HomeಮುಖಪುಟRSS, ವಿಎಚ್‌ಪಿ, ತಾಲಿಬಾನ್ ಒಂದೇ ಮನಸ್ಥಿತಿಯವು: ಸಾಹಿತಿ ಜಾವೇದ್ ಅಖ್ತರ್

RSS, ವಿಎಚ್‌ಪಿ, ತಾಲಿಬಾನ್ ಒಂದೇ ಮನಸ್ಥಿತಿಯವು: ಸಾಹಿತಿ ಜಾವೇದ್ ಅಖ್ತರ್

- Advertisement -
- Advertisement -

ಭಾರತದಲ್ಲಿರುವ ವಿಶ್ವ ಹಿಂದೂ ಪರಿಷತ್ (VHP), ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS), ಬಜರಂಗದಳ ಹಾಗೂ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳು ಒಂದೇ ಎಂದು ಹಿರಿಯ ಸಾಹಿತಿ ಜಾವೇದ್ ಅಖ್ತರ್ ಹೇಳಿದ್ದು, ವಿವಾದಕ್ಕೆ ಕಾರಣವಾಗಿದೆ.

“ಈ ಸಂಘಟನೆಗಳನ್ನು ವಸ್ತುನಿಷ್ಠವಾಗಿ ವೀಕ್ಷಿಸಿದಾಗ ಹೆಸರುಗಳು ಮತ್ತು ಮುಖಛಾಯೆ ಬದಲಾಗಿವೆ. ಆದರೆ ವಿಶ್ವದಾದ್ಯಂತ ಅವರೆಲ್ಲರೂ ಸಮಾನ ಮನಸ್ಥಿತಿಯನ್ನು ಹೊಂದಿದ್ದಾರೆ” ಎಂದು ಬಾಲಿವುಡ್‌ ಹಿರಿಯ ಬರಹಗಾರ ಜಾವೇದ್ ಅಖ್ತರ್ ಹೇಳಿದ್ದಾರೆ. ಇದು ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.

ತಾಲಿಬಾನಿಗಳಂತೆ ಬಲಪಂಥೀಯ ಸಂಘಟನೆಗಳು ಕೂಡಾ ಯಾವುದೇ ಕಾನೂನು ತಮ್ಮ ಧಾರ್ಮಿಕ ನಂಬಿಕೆಗಿಂತ ಮಿಗಿಲಾಗಿಲ್ಲ ಎಂದು ಭಾವಿಸುತ್ತವೆ ಎಂದು ಜಾವೇದ್ ಅಖ್ತರ್ ಹೇಳಿದ್ದರು.

ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳು ಇಸ್ಲಾಮಿಕ್ ರಾಷ್ಟ್ರವನ್ನು ಬಯಸುವಂತೆ, ಭಾರತೀಯ ಬಲಪಂಥೀಯರು ಹಿಂದೂ ರಾಷ್ಟ್ರವನ್ನು ಬಯಸುತ್ತಾರೆ. ಅವರೆಲ್ಲರೂ ಸಮಾನ ಮನಸ್ಥಿತಿಯನ್ನು ಹೊಂದಿದ್ದಾರೆ. ನಿಸ್ಸಂಶಯವಾಗಿಯೂ ಅವರ ವರ್ತನೆಯು ಹೇಯವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ – AICCTU ಆಕ್ರೋಶ

