Homeಮುಖಪುಟವೆಟ್ರಿವೇಲ್ ಯಾತ್ರೆ: ಅನುಮತಿ ನಿರಾಕರಿಸಿದರೂ ಕೋಮುಪ್ರಚೋದನೆ ಆರಂಭಿಸಿದ ಬಿಜೆಪಿ!

ವೆಟ್ರಿವೇಲ್ ಯಾತ್ರೆ: ಅನುಮತಿ ನಿರಾಕರಿಸಿದರೂ ಕೋಮುಪ್ರಚೋದನೆ ಆರಂಭಿಸಿದ ಬಿಜೆಪಿ!

ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ನಗರಾಜನ್ ಮದ್ರಾಸ್ ಹೈಕೋರ್ಟ್‌ಗೆ, "15 ಕಾರುಗಳಲ್ಲಿ ಕೇವಲ 30 ಜನರು ಮಾತ್ರ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ" ಎಂದು ತಿಳಿಸಿದ್ದರು.

- Advertisement -
- Advertisement -

ಶುಕ್ರವಾರ ವೆಟ್ರಿವೇಲ್ ಯಾತ್ರೆಯನ್ನು ಒತ್ತಾಯಪೂರ್ವಕವಾಗಿ ಮಾಡಿದ್ದಕ್ಕಾಗಿ ಬಿಜೆಪಿಯ ತಮಿಳುನಾಡು ಘಟಕದ ಮುಖ್ಯಸ್ಥ ಎಲ್ ಮುರುಗನ್ ಮತ್ತು ಇತರರನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದರು. ಅಧಿಕಾರಿಗಳಿಂದ ಯಾವುದೇ ಒಪ್ಪಿಗೆ ಇಲ್ಲದಿದ್ದರೂ ಬಿಜೆಪಿಯು ಇಂದು ವೆಟ್ರಿವೇಲ್ ಯಾತ್ರೆಯನ್ನು ಪ್ರಾರಂಭಿಸಿತು.

ಪಕ್ಷದ ಸದಸ್ಯರು ಪ್ರಾರ್ಥನೆ ಸಲ್ಲಿಸಲು ಚೆನ್ನೈನ ತಿರುವೋಟ್ರಿಯೂರಿನಲ್ಲಿರುವ ವಡಿವುಡೈ ಅಮ್ಮನ್ ದೇವಸ್ಥಾನಕ್ಕೆ ಭೇಟಿ ನೀಡುವ ನಿರೀಕ್ಷೆಯಿತ್ತು. ಮುರುಗನ್ ಸೇರಿದಂತೆ ಕೆಲವು ನಾಯಕರು ಮತ್ತು 200 ಕ್ಕೂ ಹೆಚ್ಚು ಜನರು ಕಾರು ಮತ್ತು ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿದ್ದು, ರಸ್ತೆಗಳಲ್ಲಿ ಸಾಕಷ್ಟು ಸಂಚಾರ ಮತ್ತು ಅವ್ಯವಸ್ಥೆ ಉಂಟಾಗಿತ್ತು.

ಇದನ್ನೂ ಓದಿ: ವೆಟ್ರಿವೇಲ್ ಯಾತ್ರೆ ನಡೆಸಲು ಬಿಜೆಪಿ ಕೋರಿದ್ದ ಅನುಮತಿ ತಿರಸ್ಕರಿಸಿದ ತಮಿಳುನಾಡು ಸರ್ಕಾರ!

ವೆಟ್ರಿವೇಲ್ ಯಾತ್ರೆ ಒಂದು ತಿಂಗಳ ಕಾಲ ನಡೆಯುವ ಮೆರವಣಿಗೆಯಾಗಿದ್ದು, ನವೆಂಬರ್ 6 ರಿಂದ ಡಿಸೆಂಬರ್ 6 ರವರೆಗೆ ತಿರುತ್ತಣಿ ದೇವಸ್ಥಾನದಿಂದ ತಮಿಳುನಾಡಿನ ತಿರುಚೆಂದೂರು ದೇವಸ್ಥಾನದವರೆಗೆ, ಸುಬ್ರಹ್ಮಣ್ಯ ಸ್ವಾಮಿಯ (ಮುರುಗ) ಒಟ್ಟು ಆರು ದೇವಸ್ಥಾನಗಳಿಗೆ ಭಕ್ತರು ಭೇಟಿ ನೀಡುತ್ತಾರೆ.

2021 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಹಿಂದೂ ಮತಗಳನ್ನು ಕ್ರೋಢೀಕರಿಸುವ ಪ್ರಯತ್ನವಾಗಿ ಬಿಜೆಪಿ ಈ ಪ್ರಯತ್ನ ಮಾಡುತ್ತಿದೆ ಎಂದು ಹಲವರು ಟೀಕಿಸಿದ್ದಾರೆ.

