Homeಮುಖಪುಟಉಪರಾಷ್ಟ್ರಪತಿ ಧನಕರ್ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ವಜಾ

ಉಪರಾಷ್ಟ್ರಪತಿ ಧನಕರ್ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ವಜಾ

- Advertisement -
- Advertisement -

ಉಪರಾಷ್ಟ್ರಪತಿ ಜಗದೀಪ್ ಧನಕರ್ ವಿರುದ್ಧ ವಿಪಕ್ಷಗಳ ಒಕ್ಕೂಟವಾದ ಇಂಡಿಯಾ ಬಣ ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ರಾಜ್ಯಸಭೆಯ ಉಪ ಸ್ಪೀಕರ್ ಹರಿವಂಶ್ ಅವರು ಗುರುವಾರ ತಿರಸ್ಕರಿಸಿದ್ದು, ಇದು “ತೀವ್ರ ದೋಷಪೂರಿತ” ಮತ್ತು “ಅಯೋಗ್ಯ ಕೃತ್ಯ” ಎಂದು ಕರೆದಿದ್ದಾರೆ. ವಿಪಕ್ಷಗಳ ನೋಟಿಸ್ ಉಪರಾಷ್ಟ್ರಪತಿಯ ವಿರುದ್ಧ ದೋಷಾರೋಪಣೆಯ ಸಮರ್ಥನೆಗಳಿಂದ ಮಾತ್ರ ತುಂಬಿತ್ತು ಎಂದು ಅವರು ಹೇಳಿದ್ದಾರೆ. ಉಪರಾಷ್ಟ್ರಪತಿ ಧನಕರ್

ಡಿಸೆಂಬರ್ 10 ರಂದು, ವಿರೋಧ ಪಕ್ಷದ ಸಂಸದರು ಧಂಖರ್ ಅವರನ್ನು ಪದಚ್ಯುತಗೊಳಿಸುವಂತೆ ನೋಟಿಸ್ ಸಲ್ಲಿಸಿದ್ದರು. ರಾಜ್ಯಸಭೆಯ ಸ್ಪೀಕರ್ ಆಗಿರುವ ಧನಕರ್ ಅವರು ಸಂಸತ್ತಿನ ಮೇಲ್ಮನೆಯ ