HomeಮುಖಪುಟRSS, ವಿಎಚ್‌ಪಿ, ತಾಲಿಬಾನ್ ಒಂದೇ ಮನಸ್ಥಿತಿಯವು: ಸಾಹಿತಿ ಜಾವೇದ್ ಅಖ್ತರ್

RSS, ವಿಎಚ್‌ಪಿ, ತಾಲಿಬಾನ್ ಒಂದೇ ಮನಸ್ಥಿತಿಯವು: ಸಾಹಿತಿ ಜಾವೇದ್ ಅಖ್ತರ್

- Advertisement -
- Advertisement -

ಭಾರತದಲ್ಲಿರುವ ವಿಶ್ವ ಹಿಂದೂ ಪರಿಷತ್ (VHP), ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS), ಬಜರಂಗದಳ ಹಾಗೂ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳು ಒಂದೇ ಎಂದು ಹಿರಿಯ ಸಾಹಿತಿ ಜಾವೇದ್ ಅಖ್ತರ್ ಹೇಳಿದ್ದು, ವಿವಾದಕ್ಕೆ ಕಾರಣವಾಗಿದೆ.

“ಈ ಸಂಘಟನೆಗಳನ್ನು ವಸ್ತುನಿಷ್ಠವಾಗಿ ವೀಕ್ಷಿಸಿದಾಗ ಹೆಸರುಗಳು ಮತ್ತು ಮುಖಛಾಯೆ ಬದಲಾಗಿವೆ. ಆದರೆ ವಿಶ್ವದಾದ್ಯಂತ ಅವರೆಲ್ಲರೂ ಸಮಾನ ಮನಸ್ಥಿತಿಯನ್ನು ಹೊಂದಿದ್ದಾರೆ” ಎಂದು ಬಾಲಿವುಡ್‌ ಹಿರಿಯ ಬರಹಗಾರ ಜಾವೇದ್ ಅಖ್ತರ್ ಹೇಳಿದ್ದಾರೆ. ಇದು ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.

ತಾಲಿಬಾನಿಗಳಂತೆ ಬಲಪಂಥೀಯ ಸಂಘಟನೆಗಳು ಕೂಡಾ ಯಾವುದೇ ಕಾನೂನು ತಮ್ಮ ಧಾರ್ಮಿಕ ನಂಬಿಕೆಗಿಂತ ಮಿಗಿಲಾಗಿಲ್ಲ ಎಂದು ಭಾವಿಸುತ್ತವೆ ಎಂದು ಜಾವೇದ್ ಅಖ್ತರ್ ಹೇಳಿದ್ದರು.

ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ತಾಲಿಬಾನಿಗಳು ಇಸ್ಲಾಮಿಕ್ ರಾಷ್ಟ್ರವನ್ನು ಬಯಸುವಂತೆ, ಭಾರತೀಯ ಬಲಪಂಥೀಯರು ಹಿಂದೂ ರಾಷ್ಟ್ರವನ್ನು ಬಯಸುತ್ತಾರೆ. ಅವರೆಲ್ಲರೂ ಸಮಾನ ಮನಸ್ಥಿತಿಯನ್ನು ಹೊಂದಿದ್ದಾರೆ. ನಿಸ್ಸಂಶಯವಾಗಿಯೂ ಅವರ ವರ್ತನೆಯು ಹೇಯವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳ ಪಾಲಾಗುತ್ತಿರುವ ಕಟ್ಟಡ ಕಾರ್ಮಿಕರ ನಿಧಿ – AICCTU ಆಕ್ರೋಶ

