Homeಮುಖಪುಟದಿವಂಗತ ಮುಮ್ತಾಜ್ ಬೇಗಂ ಅವರ 'ಸ್ವಾತಂತ್ರ್ಯದ ಕಹಳೆ' ಕೃತಿಗೆ ಮುಸ್ಲಿಂ ಸಾಹಿತ್ಯ ಪ್ರಶಸ್ತಿ

ದಿವಂಗತ ಮುಮ್ತಾಜ್ ಬೇಗಂ ಅವರ ‘ಸ್ವಾತಂತ್ರ್ಯದ ಕಹಳೆ’ ಕೃತಿಗೆ ಮುಸ್ಲಿಂ ಸಾಹಿತ್ಯ ಪ್ರಶಸ್ತಿ

- Advertisement -
- Advertisement -

ಕನ್ನಡ ಸಾಹಿತ್ಯದ ಕೆಲವೇ ಕೆಲವು ಖ್ಯಾತ ಮುಸ್ಲಿಂ ಲೇಖಕಿಯರಲ್ಲಿ ಮುಮ್ತಾಜ್ ಬೇಗಂ (73) ಕೂಡ ಒಬ್ಬರು. ದುರದೃಷ್ಟವಶಾತ್ ಕಳೆದ ಏಪ್ರಿಲ್ 06 ರಂದು ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿರುವಾಗಲೇ ಅವರು ಕೋವಿಡ್ ಸೋಂಕಿನ ಕಾರಣದಿಂದ ಮೃತಪಟ್ಟಿದ್ದರು. ಅವರ ಮರಣದ ನಂತರ ಈಗ ಅವರ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಕರ್ನಾಟಕ ಮುಸ್ಲಿಂ ಲೇಖಕರ ಸಂಘವು ಮುಮ್ತಾಜ್ ಬೇಗಂ ಅವರ ‘ಸ್ವಾತಂತ್ರ್ಯ ಕಹಳೆ’ ಕೃತಿಯನ್ನು ‘2019 ನೇ ಸಾಲಿನ ಮುಸ್ಲಿಂ ಸಾಹಿತ್ಯ ಪ್ರಶಸ್ತಿಗೆ’ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಗಾಗಿ 36 ಕೃತಿಗಳು ಬಂದಿದ್ದು ಅದರಲ್ಲಿ ಬೇಗಂ ಅವರ ಸ್ವಾತಂತ್ರ್ಯದ ಕಹಳೆ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿದೆ.

ಮುಮ್ತಾಜ್ ಬೇಗಂ ಅವರು ಕಳೆದ ಮೂರು ದಶಕಗಳಿಂದ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು ಹತ್ತಾರು ಸಾಹಿತ್ಯಿಕ ಕೃತಿಗಳನ್ನು ರಚಿಸಿದ್ದಾರೆ. ಕಥೆ, ಕಾದಂಬರಿ, ಕಾವ್ಯ, ಮಕ್ಕಳ ಸಾಹಿತ್ಯ ಹೀಗೆ ಮುಮ್ತಾಜ್ ಬೇಗಂ ವೈವಿಧ್ಯಮಯ ಸಾಹಿತ್ಯಿಕ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಅವ್ಯಕ್ತ ಮತ್ತು ಅಂಕುರ, ಸರ್ವ ಋತುಗಳು ನಿನಗಾಗಿ ಎಂಬ ಕವನ ಸಂಕಲನಗಳನ್ನೂ, ವರ್ತುಲ, ಬಂದಳಿಕೆ ಎಂಬ ಕಾದಂಬರಿಗಳನ್ನು, ಚಿಂಪಿ ಎಂಬ ಮಕ್ಕಳ ಸಾಹಿತ್ಯದ ಕೃತಿಗಳನ್ನು ಹಾಗೂ ‘ಟು ದಿ ಅನ್‌ನೌನ್ ಡೆಸ್ಟಿನೇಶನ್’ ಎಂಬ ಇಂಗ್ಲೀಷ್ ಕಾದಂಬರಿಯನ್ನು ರಚಿಸಿದ್ದಾರೆ.

2021 ರ ಮಾರ್ಚ್‌ ನಲ್ಲಿ ಮುಮ್ತಾಜ್ ಬೇಗಂ ಅವರ ‘ಸೂರ್ಯಾಸ್ತ’ ಕೃತಿ ಅನಾವರಣಗೊಂಡಿತ್ತು. ಇದೇ ಸಂದರ್ಭದಲ್ಲಿ ಅವರಿಗೆ ಕೊರೋನಾ ಸೊಂಕು ತಗುಲಿ ಅದರಿಂದ ಚೇತರಿಸಿಕೊಳ್ಳಲಾಗದೇ ತಮ್ಮ 73 ನೇ ವಯಸ್ಸಿನಲ್ಲಿ ಅವರು ಮೃತಪಟ್ಟಿದ್ದರು. ವಿದ್ಯಾರ್ಥಿ ದೆಸೆಯಲ್ಲೇ ಬರವಣಿಗೆಯ ಹವ್ಯಾಸ ಮೈಗೂಡಿಸಿಕೊಂಡಿದ್ದು, ನಾಡಿನ ಅನೇಕ ಪ್ರಸಿದ್ಧ ಪತ್ರಿಕೆಗಳು ಮತ್ತು ನಿಯತಕಾಲಿಕಗಳಲ್ಲಿ ಇವರ ಬರಹಗಳು ಪ್ರಕಟಗೊಂಡಿವೆ.

