Homeಮುಖಪುಟವೆಟ್ರಿವೇಲ್ ಯಾತ್ರೆ: ಅನುಮತಿ ನಿರಾಕರಿಸಿದರೂ ಕೋಮುಪ್ರಚೋದನೆ ಆರಂಭಿಸಿದ ಬಿಜೆಪಿ!

ವೆಟ್ರಿವೇಲ್ ಯಾತ್ರೆ: ಅನುಮತಿ ನಿರಾಕರಿಸಿದರೂ ಕೋಮುಪ್ರಚೋದನೆ ಆರಂಭಿಸಿದ ಬಿಜೆಪಿ!

ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ನಗರಾಜನ್ ಮದ್ರಾಸ್ ಹೈಕೋರ್ಟ್‌ಗೆ, "15 ಕಾರುಗಳಲ್ಲಿ ಕೇವಲ 30 ಜನರು ಮಾತ್ರ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ" ಎಂದು ತಿಳಿಸಿದ್ದರು.

- Advertisement -
- Advertisement -

ಶುಕ್ರವಾರ ವೆಟ್ರಿವೇಲ್ ಯಾತ್ರೆಯನ್ನು ಒತ್ತಾಯಪೂರ್ವಕವಾಗಿ ಮಾಡಿದ್ದಕ್ಕಾಗಿ ಬಿಜೆಪಿಯ ತಮಿಳುನಾಡು ಘಟಕದ ಮುಖ್ಯಸ್ಥ ಎಲ್ ಮುರುಗನ್ ಮತ್ತು ಇತರರನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದರು. ಅಧಿಕಾರಿಗಳಿಂದ ಯಾವುದೇ ಒಪ್ಪಿಗೆ ಇಲ್ಲದಿದ್ದರೂ ಬಿಜೆಪಿಯು ಇಂದು ವೆಟ್ರಿವೇಲ್ ಯಾತ್ರೆಯನ್ನು ಪ್ರಾರಂಭಿಸಿತು.

ಪಕ್ಷದ ಸದಸ್ಯರು ಪ್ರಾರ್ಥನೆ ಸಲ್ಲಿಸಲು ಚೆನ್ನೈನ ತಿರುವೋಟ್ರಿಯೂರಿನಲ್ಲಿರುವ ವಡಿವುಡೈ ಅಮ್ಮನ್ ದೇವಸ್ಥಾನಕ್ಕೆ ಭೇಟಿ ನೀಡುವ ನಿರೀಕ್ಷೆಯಿತ್ತು. ಮುರುಗನ್ ಸೇರಿದಂತೆ ಕೆಲವು ನಾಯಕರು ಮತ್ತು 200 ಕ್ಕೂ ಹೆಚ್ಚು ಜನರು ಕಾರು ಮತ್ತು ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿದ್ದು, ರಸ್ತೆಗಳಲ್ಲಿ ಸಾಕಷ್ಟು ಸಂಚಾರ ಮತ್ತು ಅವ್ಯವಸ್ಥೆ ಉಂಟಾಗಿತ್ತು.

ಇದನ್ನೂ ಓದಿ: ವೆಟ್ರಿವೇಲ್ ಯಾತ್ರೆ ನಡೆಸಲು ಬಿಜೆಪಿ ಕೋರಿದ್ದ ಅನುಮತಿ ತಿರಸ್ಕರಿಸಿದ ತಮಿಳುನಾಡು ಸರ್ಕಾರ!

ವೆಟ್ರಿವೇಲ್ ಯಾತ್ರೆ ಒಂದು ತಿಂಗಳ ಕಾಲ ನಡೆಯುವ ಮೆರವಣಿಗೆಯಾಗಿದ್ದು, ನವೆಂಬರ್ 6 ರಿಂದ ಡಿಸೆಂಬರ್ 6 ರವರೆಗೆ ತಿರುತ್ತಣಿ ದೇವಸ್ಥಾನದಿಂದ ತಮಿಳುನಾಡಿನ ತಿರುಚೆಂದೂರು ದೇವಸ್ಥಾನದವರೆಗೆ, ಸುಬ್ರಹ್ಮಣ್ಯ ಸ್ವಾಮಿಯ (ಮುರುಗ) ಒಟ್ಟು ಆರು ದೇವಸ್ಥಾನಗಳಿಗೆ ಭಕ್ತರು ಭೇಟಿ ನೀಡುತ್ತಾರೆ.

2021 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಹಿಂದೂ ಮತಗಳನ್ನು ಕ್ರೋಢೀಕರಿಸುವ ಪ್ರಯತ್ನವಾಗಿ ಬಿಜೆಪಿ ಈ ಪ್ರಯತ್ನ ಮಾಡುತ್ತಿದೆ ಎಂದು ಹಲವರು ಟೀಕಿಸಿದ್ದಾರೆ.

ಶುಕ್ರವಾರ ಮತ್ತು ಇಂದು ನಡೆದ ವೆಟ್ರಿವೇಲ್ ಯಾತ್ರೆಯಲ್ಲಿ ಭಾಗವಹಿಸಿದ ಹಲವರು ಮಾಸ್ಕ್‌ಗಳನ್ನು ಧರಿಸಿರುವುದಿಲ್ಲ ಮತ್ತು ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸಿದ್ದಾರೆ.

