Homeಮುಖಪುಟದಿವಂಗತ ಮುಮ್ತಾಜ್ ಬೇಗಂ ಅವರ 'ಸ್ವಾತಂತ್ರ್ಯದ ಕಹಳೆ' ಕೃತಿಗೆ ಮುಸ್ಲಿಂ ಸಾಹಿತ್ಯ ಪ್ರಶಸ್ತಿ

ದಿವಂಗತ ಮುಮ್ತಾಜ್ ಬೇಗಂ ಅವರ ‘ಸ್ವಾತಂತ್ರ್ಯದ ಕಹಳೆ’ ಕೃತಿಗೆ ಮುಸ್ಲಿಂ ಸಾಹಿತ್ಯ ಪ್ರಶಸ್ತಿ

- Advertisement -
- Advertisement -

ಕನ್ನಡ ಸಾಹಿತ್ಯದ ಕೆಲವೇ ಕೆಲವು ಖ್ಯಾತ ಮುಸ್ಲಿಂ ಲೇಖಕಿಯರಲ್ಲಿ ಮುಮ್ತಾಜ್ ಬೇಗಂ (73) ಕೂಡ ಒಬ್ಬರು. ದುರದೃಷ್ಟವಶಾತ್ ಕಳೆದ ಏಪ್ರಿಲ್ 06 ರಂದು ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿರುವಾಗಲೇ ಅವರು ಕೋವಿಡ್ ಸೋಂಕಿನ ಕಾರಣದಿಂದ ಮೃತಪಟ್ಟಿದ್ದರು. ಅವರ ಮರಣದ ನಂತರ ಈಗ ಅವರ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಕರ್ನಾಟಕ ಮುಸ್ಲಿಂ ಲೇಖಕರ ಸಂಘವು ಮುಮ್ತಾಜ್ ಬೇಗಂ ಅವರ ‘ಸ್ವಾತಂತ್ರ್ಯ ಕಹಳೆ’ ಕೃತಿಯನ್ನು ‘2019 ನೇ ಸಾಲಿನ ಮುಸ್ಲಿಂ ಸಾಹಿತ್ಯ ಪ್ರಶಸ್ತಿಗೆ’ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಗಾಗಿ 36 ಕೃತಿಗಳು ಬಂದಿದ್ದು ಅದರಲ್ಲಿ ಬೇಗಂ ಅವರ ಸ್ವಾತಂತ್ರ್ಯದ ಕಹಳೆ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿದೆ.

ಮುಮ್ತಾಜ್ ಬೇಗಂ ಅವರು ಕಳೆದ ಮೂರು ದಶಕಗಳಿಂದ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು ಹತ್ತಾರು ಸಾಹಿತ್ಯಿಕ ಕೃತಿಗಳನ್ನು ರಚಿಸಿದ್ದಾರೆ. ಕಥೆ, ಕಾದಂಬರಿ, ಕಾವ್ಯ, ಮಕ್ಕಳ ಸಾಹಿತ್ಯ ಹೀಗೆ ಮುಮ್ತಾಜ್ ಬೇಗಂ ವೈವಿಧ್ಯಮಯ ಸಾಹಿತ್ಯಿಕ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಅವ್ಯಕ್ತ ಮತ್ತು ಅಂಕುರ, ಸರ್ವ ಋತುಗಳು ನಿನಗಾಗಿ ಎಂಬ ಕವನ ಸಂಕಲನಗಳನ್ನೂ, ವರ್ತುಲ, ಬಂದಳಿಕೆ ಎಂಬ ಕಾದಂಬರಿಗಳನ್ನು, ಚಿಂಪಿ ಎಂಬ ಮಕ್ಕಳ ಸಾಹಿತ್ಯದ ಕೃತಿಗಳನ್ನು ಹಾಗೂ ‘ಟು ದಿ ಅನ್‌ನೌನ್ ಡೆಸ್ಟಿನೇಶನ್’ ಎಂಬ ಇಂಗ್ಲೀಷ್ ಕಾದಂಬರಿಯನ್ನು ರಚಿಸಿದ್ದಾರೆ.

2021 ರ ಮಾರ್ಚ್‌ ನಲ್ಲಿ ಮುಮ್ತಾಜ್ ಬೇಗಂ ಅವರ ‘ಸೂರ್ಯಾಸ್ತ’ ಕೃತಿ ಅನಾವರಣಗೊಂಡಿತ್ತು. ಇದೇ ಸಂದರ್ಭದಲ್ಲಿ ಅವರಿಗೆ ಕೊರೋನಾ ಸೊಂಕು ತಗುಲಿ ಅದರಿಂದ ಚೇತರಿಸಿಕೊಳ್ಳಲಾಗದೇ ತಮ್ಮ 73 ನೇ ವಯಸ್ಸಿನಲ್ಲಿ ಅವರು ಮೃತಪಟ್ಟಿದ್ದರು. ವಿದ್ಯಾರ್ಥಿ ದೆಸೆಯಲ್ಲೇ ಬರವಣಿಗೆಯ ಹವ್ಯಾಸ ಮೈಗೂಡಿಸಿಕೊಂಡಿದ್ದು, ನಾಡಿನ ಅನೇಕ ಪ್ರಸಿದ್ಧ ಪತ್ರಿಕೆಗಳು ಮತ್ತು ನಿಯತಕಾಲಿಕಗಳಲ್ಲಿ ಇವರ ಬರಹಗಳು ಪ್ರಕಟಗೊಂಡಿವೆ.