ಮುಮ್ತಾಜ್ ಅವರ 5 ದಶಕಗಳ ಸಾಹಿತ್ಯ ಸೇವೆಗೆ ಹಲವು ಪ್ರಶಸ್ತಿಗಳು ಹುಡಕಿಕೊಂಡು ಬಂದಿವೆ.ಇವರ ಸಾಹಿತ್ಯ, ಬರಹ ಕ್ಷೇತ್ರದ ಗಣನೀಯ ಸಾಧನೆಗಾಗಿ ಹಲವು ರಾಷ್ಟ್ರ ಮತ್ತು ರಾಜ್ಯ ಮಟ್ಟದ ಪ್ರತಿಷ್ಠಿತ ಗೌರವ ಮತ್ತು ಸನ್ಮಾನಗಳಿಗೆ ಭಾಜನರಾಗಿದ್ದಾರೆ. ಅತ್ತಿಮಬ್ಬೆ, ಚೆನ್ನಶ್ರೀ, ಜಿಲ್ಲಾ ರಾಜ್ಯೋತ್ಸವ, ಕಿತ್ತೂರ ರಾಣಿ ಚೆನ್ನಮ್ಮ, ಬಸವ ಜ್ಯೋತಿ, ಹಿರಿಯ ನಾಗರಿಕರ ಸಾಹಿತ್ಯ ಸಾಧಕಿ ಮತ್ತು ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿಗಳಿಂದ ಪುರಸ್ಕೃತರಾದ ಇವರಿಗೆ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಗ್ರಂಥ ಬಹುಮಾನ ಮತ್ತು ಮೇವುಂಡಿ ಮಲ್ಲಾರಿ ಮಕ್ಕಳ ಕಥಾ ಪುರಸ್ಕಾರ ಸೇರಿದಂತೆ ಇನ್ನೂ ಅನೇಕ ಪ್ರಶಸ್ತಿಗಳು ಪ್ರಾಪ್ತವಾಗಿವೆ.

ಮುಮ್ತಾಜ್ ಬೇಗಂ ಅವರು ಸಾಹಿತ್ಯ ಮಾತ್ರವಲ್ಲದೇ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಸಂಘ ಸಂಸ್ಥೆಗಳಲ್ಲಿ ವಿವಿಧ ಆಡಳಿತಾತ್ಮಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಕತಾರ್‌ನಲ್ಲಿರುವ ಯುನೆಸ್ಕೋ ಸಂಸ್ಥೆಯ ಆರ್ಥಿಕ ಮತ್ತು ಆಡಳಿತ ಸಹಾಯಕರಾಗಿ ಅನೇಕ ವರ್ಷ ಕಾರ್ಯ ನಿರ್ವಹಿಸಿದ್ದ ಮುಮ್ತಾಜ್ ಬೇಗಂ ಅವರು ದುಬೈನ ಅಲ್ ಮೀರ್ ಸಂಸ್ಥೆ ಮತ್ತು ‘ಫ್ಯೂಜಿ ಗಾರ್ಮೆಂಟ್ಸ್’ನ ಕಾರ್ಯದರ್ಶಿಯಾಗಿ ಕೂಡ ಕೆಲವು ವರ್ಷ ಸೇವೆ ಸಲ್ಲಿಸಿದ್ದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕರಾವಳಿ ಲೇಖಕಿ ಮತ್ತು ವಾಚಕಿಯರ ಸಂಘದ ಸಕ್ರಿಯ ಸದಸ್ಯರಾಗಿಯೂ ಅವರು ಕನ್ನಡ ಸಾಹಿತ್ಯವನ್ನು ಕಟ್ಟುವ ಕ್ರಿಯೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ತಮ್ಮ ಇಳಿವಯಸ್ಸಿನಲ್ಲಿ ಗುಜರಾತ್‌ನಲ್ಲಿ ವೈದ್ಯೆಯಾಗಿರುವ ಪುತ್ರಿಯ ಮನೆಯಲ್ಲಿ ವಾಸವಾಗಿದ್ದ ಮುಮ್ತಾಜ್ ಬೇಗಂ ಕಳೆದ ಏಪ್ರಿಲ್‌ನಲ್ಲಿ ಇಹಲೋಕವನ್ನು ತ್ಯಜಿಸಿದ್ದರು.

ಮುಸ್ಲಿಂ ಸಾಹಿತ್ಯ ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿದ್ದು, ಲಾಕ್‌ಡೌನ್ ಸಂಪೂರ್ಣ ತೆರವು ಬಳಿಕ ಮಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಗೆ 36 ಕೃತಿಗಳು ಬಂದಿದ್ದು, ಸಾಹಿತಿಗಳಾದ ಡಾ. ಹಸೀನಾ ಖಾದ್ರಿ, ಅಬ್ದುಲ್ ರಹಮಾನ್ ಕುತ್ತೆತ್ತೂರು ಮತ್ತು ಪ್ರಾಧ್ಯಾಪಕ ಅಬ್ದುಲ್ ರಝಾಕ್ ಅನಂತಾಡಿ ತೀರ್ಪುಗಾರರಾಗಿ ಸಹಕರಿಸಿದ್ದರು ಎಂದು ಮುಸ್ಲಿಂ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


ಇದನ್ನೂ ಓದಿ; ಡಾ. ಹಫೀಜ್ ಕರ್ನಾಟಕಿ: ಸೌಹಾರ್ದತೆಯ ಸಂತನಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...