Homeಮುಖಪುಟಗಾರ್ಬಾ ಕಾರ್ಯಕ್ರಮಗಳಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ಎಂಬ ವಿಹೆಚ್‌ಪಿ ಫರ್ಮಾನು ಹಿಂಸೆಗೆ ಆಹ್ವಾನ: ಕೇಂದ್ರ ಸಚಿವ...

ಗಾರ್ಬಾ ಕಾರ್ಯಕ್ರಮಗಳಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ಎಂಬ ವಿಹೆಚ್‌ಪಿ ಫರ್ಮಾನು ಹಿಂಸೆಗೆ ಆಹ್ವಾನ: ಕೇಂದ್ರ ಸಚಿವ ಅಠಾವಳೆ

- Advertisement -
- Advertisement -

ನವರಾತ್ರಿಯ ‘ಗಾರ್ಬಾ’ ಕಾರ್ಯಕ್ರಮಗಳಿಗೆ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು ಎಂಬ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಫರ್ಮಾನುಗೆ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಭಾನುವಾರ (ಸೆ.21) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಅಂತಹ ಕರೆಗಳು ‘ಹಿಂಸೆಯನ್ನು ಆಹ್ವಾನಿಸಿದಂತೆ” ಎಂದು ಹೇಳಿದ್ದಾರೆ.

ನವರಾತ್ರಿಯು ಸಾಂಪ್ರದಾಯಿಕ ಆಧ್ಯಾತ್ಮಿಕ ಗಾರ್ಬಾ ನೃತ್ಯದೊಂದಿಗೆ ದಾಂಡಿಯಾ (ವರ್ಣರಂಜಿತ ಕೋಲುಗಳ ಹೊಡೆತ) ಪ್ರದರ್ಶನದೊಂದಿಗೆ ಗುರುತಿಸಲ್ಪಟ್ಟಿದೆ. ಇದರಲ್ಲಿ ಜೋಡಿಗಳು ವೃತ್ತಾಕಾರವಾಗಿ ನೃತ್ಯ ಮಾಡುತ್ತಾರೆ, ಈ ವರ್ಷದ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 1 ರವರೆಗೆ ಇದನ್ನು ಆಚರಿಸಲಾಗುತ್ತದೆ.

‘ಗಾರ್ಬಾ’ ಕಾರ್ಯಕ್ರಮಗಳಿಗೆ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ಶನಿವಾರ (ಸೆ.20) ವಿಎಚ್‌ಪಿ ಹೇಳಿದೆ. ‘ಲವ್ ಜಿಹಾದ್’ ತಪ್ಪಿಸಲು ಪ್ರವೇಶ ಪಡೆಯುವವರ ಆಧಾರ್ ಕಾರ್ಡ್ ಅನ್ನು ಪರಿಶೀಲಿಸುವಂತೆ ಆಯೋಜಕರಿಗೆ ಸಲಹೆ ನೀಡಿದೆ.

ಗಾರ್ಬಾ ನೃತ್ಯದ ಸಮಯದಲ್ಲಿ ಹಿಂದೂಯೇತರರ ಪ್ರವೇಶವನ್ನು ನಿರ್ಬಂಧಿಸಬೇಕು ಎಂದು ವಿಎಚ್‌ಪಿ ನಾಯಕರೊಬ್ಬರು ಹೇಳಿದ್ದು, ಗಾರ್ಬಾ ಕೇವಲ ನೃತ್ಯವೋ, ಸಾಂಸ್ಕೃತಿಕ ಕಾರ್ಯಕ್ರಮವೋ ಅಲ್ಲ. ಅದೊಂದು ಪವಿತ್ರ ಪೂಜೆ ಎಂದಿದ್ದಾರೆ.

ವಿಎಚ್‌ಪಿಯ ಸಲಹೆಗೆ ಎಕ್ಸ್‌ ಪೋಸ್ಟ್‌ ಮೂಲಕ ಆಕ್ಷೇಪ ವ್ಯಕ್ತಪಡಿಸಿರುವ ರಾಮದಾಸ್ ಅಠಾವಳೆ, “ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಗಾರ್ಬಾಗೆ ಯಾರು ಹೋಗಬೇಕು, ಯಾರು ಹೋಗಬಾರದು ಎಂದು ನಿರ್ಧರಿಸಲು ವಿಶ್ವ ಹಿಂದೂ ಪರಿಷತ್ ಯಾರು? ಈ ಸಲಹೆಯು ಕೇವಲ ಸಂಘಟಕರಿಗೆ ಮಾತ್ರ ಸೀಮಿತವಾಗಿಲ್ಲ. ಬದಲಿಗೆ, ಕೆಲವು ಮೂಲಭೂತವಾದಿ ಶಕ್ತಿಗಳಿಗೆ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಲು ಹಾಗೂ ಬಲವನ್ನು ಪ್ರಯೋಗಿಸಲು ನೀಡಿರುವ ಮುಕ್ತ ಆಹ್ವಾನವಾಗಿದೆ” ಎಂದು ಬರೆದುಕೊಂಡಿದ್ದಾರೆ.

