Homeಕರ್ನಾಟಕಕನ್ನಡದ ಹಿರಿಯ ವಿಮರ್ಶಕ ಜಿ.ಎಚ್.ನಾಯಕ ನಿಧನ

ಕನ್ನಡದ ಹಿರಿಯ ವಿಮರ್ಶಕ ಜಿ.ಎಚ್.ನಾಯಕ ನಿಧನ

- Advertisement -
- Advertisement -

ಕನ್ನಡ ಸಾಹಿತ್ಯ ಲೋಕದ ಹಿರಿಯ ವಿಮರ್ಶಕ, ನೇರ ನಿಷ್ಠುರ ಮಾತುಗಳಿಗೆ ಹೆಸರಾದ ಪ್ರೊ. ಗೋವಿಂದರಾಯ ಹಮ್ಮಣ್ಣ ನಾಯಕ (ಜಿ.ಎಚ್.ನಾಯಕ) ಅವರು ಶುಕ್ರವಾರ ಮೈಸೂರಿನಲ್ಲಿ ನಿಧನರಾಗಿದ್ದಾರೆ.

ಬಹುಕಾಲದಿಂದ ಅವರು ವಯೋಸಹಜ ಆರೋಗ್ಯ ಸಮಸ್ಯೆಯಲ್ಲಿದ್ದ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿ ನೆಲೆಸಿದ್ದ ಜಿ.ಎಚ್‌.ನಾಯಕ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿದ್ದಾರೆ.

ಉತ್ತರ ಕನ್ನಡದ ಅಂಕೋಲ ತಾಲ್ಲೂಕಿನ ಸೂರ್ವೆಯಲ್ಲಿ 1935, ಸೆಪ್ಟೆಂಬರ್‌ 18ರಂದು ಜನಿಸಿದ್ದ ಜಿ.ಎಚ್‌.ನಾಯಕ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಿದ್ಯಾರ್ಥಿ ದೆಸೆಯಿಂದಲೂ ಮೈಸೂರಿನಲ್ಲಿಯೇ ನೆಲೆಸಿದ್ದ ಅವರು ಮೈಸೂರು ಸಾಂಸ್ಕೃತಿಕ ಪ್ರಪಂಚ ಮತ್ತು ಪ್ರಗತಿಪರ ಚಳವಳಿಗಳ ಭಾಗವಾಗಿದ್ದರು.

ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿ ಪುರಸ್ಕೃತರಾಗಿದ್ದ ನಾಯಕರ ಪತ್ನಿ, ಸಾಮಾಜಿಕ ಹೋರಾಟಗಾರ್ತಿ ಮೀರಾನಾಯಕ. ಪುತ್ರಿ ದೀಪಾ.

ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಬಹುಕಾಲ ಅಧ್ಯಾಪಕರಾಗಿದ್ದ ಅವರು ವಿಮರ್ಶೆ ಜತೆಗೆ ಸಂಪಾದನೆ, ಕನ್ನಡ ಸಣ್ಣಕಥೆಗಳು, ಹೊಸಗನ್ನಡ ಕವಿತೆಗಳನ್ನೂ ರಚಿಸಿದ್ದರು. ‘ಬಾಳು’ ಹೆಸರಲ್ಲಿ ಆತ್ಮಕಥೆಯನ್ನು ಬರೆದಿದ್ದಾರೆ.

ಇದನ್ನೂ ಓದಿರಿ: ಅಂಬೇಡ್ಕರ್‌‌ ನಿಂದನೆ; ಸಿಮ್ಸ್‌ ನಿರ್ದೇಶಕರ ವಿರುದ್ಧ ತನಿಖೆಗೆ ಸಮಿತಿ ರಚನೆ

ಸಮಕಾಲೀನ (1973 ), ಅನಿವಾರ್ಯ (1980), ನಿರಪೇಕ್ಷೆ (1984), ನಿಜದನಿ (1988), ವಿನಯ ವಿಮರ್ಶೆ (1991), ಸಕಾಲಿಕ (1995), ಗುಣ ಗೌರವ (2002), ಹರಿಶ್ಚಂದ್ರ ಕಾವ್ಯ ಓದು-ವಿಮರ್ಶೆ (2002), ಕೃತಿ ಸಾಕ್ಷಿ (2006), ಸ್ಥಿತಿ ಪ್ರಜ್ಞೆ (2007), ಮತ್ತೆ ಮತ್ತೆ ಪಂಪ (2008), ಸಾಹಿತ್ಯ ಸಮೀಕ್ಷೆ (2009), ಉತ್ತರಾರ್ಧ (2011) ಅವರ ಬಹುಮುಖ್ಯ ಕೃತಿಗಳು.

ಉತ್ತರಾರ್ಧ ಕೃತಿಗೆ 2019ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನಿರಪೇಕ್ಷ ವಿಮರ್ಶಾ ಕೃತಿಗೆ ‘ಕರ್ನಾಟಕ ಸಾಹಿತ್ಯ ಅಕಾಡೆಮಿ’ಯ ಪ್ರಶಸ್ತಿ ದೊರೆತಿವೆ. ನಿಜದನಿ ವಿಮರ್ಶಾ ಕೃತಿಗೆ ‘ವಿ.ಎಂ.ಇನಾಂದಾರ ಸ್ಮಾರಕ’ ಪ್ರಶಸ್ತಿ ಜಿ.ಎಚ್‌.ನಾಯಕ ಅವರಿಗೆ ಲಭಿಸಿದೆ.

