Homeಮುಖಪುಟದಿವಂಗತ ಮುಮ್ತಾಜ್ ಬೇಗಂ ಅವರ 'ಸ್ವಾತಂತ್ರ್ಯದ ಕಹಳೆ' ಕೃತಿಗೆ ಮುಸ್ಲಿಂ ಸಾಹಿತ್ಯ ಪ್ರಶಸ್ತಿ

ದಿವಂಗತ ಮುಮ್ತಾಜ್ ಬೇಗಂ ಅವರ ‘ಸ್ವಾತಂತ್ರ್ಯದ ಕಹಳೆ’ ಕೃತಿಗೆ ಮುಸ್ಲಿಂ ಸಾಹಿತ್ಯ ಪ್ರಶಸ್ತಿ

- Advertisement -
- Advertisement -

ಕನ್ನಡ ಸಾಹಿತ್ಯದ ಕೆಲವೇ ಕೆಲವು ಖ್ಯಾತ ಮುಸ್ಲಿಂ ಲೇಖಕಿಯರಲ್ಲಿ ಮುಮ್ತಾಜ್ ಬೇಗಂ (73) ಕೂಡ ಒಬ್ಬರು. ದುರದೃಷ್ಟವಶಾತ್ ಕಳೆದ ಏಪ್ರಿಲ್ 06 ರಂದು ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿರುವಾಗಲೇ ಅವರು ಕೋವಿಡ್ ಸೋಂಕಿನ ಕಾರಣದಿಂದ ಮೃತಪಟ್ಟಿದ್ದರು. ಅವರ ಮರಣದ ನಂತರ ಈಗ ಅವರ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಕರ್ನಾಟಕ ಮುಸ್ಲಿಂ ಲೇಖಕರ ಸಂಘವು ಮುಮ್ತಾಜ್ ಬೇಗಂ ಅವರ ‘ಸ್ವಾತಂತ್ರ್ಯ ಕಹಳೆ’ ಕೃತಿಯನ್ನು ‘2019 ನೇ ಸಾಲಿನ ಮುಸ್ಲಿಂ ಸಾಹಿತ್ಯ ಪ್ರಶಸ್ತಿಗೆ’ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಗಾಗಿ 36 ಕೃತಿಗಳು ಬಂದಿದ್ದು ಅದರಲ್ಲಿ ಬೇಗಂ ಅವರ ಸ್ವಾತಂತ್ರ್ಯದ ಕಹಳೆ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿದೆ.

ಮುಮ್ತಾಜ್ ಬೇಗಂ ಅವರು ಕಳೆದ ಮೂರು ದಶಕಗಳಿಂದ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು ಹತ್ತಾರು ಸಾಹಿತ್ಯಿಕ ಕೃತಿಗಳನ್ನು ರಚಿಸಿದ್ದಾರೆ. ಕಥೆ, ಕಾದಂಬರಿ, ಕಾವ್ಯ, ಮಕ್ಕಳ ಸಾಹಿತ್ಯ ಹೀಗೆ ಮುಮ್ತಾಜ್ ಬೇಗಂ ವೈವಿಧ್ಯಮಯ ಸಾಹಿತ್ಯಿಕ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಅವ್ಯಕ್ತ ಮತ್ತು ಅಂಕುರ, ಸರ್ವ ಋತುಗಳು ನಿನಗಾಗಿ ಎಂಬ ಕವನ ಸಂಕಲನಗಳನ್ನೂ, ವರ್ತುಲ, ಬಂದಳಿಕೆ ಎಂಬ ಕಾದಂಬರಿಗಳನ್ನು, ಚಿಂಪಿ ಎಂಬ ಮಕ್ಕಳ ಸಾಹಿತ್ಯದ ಕೃತಿಗಳನ್ನು ಹಾಗೂ ‘ಟು ದಿ ಅನ್‌ನೌನ್ ಡೆಸ್ಟಿನೇಶನ್’ ಎಂಬ ಇಂಗ್ಲೀಷ್ ಕಾದಂಬರಿಯನ್ನು ರಚಿಸಿದ್ದಾರೆ.

2021 ರ ಮಾರ್ಚ್‌ ನಲ್ಲಿ ಮುಮ್ತಾಜ್ ಬೇಗಂ ಅವರ ‘ಸೂರ್ಯಾಸ್ತ’ ಕೃತಿ ಅನಾವರಣಗೊಂಡಿತ್ತು. ಇದೇ ಸಂದರ್ಭದಲ್ಲಿ ಅವರಿಗೆ ಕೊರೋನಾ ಸೊಂಕು ತಗುಲಿ ಅದರಿಂದ ಚೇತರಿಸಿಕೊಳ್ಳಲಾಗದೇ ತಮ್ಮ 73 ನೇ ವಯಸ್ಸಿನಲ್ಲಿ ಅವರು ಮೃತಪಟ್ಟಿದ್ದರು. ವಿದ್ಯಾರ್ಥಿ ದೆಸೆಯಲ್ಲೇ ಬರವಣಿಗೆಯ ಹವ್ಯಾಸ ಮೈಗೂಡಿಸಿಕೊಂಡಿದ್ದು, ನಾಡಿನ ಅನೇಕ ಪ್ರಸಿದ್ಧ ಪತ್ರಿಕೆಗಳು ಮತ್ತು ನಿಯತಕಾಲಿಕಗಳಲ್ಲಿ ಇವರ ಬರಹಗಳು ಪ್ರಕಟಗೊಂಡಿವೆ.

