Homeಮುಖಪುಟಕನ್ನಡದ ಹಿರಿಯ ನಟ ಟಿ.ಎಸ್ ಲೋಹಿತಾಶ್ವ ನಿಧನ

ಕನ್ನಡದ ಹಿರಿಯ ನಟ ಟಿ.ಎಸ್ ಲೋಹಿತಾಶ್ವ ನಿಧನ

- Advertisement -
- Advertisement -

ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕನ್ನಡದ ಹಿರಿಯ ನಟ ಟಿ.ಎಸ್ ಲೋಹಿತಾಶ್ವರವರು ಇಂದು ನಿಧನ ಹೊಂದಿದ್ದಾರೆ.

80 ವರ್ಷದ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವಾಗಲೇ ಅವರಿಗೆ ಹೃದಯಾಘಾತವಾಗಿತ್ತು. ಆ ನಂತರ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚೇತರಿಕೆ ಕಾಣದ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ತಮ್ಮ ವಿಶಿಷ್ಟ ಧ್ವನಿ ಮೂಲಕ ಖ್ಯಾತಿ ಗಳಿಸಿದ್ದ ಲೋಹಿತಾಶ್ವರವರು ಸುಮಾರು 500 ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಖಳನಟರಾಗಿ, ಪೋಷಕ ನಟರಾಗಿ ಅಭಿನಯಿಸಿದ್ದಾರೆ. ಅವರು ಸ್ನೇಹಲೋಕ, ಸಾಂಗ್ಲಿಯಾನ, ಅಭಿಮನ್ಯು, ಸಿಂಹದ ಮರಿ, ಸಂಭವಾಮಿ ಯುಗೇ ಯುಗೇ, ಲಾಕಪ್ ಡೆತ್, ಸಮಯದ ಗೊಂಬೆ, ಸಂಗ್ರಾಮ, ಸಾರಥಿ, ಎಕೆ47 ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು.

ಅಲ್ಲದೆ ಶಂಕರ್‌ನಾಗ್ ಅಭಿನಯದ ಮಾಲ್ಗುಡಿ ಡೇಸ್, ಗಿರೀಶ್ ಕಾಸರವಳ್ಳಿಯವರ ಗೃಹಭಂಗ ಸೇರಿದಂತೆ ಹಲವು ಧಾರವಾಹಿಗಳಲ್ಲಿಯೂ ಸಹ ಅಭಿನಯಿಸಿದ್ದರು.

ತುಮಕೂರಿನವರಾದ ಅವರು ಮೂಲತಃ ಇಂಗ್ಲಿಷ್ ಪ್ರಾಧ್ಯಾಪಕರು. ನಾಟಕಕರರೂ ಆದ ಅವರು ಆನಂತರ ಚಲನಚಿತ್ರಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿದ್ದರು. ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.

ಇದನ್ನೂ ಓದಿ: ಮಕ್ಕಳಿಗೆ ಉಚಿತವಾಗಿ ‘ಗಂಧದಗುಡಿ’ ತೋರಿಸಬೇಕು, ಏಕೆಂದರೆ..,: ಮಂಸೋರೆ ಮನದ ಮಾತು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...