ಸಾಹಿತಿ ಜಾವೇದ್ ಅಖ್ತರ್ ಅವರ ಹೇಳಿಕೆಗೆ ಆಡಳಿತರೂಢ ಬಿಜೆಪಿ ಮತ್ತು ಸಂಘ ಪರಿವಾರದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಬಿಜೆಪಿ ಶಾಸಕ ರಾಮ್ ಕದಂ. “ಸಂಘಪರಿವಾರದೊಂದಿಗೆ ಸಂಪರ್ಕವಿರುವವರೇ ದೇಶವನ್ನು ಆಳುತ್ತಿದ್ದಾರೆ. ಒಂದು ವೇಳೆ ತಾಲಿಬಾನ್‌ ಸಿದ್ಧಾಂತ ಇಲ್ಲಿ ಅಸ್ತಿತ್ವದಲ್ಲಿರುತ್ತಿದ್ದರೆ ಅವರಿಗೆ ಅಂತಹಾ ಹೇಳಿಕೆಗಳು ನೀಡಲು ಸಾಧ್ಯವೇ? ಈ ಪ್ರಶ್ನೆಗಿರುವ ಉತ್ತರವೇ ಅವರ ಟೀಕೆಗಳು ಎಷ್ಟು ಪೊಳ್ಳಾಗಿದೆ ಎನ್ನುವುದನ್ನು ತೋರಿಸುತ್ತದೆ. ಅವರು ಸಂಘದ ಸದಸ್ಯರಿಗೆ ಕೈಮುಗಿದು ಕ್ಷಮೆಯಾಚಿಸುವವರೆಗೂ, ಅವರ ಯಾವುದೇ ಚಲನಚಿತ್ರವನ್ನು ಭಾರತ ಮಾತೆಯ ಭೂಮಿಯಲ್ಲಿ ಪ್ರದರ್ಶಿಸಲು ನಾವು ಅನುಮತಿಸುವುದಿಲ್ಲ” ಎಂದು ಬೆದರಿಕೆ ಹಾಕಿದ್ದಾರೆ.


ಇದನ್ನೂ ಓದಿ: ’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಜಾವೇದ್ ಅಖ್ತರ್ ಅವರು ಹೇಳಿರುವ ಮಾತು ೧೦೦ಕ್ಕೆ ೧೦೦% ಪ್ರತಿಶತ ಸತ್ಯವಾಗಿದೆ. ಇಲ್ಲಿ ಜಾವೇದ್ ಆಕ್ತರ್ ಅವರು ಸಂಘ ಪರಿವಾರದ ಸದಸ್ಯರಿಗೆ ಕೈಮುಗಿದು ಕ್ಷಮೆ ಕೇಳಬೇಕೆಂದಿರುವ third class ರಾಮ್ ಕದಂ ಎಂಬ ನರಪಿಳ್ಳೆ ಯಾರು? ಇವರೇನು ದೇಶಭಕ್ತಿಯ ಪ್ರಮಾಣ ಪತ್ರ ಕೊಡುವವರೇ?

  2. ಜಾವೇದ್ ಅಕ್ತರ್ ಸರಿಯಾಗಿಯೇ ಹೇಳಿದ್ದಾರೆ. ಅವರು ಕ್ಷಮೆ ಕೇಳುವ ಅಗತ್ಯ ಇಲ್ಲ. ತಾಲಿಬಾನಿಗಳ ಕೈಯಲ್ಲಿ ಬಂದೂಕಿದ್ದರೆ, ಚೆಡ್ಡಿಗಳ ಕೈಯಲ್ಲಿ ಲಾಟಿ ಇದೆ, ಇದೊಂದೆ ವ್ಯತ್ಯಾಸ.
    ಈಗ ತಾಲಿಬಾನ್ ಅದಿಕಾರದ ಚುಕ್ಕಾಣಿಯನ್ನು ಹಿಡಿದಿದ್ದಾರೆ. ಆದರೆ ಚೆಡ್ಡಿಗಳು ಯಾವತ್ತಿಗೂ ಪ್ರತ್ಯಕ್ಷವಾಗಿ ಅಧಿಕಾರವನ್ನು ವಹಿಸಿಕೊಳ್ಳುದಿಲ್ಲ. ಏಕೆಂದರೆ ಅವರು ಎಂದಿಗೂ, ಯಾವುದೇ ಜವಾಬ್ದಾರಿಯನ್ನು ಹೊರುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...