Homeಮುಖಪುಟಗಾರ್ಬಾ ಕಾರ್ಯಕ್ರಮಗಳಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ಎಂಬ ವಿಹೆಚ್‌ಪಿ ಫರ್ಮಾನು ಹಿಂಸೆಗೆ ಆಹ್ವಾನ: ಕೇಂದ್ರ ಸಚಿವ...

ಗಾರ್ಬಾ ಕಾರ್ಯಕ್ರಮಗಳಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ಎಂಬ ವಿಹೆಚ್‌ಪಿ ಫರ್ಮಾನು ಹಿಂಸೆಗೆ ಆಹ್ವಾನ: ಕೇಂದ್ರ ಸಚಿವ ಅಠಾವಳೆ

- Advertisement -
- Advertisement -

ನವರಾತ್ರಿಯ ‘ಗಾರ್ಬಾ’ ಕಾರ್ಯಕ್ರಮಗಳಿಗೆ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು ಎಂಬ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಫರ್ಮಾನುಗೆ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಭಾನುವಾರ (ಸೆ.21) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಅಂತಹ ಕರೆಗಳು ‘ಹಿಂಸೆಯನ್ನು ಆಹ್ವಾನಿಸಿದಂತೆ” ಎಂದು ಹೇಳಿದ್ದಾರೆ.

ನವರಾತ್ರಿಯು ಸಾಂಪ್ರದಾಯಿಕ ಆಧ್ಯಾತ್ಮಿಕ ಗಾರ್ಬಾ ನೃತ್ಯದೊಂದಿಗೆ ದಾಂಡಿಯಾ (ವರ್ಣರಂಜಿತ ಕೋಲುಗಳ ಹೊಡೆತ) ಪ್ರದರ್ಶನದೊಂದಿಗೆ ಗುರುತಿಸಲ್ಪಟ್ಟಿದೆ. ಇದರಲ್ಲಿ ಜೋಡಿಗಳು ವೃತ್ತಾಕಾರವಾಗಿ ನೃತ್ಯ ಮಾಡುತ್ತಾರೆ, ಈ ವರ್ಷದ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 1 ರವರೆಗೆ ಇದನ್ನು ಆಚರಿಸಲಾಗುತ್ತದೆ.

‘ಗಾರ್ಬಾ’ ಕಾರ್ಯಕ್ರಮಗಳಿಗೆ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ಶನಿವಾರ (ಸೆ.20) ವಿಎಚ್‌ಪಿ ಹೇಳಿದೆ. ‘ಲವ್ ಜಿಹಾದ್’ ತಪ್ಪಿಸಲು ಪ್ರವೇಶ ಪಡೆಯುವವರ ಆಧಾರ್ ಕಾರ್ಡ್ ಅನ್ನು ಪರಿಶೀಲಿಸುವಂತೆ ಆಯೋಜಕರಿಗೆ ಸಲಹೆ ನೀಡಿದೆ.

ಗಾರ್ಬಾ ನೃತ್ಯದ ಸಮಯದಲ್ಲಿ ಹಿಂದೂಯೇತರರ ಪ್ರವೇಶವನ್ನು ನಿರ್ಬಂಧಿಸಬೇಕು ಎಂದು ವಿಎಚ್‌ಪಿ ನಾಯಕರೊಬ್ಬರು ಹೇಳಿದ್ದು, ಗಾರ್ಬಾ ಕೇವಲ ನೃತ್ಯವೋ, ಸಾಂಸ್ಕೃತಿಕ ಕಾರ್ಯಕ್ರಮವೋ ಅಲ್ಲ. ಅದೊಂದು ಪವಿತ್ರ ಪೂಜೆ ಎಂದಿದ್ದಾರೆ.

ವಿಎಚ್‌ಪಿಯ ಸಲಹೆಗೆ ಎಕ್ಸ್‌ ಪೋಸ್ಟ್‌ ಮೂಲಕ ಆಕ್ಷೇಪ ವ್ಯಕ್ತಪಡಿಸಿರುವ ರಾಮದಾಸ್ ಅಠಾವಳೆ, “ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಗಾರ್ಬಾಗೆ ಯಾರು ಹೋಗಬೇಕು, ಯಾರು ಹೋಗಬಾರದು ಎಂದು ನಿರ್ಧರಿಸಲು ವಿಶ್ವ ಹಿಂದೂ ಪರಿಷತ್ ಯಾರು? ಈ ಸಲಹೆಯು ಕೇವಲ ಸಂಘಟಕರಿಗೆ ಮಾತ್ರ ಸೀಮಿತವಾಗಿಲ್ಲ. ಬದಲಿಗೆ, ಕೆಲವು ಮೂಲಭೂತವಾದಿ ಶಕ್ತಿಗಳಿಗೆ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಲು ಹಾಗೂ ಬಲವನ್ನು ಪ್ರಯೋಗಿಸಲು ನೀಡಿರುವ ಮುಕ್ತ ಆಹ್ವಾನವಾಗಿದೆ” ಎಂದು ಬರೆದುಕೊಂಡಿದ್ದಾರೆ.

