HomeಮುಖಪುಟRSS, ವಿಎಚ್‌ಪಿ, ತಾಲಿಬಾನ್ ಒಂದೇ ಮನಸ್ಥಿತಿಯವು: ಸಾಹಿತಿ ಜಾವೇದ್ ಅಖ್ತರ್

RSS, ವಿಎಚ್‌ಪಿ, ತಾಲಿಬಾನ್ ಒಂದೇ ಮನಸ್ಥಿತಿಯವು: ಸಾಹಿತಿ ಜಾವೇದ್ ಅಖ್ತರ್

- Advertisement -
- Advertisement -

ಭಾರತದಲ್ಲಿರುವ ವಿಶ್ವ ಹಿಂದೂ ಪರಿಷತ್ (VHP), ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS), ಬಜರಂಗದಳ ಹಾಗೂ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳು ಒಂದೇ ಎಂದು ಹಿರಿಯ ಸಾಹಿತಿ ಜಾವೇದ್ ಅಖ್ತರ್ ಹೇಳಿದ್ದು, ವಿವಾದಕ್ಕೆ ಕಾರಣವಾಗಿದೆ.

“ಈ ಸಂಘಟನೆಗಳನ್ನು ವಸ್ತುನಿಷ್ಠವಾಗಿ ವೀಕ್ಷಿಸಿದಾಗ ಹೆಸರುಗಳು ಮತ್ತು ಮುಖಛಾಯೆ ಬದಲಾಗಿವೆ. ಆದರೆ ವಿಶ್ವದಾದ್ಯಂತ ಅವರೆಲ್ಲರೂ ಸಮಾನ ಮನಸ್ಥಿತಿಯನ್ನು ಹೊಂದಿದ್ದಾರೆ” ಎಂದು ಬಾಲಿವುಡ್‌ ಹಿರಿಯ ಬರಹಗಾರ ಜಾವೇದ್ ಅಖ್ತರ್ ಹೇಳಿದ್ದಾರೆ. ಇದು ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.

ತಾಲಿಬಾನಿಗಳಂತೆ ಬಲಪಂಥೀಯ ಸಂಘಟನೆಗಳು ಕೂಡಾ ಯಾವುದೇ ಕಾನೂನು ತಮ್ಮ ಧಾರ್ಮಿಕ ನಂಬಿಕೆಗಿಂತ ಮಿಗಿಲಾಗಿಲ್ಲ ಎಂದು ಭಾವಿಸುತ್ತವೆ ಎಂದು ಜಾವೇದ್ ಅಖ್ತರ್ ಹೇಳಿದ್ದರು.

ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳು ಇಸ್ಲಾಮಿಕ್ ರಾಷ್ಟ್ರವನ್ನು ಬಯಸುವಂತೆ, ಭಾರತೀಯ ಬಲಪಂಥೀಯರು ಹಿಂದೂ ರಾಷ್ಟ್ರವನ್ನು ಬಯಸುತ್ತಾರೆ. ಅವರೆಲ್ಲರೂ ಸಮಾನ ಮನಸ್ಥಿತಿಯನ್ನು ಹೊಂದಿದ್ದಾರೆ. ನಿಸ್ಸಂಶಯವಾಗಿಯೂ ಅವರ ವರ್ತನೆಯು ಹೇಯವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ – AICCTU ಆಕ್ರೋಶ

