Homeಮುಖಪುಟಗಾರ್ಬಾ ಕಾರ್ಯಕ್ರಮಗಳಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ಎಂಬ ವಿಹೆಚ್‌ಪಿ ಫರ್ಮಾನು ಹಿಂಸೆಗೆ ಆಹ್ವಾನ: ಕೇಂದ್ರ ಸಚಿವ...

ಗಾರ್ಬಾ ಕಾರ್ಯಕ್ರಮಗಳಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ಎಂಬ ವಿಹೆಚ್‌ಪಿ ಫರ್ಮಾನು ಹಿಂಸೆಗೆ ಆಹ್ವಾನ: ಕೇಂದ್ರ ಸಚಿವ ಅಠಾವಳೆ

- Advertisement -
- Advertisement -

ನವರಾತ್ರಿಯ ‘ಗಾರ್ಬಾ’ ಕಾರ್ಯಕ್ರಮಗಳಿಗೆ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು ಎಂಬ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಫರ್ಮಾನುಗೆ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಭಾನುವಾರ (ಸೆ.21) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಅಂತಹ ಕರೆಗಳು ‘ಹಿಂಸೆಯನ್ನು ಆಹ್ವಾನಿಸಿದಂತೆ” ಎಂದು ಹೇಳಿದ್ದಾರೆ.

ನವರಾತ್ರಿಯು ಸಾಂಪ್ರದಾಯಿಕ ಆಧ್ಯಾತ್ಮಿಕ ಗಾರ್ಬಾ ನೃತ್ಯದೊಂದಿಗೆ ದಾಂಡಿಯಾ (ವರ್ಣರಂಜಿತ ಕೋಲುಗಳ ಹೊಡೆತ) ಪ್ರದರ್ಶನದೊಂದಿಗೆ ಗುರುತಿಸಲ್ಪಟ್ಟಿದೆ. ಇದರಲ್ಲಿ ಜೋಡಿಗಳು ವೃತ್ತಾಕಾರವಾಗಿ ನೃತ್ಯ ಮಾಡುತ್ತಾರೆ, ಈ ವರ್ಷದ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 1 ರವರೆಗೆ ಇದನ್ನು ಆಚರಿಸಲಾಗುತ್ತದೆ.

‘ಗಾರ್ಬಾ’ ಕಾರ್ಯಕ್ರಮಗಳಿಗೆ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ಶನಿವಾರ (ಸೆ.20) ವಿಎಚ್‌ಪಿ ಹೇಳಿದೆ. ‘ಲವ್ ಜಿಹಾದ್’ ತಪ್ಪಿಸಲು ಪ್ರವೇಶ ಪಡೆಯುವವರ ಆಧಾರ್ ಕಾರ್ಡ್ ಅನ್ನು ಪರಿಶೀಲಿಸುವಂತೆ ಆಯೋಜಕರಿಗೆ ಸಲಹೆ ನೀಡಿದೆ.

ಗಾರ್ಬಾ ನೃತ್ಯದ ಸಮಯದಲ್ಲಿ ಹಿಂದೂಯೇತರರ ಪ್ರವೇಶವನ್ನು ನಿರ್ಬಂಧಿಸಬೇಕು ಎಂದು ವಿಎಚ್‌ಪಿ ನಾಯಕರೊಬ್ಬರು ಹೇಳಿದ್ದು, ಗಾರ್ಬಾ ಕೇವಲ ನೃತ್ಯವೋ, ಸಾಂಸ್ಕೃತಿಕ ಕಾರ್ಯಕ್ರಮವೋ ಅಲ್ಲ. ಅದೊಂದು ಪವಿತ್ರ ಪೂಜೆ ಎಂದಿದ್ದಾರೆ.

ವಿಎಚ್‌ಪಿಯ ಸಲಹೆಗೆ ಎಕ್ಸ್‌ ಪೋಸ್ಟ್‌ ಮೂಲಕ ಆಕ್ಷೇಪ ವ್ಯಕ್ತಪಡಿಸಿರುವ ರಾಮದಾಸ್ ಅಠಾವಳೆ, “ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಗಾರ್ಬಾಗೆ ಯಾರು ಹೋಗಬೇಕು, ಯಾರು ಹೋಗಬಾರದು ಎಂದು ನಿರ್ಧರಿಸಲು ವಿಶ್ವ ಹಿಂದೂ ಪರಿಷತ್ ಯಾರು? ಈ ಸಲಹೆಯು ಕೇವಲ ಸಂಘಟಕರಿಗೆ ಮಾತ್ರ ಸೀಮಿತವಾಗಿಲ್ಲ. ಬದಲಿಗೆ, ಕೆಲವು ಮೂಲಭೂತವಾದಿ ಶಕ್ತಿಗಳಿಗೆ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಲು ಹಾಗೂ ಬಲವನ್ನು ಪ್ರಯೋಗಿಸಲು ನೀಡಿರುವ ಮುಕ್ತ ಆಹ್ವಾನವಾಗಿದೆ” ಎಂದು ಬರೆದುಕೊಂಡಿದ್ದಾರೆ.

