Homeಮುಖಪುಟಉಪರಾಷ್ಟ್ರಪತಿ ಧನಕರ್ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ವಜಾ

ಉಪರಾಷ್ಟ್ರಪತಿ ಧನಕರ್ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ವಜಾ

- Advertisement -
- Advertisement -

ಉಪರಾಷ್ಟ್ರಪತಿ ಜಗದೀಪ್ ಧನಕರ್ ವಿರುದ್ಧ ವಿಪಕ್ಷಗಳ ಒಕ್ಕೂಟವಾದ ಇಂಡಿಯಾ ಬಣ ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ರಾಜ್ಯಸಭೆಯ ಉಪ ಸ್ಪೀಕರ್ ಹರಿವಂಶ್ ಅವರು ಗುರುವಾರ ತಿರಸ್ಕರಿಸಿದ್ದು, ಇದು “ತೀವ್ರ ದೋಷಪೂರಿತ” ಮತ್ತು “ಅಯೋಗ್ಯ ಕೃತ್ಯ” ಎಂದು ಕರೆದಿದ್ದಾರೆ. ವಿಪಕ್ಷಗಳ ನೋಟಿಸ್ ಉಪರಾಷ್ಟ್ರಪತಿಯ ವಿರುದ್ಧ ದೋಷಾರೋಪಣೆಯ ಸಮರ್ಥನೆಗಳಿಂದ ಮಾತ್ರ ತುಂಬಿತ್ತು ಎಂದು ಅವರು ಹೇಳಿದ್ದಾರೆ. ಉಪರಾಷ್ಟ್ರಪತಿ ಧನಕರ್

ಡಿಸೆಂಬರ್ 10 ರಂದು, ವಿರೋಧ ಪಕ್ಷದ ಸಂಸದರು ಧಂಖರ್ ಅವರನ್ನು ಪದಚ್ಯುತಗೊಳಿಸುವಂತೆ ನೋಟಿಸ್ ಸಲ್ಲಿಸಿದ್ದರು. ರಾಜ್ಯಸಭೆಯ ಸ್ಪೀಕರ್ ಆಗಿರುವ ಧನಕರ್ ಅವರು ಸಂಸತ್ತಿನ ಮೇಲ್ಮನೆಯ ಕಲಾಪಗಳನ್ನು “ಅತ್ಯಂತ ಪಕ್ಷಪಾತದ ರೀತಿಯಲ್ಲಿ” ನಡೆಸುತ್ತಿದ್ದಾರೆ ಎಂದು ವಿಪಕ್ಷಗಳು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂವಿಧಾನದ ಪರಿಚ್ಛೇದ 67(ಬಿ) ಅಡಿಯಲ್ಲಿ ನೋಟಿಸ್ ಸಲ್ಲಿಸಲಾಗಿದ್ದು, ಈ ಪರಿಚ್ಛೇದವು ಕೌನ್ಸಿಲ್ ಆಫ್ ಸ್ಟೇಟ್ಸ್ ಅಥವಾ ರಾಜ್ಯಸಭೆಯಿಂದ ನಿರ್ಣಯವನ್ನು ಅಂಗೀಕರಿಸಿದರೆ ಮತ್ತು ಜನರ ಸದನ ಅಂದರೆ ಲೋಕಸಭೆ ಇದಕ್ಕೆ ಒಪ್ಪಿಗೆ ನೀಡಿದರೆ ಉಪ ರಾಷ್ಟ್ರಪತಿಯನ್ನು ಅವರ ಸ್ಥಾನದಿಂದ ವಜಾಗೊಳಿಸಬಹುದಾಗಿದೆ ಎಂದು ಹೇಳುತ್ತದೆ. ಉಪರಾಷ್ಟ್ರಪತಿ ಧನಕರ್

ಆದರೆ ಇದನ್ನು 14 ದಿನಗಳ ಮುಂಚೆ ನೋಟಿಸ್ ನೀಡಿ ನಿರ್ಣಯ ಮಂಡಿಸಬೇಕಾಗುತ್ತದೆ ಎಂದು ಹೇಳುತ್ತದೆ. ಈ ನಿಯಮವನ್ನು ಉಲ್ಲೇಖಿಸಿದ ಹರಿವಂಶ್ ಅವರು, ಡಿಸೆಂಬರ್ 10, 2024ರಂದು ನೀಡಿರುವ ನೋಟಿಸ್‌ ಡಿಸೆಂಬರ್ 24, 2024 ರ ನಂತರ ನಿರ್ಣಯ ಮಂಡಿಸಲು ಅನುಮತಿಸಲಾಗುತ್ತದೆ ಎಂದು ಹೇಳಿದ್ದಾರೆ. ಅದಾಗ್ಯೂ, ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 20 ರಂದು ಕೊನೆಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

ನಡೆಯುತ್ತಿರುವ ಅಧಿವೇಶನದಲ್ಲಿ ಅವಿಶ್ವಾಸ ನಿರ್ಣಯವನ್ನು ಸದನದ ಮುಂದೆ ತರಲು ಸಾಧ್ಯವಿಲ್ಲ ಎಂದು ತಿಳಿದಿದ್ದರೂ, “ದೇಶದ 2 ನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಮತ್ತು ಉಪರಾಷ್ಟ್ರಪತಿ ವಿರುದ್ಧ ದೋಷಾರೋಪಣೆಗಾಗಿ ಮಾತ್ರ” ಪ್ರತಿಪಕ್ಷಗಳು ನಿರ್ಣಯವನ್ನು ಮಂಡಿಸಿವೆ ಎಂದು ಉಪ ಸ್ಪೀಕರ್ ಹೇಳಿದ್ದಾರೆ.

ಇದನ್ನೂ ಓದಿ: ನರಸಿಂಗಾನಂದ್ ವಿರುದ್ಧ FIR ದಾಖಲಿಸುವ ಬದಲು ಎಕ್ಸ್‌ನಲ್ಲಿ ಏಕೆ ಪೋಸ್ಟ್ ಮಾಡಿದಿರಿ? – ಆಲ್ಟ್‌ನ್ಯೂಸ್ ಜುಬೇರ್‌ಗೆ ಹೈಕೋರ್ಟ್ ಪ್ರಶ್ನೆ

ನರಸಿಂಗಾನಂದ್ ವಿರುದ್ಧ FIR ದಾಖಲಿಸುವ ಬದಲು ಎಕ್ಸ್‌ನಲ್ಲಿ ಏಕೆ ಪೋಸ್ಟ್ ಮಾಡಿದಿರಿ? – ಆಲ್ಟ್‌ನ್ಯೂಸ್ ಜುಬೇರ್‌ಗೆ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...