Homeಕರ್ನಾಟಕಕನ್ನಡದ ಹಿರಿಯ ವಿಮರ್ಶಕ ಜಿ.ಎಚ್.ನಾಯಕ ನಿಧನ

ಕನ್ನಡದ ಹಿರಿಯ ವಿಮರ್ಶಕ ಜಿ.ಎಚ್.ನಾಯಕ ನಿಧನ

- Advertisement -
- Advertisement -

ಕನ್ನಡ ಸಾಹಿತ್ಯ ಲೋಕದ ಹಿರಿಯ ವಿಮರ್ಶಕ, ನೇರ ನಿಷ್ಠುರ ಮಾತುಗಳಿಗೆ ಹೆಸರಾದ ಪ್ರೊ. ಗೋವಿಂದರಾಯ ಹಮ್ಮಣ್ಣ ನಾಯಕ (ಜಿ.ಎಚ್.ನಾಯಕ) ಅವರು ಶುಕ್ರವಾರ ಮೈಸೂರಿನಲ್ಲಿ ನಿಧನರಾಗಿದ್ದಾರೆ.

ಬಹುಕಾಲದಿಂದ ಅವರು ವಯೋಸಹಜ ಆರೋಗ್ಯ ಸಮಸ್ಯೆಯಲ್ಲಿದ್ದ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿ ನೆಲೆಸಿದ್ದ ಜಿ.ಎಚ್‌.ನಾಯಕ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿದ್ದಾರೆ.

ಉತ್ತರ ಕನ್ನಡದ ಅಂಕೋಲ ತಾಲ್ಲೂಕಿನ ಸೂರ್ವೆಯಲ್ಲಿ 1935, ಸೆಪ್ಟೆಂಬರ್‌ 18ರಂದು ಜನಿಸಿದ್ದ ಜಿ.ಎಚ್‌.ನಾಯಕ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಿದ್ಯಾರ್ಥಿ ದೆಸೆಯಿಂದಲೂ ಮೈಸೂರಿನಲ್ಲಿಯೇ ನೆಲೆಸಿದ್ದ ಅವರು ಮೈಸೂರು ಸಾಂಸ್ಕೃತಿಕ ಪ್ರಪಂಚ ಮತ್ತು ಪ್ರಗತಿಪರ ಚಳವಳಿಗಳ ಭಾಗವಾಗಿದ್ದರು.

ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿ ಪುರಸ್ಕೃತರಾಗಿದ್ದ ನಾಯಕರ ಪತ್ನಿ, ಸಾಮಾಜಿಕ ಹೋರಾಟಗಾರ್ತಿ ಮೀರಾನಾಯಕ. ಪುತ್ರಿ ದೀಪಾ.

ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಬಹುಕಾಲ ಅಧ್ಯಾಪಕರಾಗಿದ್ದ ಅವರು ವಿಮರ್ಶೆ ಜತೆಗೆ ಸಂಪಾದನೆ, ಕನ್ನಡ ಸಣ್ಣಕಥೆಗಳು, ಹೊಸಗನ್ನಡ ಕವಿತೆಗಳನ್ನೂ ರಚಿಸಿದ್ದರು. ‘ಬಾಳು’ ಹೆಸರಲ್ಲಿ ಆತ್ಮಕಥೆಯನ್ನು ಬರೆದಿದ್ದಾರೆ.

ಇದನ್ನೂ ಓದಿರಿ: ಅಂಬೇಡ್ಕರ್‌‌ ನಿಂದನೆ; ಸಿಮ್ಸ್‌ ನಿರ್ದೇಶಕರ ವಿರುದ್ಧ ತನಿಖೆಗೆ ಸಮಿತಿ ರಚನೆ

ಸಮಕಾಲೀನ (1973 ), ಅನಿವಾರ್ಯ (1980), ನಿರಪೇಕ್ಷೆ (1984), ನಿಜದನಿ (1988), ವಿನಯ ವಿಮರ್ಶೆ (1991), ಸಕಾಲಿಕ (1995), ಗುಣ ಗೌರವ (2002), ಹರಿಶ್ಚಂದ್ರ ಕಾವ್ಯ ಓದು-ವಿಮರ್ಶೆ (2002), ಕೃತಿ ಸಾಕ್ಷಿ (2006), ಸ್ಥಿತಿ ಪ್ರಜ್ಞೆ (2007), ಮತ್ತೆ ಮತ್ತೆ ಪಂಪ (2008), ಸಾಹಿತ್ಯ ಸಮೀಕ್ಷೆ (2009), ಉತ್ತರಾರ್ಧ (2011) ಅವರ ಬಹುಮುಖ್ಯ ಕೃತಿಗಳು.

ಉತ್ತರಾರ್ಧ ಕೃತಿಗೆ 2019ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನಿರಪೇಕ್ಷ ವಿಮರ್ಶಾ ಕೃತಿಗೆ ‘ಕರ್ನಾಟಕ ಸಾಹಿತ್ಯ ಅಕಾಡೆಮಿ’ಯ ಪ್ರಶಸ್ತಿ ದೊರೆತಿವೆ. ನಿಜದನಿ ವಿಮರ್ಶಾ ಕೃತಿಗೆ ‘ವಿ.ಎಂ.ಇನಾಂದಾರ ಸ್ಮಾರಕ’ ಪ್ರಶಸ್ತಿ ಜಿ.ಎಚ್‌.ನಾಯಕ ಅವರಿಗೆ ಲಭಿಸಿದೆ.

