Homeಮುಖಪುಟಗಾರ್ಬಾ ಕಾರ್ಯಕ್ರಮಗಳಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ಎಂಬ ವಿಹೆಚ್‌ಪಿ ಫರ್ಮಾನು ಹಿಂಸೆಗೆ ಆಹ್ವಾನ: ಕೇಂದ್ರ ಸಚಿವ...

ಗಾರ್ಬಾ ಕಾರ್ಯಕ್ರಮಗಳಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ಎಂಬ ವಿಹೆಚ್‌ಪಿ ಫರ್ಮಾನು ಹಿಂಸೆಗೆ ಆಹ್ವಾನ: ಕೇಂದ್ರ ಸಚಿವ ಅಠಾವಳೆ

- Advertisement -
- Advertisement -

ನವರಾತ್ರಿಯ ‘ಗಾರ್ಬಾ’ ಕಾರ್ಯಕ್ರಮಗಳಿಗೆ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು ಎಂಬ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಫರ್ಮಾನುಗೆ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಭಾನುವಾರ (ಸೆ.21) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಅಂತಹ ಕರೆಗಳು ‘ಹಿಂಸೆಯನ್ನು ಆಹ್ವಾನಿಸಿದಂತೆ” ಎಂದು ಹೇಳಿದ್ದಾರೆ.

ನವರಾತ್ರಿಯು ಸಾಂಪ್ರದಾಯಿಕ ಆಧ್ಯಾತ್ಮಿಕ ಗಾರ್ಬಾ ನೃತ್ಯದೊಂದಿಗೆ ದಾಂಡಿಯಾ (ವರ್ಣರಂಜಿತ ಕೋಲುಗಳ ಹೊಡೆತ) ಪ್ರದರ್ಶನದೊಂದಿಗೆ ಗುರುತಿಸಲ್ಪಟ್ಟಿದೆ. ಇದರಲ್ಲಿ ಜೋಡಿಗಳು ವೃತ್ತಾಕಾರವಾಗಿ ನೃತ್ಯ ಮಾಡುತ್ತಾರೆ, ಈ ವರ್ಷದ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 1 ರವರೆಗೆ ಇದನ್ನು ಆಚರಿಸಲಾಗುತ್ತದೆ.

‘ಗಾರ್ಬಾ’ ಕಾರ್ಯಕ್ರಮಗಳಿಗೆ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ಶನಿವಾರ (ಸೆ.20) ವಿಎಚ್‌ಪಿ ಹೇಳಿದೆ. ‘ಲವ್ ಜಿಹಾದ್’ ತಪ್ಪಿಸಲು ಪ್ರವೇಶ ಪಡೆಯುವವರ ಆಧಾರ್ ಕಾರ್ಡ್ ಅನ್ನು ಪರಿಶೀಲಿಸುವಂತೆ ಆಯೋಜಕರಿಗೆ ಸಲಹೆ ನೀಡಿದೆ.

ಗಾರ್ಬಾ ನೃತ್ಯದ ಸಮಯದಲ್ಲಿ ಹಿಂದೂಯೇತರರ ಪ್ರವೇಶವನ್ನು ನಿರ್ಬಂಧಿಸಬೇಕು ಎಂದು ವಿಎಚ್‌ಪಿ ನಾಯಕರೊಬ್ಬರು ಹೇಳಿದ್ದು, ಗಾರ್ಬಾ ಕೇವಲ ನೃತ್ಯವೋ, ಸಾಂಸ್ಕೃತಿಕ ಕಾರ್ಯಕ್ರಮವೋ ಅಲ್ಲ. ಅದೊಂದು ಪವಿತ್ರ ಪೂಜೆ ಎಂದಿದ್ದಾರೆ.

ವಿಎಚ್‌ಪಿಯ ಸಲಹೆಗೆ ಎಕ್ಸ್‌ ಪೋಸ್ಟ್‌ ಮೂಲಕ ಆಕ್ಷೇಪ ವ್ಯಕ್ತಪಡಿಸಿರುವ ರಾಮದಾಸ್ ಅಠಾವಳೆ, “ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಗಾರ್ಬಾಗೆ ಯಾರು ಹೋಗಬೇಕು, ಯಾರು ಹೋಗಬಾರದು ಎಂದು ನಿರ್ಧರಿಸಲು ವಿಶ್ವ ಹಿಂದೂ ಪರಿಷತ್ ಯಾರು? ಈ ಸಲಹೆಯು ಕೇವಲ ಸಂಘಟಕರಿಗೆ ಮಾತ್ರ ಸೀಮಿತವಾಗಿಲ್ಲ. ಬದಲಿಗೆ, ಕೆಲವು ಮೂಲಭೂತವಾದಿ ಶಕ್ತಿಗಳಿಗೆ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಲು ಹಾಗೂ ಬಲವನ್ನು ಪ್ರಯೋಗಿಸಲು ನೀಡಿರುವ ಮುಕ್ತ ಆಹ್ವಾನವಾಗಿದೆ” ಎಂದು ಬರೆದುಕೊಂಡಿದ್ದಾರೆ.