“ಈ ಸಲಹೆಯಿಂದಾಗಿ ನವರಾತ್ರಿಯ ಸಮಯದಲ್ಲಿ ದೇಶದಲ್ಲಿ ಎಲ್ಲಿಯಾದರೂ ಯಾವುದಾದರು ಘರ್ಷಣೆಗಳು, ಹಲ್ಲೆಗಳು ಅಥವಾ ಧಾರ್ಮಿಕ ಸಂಘರ್ಷಗಳು ಸಂಭವಿಸಿದಲ್ಲಿ, ಸಂಪೂರ್ಣ ಜವಾಬ್ದಾರಿ ವಿಎಚ್‌ಪಿ ಮತ್ತು ಅದರ ಸಂಬಂಧಿತ ಸಂಸ್ಥೆಗಳ ಮೇಲಿರುತ್ತದೆ” ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆಯ ರಾಜ್ಯ ಸಚಿವ ಹೇಳಿದ್ದಾರೆ.

ಇಂತಹ ನಡೆಗಳು ಭಾರತದ ಏಕತೆ, ವೈವಿಧ್ಯತೆ ಮತ್ತು ಧಾರ್ಮಿಕ ಸಹಿಷ್ಣುತೆಯ ಹೃದಯಭಾಗಕ್ಕೆ ಹೊಡೆತ ನೀಡುತ್ತವೆ ಎಂದಿದ್ದಾರೆ.

“ನವರಾತ್ರಿ ಪೂಜೆ ಮತ್ತು ಸಂತೋಷದ ಹಬ್ಬವಾಗಿದ್ದು, ಅದನ್ನು ದ್ವೇಷ ಮತ್ತು ಅನುಮಾನದ ವೇದಿಕೆಯನ್ನಾಗಿ ಪರಿವರ್ತಿಸುವ ಪ್ರಯತ್ನ ನಡೆಯುತ್ತಿದೆ, ಇದು ಅತ್ಯಂತ ಖಂಡನೀಯ” ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಮುಖ್ಯಸ್ಥ ಕಿಡಿಕಾರಿದ್ದಾರೆ.

ಸಂವಿಧಾನವು 14, 15 ಮತ್ತು 25 ನೇ ವಿಧಿಗಳ ಅಡಿಯಲ್ಲಿ ಸಮಾನತೆ ಮತ್ತು ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ.

“ಯಾರು ಹಬ್ಬವನ್ನು ಆಚರಿಸಬೇಕೆಂದು ಯಾವುದೇ ಸಂಸ್ಥೆ ನಿರ್ಧರಿಸಲು ಸಾಧ್ಯವಿಲ್ಲ. ಗಾರ್ಬಾ ಕೇವಲ ಧಾರ್ಮಿಕ ಸಂಪ್ರದಾಯವಲ್ಲ, ಸಂಗೀತ, ನೃತ್ಯ ಮತ್ತು ಸಾಮಾಜಿಕ ಸಾಮರಸ್ಯದ ಆಚರಣೆಯೂ ಆಗಿದೆ. ಒಂದು ಸಿದ್ಧಾಂತದೊಂದಿಗೆ ಅದನ್ನು ಏಕಸ್ವಾಮ್ಯಗೊಳಿಸಲು ಪ್ರಯತ್ನಿಸುವುದು ಅನ್ಯಾಯ ಮತ್ತು ಪ್ರತಿಗಾಮಿ” ಎಂದು ಕೇಂದ್ರ ಸಚಿವ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನವರಾತ್ರಿಯ ಸಮಯದಲ್ಲಿ ಆಯೋಜಕರು ಮತ್ತು ಭಾಗವಹಿಸುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕೆಂದು ಅಠಾವಳೆ ಸರ್ಕಾರ ಮತ್ತು ಆಡಳಿತವನ್ನು ಒತ್ತಾಯಿಸಿದ್ದಾರೆ.

“ಬಲವಂತ, ಗುರುತಿನ ಪರಿಶೀಲನೆ ಅಥವಾ ಧಾರ್ಮಿಕ ತಾರತಮ್ಯದ ಯಾವುದೇ ಪ್ರಯತ್ನಗಳನ್ನು ಕಾನೂನಿನ ಅಡಿಯಲ್ಲಿ ಕಟ್ಟುನಿಟ್ಟಾಗಿ ನಿಲ್ಲಿಸಬೇಕು. ನವರಾತ್ರಿ ಎಲ್ಲರಿಗೂ ಸೇರಿದ್ದು – ಅದರ ಸಾರವು ಭಾಗವಹಿಸುವಿಕೆ ಮತ್ತು ಶಾಂತಿಯಲ್ಲಿದೆ, ಹೊರಗಿಡುವಿಕೆಯಲ್ಲಿ ಅಲ್ಲ” ಎಂದು ತಿಳಿಸಿದ್ದಾರೆ.

ಇಂದಿನ ಯುವ ಪೀಳಿಗೆ ಪ್ರಗತಿ, ಒಳಗೊಳ್ಳುವಿಕೆ ಮತ್ತು ಆಚರಣೆಯನ್ನು ಬಯಸುತ್ತಿದೆಯೇ ಹೊರತು “ದ್ವೇಷ ಅಥವಾ ಬೆದರಿಕೆಯ ರಾಜಕೀಯವಲ್ಲ” ಎಂದು ಅವರು ಹೇಳಿದ್ದಾರೆ.

ಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ ಕ್ರಮಕ್ಕೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...