Homeಮುಖಪುಟಭಗವದ್ಗೀತೆಗೆ ರಾಷ್ಟ್ರೀಯ ಗ್ರಂಥದ ಸ್ಥಾನಮಾನ ನೀಡಿ: ವಿಎಚ್‌ಪಿ ಆಗ್ರಹ

ಭಗವದ್ಗೀತೆಗೆ ರಾಷ್ಟ್ರೀಯ ಗ್ರಂಥದ ಸ್ಥಾನಮಾನ ನೀಡಿ: ವಿಎಚ್‌ಪಿ ಆಗ್ರಹ

- Advertisement -
- Advertisement -

ಭಗವದ್ಗೀತೆಗೆ ರಾಷ್ಟ್ರೀಯ ಪುಸ್ತಕದ ಸ್ಥಾನಮಾನವನ್ನು ನೀಡುವಂತೆ ಮತ್ತು ಶಾಲಾ ಪಠ್ಯಕ್ರಮದಲ್ಲಿ ಅದನ್ನು ಕಡ್ಡಾಯಗೊಳಿಸುವಂತೆ ಸರ್ಕಾರದ ಮನವೊಲಿಸಲು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮುಂದಾಗಿದೆ.

“15 ಸಂಸದರ ನಿಯೋಗವು ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ, ಭಗವದ್ಗೀತೆಗೆ ರಾಷ್ಟ್ರೀಯ ಪುಸ್ತಕದ ಸ್ಥಾನಮಾನ ನೀಡುವಂತೆ ಮತ್ತು ಶಾಲಾ ಪಠ್ಯಕ್ರಮದಲ್ಲಿ ಬದಲಾವಣೆ ಮಾಡುಂತೆ ಪ್ರಸ್ತಾವನೆ ಸಲ್ಲಿಸಲಿದೆ ಎಂದು ವಿಎಚ್‌ಪಿಯ ರಾಷ್ಟ್ರೀಯ ಕಾರ್ಯದರ್ಶಿ ರಾಧಾ ಕೃಷ್ಣ ಮನೋಡಿ ಗುರುವಾರ ಹೇಳಿದ್ದಾರೆ.

“ವಿಶ್ವ ಗೀತ ಸಂಸ್ಥಾನವು ಸಮಾಜಕ್ಕೆ ಬೌದ್ಧಿಕ ಸಾಮರ್ಥ್ಯವನ್ನು ಒದಗಿಸುವಲ್ಲಿ ಗೀತೆಯ ಉಪಯುಕ್ತತೆಯ ಬಗ್ಗೆ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸುತ್ತದೆ. ನಾವು ಭಗವದ್ಗೀತೆಗೆ ಮನ್ನಣೆ ಪಡೆಯುವ ಸಲುವಾಗಿ ಪ್ರಮುಖ ಅಂಶಗಳ ಕುರಿತು ವ್ಯಾಪಕ ಚರ್ಚೆ ನಡೆಸಲು ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿ ಅವರಿಂದ ಸಮಯ ಕೋರಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆ ಪ್ರಕರಣ: ಯುಪಿ ಪೊಲೀಸರಿಂದ ಮುಸ್ಲಿಂ ವ್ಯಕ್ತಿ ಬಂಧನ

ಶಿಕ್ಷಕರಿಗೆ ಸಾಕಷ್ಟು ಸಂಭಾವನೆ ಪಾವತಿಸಿದರೂ ಶಿಕ್ಷಕರಲ್ಲಿ ಕರ್ತವ್ಯ ಪ್ರಜ್ಞೆಯ ಕೊರತೆಯು ಕಳವಳಕ್ಕೆ ಕಾರಣವಾಗಿದೆ ಎಂದು ವಿಶ್ವ ಗೀತಾ ಪ್ರತಿಷ್ಠಾನದ ಸಂಸ್ಥಾಪಕ ಹೇಳಿದ್ದಾರೆ.

“ನೈತಿಕ ಮೌಲ್ಯಗಳ ಕುಸಿತ ಮತ್ತು ಶಿಕ್ಷಣದಲ್ಲಿ ಇದೇ ರೀತಿಯ ಪ್ರವೃತ್ತಿಯಿಂದಾಗಿ ಭಾರತದ ಸಂಘಟಿತ ಬೌದ್ಧಿಕ ಪರಂಪರೆಗೆ ಅವಮಾನವಾಗಿದೆ. ಶಿಕ್ಷಕರ ತರಬೇತಿಯಲ್ಲಿ ಗೀತೆಯನ್ನು ಕಡ್ಡಾಯಗೊಳಿಸಬೇಕು ಇದರಿಂದ ವಿದ್ಯಾರ್ಥಿಗಳಿಗೆ ಅವರ ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಲು ಸಹಾಯವಾಗುತ್ತದೆ ಎಂದು ಮನೋಡಿ ಹೇಳಿದ್ದಾರೆ.

ಪ್ರತಿಯೊಬ್ಬ ಶಿಕ್ಷಕರು ಗೀತಾದ ಅಧ್ಯಾಯಗಳನ್ನು ಅಧ್ಯಯನ ಮಾಡಬೇಕು ಮತ್ತು ವಿದ್ಯಾರ್ಥಿಗಳಿಗೆ ಅದರ ಪಾಠಗಳನ್ನು ನೀಡಬೇಕು ಎಂದು ಹೇಳಿದರು. ಅಧಿಕಾರಿಗಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಲು ಸಹಾಯ ಮಾಡಲು ಪ್ರತಿ ಸರ್ಕಾರಿ ಇಲಾಖೆಯಲ್ಲಿ ಗೀತಾದ ಸಾಪ್ತಾಹಿಕ ಪಠಣಗಳನ್ನು ಆಯೋಜಿಸಬೇಕೆಂದು ವಿಎಚ್‌ಪಿ ನಾಯಕ  ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಗೋಮಾಂಸ ತಿನ್ನುವವರ ಡಿಎನ್‌ಎ ನಮ್ಮಲಿಲ್ಲ- RSS ಮುಖ್ಯಸ್ಥರ ಹೇಳಿಕೆಗೆ ವಿಎಚ್‌ಪಿ ಸದಸ್ಯೆ ಸಾಧ್ವಿ ತಿರುಗೇಟು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...