ಮುಮ್ತಾಜ್ ಅವರ 5 ದಶಕಗಳ ಸಾಹಿತ್ಯ ಸೇವೆಗೆ ಹಲವು ಪ್ರಶಸ್ತಿಗಳು ಹುಡಕಿಕೊಂಡು ಬಂದಿವೆ.ಇವರ ಸಾಹಿತ್ಯ, ಬರಹ ಕ್ಷೇತ್ರದ ಗಣನೀಯ ಸಾಧನೆಗಾಗಿ ಹಲವು ರಾಷ್ಟ್ರ ಮತ್ತು ರಾಜ್ಯ ಮಟ್ಟದ ಪ್ರತಿಷ್ಠಿತ ಗೌರವ ಮತ್ತು ಸನ್ಮಾನಗಳಿಗೆ ಭಾಜನರಾಗಿದ್ದಾರೆ. ಅತ್ತಿಮಬ್ಬೆ, ಚೆನ್ನಶ್ರೀ, ಜಿಲ್ಲಾ ರಾಜ್ಯೋತ್ಸವ, ಕಿತ್ತೂರ ರಾಣಿ ಚೆನ್ನಮ್ಮ, ಬಸವ ಜ್ಯೋತಿ, ಹಿರಿಯ ನಾಗರಿಕರ ಸಾಹಿತ್ಯ ಸಾಧಕಿ ಮತ್ತು ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿಗಳಿಂದ ಪುರಸ್ಕೃತರಾದ ಇವರಿಗೆ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಗ್ರಂಥ ಬಹುಮಾನ ಮತ್ತು ಮೇವುಂಡಿ ಮಲ್ಲಾರಿ ಮಕ್ಕಳ ಕಥಾ ಪುರಸ್ಕಾರ ಸೇರಿದಂತೆ ಇನ್ನೂ ಅನೇಕ ಪ್ರಶಸ್ತಿಗಳು ಪ್ರಾಪ್ತವಾಗಿವೆ.

ಮುಮ್ತಾಜ್ ಬೇಗಂ ಅವರು ಸಾಹಿತ್ಯ ಮಾತ್ರವಲ್ಲದೇ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಸಂಘ ಸಂಸ್ಥೆಗಳಲ್ಲಿ ವಿವಿಧ ಆಡಳಿತಾತ್ಮಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಕತಾರ್‌ನಲ್ಲಿರುವ ಯುನೆಸ್ಕೋ ಸಂಸ್ಥೆಯ ಆರ್ಥಿಕ ಮತ್ತು ಆಡಳಿತ ಸಹಾಯಕರಾಗಿ ಅನೇಕ ವರ್ಷ ಕಾರ್ಯ ನಿರ್ವಹಿಸಿದ್ದ ಮುಮ್ತಾಜ್ ಬೇಗಂ ಅವರು ದುಬೈನ ಅಲ್ ಮೀರ್ ಸಂಸ್ಥೆ ಮತ್ತು ‘ಫ್ಯೂಜಿ ಗಾರ್ಮೆಂಟ್ಸ್’ನ ಕಾರ್ಯದರ್ಶಿಯಾಗಿ ಕೂಡ ಕೆಲವು ವರ್ಷ ಸೇವೆ ಸಲ್ಲಿಸಿದ್ದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕರಾವಳಿ ಲೇಖಕಿ ಮತ್ತು ವಾಚಕಿಯರ ಸಂಘದ ಸಕ್ರಿಯ ಸದಸ್ಯರಾಗಿಯೂ ಅವರು ಕನ್ನಡ ಸಾಹಿತ್ಯವನ್ನು ಕಟ್ಟುವ ಕ್ರಿಯೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ತಮ್ಮ ಇಳಿವಯಸ್ಸಿನಲ್ಲಿ ಗುಜರಾತ್‌ನಲ್ಲಿ ವೈದ್ಯೆಯಾಗಿರುವ ಪುತ್ರಿಯ ಮನೆಯಲ್ಲಿ ವಾಸವಾಗಿದ್ದ ಮುಮ್ತಾಜ್ ಬೇಗಂ ಕಳೆದ ಏಪ್ರಿಲ್‌ನಲ್ಲಿ ಇಹಲೋಕವನ್ನು ತ್ಯಜಿಸಿದ್ದರು.

ಮುಸ್ಲಿಂ ಸಾಹಿತ್ಯ ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿದ್ದು, ಲಾಕ್‌ಡೌನ್ ಸಂಪೂರ್ಣ ತೆರವು ಬಳಿಕ ಮಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಗೆ 36 ಕೃತಿಗಳು ಬಂದಿದ್ದು, ಸಾಹಿತಿಗಳಾದ ಡಾ. ಹಸೀನಾ ಖಾದ್ರಿ, ಅಬ್ದುಲ್ ರಹಮಾನ್ ಕುತ್ತೆತ್ತೂರು ಮತ್ತು ಪ್ರಾಧ್ಯಾಪಕ ಅಬ್ದುಲ್ ರಝಾಕ್ ಅನಂತಾಡಿ ತೀರ್ಪುಗಾರರಾಗಿ ಸಹಕರಿಸಿದ್ದರು ಎಂದು ಮುಸ್ಲಿಂ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


ಇದನ್ನೂ ಓದಿ; ಡಾ. ಹಫೀಜ್ ಕರ್ನಾಟಕಿ: ಸೌಹಾರ್ದತೆಯ ಸಂತನಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...