Homeಕರ್ನಾಟಕಕನ್ನಡದ ಹಿರಿಯ ವಿಮರ್ಶಕ ಜಿ.ಎಚ್.ನಾಯಕ ನಿಧನ

ಕನ್ನಡದ ಹಿರಿಯ ವಿಮರ್ಶಕ ಜಿ.ಎಚ್.ನಾಯಕ ನಿಧನ

- Advertisement -
- Advertisement -

ಕನ್ನಡ ಸಾಹಿತ್ಯ ಲೋಕದ ಹಿರಿಯ ವಿಮರ್ಶಕ, ನೇರ ನಿಷ್ಠುರ ಮಾತುಗಳಿಗೆ ಹೆಸರಾದ ಪ್ರೊ. ಗೋವಿಂದರಾಯ ಹಮ್ಮಣ್ಣ ನಾಯಕ (ಜಿ.ಎಚ್.ನಾಯಕ) ಅವರು ಶುಕ್ರವಾರ ಮೈಸೂರಿನಲ್ಲಿ ನಿಧನರಾಗಿದ್ದಾರೆ.

ಬಹುಕಾಲದಿಂದ ಅವರು ವಯೋಸಹಜ ಆರೋಗ್ಯ ಸಮಸ್ಯೆಯಲ್ಲಿದ್ದ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿ ನೆಲೆಸಿದ್ದ ಜಿ.ಎಚ್‌.ನಾಯಕ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿದ್ದಾರೆ.

ಉತ್ತರ ಕನ್ನಡದ ಅಂಕೋಲ ತಾಲ್ಲೂಕಿನ ಸೂರ್ವೆಯಲ್ಲಿ 1935, ಸೆಪ್ಟೆಂಬರ್‌ 18ರಂದು ಜನಿಸಿದ್ದ ಜಿ.ಎಚ್‌.ನಾಯಕ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಿದ್ಯಾರ್ಥಿ ದೆಸೆಯಿಂದಲೂ ಮೈಸೂರಿನಲ್ಲಿಯೇ ನೆಲೆಸಿದ್ದ ಅವರು ಮೈಸೂರು ಸಾಂಸ್ಕೃತಿಕ ಪ್ರಪಂಚ ಮತ್ತು ಪ್ರಗತಿಪರ ಚಳವಳಿಗಳ ಭಾಗವಾಗಿದ್ದರು.

ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿ ಪುರಸ್ಕೃತರಾಗಿದ್ದ ನಾಯಕರ ಪತ್ನಿ, ಸಾಮಾಜಿಕ ಹೋರಾಟಗಾರ್ತಿ ಮೀರಾನಾಯಕ. ಪುತ್ರಿ ದೀಪಾ.

ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಬಹುಕಾಲ ಅಧ್ಯಾಪಕರಾಗಿದ್ದ ಅವರು ವಿಮರ್ಶೆ ಜತೆಗೆ ಸಂಪಾದನೆ, ಕನ್ನಡ ಸಣ್ಣಕಥೆಗಳು, ಹೊಸಗನ್ನಡ ಕವಿತೆಗಳನ್ನೂ ರಚಿಸಿದ್ದರು. ‘ಬಾಳು’ ಹೆಸರಲ್ಲಿ ಆತ್ಮಕಥೆಯನ್ನು ಬರೆದಿದ್ದಾರೆ.

ಇದನ್ನೂ ಓದಿರಿ: ಅಂಬೇಡ್ಕರ್‌‌ ನಿಂದನೆ; ಸಿಮ್ಸ್‌ ನಿರ್ದೇಶಕರ ವಿರುದ್ಧ ತನಿಖೆಗೆ ಸಮಿತಿ ರಚನೆ

ಸಮಕಾಲೀನ (1973 ), ಅನಿವಾರ್ಯ (1980), ನಿರಪೇಕ್ಷೆ (1984), ನಿಜದನಿ (1988), ವಿನಯ ವಿಮರ್ಶೆ (1991), ಸಕಾಲಿಕ (1995), ಗುಣ ಗೌರವ (2002), ಹರಿಶ್ಚಂದ್ರ ಕಾವ್ಯ ಓದು-ವಿಮರ್ಶೆ (2002), ಕೃತಿ ಸಾಕ್ಷಿ (2006), ಸ್ಥಿತಿ ಪ್ರಜ್ಞೆ (2007), ಮತ್ತೆ ಮತ್ತೆ ಪಂಪ (2008), ಸಾಹಿತ್ಯ ಸಮೀಕ್ಷೆ (2009), ಉತ್ತರಾರ್ಧ (2011) ಅವರ ಬಹುಮುಖ್ಯ ಕೃತಿಗಳು.

ಉತ್ತರಾರ್ಧ ಕೃತಿಗೆ 2019ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನಿರಪೇಕ್ಷ ವಿಮರ್ಶಾ ಕೃತಿಗೆ ‘ಕರ್ನಾಟಕ ಸಾಹಿತ್ಯ ಅಕಾಡೆಮಿ’ಯ ಪ್ರಶಸ್ತಿ ದೊರೆತಿವೆ. ನಿಜದನಿ ವಿಮರ್ಶಾ ಕೃತಿಗೆ ‘ವಿ.ಎಂ.ಇನಾಂದಾರ ಸ್ಮಾರಕ’ ಪ್ರಶಸ್ತಿ ಜಿ.ಎಚ್‌.ನಾಯಕ ಅವರಿಗೆ ಲಭಿಸಿದೆ.