ಮುಮ್ತಾಜ್ ಅವರ 5 ದಶಕಗಳ ಸಾಹಿತ್ಯ ಸೇವೆಗೆ ಹಲವು ಪ್ರಶಸ್ತಿಗಳು ಹುಡಕಿಕೊಂಡು ಬಂದಿವೆ.ಇವರ ಸಾಹಿತ್ಯ, ಬರಹ ಕ್ಷೇತ್ರದ ಗಣನೀಯ ಸಾಧನೆಗಾಗಿ ಹಲವು ರಾಷ್ಟ್ರ ಮತ್ತು ರಾಜ್ಯ ಮಟ್ಟದ ಪ್ರತಿಷ್ಠಿತ ಗೌರವ ಮತ್ತು ಸನ್ಮಾನಗಳಿಗೆ ಭಾಜನರಾಗಿದ್ದಾರೆ. ಅತ್ತಿಮಬ್ಬೆ, ಚೆನ್ನಶ್ರೀ, ಜಿಲ್ಲಾ ರಾಜ್ಯೋತ್ಸವ, ಕಿತ್ತೂರ ರಾಣಿ ಚೆನ್ನಮ್ಮ, ಬಸವ ಜ್ಯೋತಿ, ಹಿರಿಯ ನಾಗರಿಕರ ಸಾಹಿತ್ಯ ಸಾಧಕಿ ಮತ್ತು ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿಗಳಿಂದ ಪುರಸ್ಕೃತರಾದ ಇವರಿಗೆ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಗ್ರಂಥ ಬಹುಮಾನ ಮತ್ತು ಮೇವುಂಡಿ ಮಲ್ಲಾರಿ ಮಕ್ಕಳ ಕಥಾ ಪುರಸ್ಕಾರ ಸೇರಿದಂತೆ ಇನ್ನೂ ಅನೇಕ ಪ್ರಶಸ್ತಿಗಳು ಪ್ರಾಪ್ತವಾಗಿವೆ.

ಮುಮ್ತಾಜ್ ಬೇಗಂ ಅವರು ಸಾಹಿತ್ಯ ಮಾತ್ರವಲ್ಲದೇ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಸಂಘ ಸಂಸ್ಥೆಗಳಲ್ಲಿ ವಿವಿಧ ಆಡಳಿತಾತ್ಮಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಕತಾರ್‌ನಲ್ಲಿರುವ ಯುನೆಸ್ಕೋ ಸಂಸ್ಥೆಯ ಆರ್ಥಿಕ ಮತ್ತು ಆಡಳಿತ ಸಹಾಯಕರಾಗಿ ಅನೇಕ ವರ್ಷ ಕಾರ್ಯ ನಿರ್ವಹಿಸಿದ್ದ ಮುಮ್ತಾಜ್ ಬೇಗಂ ಅವರು ದುಬೈನ ಅಲ್ ಮೀರ್ ಸಂಸ್ಥೆ ಮತ್ತು ‘ಫ್ಯೂಜಿ ಗಾರ್ಮೆಂಟ್ಸ್’ನ ಕಾರ್ಯದರ್ಶಿಯಾಗಿ ಕೂಡ ಕೆಲವು ವರ್ಷ ಸೇವೆ ಸಲ್ಲಿಸಿದ್ದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕರಾವಳಿ ಲೇಖಕಿ ಮತ್ತು ವಾಚಕಿಯರ ಸಂಘದ ಸಕ್ರಿಯ ಸದಸ್ಯರಾಗಿಯೂ ಅವರು ಕನ್ನಡ ಸಾಹಿತ್ಯವನ್ನು ಕಟ್ಟುವ ಕ್ರಿಯೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ತಮ್ಮ ಇಳಿವಯಸ್ಸಿನಲ್ಲಿ ಗುಜರಾತ್‌ನಲ್ಲಿ ವೈದ್ಯೆಯಾಗಿರುವ ಪುತ್ರಿಯ ಮನೆಯಲ್ಲಿ ವಾಸವಾಗಿದ್ದ ಮುಮ್ತಾಜ್ ಬೇಗಂ ಕಳೆದ ಏಪ್ರಿಲ್‌ನಲ್ಲಿ ಇಹಲೋಕವನ್ನು ತ್ಯಜಿಸಿದ್ದರು.

ಮುಸ್ಲಿಂ ಸಾಹಿತ್ಯ ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿದ್ದು, ಲಾಕ್‌ಡೌನ್ ಸಂಪೂರ್ಣ ತೆರವು ಬಳಿಕ ಮಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಗೆ 36 ಕೃತಿಗಳು ಬಂದಿದ್ದು, ಸಾಹಿತಿಗಳಾದ ಡಾ. ಹಸೀನಾ ಖಾದ್ರಿ, ಅಬ್ದುಲ್ ರಹಮಾನ್ ಕುತ್ತೆತ್ತೂರು ಮತ್ತು ಪ್ರಾಧ್ಯಾಪಕ ಅಬ್ದುಲ್ ರಝಾಕ್ ಅನಂತಾಡಿ ತೀರ್ಪುಗಾರರಾಗಿ ಸಹಕರಿಸಿದ್ದರು ಎಂದು ಮುಸ್ಲಿಂ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


ಇದನ್ನೂ ಓದಿ; ಡಾ. ಹಫೀಜ್ ಕರ್ನಾಟಕಿ: ಸೌಹಾರ್ದತೆಯ ಸಂತನಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...