ಇದನ್ನೂ ಓದಿ: ಮಸ್ಕಿ: ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ; ಸಿದ್ದರಾಮಯ್ಯನವರನ್ನು ಭೇಟಿಯಾದ ಬಸವನಗೌಡ

ಸ್ಮಿತ ಟಿ.ಕೆ ಎಂಬುವವರು ವೀಡಿಯೋವೊಂದನ್ನು ಟ್ವೀಟ್ ಮಾಡಿ, “ವೆಟ್ರಿವೇಲ್‌ ಯಾತ್ರೆಯಲ್ಲಿ 30 ಜನರು 15 ಕಾರುಗಳಲ್ಲಿ ಭಾಗವಹಿಸುತ್ತೇವೆ ಎಂದು ಬಿಜೆಪಿಯ ರಾಜ್ಯ ಕಾರ್ಯದರ್ಶಿ ಮದ್ರಾಸ್‌ ಹೈಕೋರ್ಟ್‌ಗೆ ಹೇಳಿದ್ದರು. ನೀವು ಈ ಗುಂಪನ್ನು ನೋಡಿ. ಮಾಸ್ಕ್‌ಗಳು ಎಲ್ಲಿ? ಸಾಮಾಜಿಕ ಅಂತರ ಎಲ್ಲಿ? ನಾವು ಸಾಂಕ್ರಾಮಿಕ ಸಮಯದಲ್ಲಿ ವಾಸಿಸುತ್ತಿದ್ದೇವೆ ಎಂಬುದು ನೆನಪಿದೆಯೇ?” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

ಕೊರೊನಾ ವೈರಸ್ ಸಾಂಕ್ರಾಮಿಕ ಮತ್ತು ರಾಜ್ಯದ ಜನರ ಹಿತದೃಷ್ಟಿಯಿಂದ ಎಐಎಡಿಎಂಕೆ ಆಡಳಿತದಲ್ಲಿರುವ ತಮಿಳುನಾಡು ಸರ್ಕಾರ ಗುರುವಾರ ಮೆರವಣಿಗೆಗೆ ಅನುಮತಿ ನಿರಾಕರಿಸಿತ್ತು.

ಯಾತ್ರೆ ವಿರುದ್ಧ ಮದ್ರಾಸ್ ಹೈಕೋರ್ಟ್‌ನಲ್ಲಿ ಹಲವಾರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಇವು ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಗಳನ್ನು ಸೃಷ್ಟಿಸುವುದರ ಜೊತೆಗೆ ಕೊರೊನಾ ಹರಡುವಿಕೆಯನ್ನು ಹೆಚ್ಚಿಸುವಲ್ಲಿ ಮೆರವಣಿಗೆ ಅಪಾಯವನ್ನುಂಟುಮಾಡುತ್ತದೆ ಎಂಬ ವಿಷಯವನ್ನು ಎತ್ತಿದ್ದವು.

ಇದನ್ನೂ ಓದಿ: ವಿದ್ಯಾರ್ಥಿ ಮಾರ್ಗದರ್ಶಿ: ಪಿಯುಸಿ ನಂತರ ಮುಂದೇನು?: ಆಯ್ಕೆಗಳ ಬಗ್ಗೆ ಸ್ಪಷ್ಟತೆ ಇರಲಿ; ಗೊಂದಲ ಬೇಡ

ಶನಿವಾರ ಬಿಜೆಪಿ ಸಲ್ಲಿಸಿದ ತುರ್ತು ರಿಟ್ ಅರ್ಜಿಯ ವಿಚಾರಣೆಗೆ ವಿಶೇಷ ಸಭೆಯ ಸಂದರ್ಭದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ನಗರಾಜನ್ ಮದ್ರಾಸ್ ಹೈಕೋರ್ಟ್‌ಗೆ, “15 ಕಾರುಗಳಲ್ಲಿ ಕೇವಲ 30 ಜನರು ಮಾತ್ರ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ” ಎಂದು ಹೇಳಿದ್ದರು.

ಇದುವರೆಗೂ ತಮಿಳುನಾಡಿನಲ್ಲಿ ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುತ್ತಿರಲಿಲ್ಲ. ಆದರೆ ಈಗ ಬಿಜೆಪಿ ಅದನ್ನೂ ಮಾಡುತ್ತಿದೆ. ಈ ಮೂಲಕ ತನ್ನ ನೀಚ ರಾಜಕೀಯ ದಾಳವನ್ನು ಬಳಸಿಕೊಳ್ಳುತ್ತಿದೆ.


ಇದನ್ನೂ ಓದಿ: ‍ಶಾಲೆ ಪುನರಾರಂಭದ ಬಗ್ಗೆ ತೀರ್ಮಾನವಾಗಿಲ್ಲ- ಸಚಿವ ಸುರೇಶ್ ಕುಮಾರ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...