ಅಡಿಗರ ಗೌರವ ಗ್ರಂಥ ಸಂವೇದನೆ , ಶ್ರೀ ರಾಮಾಯಣ ದರ್ಶನಂ ಕುವೆಂಪು ಸ್ವಹಸ್ತಾಕ್ಷರ ಪ್ರತಿ, ಶತಮಾನದ ಕನ್ನಡ ಸಾಹಿತ್ಯ 1, 2ನೇ ಸಂಪುಟಗಳಿಗೆ ಸಂಪಾದಕರೂ ಆಗಿ ಜಿ.ಎಚ್.ನಾಯಕ ಸೇವೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದು, “ಪ್ರಸಿದ್ಧ ಸಾಹಿತಿ ಪ್ರೊ. ಜಿ.ಎಚ್.ನಾಯಕ್ ಅವರ ಅಗಲಿಕೆ ನನಗೆ ಆಘಾತವನ್ನುಂಟು‌ ಮಾಡಿದೆ. ನನ್ನ ಆತ್ಮೀಯರು ಮತ್ತು ಹಿತಚಿಂತಕರಾಗಿದ್ದ ಜಿ.ಎಚ್.ನಾಯಕ್ ಬರವಣಿಗೆಯ ಜೊತೆಗೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಳುವಳಿಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಹೊಸ ತಲೆಮಾರನ್ನು ಪ್ರಭಾವಿಸಿದವರು. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ” ಎಂದಿದ್ದಾರೆ.

ಚಿಂತಕರಾದ ಶ್ರೀಪಾದ್ ಭಟ್ ಪ್ರತಿಕ್ರಿಯಿಸಿ, “ಅರವತ್ತರ ದಶಕದ ನವ್ಯ ಕಾಲದ ವಿಮರ್ಶ ವಲಯವು ಲೀವಿಸ್ ಮತ್ತು ಎಂ.ಜಿ.ಕೆ. ನಿಷ್ಠತೆಯಲ್ಲಿ ತನ್ನ ಭಕ್ತಿಯನ್ನು ಪ್ರದರ್ಶಿಸುತ್ತಾ ಪಕ್ಕಾ ಬ್ರಾಹ್ಮಣರ ಒಡ್ಡೋಲಗದಂತಿತ್ತು. ಈ ವಿಪ್ರವೃಂದವು ಬ್ರಾಹ್ಮಣೇತರ ಲೇಖಕ/ಲೇಖಕಿಯರೊಂದಿಗೆ ‘ನೀ ಒಳಗೆ ಬಾ, ಆದರೆ ನಿನ್ನ ಆಸ್ತಿತ್ವವನ್ನು ನಾವು ನಿರ್ಧರಿಸುತ್ತೇವೆ’ ಎಂಬಂತೆ ವರ್ತಿಸುತ್ತಿತ್ತು. ಇಂತಹ ಸಂದರ್ಭದಲ್ಲಿ ತಮ್ಮ ಖಚಿತ ನಿಲುವು ಮತ್ತು ಆಳವಾದ ಒಳನೋಟಗಳ ಮೂಲಕ ವಸ್ತುನಿಷ್ಠ ವಿಮರ್ಶೆಯ ಹೊಸ ದಿಕ್ಕನ್ನು ರೂಪಿಸಿದ ಜಿ. ಎಚ್. ನಾಯಕರು ನಿಷ್ಠುರತೆ ಮತ್ತು ಅಗಾಧ ಓದನ್ನು ಒಳಗೊಂಡ ಬಹು ಮುಖ್ಯ ಪರಂಪರೆಯನ್ನು ಕಟ್ಟಿದ್ದಾರೆ” ಎಂದು ನೆನೆದಿದ್ದಾರೆ.

“ಆಗ ಬ್ರಾಹ್ಮಣ ವಿಮರ್ಶಕರ ಅಸಡ್ಡೆಗೆ ಒಳಗಾಗಿದ್ದ ಕುವೆಂಪು ಸಾಹಿತ್ಯದ ಆ ಶಕ್ತಿ, ವೈಚಾರಿಕತೆ, ಸೃಜನಶೀಲತೆಯನ್ನು ತಮ್ಮದೇ ಶೈಲಿಯಲ್ಲಿ ಕನ್ನಡದ ಓದುಗರ ಮುಂದೆ ಕಟ್ಟಿಕೊಟ್ಟ ನಾಯಕರನ್ನು ಮರೆಯಲು ಸಾಧ್ಯವಿಲ್ಲ. ಇಲ್ಲಿ ತೇಜಸ್ವಿಯವರ ಕೊಡುಗೆಯೂ ಸಹ ಮುಖ್ಯ. ನಿಷ್ಠುರವಾದಿಯಾಗಿದ್ದ ನಾಯಕರು ಮೈಸೂರಿನ ಒಕ್ಕಲಿಗ ಅಕಾಡೆಮಿಕ್ ವಲಯದಿಂದಲೂ ಕಿರಿ ಕಿರಿ ಅನುಭವಿಸಿದರು. ಆದರೆ ತಮ್ಮ ‘ನಿಜದನಿ’ಯನ್ನು ಬದಲಿಸಲಿಲ್ಲ. ಕನ್ನಡ ವಿಮರ್ಶೆಗೆ ಹೊಸ ಪರಿಭಾಷೆ ಬರೆದ ನಾಯಕರಿಗೆ ನಮನಗಳು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...