಿತ್ಯ ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿದ್ದು, ಲಾಕ್‌ಡೌನ್ ಸಂಪೂರ್ಣ ತೆರವು ಬಳಿಕ ಮಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಗೆ 36 ಕೃತಿಗಳು ಬಂದಿದ್ದು, ಸಾಹಿತಿಗಳಾದ ಡಾ. ಹಸೀನಾ ಖಾದ್ರಿ, ಅಬ್ದುಲ್ ರಹಮಾನ್ ಕುತ್ತೆತ್ತೂರು ಮತ್ತು ಪ್ರಾಧ್ಯಾಪಕ ಅಬ್ದುಲ್ ರಝಾಕ್ ಅನಂತಾಡಿ ತೀರ್ಪುಗಾರರಾಗಿ ಸಹಕರಿಸಿದ್ದರು ಎಂದು ಮುಸ್ಲಿಂ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


ಇದನ್ನೂ ಓದಿ; ಡಾ. ಹಫೀಜ್ ಕರ್ನಾಟಕಿ: ಸೌಹಾರ್ದತೆಯ ಸಂತನಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...