Homeಮುಖಪುಟಗಾರ್ಬಾ ಕಾರ್ಯಕ್ರಮಗಳಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ಎಂಬ ವಿಹೆಚ್‌ಪಿ ಫರ್ಮಾನು ಹಿಂಸೆಗೆ ಆಹ್ವಾನ: ಕೇಂದ್ರ ಸಚಿವ...

ಗಾರ್ಬಾ ಕಾರ್ಯಕ್ರಮಗಳಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ಎಂಬ ವಿಹೆಚ್‌ಪಿ ಫರ್ಮಾನು ಹಿಂಸೆಗೆ ಆಹ್ವಾನ: ಕೇಂದ್ರ ಸಚಿವ ಅಠಾವಳೆ

- Advertisement -
- Advertisement -

ನವರಾತ್ರಿಯ ‘ಗಾರ್ಬಾ’ ಕಾರ್ಯಕ್ರಮಗಳಿಗೆ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು ಎಂಬ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಫರ್ಮಾನುಗೆ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಭಾನುವಾರ (ಸೆ.21) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಅಂತಹ ಕರೆಗಳು ‘ಹಿಂಸೆಯನ್ನು ಆಹ್ವಾನಿಸಿದಂತೆ” ಎಂದು ಹೇಳಿದ್ದಾರೆ.

ನವರಾತ್ರಿಯು ಸಾಂಪ್ರದಾಯಿಕ ಆಧ್ಯಾತ್ಮಿಕ ಗಾರ್ಬಾ ನೃತ್ಯದೊಂದಿಗೆ ದಾಂಡಿಯಾ (ವರ್ಣರಂಜಿತ ಕೋಲುಗಳ ಹೊಡೆತ) ಪ್ರದರ್ಶನದೊಂದಿಗೆ ಗುರುತಿಸಲ್ಪಟ್ಟಿದೆ. ಇದರಲ್ಲಿ ಜೋಡಿಗಳು ವೃತ್ತಾಕಾರವಾಗಿ ನೃತ್ಯ ಮಾಡುತ್ತಾರೆ, ಈ ವರ್ಷದ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 1 ರವರೆಗೆ ಇದನ್ನು ಆಚರಿಸಲಾಗುತ್ತದೆ.

‘ಗಾರ್ಬಾ’ ಕಾರ್ಯಕ್ರಮಗಳಿಗೆ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ಶನಿವಾರ (ಸೆ.20) ವಿಎಚ್‌ಪಿ ಹೇಳಿದೆ. ‘ಲವ್ ಜಿಹಾದ್’ ತಪ್ಪಿಸಲು ಪ್ರವೇಶ ಪಡೆಯುವವರ ಆಧಾರ್ ಕಾರ್ಡ್ ಅನ್ನು ಪರಿಶೀಲಿಸುವಂತೆ ಆಯೋಜಕರಿಗೆ ಸಲಹೆ ನೀಡಿದೆ.

ಗಾರ್ಬಾ ನೃತ್ಯದ ಸಮಯದಲ್ಲಿ ಹಿಂದೂಯೇತರರ ಪ್ರವೇಶವನ್ನು ನಿರ್ಬಂಧಿಸಬೇಕು ಎಂದು ವಿಎಚ್‌ಪಿ ನಾಯಕರೊಬ್ಬರು ಹೇಳಿದ್ದು, ಗಾರ್ಬಾ ಕೇವಲ ನೃತ್ಯವೋ, ಸಾಂಸ್ಕೃತಿಕ ಕಾರ್ಯಕ್ರಮವೋ ಅಲ್ಲ. ಅದೊಂದು ಪವಿತ್ರ ಪೂಜೆ ಎಂದಿದ್ದಾರೆ.

ವಿಎಚ್‌ಪಿಯ ಸಲಹೆಗೆ ಎಕ್ಸ್‌ ಪೋಸ್ಟ್‌ ಮೂಲಕ ಆಕ್ಷೇಪ ವ್ಯಕ್ತಪಡಿಸಿರುವ ರಾಮದಾಸ್ ಅಠಾವಳೆ, “ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಗಾರ್ಬಾಗೆ ಯಾರು ಹೋಗಬೇಕು, ಯಾರು ಹೋಗಬಾರದು ಎಂದು ನಿರ್ಧರಿಸಲು ವಿಶ್ವ ಹಿಂದೂ ಪರಿಷತ್ ಯಾರು? ಈ ಸಲಹೆಯು ಕೇವಲ ಸಂಘಟಕರಿಗೆ ಮಾತ್ರ ಸೀಮಿತವಾಗಿಲ್ಲ. ಬದಲಿಗೆ, ಕೆಲವು ಮೂಲಭೂತವಾದಿ ಶಕ್ತಿಗಳಿಗೆ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಲು ಹಾಗೂ ಬಲವನ್ನು ಪ್ರಯೋಗಿಸಲು ನೀಡಿರುವ ಮುಕ್ತ ಆಹ್ವಾನವಾಗಿದೆ” ಎಂದು ಬರೆದುಕೊಂಡಿದ್ದಾರೆ.