ಶುಕ್ರವಾರ ಮತ್ತು ಇಂದು ನಡೆದ ವೆಟ್ರಿವೇಲ್ ಯಾತ್ರೆಯಲ್ಲಿ ಭಾಗವಹಿಸಿದ ಹಲವರು ಮಾಸ್ಕ್‌ಗಳನ್ನು ಧರಿಸಿರುವುದಿಲ್ಲ ಮತ್ತು ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸಿದ್ದಾರೆ.

ಇದನ್ನೂ ಓದಿ: ಮಸ್ಕಿ: ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ; ಸಿದ್ದರಾಮಯ್ಯನವರನ್ನು ಭೇಟಿಯಾದ ಬಸವನಗೌಡ

ಸ್ಮಿತ ಟಿ.ಕೆ ಎಂಬುವವರು ವೀಡಿಯೋವೊಂದನ್ನು ಟ್ವೀಟ್ ಮಾಡಿ, “ವೆಟ್ರಿವೇಲ್‌ ಯಾತ್ರೆಯಲ್ಲಿ 30 ಜನರು 15 ಕಾರುಗಳಲ್ಲಿ ಭಾಗವಹಿಸುತ್ತೇವೆ ಎಂದು ಬಿಜೆಪಿಯ ರಾಜ್ಯ ಕಾರ್ಯದರ್ಶಿ ಮದ್ರಾಸ್‌ ಹೈಕೋರ್ಟ್‌ಗೆ ಹೇಳಿದ್ದರು. ನೀವು ಈ ಗುಂಪನ್ನು ನೋಡಿ. ಮಾಸ್ಕ್‌ಗಳು ಎಲ್ಲಿ? ಸಾಮಾಜಿಕ ಅಂತರ ಎಲ್ಲಿ? ನಾವು ಸಾಂಕ್ರಾಮಿಕ ಸಮಯದಲ್ಲಿ ವಾಸಿಸುತ್ತಿದ್ದೇವೆ ಎಂಬುದು ನೆನಪಿದೆಯೇ?” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

ಕೊರೊನಾ ವೈರಸ್ ಸಾಂಕ್ರಾಮಿಕ ಮತ್ತು ರಾಜ್ಯದ ಜನರ ಹಿತದೃಷ್ಟಿಯಿಂದ ಎಐಎಡಿಎಂಕೆ ಆಡಳಿತದಲ್ಲಿರುವ ತಮಿಳುನಾಡು ಸರ್ಕಾರ ಗುರುವಾರ ಮೆರವಣಿಗೆಗೆ ಅನುಮತಿ ನಿರಾಕರಿಸಿತ್ತು.

ಯಾತ್ರೆ ವಿರುದ್ಧ ಮದ್ರಾಸ್ ಹೈಕೋರ್ಟ್‌ನಲ್ಲಿ ಹಲವಾರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಇವು ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಗಳನ್ನು ಸೃಷ್ಟಿಸುವುದರ ಜೊತೆಗೆ ಕೊರೊನಾ ಹರಡುವಿಕೆಯನ್ನು ಹೆಚ್ಚಿಸುವಲ್ಲಿ ಮೆರವಣಿಗೆ ಅಪಾಯವನ್ನುಂಟುಮಾಡುತ್ತದೆ ಎಂಬ ವಿಷಯವನ್ನು ಎತ್ತಿದ್ದವು.

ಇದನ್ನೂ ಓದಿ: ವಿದ್ಯಾರ್ಥಿ ಮಾರ್ಗದರ್ಶಿ: ಪಿಯುಸಿ ನಂತರ ಮುಂದೇನು?: ಆಯ್ಕೆಗಳ ಬಗ್ಗೆ ಸ್ಪಷ್ಟತೆ ಇರಲಿ; ಗೊಂದಲ ಬೇಡ

ಶನಿವಾರ ಬಿಜೆಪಿ ಸಲ್ಲಿಸಿದ ತುರ್ತು ರಿಟ್ ಅರ್ಜಿಯ ವಿಚಾರಣೆಗೆ ವಿಶೇಷ ಸಭೆಯ ಸಂದರ್ಭದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ನಗರಾಜನ್ ಮದ್ರಾಸ್ ಹೈಕೋರ್ಟ್‌ಗೆ, “15 ಕಾರುಗಳಲ್ಲಿ ಕೇವಲ 30 ಜನರು ಮಾತ್ರ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ” ಎಂದು ಹೇಳಿದ್ದರು.

ಇದುವರೆಗೂ ತಮಿಳುನಾಡಿನಲ್ಲಿ ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುತ್ತಿರಲಿಲ್ಲ. ಆದರೆ ಈಗ ಬಿಜೆಪಿ ಅದನ್ನೂ ಮಾಡುತ್ತಿದೆ. ಈ ಮೂಲಕ ತನ್ನ ನೀಚ ರಾಜಕೀಯ ದಾಳವನ್ನು ಬಳಸಿಕೊಳ್ಳುತ್ತಿದೆ.


ಇದನ್ನೂ ಓದಿ: ‍ಶಾಲೆ ಪುನರಾರಂಭದ ಬಗ್ಗೆ ತೀರ್ಮಾನವಾಗಿಲ್ಲ- ಸಚಿವ ಸುರೇಶ್ ಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...