“ಈ ಸಲಹೆಯಿಂದಾಗಿ ನವರಾತ್ರಿಯ ಸಮಯದಲ್ಲಿ ದೇಶದಲ್ಲಿ ಎಲ್ಲಿಯಾದರೂ ಯಾವುದಾದರು ಘರ್ಷಣೆಗಳು, ಹಲ್ಲೆಗಳು ಅಥವಾ ಧಾರ್ಮಿಕ ಸಂಘರ್ಷಗಳು ಸಂಭವಿಸಿದಲ್ಲಿ, ಸಂಪೂರ್ಣ ಜವಾಬ್ದಾರಿ ವಿಎಚ್‌ಪಿ ಮತ್ತು ಅದರ ಸಂಬಂಧಿತ ಸಂಸ್ಥೆಗಳ ಮೇಲಿರುತ್ತದೆ” ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆಯ ರಾಜ್ಯ ಸಚಿವ ಹೇಳಿದ್ದಾರೆ.

ಇಂತಹ ನಡೆಗಳು ಭಾರತದ ಏಕತೆ, ವೈವಿಧ್ಯತೆ ಮತ್ತು ಧಾರ್ಮಿಕ ಸಹಿಷ್ಣುತೆಯ ಹೃದಯಭಾಗಕ್ಕೆ ಹೊಡೆತ ನೀಡುತ್ತವೆ ಎಂದಿದ್ದಾರೆ.

“ನವರಾತ್ರಿ ಪೂಜೆ ಮತ್ತು ಸಂತೋಷದ ಹಬ್ಬವಾಗಿದ್ದು, ಅದನ್ನು ದ್ವೇಷ ಮತ್ತು ಅನುಮಾನದ ವೇದಿಕೆಯನ್ನಾಗಿ ಪರಿವರ್ತಿಸುವ ಪ್ರಯತ್ನ ನಡೆಯುತ್ತಿದೆ, ಇದು ಅತ್ಯಂತ ಖಂಡನೀಯ” ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಮುಖ್ಯಸ್ಥ ಕಿಡಿಕಾರಿದ್ದಾರೆ.

ಸಂವಿಧಾನವು 14, 15 ಮತ್ತು 25 ನೇ ವಿಧಿಗಳ ಅಡಿಯಲ್ಲಿ ಸಮಾನತೆ ಮತ್ತು ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ.

“ಯಾರು ಹಬ್ಬವನ್ನು ಆಚರಿಸಬೇಕೆಂದು ಯಾವುದೇ ಸಂಸ್ಥೆ ನಿರ್ಧರಿಸಲು ಸಾಧ್ಯವಿಲ್ಲ. ಗಾರ್ಬಾ ಕೇವಲ ಧಾರ್ಮಿಕ ಸಂಪ್ರದಾಯವಲ್ಲ, ಸಂಗೀತ, ನೃತ್ಯ ಮತ್ತು ಸಾಮಾಜಿಕ ಸಾಮರಸ್ಯದ ಆಚರಣೆಯೂ ಆಗಿದೆ. ಒಂದು ಸಿದ್ಧಾಂತದೊಂದಿಗೆ ಅದನ್ನು ಏಕಸ್ವಾಮ್ಯಗೊಳಿಸಲು ಪ್ರಯತ್ನಿಸುವುದು ಅನ್ಯಾಯ ಮತ್ತು ಪ್ರತಿಗಾಮಿ” ಎಂದು ಕೇಂದ್ರ ಸಚಿವ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನವರಾತ್ರಿಯ ಸಮಯದಲ್ಲಿ ಆಯೋಜಕರು ಮತ್ತು ಭಾಗವಹಿಸುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕೆಂದು ಅಠಾವಳೆ ಸರ್ಕಾರ ಮತ್ತು ಆಡಳಿತವನ್ನು ಒತ್ತಾಯಿಸಿದ್ದಾರೆ.

“ಬಲವಂತ, ಗುರುತಿನ ಪರಿಶೀಲನೆ ಅಥವಾ ಧಾರ್ಮಿಕ ತಾರತಮ್ಯದ ಯಾವುದೇ ಪ್ರಯತ್ನಗಳನ್ನು ಕಾನೂನಿನ ಅಡಿಯಲ್ಲಿ ಕಟ್ಟುನಿಟ್ಟಾಗಿ ನಿಲ್ಲಿಸಬೇಕು. ನವರಾತ್ರಿ ಎಲ್ಲರಿಗೂ ಸೇರಿದ್ದು – ಅದರ ಸಾರವು ಭಾಗವಹಿಸುವಿಕೆ ಮತ್ತು ಶಾಂತಿಯಲ್ಲಿದೆ, ಹೊರಗಿಡುವಿಕೆಯಲ್ಲಿ ಅಲ್ಲ” ಎಂದು ತಿಳಿಸಿದ್ದಾರೆ.

ಇಂದಿನ ಯುವ ಪೀಳಿಗೆ ಪ್ರಗತಿ, ಒಳಗೊಳ್ಳುವಿಕೆ ಮತ್ತು ಆಚರಣೆಯನ್ನು ಬಯಸುತ್ತಿದೆಯೇ ಹೊರತು “ದ್ವೇಷ ಅಥವಾ ಬೆದರಿಕೆಯ ರಾಜಕೀಯವಲ್ಲ” ಎಂದು ಅವರು ಹೇಳಿದ್ದಾರೆ.

ಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ ಕ್ರಮಕ್ಕೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...