ಅಡಿಗರ ಗೌರವ ಗ್ರಂಥ ಸಂವೇದನೆ , ಶ್ರೀ ರಾಮಾಯಣ ದರ್ಶನಂ ಕುವೆಂಪು ಸ್ವಹಸ್ತಾಕ್ಷರ ಪ್ರತಿ, ಶತಮಾನದ ಕನ್ನಡ ಸಾಹಿತ್ಯ 1, 2ನೇ ಸಂಪುಟಗಳಿಗೆ ಸಂಪಾದಕರೂ ಆಗಿ ಜಿ.ಎಚ್.ನಾಯಕ ಸೇವೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದು, “ಪ್ರಸಿದ್ಧ ಸಾಹಿತಿ ಪ್ರೊ. ಜಿ.ಎಚ್.ನಾಯಕ್ ಅವರ ಅಗಲಿಕೆ ನನಗೆ ಆಘಾತವನ್ನುಂಟು‌ ಮಾಡಿದೆ. ನನ್ನ ಆತ್ಮೀಯರು ಮತ್ತು ಹಿತಚಿಂತಕರಾಗಿದ್ದ ಜಿ.ಎಚ್.ನಾಯಕ್ ಬರವಣಿಗೆಯ ಜೊತೆಗೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಳುವಳಿಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಹೊಸ ತಲೆಮಾರನ್ನು ಪ್ರಭಾವಿಸಿದವರು. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ” ಎಂದಿದ್ದಾರೆ.

ಚಿಂತಕರಾದ ಶ್ರೀಪಾದ್ ಭಟ್ ಪ್ರತಿಕ್ರಿಯಿಸಿ, “ಅರವತ್ತರ ದಶಕದ ನವ್ಯ ಕಾಲದ ವಿಮರ್ಶ ವಲಯವು ಲೀವಿಸ್ ಮತ್ತು ಎಂ.ಜಿ.ಕೆ. ನಿಷ್ಠತೆಯಲ್ಲಿ ತನ್ನ ಭಕ್ತಿಯನ್ನು ಪ್ರದರ್ಶಿಸುತ್ತಾ ಪಕ್ಕಾ ಬ್ರಾಹ್ಮಣರ ಒಡ್ಡೋಲಗದಂತಿತ್ತು. ಈ ವಿಪ್ರವೃಂದವು ಬ್ರಾಹ್ಮಣೇತರ ಲೇಖಕ/ಲೇಖಕಿಯರೊಂದಿಗೆ ‘ನೀ ಒಳಗೆ ಬಾ, ಆದರೆ ನಿನ್ನ ಆಸ್ತಿತ್ವವನ್ನು ನಾವು ನಿರ್ಧರಿಸುತ್ತೇವೆ’ ಎಂಬಂತೆ ವರ್ತಿಸುತ್ತಿತ್ತು. ಇಂತಹ ಸಂದರ್ಭದಲ್ಲಿ ತಮ್ಮ ಖಚಿತ ನಿಲುವು ಮತ್ತು ಆಳವಾದ ಒಳನೋಟಗಳ ಮೂಲಕ ವಸ್ತುನಿಷ್ಠ ವಿಮರ್ಶೆಯ ಹೊಸ ದಿಕ್ಕನ್ನು ರೂಪಿಸಿದ ಜಿ. ಎಚ್. ನಾಯಕರು ನಿಷ್ಠುರತೆ ಮತ್ತು ಅಗಾಧ ಓದನ್ನು ಒಳಗೊಂಡ ಬಹು ಮುಖ್ಯ ಪರಂಪರೆಯನ್ನು ಕಟ್ಟಿದ್ದಾರೆ” ಎಂದು ನೆನೆದಿದ್ದಾರೆ.

“ಆಗ ಬ್ರಾಹ್ಮಣ ವಿಮರ್ಶಕರ ಅಸಡ್ಡೆಗೆ ಒಳಗಾಗಿದ್ದ ಕುವೆಂಪು ಸಾಹಿತ್ಯದ ಆ ಶಕ್ತಿ, ವೈಚಾರಿಕತೆ, ಸೃಜನಶೀಲತೆಯನ್ನು ತಮ್ಮದೇ ಶೈಲಿಯಲ್ಲಿ ಕನ್ನಡದ ಓದುಗರ ಮುಂದೆ ಕಟ್ಟಿಕೊಟ್ಟ ನಾಯಕರನ್ನು ಮರೆಯಲು ಸಾಧ್ಯವಿಲ್ಲ. ಇಲ್ಲಿ ತೇಜಸ್ವಿಯವರ ಕೊಡುಗೆಯೂ ಸಹ ಮುಖ್ಯ. ನಿಷ್ಠುರವಾದಿಯಾಗಿದ್ದ ನಾಯಕರು ಮೈಸೂರಿನ ಒಕ್ಕಲಿಗ ಅಕಾಡೆಮಿಕ್ ವಲಯದಿಂದಲೂ ಕಿರಿ ಕಿರಿ ಅನುಭವಿಸಿದರು. ಆದರೆ ತಮ್ಮ ‘ನಿಜದನಿ’ಯನ್ನು ಬದಲಿಸಲಿಲ್ಲ. ಕನ್ನಡ ವಿಮರ್ಶೆಗೆ ಹೊಸ ಪರಿಭಾಷೆ ಬರೆದ ನಾಯಕರಿಗೆ ನಮನಗಳು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...