“ಈ ಸಲಹೆಯಿಂದಾಗಿ ನವರಾತ್ರಿಯ ಸಮಯದಲ್ಲಿ ದೇಶದಲ್ಲಿ ಎಲ್ಲಿಯಾದರೂ ಯಾವುದಾದರು ಘರ್ಷಣೆಗಳು, ಹಲ್ಲೆಗಳು ಅಥವಾ ಧಾರ್ಮಿಕ ಸಂಘರ್ಷಗಳು ಸಂಭವಿಸಿದಲ್ಲಿ, ಸಂಪೂರ್ಣ ಜವಾಬ್ದಾರಿ ವಿಎಚ್‌ಪಿ ಮತ್ತು ಅದರ ಸಂಬಂಧಿತ ಸಂಸ್ಥೆಗಳ ಮೇಲಿರುತ್ತದೆ” ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆಯ ರಾಜ್ಯ ಸಚಿವ ಹೇಳಿದ್ದಾರೆ.

ಇಂತಹ ನಡೆಗಳು ಭಾರತದ ಏಕತೆ, ವೈವಿಧ್ಯತೆ ಮತ್ತು ಧಾರ್ಮಿಕ ಸಹಿಷ್ಣುತೆಯ ಹೃದಯಭಾಗಕ್ಕೆ ಹೊಡೆತ ನೀಡುತ್ತವೆ ಎಂದಿದ್ದಾರೆ.

“ನವರಾತ್ರಿ ಪೂಜೆ ಮತ್ತು ಸಂತೋಷದ ಹಬ್ಬವಾಗಿದ್ದು, ಅದನ್ನು ದ್ವೇಷ ಮತ್ತು ಅನುಮಾನದ ವೇದಿಕೆಯನ್ನಾಗಿ ಪರಿವರ್ತಿಸುವ ಪ್ರಯತ್ನ ನಡೆಯುತ್ತಿದೆ, ಇದು ಅತ್ಯಂತ ಖಂಡನೀಯ” ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಮುಖ್ಯಸ್ಥ ಕಿಡಿಕಾರಿದ್ದಾರೆ.

ಸಂವಿಧಾನವು 14, 15 ಮತ್ತು 25 ನೇ ವಿಧಿಗಳ ಅಡಿಯಲ್ಲಿ ಸಮಾನತೆ ಮತ್ತು ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ.

“ಯಾರು ಹಬ್ಬವನ್ನು ಆಚರಿಸಬೇಕೆಂದು ಯಾವುದೇ ಸಂಸ್ಥೆ ನಿರ್ಧರಿಸಲು ಸಾಧ್ಯವಿಲ್ಲ. ಗಾರ್ಬಾ ಕೇವಲ ಧಾರ್ಮಿಕ ಸಂಪ್ರದಾಯವಲ್ಲ, ಸಂಗೀತ, ನೃತ್ಯ ಮತ್ತು ಸಾಮಾಜಿಕ ಸಾಮರಸ್ಯದ ಆಚರಣೆಯೂ ಆಗಿದೆ. ಒಂದು ಸಿದ್ಧಾಂತದೊಂದಿಗೆ ಅದನ್ನು ಏಕಸ್ವಾಮ್ಯಗೊಳಿಸಲು ಪ್ರಯತ್ನಿಸುವುದು ಅನ್ಯಾಯ ಮತ್ತು ಪ್ರತಿಗಾಮಿ” ಎಂದು ಕೇಂದ್ರ ಸಚಿವ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನವರಾತ್ರಿಯ ಸಮಯದಲ್ಲಿ ಆಯೋಜಕರು ಮತ್ತು ಭಾಗವಹಿಸುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕೆಂದು ಅಠಾವಳೆ ಸರ್ಕಾರ ಮತ್ತು ಆಡಳಿತವನ್ನು ಒತ್ತಾಯಿಸಿದ್ದಾರೆ.

“ಬಲವಂತ, ಗುರುತಿನ ಪರಿಶೀಲನೆ ಅಥವಾ ಧಾರ್ಮಿಕ ತಾರತಮ್ಯದ ಯಾವುದೇ ಪ್ರಯತ್ನಗಳನ್ನು ಕಾನೂನಿನ ಅಡಿಯಲ್ಲಿ ಕಟ್ಟುನಿಟ್ಟಾಗಿ ನಿಲ್ಲಿಸಬೇಕು. ನವರಾತ್ರಿ ಎಲ್ಲರಿಗೂ ಸೇರಿದ್ದು – ಅದರ ಸಾರವು ಭಾಗವಹಿಸುವಿಕೆ ಮತ್ತು ಶಾಂತಿಯಲ್ಲಿದೆ, ಹೊರಗಿಡುವಿಕೆಯಲ್ಲಿ ಅಲ್ಲ” ಎಂದು ತಿಳಿಸಿದ್ದಾರೆ.

ಇಂದಿನ ಯುವ ಪೀಳಿಗೆ ಪ್ರಗತಿ, ಒಳಗೊಳ್ಳುವಿಕೆ ಮತ್ತು ಆಚರಣೆಯನ್ನು ಬಯಸುತ್ತಿದೆಯೇ ಹೊರತು “ದ್ವೇಷ ಅಥವಾ ಬೆದರಿಕೆಯ ರಾಜಕೀಯವಲ್ಲ” ಎಂದು ಅವರು ಹೇಳಿದ್ದಾರೆ.

ಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ ಕ್ರಮಕ್ಕೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...