ಸಾಹಿತಿ ಜಾವೇದ್ ಅಖ್ತರ್ ಅವರ ಹೇಳಿಕೆಗೆ ಆಡಳಿತರೂಢ ಬಿಜೆಪಿ ಮತ್ತು ಸಂಘ ಪರಿವಾರದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಬಿಜೆಪಿ ಶಾಸಕ ರಾಮ್ ಕದಂ. “ಸಂಘಪರಿವಾರದೊಂದಿಗೆ ಸಂಪರ್ಕವಿರುವವರೇ ದೇಶವನ್ನು ಆಳುತ್ತಿದ್ದಾರೆ. ಒಂದು ವೇಳೆ ತಾಲಿಬಾನ್‌ ಸಿದ್ಧಾಂತ ಇಲ್ಲಿ ಅಸ್ತಿತ್ವದಲ್ಲಿರುತ್ತಿದ್ದರೆ ಅವರಿಗೆ ಅಂತಹಾ ಹೇಳಿಕೆಗಳು ನೀಡಲು ಸಾಧ್ಯವೇ? ಈ ಪ್ರಶ್ನೆಗಿರುವ ಉತ್ತರವೇ ಅವರ ಟೀಕೆಗಳು ಎಷ್ಟು ಪೊಳ್ಳಾಗಿದೆ ಎನ್ನುವುದನ್ನು ತೋರಿಸುತ್ತದೆ. ಅವರು ಸಂಘದ ಸದಸ್ಯರಿಗೆ ಕೈಮುಗಿದು ಕ್ಷಮೆಯಾಚಿಸುವವರೆಗೂ, ಅವರ ಯಾವುದೇ ಚಲನಚಿತ್ರವನ್ನು ಭಾರತ ಮಾತೆಯ ಭೂಮಿಯಲ್ಲಿ ಪ್ರದರ್ಶಿಸಲು ನಾವು ಅನುಮತಿಸುವುದಿಲ್ಲ” ಎಂದು ಬೆದರಿಕೆ ಹಾಕಿದ್ದಾರೆ.


ಇದನ್ನೂ ಓದಿ: ’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಜಾವೇದ್ ಅಖ್ತರ್ ಅವರು ಹೇಳಿರುವ ಮಾತು ೧೦೦ಕ್ಕೆ ೧೦೦% ಪ್ರತಿಶತ ಸತ್ಯವಾಗಿದೆ. ಇಲ್ಲಿ ಜಾವೇದ್ ಆಕ್ತರ್ ಅವರು ಸಂಘ ಪರಿವಾರದ ಸದಸ್ಯರಿಗೆ ಕೈಮುಗಿದು ಕ್ಷಮೆ ಕೇಳಬೇಕೆಂದಿರುವ third class ರಾಮ್ ಕದಂ ಎಂಬ ನರಪಿಳ್ಳೆ ಯಾರು? ಇವರೇನು ದೇಶಭಕ್ತಿಯ ಪ್ರಮಾಣ ಪತ್ರ ಕೊಡುವವರೇ?

  2. ಜಾವೇದ್ ಅಕ್ತರ್ ಸರಿಯಾಗಿಯೇ ಹೇಳಿದ್ದಾರೆ. ಅವರು ಕ್ಷಮೆ ಕೇಳುವ ಅಗತ್ಯ ಇಲ್ಲ. ತಾಲಿಬಾನಿಗಳ ಕೈಯಲ್ಲಿ ಬಂದೂಕಿದ್ದರೆ, ಚೆಡ್ಡಿಗಳ ಕೈಯಲ್ಲಿ ಲಾಟಿ ಇದೆ, ಇದೊಂದೆ ವ್ಯತ್ಯಾಸ.
    ಈಗ ತಾಲಿಬಾನ್ ಅದಿಕಾರದ ಚುಕ್ಕಾಣಿಯನ್ನು ಹಿಡಿದಿದ್ದಾರೆ. ಆದರೆ ಚೆಡ್ಡಿಗಳು ಯಾವತ್ತಿಗೂ ಪ್ರತ್ಯಕ್ಷವಾಗಿ ಅಧಿಕಾರವನ್ನು ವಹಿಸಿಕೊಳ್ಳುದಿಲ್ಲ. ಏಕೆಂದರೆ ಅವರು ಎಂದಿಗೂ, ಯಾವುದೇ ಜವಾಬ್ದಾರಿಯನ್ನು ಹೊರುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...