“ಈ ಸಲಹೆಯಿಂದಾಗಿ ನವರಾತ್ರಿಯ ಸಮಯದಲ್ಲಿ ದೇಶದಲ್ಲಿ ಎಲ್ಲಿಯಾದರೂ ಯಾವುದಾದರು ಘರ್ಷಣೆಗಳು, ಹಲ್ಲೆಗಳು ಅಥವಾ ಧಾರ್ಮಿಕ ಸಂಘರ್ಷಗಳು ಸಂಭವಿಸಿದಲ್ಲಿ, ಸಂಪೂರ್ಣ ಜವಾಬ್ದಾರಿ ವಿಎಚ್‌ಪಿ ಮತ್ತು ಅದರ ಸಂಬಂಧಿತ ಸಂಸ್ಥೆಗಳ ಮೇಲಿರುತ್ತದೆ” ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆಯ ರಾಜ್ಯ ಸಚಿವ ಹೇಳಿದ್ದಾರೆ.

ಇಂತಹ ನಡೆಗಳು ಭಾರತದ ಏಕತೆ, ವೈವಿಧ್ಯತೆ ಮತ್ತು ಧಾರ್ಮಿಕ ಸಹಿಷ್ಣುತೆಯ ಹೃದಯಭಾಗಕ್ಕೆ ಹೊಡೆತ ನೀಡುತ್ತವೆ ಎಂದಿದ್ದಾರೆ.

“ನವರಾತ್ರಿ ಪೂಜೆ ಮತ್ತು ಸಂತೋಷದ ಹಬ್ಬವಾಗಿದ್ದು, ಅದನ್ನು ದ್ವೇಷ ಮತ್ತು ಅನುಮಾನದ ವೇದಿಕೆಯನ್ನಾಗಿ ಪರಿವರ್ತಿಸುವ ಪ್ರಯತ್ನ ನಡೆಯುತ್ತಿದೆ, ಇದು ಅತ್ಯಂತ ಖಂಡನೀಯ” ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಮುಖ್ಯಸ್ಥ ಕಿಡಿಕಾರಿದ್ದಾರೆ.

ಸಂವಿಧಾನವು 14, 15 ಮತ್ತು 25 ನೇ ವಿಧಿಗಳ ಅಡಿಯಲ್ಲಿ ಸಮಾನತೆ ಮತ್ತು ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ.

“ಯಾರು ಹಬ್ಬವನ್ನು ಆಚರಿಸಬೇಕೆಂದು ಯಾವುದೇ ಸಂಸ್ಥೆ ನಿರ್ಧರಿಸಲು ಸಾಧ್ಯವಿಲ್ಲ. ಗಾರ್ಬಾ ಕೇವಲ ಧಾರ್ಮಿಕ ಸಂಪ್ರದಾಯವಲ್ಲ, ಸಂಗೀತ, ನೃತ್ಯ ಮತ್ತು ಸಾಮಾಜಿಕ ಸಾಮರಸ್ಯದ ಆಚರಣೆಯೂ ಆಗಿದೆ. ಒಂದು ಸಿದ್ಧಾಂತದೊಂದಿಗೆ ಅದನ್ನು ಏಕಸ್ವಾಮ್ಯಗೊಳಿಸಲು ಪ್ರಯತ್ನಿಸುವುದು ಅನ್ಯಾಯ ಮತ್ತು ಪ್ರತಿಗಾಮಿ” ಎಂದು ಕೇಂದ್ರ ಸಚಿವ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನವರಾತ್ರಿಯ ಸಮಯದಲ್ಲಿ ಆಯೋಜಕರು ಮತ್ತು ಭಾಗವಹಿಸುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕೆಂದು ಅಠಾವಳೆ ಸರ್ಕಾರ ಮತ್ತು ಆಡಳಿತವನ್ನು ಒತ್ತಾಯಿಸಿದ್ದಾರೆ.

“ಬಲವಂತ, ಗುರುತಿನ ಪರಿಶೀಲನೆ ಅಥವಾ ಧಾರ್ಮಿಕ ತಾರತಮ್ಯದ ಯಾವುದೇ ಪ್ರಯತ್ನಗಳನ್ನು ಕಾನೂನಿನ ಅಡಿಯಲ್ಲಿ ಕಟ್ಟುನಿಟ್ಟಾಗಿ ನಿಲ್ಲಿಸಬೇಕು. ನವರಾತ್ರಿ ಎಲ್ಲರಿಗೂ ಸೇರಿದ್ದು – ಅದರ ಸಾರವು ಭಾಗವಹಿಸುವಿಕೆ ಮತ್ತು ಶಾಂತಿಯಲ್ಲಿದೆ, ಹೊರಗಿಡುವಿಕೆಯಲ್ಲಿ ಅಲ್ಲ” ಎಂದು ತಿಳಿಸಿದ್ದಾರೆ.

ಇಂದಿನ ಯುವ ಪೀಳಿಗೆ ಪ್ರಗತಿ, ಒಳಗೊಳ್ಳುವಿಕೆ ಮತ್ತು ಆಚರಣೆಯನ್ನು ಬಯಸುತ್ತಿದೆಯೇ ಹೊರತು “ದ್ವೇಷ ಅಥವಾ ಬೆದರಿಕೆಯ ರಾಜಕೀಯವಲ್ಲ” ಎಂದು ಅವರು ಹೇಳಿದ್ದಾರೆ.

ಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ ಕ್ರಮಕ್ಕೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...