ಅಡಿಗರ ಗೌರವ ಗ್ರಂಥ ಸಂವೇದನೆ , ಶ್ರೀ ರಾಮಾಯಣ ದರ್ಶನಂ ಕುವೆಂಪು ಸ್ವಹಸ್ತಾಕ್ಷರ ಪ್ರತಿ, ಶತಮಾನದ ಕನ್ನಡ ಸಾಹಿತ್ಯ 1, 2ನೇ ಸಂಪುಟಗಳಿಗೆ ಸಂಪಾದಕರೂ ಆಗಿ ಜಿ.ಎಚ್.ನಾಯಕ ಸೇವೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದು, “ಪ್ರಸಿದ್ಧ ಸಾಹಿತಿ ಪ್ರೊ. ಜಿ.ಎಚ್.ನಾಯಕ್ ಅವರ ಅಗಲಿಕೆ ನನಗೆ ಆಘಾತವನ್ನುಂಟು‌ ಮಾಡಿದೆ. ನನ್ನ ಆತ್ಮೀಯರು ಮತ್ತು ಹಿತಚಿಂತಕರಾಗಿದ್ದ ಜಿ.ಎಚ್.ನಾಯಕ್ ಬರವಣಿಗೆಯ ಜೊತೆಗೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಳುವಳಿಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಹೊಸ ತಲೆಮಾರನ್ನು ಪ್ರಭಾವಿಸಿದವರು. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ” ಎಂದಿದ್ದಾರೆ.

ಚಿಂತಕರಾದ ಶ್ರೀಪಾದ್ ಭಟ್ ಪ್ರತಿಕ್ರಿಯಿಸಿ, “ಅರವತ್ತರ ದಶಕದ ನವ್ಯ ಕಾಲದ ವಿಮರ್ಶ ವಲಯವು ಲೀವಿಸ್ ಮತ್ತು ಎಂ.ಜಿ.ಕೆ. ನಿಷ್ಠತೆಯಲ್ಲಿ ತನ್ನ ಭಕ್ತಿಯನ್ನು ಪ್ರದರ್ಶಿಸುತ್ತಾ ಪಕ್ಕಾ ಬ್ರಾಹ್ಮಣರ ಒಡ್ಡೋಲಗದಂತಿತ್ತು. ಈ ವಿಪ್ರವೃಂದವು ಬ್ರಾಹ್ಮಣೇತರ ಲೇಖಕ/ಲೇಖಕಿಯರೊಂದಿಗೆ ‘ನೀ ಒಳಗೆ ಬಾ, ಆದರೆ ನಿನ್ನ ಆಸ್ತಿತ್ವವನ್ನು ನಾವು ನಿರ್ಧರಿಸುತ್ತೇವೆ’ ಎಂಬಂತೆ ವರ್ತಿಸುತ್ತಿತ್ತು. ಇಂತಹ ಸಂದರ್ಭದಲ್ಲಿ ತಮ್ಮ ಖಚಿತ ನಿಲುವು ಮತ್ತು ಆಳವಾದ ಒಳನೋಟಗಳ ಮೂಲಕ ವಸ್ತುನಿಷ್ಠ ವಿಮರ್ಶೆಯ ಹೊಸ ದಿಕ್ಕನ್ನು ರೂಪಿಸಿದ ಜಿ. ಎಚ್. ನಾಯಕರು ನಿಷ್ಠುರತೆ ಮತ್ತು ಅಗಾಧ ಓದನ್ನು ಒಳಗೊಂಡ ಬಹು ಮುಖ್ಯ ಪರಂಪರೆಯನ್ನು ಕಟ್ಟಿದ್ದಾರೆ” ಎಂದು ನೆನೆದಿದ್ದಾರೆ.

“ಆಗ ಬ್ರಾಹ್ಮಣ ವಿಮರ್ಶಕರ ಅಸಡ್ಡೆಗೆ ಒಳಗಾಗಿದ್ದ ಕುವೆಂಪು ಸಾಹಿತ್ಯದ ಆ ಶಕ್ತಿ, ವೈಚಾರಿಕತೆ, ಸೃಜನಶೀಲತೆಯನ್ನು ತಮ್ಮದೇ ಶೈಲಿಯಲ್ಲಿ ಕನ್ನಡದ ಓದುಗರ ಮುಂದೆ ಕಟ್ಟಿಕೊಟ್ಟ ನಾಯಕರನ್ನು ಮರೆಯಲು ಸಾಧ್ಯವಿಲ್ಲ. ಇಲ್ಲಿ ತೇಜಸ್ವಿಯವರ ಕೊಡುಗೆಯೂ ಸಹ ಮುಖ್ಯ. ನಿಷ್ಠುರವಾದಿಯಾಗಿದ್ದ ನಾಯಕರು ಮೈಸೂರಿನ ಒಕ್ಕಲಿಗ ಅಕಾಡೆಮಿಕ್ ವಲಯದಿಂದಲೂ ಕಿರಿ ಕಿರಿ ಅನುಭವಿಸಿದರು. ಆದರೆ ತಮ್ಮ ‘ನಿಜದನಿ’ಯನ್ನು ಬದಲಿಸಲಿಲ್ಲ. ಕನ್ನಡ ವಿಮರ್ಶೆಗೆ ಹೊಸ ಪರಿಭಾಷೆ ಬರೆದ ನಾಯಕರಿಗೆ ನಮನಗಳು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...