“ಈ ಸಲಹೆಯಿಂದಾಗಿ ನವರಾತ್ರಿಯ ಸಮಯದಲ್ಲಿ ದೇಶದಲ್ಲಿ ಎಲ್ಲಿಯಾದರೂ ಯಾವುದಾದರು ಘರ್ಷಣೆಗಳು, ಹಲ್ಲೆಗಳು ಅಥವಾ ಧಾರ್ಮಿಕ ಸಂಘರ್ಷಗಳು ಸಂಭವಿಸಿದಲ್ಲಿ, ಸಂಪೂರ್ಣ ಜವಾಬ್ದಾರಿ ವಿಎಚ್‌ಪಿ ಮತ್ತು ಅದರ ಸಂಬಂಧಿತ ಸಂಸ್ಥೆಗಳ ಮೇಲಿರುತ್ತದೆ” ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆಯ ರಾಜ್ಯ ಸಚಿವ ಹೇಳಿದ್ದಾರೆ.

ಇಂತಹ ನಡೆಗಳು ಭಾರತದ ಏಕತೆ, ವೈವಿಧ್ಯತೆ ಮತ್ತು ಧಾರ್ಮಿಕ ಸಹಿಷ್ಣುತೆಯ ಹೃದಯಭಾಗಕ್ಕೆ ಹೊಡೆತ ನೀಡುತ್ತವೆ ಎಂದಿದ್ದಾರೆ.

“ನವರಾತ್ರಿ ಪೂಜೆ ಮತ್ತು ಸಂತೋಷದ ಹಬ್ಬವಾಗಿದ್ದು, ಅದನ್ನು ದ್ವೇಷ ಮತ್ತು ಅನುಮಾನದ ವೇದಿಕೆಯನ್ನಾಗಿ ಪರಿವರ್ತಿಸುವ ಪ್ರಯತ್ನ ನಡೆಯುತ್ತಿದೆ, ಇದು ಅತ್ಯಂತ ಖಂಡನೀಯ” ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಮುಖ್ಯಸ್ಥ ಕಿಡಿಕಾರಿದ್ದಾರೆ.

ಸಂವಿಧಾನವು 14, 15 ಮತ್ತು 25 ನೇ ವಿಧಿಗಳ ಅಡಿಯಲ್ಲಿ ಸಮಾನತೆ ಮತ್ತು ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ.

“ಯಾರು ಹಬ್ಬವನ್ನು ಆಚರಿಸಬೇಕೆಂದು ಯಾವುದೇ ಸಂಸ್ಥೆ ನಿರ್ಧರಿಸಲು ಸಾಧ್ಯವಿಲ್ಲ. ಗಾರ್ಬಾ ಕೇವಲ ಧಾರ್ಮಿಕ ಸಂಪ್ರದಾಯವಲ್ಲ, ಸಂಗೀತ, ನೃತ್ಯ ಮತ್ತು ಸಾಮಾಜಿಕ ಸಾಮರಸ್ಯದ ಆಚರಣೆಯೂ ಆಗಿದೆ. ಒಂದು ಸಿದ್ಧಾಂತದೊಂದಿಗೆ ಅದನ್ನು ಏಕಸ್ವಾಮ್ಯಗೊಳಿಸಲು ಪ್ರಯತ್ನಿಸುವುದು ಅನ್ಯಾಯ ಮತ್ತು ಪ್ರತಿಗಾಮಿ” ಎಂದು ಕೇಂದ್ರ ಸಚಿವ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನವರಾತ್ರಿಯ ಸಮಯದಲ್ಲಿ ಆಯೋಜಕರು ಮತ್ತು ಭಾಗವಹಿಸುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕೆಂದು ಅಠಾವಳೆ ಸರ್ಕಾರ ಮತ್ತು ಆಡಳಿತವನ್ನು ಒತ್ತಾಯಿಸಿದ್ದಾರೆ.

“ಬಲವಂತ, ಗುರುತಿನ ಪರಿಶೀಲನೆ ಅಥವಾ ಧಾರ್ಮಿಕ ತಾರತಮ್ಯದ ಯಾವುದೇ ಪ್ರಯತ್ನಗಳನ್ನು ಕಾನೂನಿನ ಅಡಿಯಲ್ಲಿ ಕಟ್ಟುನಿಟ್ಟಾಗಿ ನಿಲ್ಲಿಸಬೇಕು. ನವರಾತ್ರಿ ಎಲ್ಲರಿಗೂ ಸೇರಿದ್ದು – ಅದರ ಸಾರವು ಭಾಗವಹಿಸುವಿಕೆ ಮತ್ತು ಶಾಂತಿಯಲ್ಲಿದೆ, ಹೊರಗಿಡುವಿಕೆಯಲ್ಲಿ ಅಲ್ಲ” ಎಂದು ತಿಳಿಸಿದ್ದಾರೆ.

ಇಂದಿನ ಯುವ ಪೀಳಿಗೆ ಪ್ರಗತಿ, ಒಳಗೊಳ್ಳುವಿಕೆ ಮತ್ತು ಆಚರಣೆಯನ್ನು ಬಯಸುತ್ತಿದೆಯೇ ಹೊರತು “ದ್ವೇಷ ಅಥವಾ ಬೆದರಿಕೆಯ ರಾಜಕೀಯವಲ್ಲ” ಎಂದು ಅವರು ಹೇಳಿದ್ದಾರೆ.

ಪೊಲೀಸ್ ದಾಖಲೆಗಳಲ್ಲಿ ಜಾತಿ ಉಲ್ಲೇಖ ನಿಷೇಧಿಸಿದ ಅಲಹಾಬಾದ್ ಹೈಕೋರ್ಟ್: ವಾಹನಗಳ ಮೇಲಿನ ಜಾತಿ ಸ್ಟಿಕ್ಕರ್‌ಗಳ ವಿರುದ್ಧ ಕ್ರಮಕ್ಕೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...