ಸಾಹಿತಿ ಜಾವೇದ್ ಅಖ್ತರ್ ಅವರ ಹೇಳಿಕೆಗೆ ಆಡಳಿತರೂಢ ಬಿಜೆಪಿ ಮತ್ತು ಸಂಘ ಪರಿವಾರದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಬಿಜೆಪಿ ಶಾಸಕ ರಾಮ್ ಕದಂ. “ಸಂಘಪರಿವಾರದೊಂದಿಗೆ ಸಂಪರ್ಕವಿರುವವರೇ ದೇಶವನ್ನು ಆಳುತ್ತಿದ್ದಾರೆ. ಒಂದು ವೇಳೆ ತಾಲಿಬಾನ್‌ ಸಿದ್ಧಾಂತ ಇಲ್ಲಿ ಅಸ್ತಿತ್ವದಲ್ಲಿರುತ್ತಿದ್ದರೆ ಅವರಿಗೆ ಅಂತಹಾ ಹೇಳಿಕೆಗಳು ನೀಡಲು ಸಾಧ್ಯವೇ? ಈ ಪ್ರಶ್ನೆಗಿರುವ ಉತ್ತರವೇ ಅವರ ಟೀಕೆಗಳು ಎಷ್ಟು ಪೊಳ್ಳಾಗಿದೆ ಎನ್ನುವುದನ್ನು ತೋರಿಸುತ್ತದೆ. ಅವರು ಸಂಘದ ಸದಸ್ಯರಿಗೆ ಕೈಮುಗಿದು ಕ್ಷಮೆಯಾಚಿಸುವವರೆಗೂ, ಅವರ ಯಾವುದೇ ಚಲನಚಿತ್ರವನ್ನು ಭಾರತ ಮಾತೆಯ ಭೂಮಿಯಲ್ಲಿ ಪ್ರದರ್ಶಿಸಲು ನಾವು ಅನುಮತಿಸುವುದಿಲ್ಲ” ಎಂದು ಬೆದರಿಕೆ ಹಾಕಿದ್ದಾರೆ.


ಇದನ್ನೂ ಓದಿ: ’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಜಾವೇದ್ ಅಖ್ತರ್ ಅವರು ಹೇಳಿರುವ ಮಾತು ೧೦೦ಕ್ಕೆ ೧೦೦% ಪ್ರತಿಶತ ಸತ್ಯವಾಗಿದೆ. ಇಲ್ಲಿ ಜಾವೇದ್ ಆಕ್ತರ್ ಅವರು ಸಂಘ ಪರಿವಾರದ ಸದಸ್ಯರಿಗೆ ಕೈಮುಗಿದು ಕ್ಷಮೆ ಕೇಳಬೇಕೆಂದಿರುವ third class ರಾಮ್ ಕದಂ ಎಂಬ ನರಪಿಳ್ಳೆ ಯಾರು? ಇವರೇನು ದೇಶಭಕ್ತಿಯ ಪ್ರಮಾಣ ಪತ್ರ ಕೊಡುವವರೇ?

  2. ಜಾವೇದ್ ಅಕ್ತರ್ ಸರಿಯಾಗಿಯೇ ಹೇಳಿದ್ದಾರೆ. ಅವರು ಕ್ಷಮೆ ಕೇಳುವ ಅಗತ್ಯ ಇಲ್ಲ. ತಾಲಿಬಾನಿಗಳ ಕೈಯಲ್ಲಿ ಬಂದೂಕಿದ್ದರೆ, ಚೆಡ್ಡಿಗಳ ಕೈಯಲ್ಲಿ ಲಾಟಿ ಇದೆ, ಇದೊಂದೆ ವ್ಯತ್ಯಾಸ.
    ಈಗ ತಾಲಿಬಾನ್ ಅದಿಕಾರದ ಚುಕ್ಕಾಣಿಯನ್ನು ಹಿಡಿದಿದ್ದಾರೆ. ಆದರೆ ಚೆಡ್ಡಿಗಳು ಯಾವತ್ತಿಗೂ ಪ್ರತ್ಯಕ್ಷವಾಗಿ ಅಧಿಕಾರವನ್ನು ವಹಿಸಿಕೊಳ್ಳುದಿಲ್ಲ. ಏಕೆಂದರೆ ಅವರು ಎಂದಿಗೂ, ಯಾವುದೇ ಜವಾಬ್ದಾರಿಯನ್ನು ಹೊರುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...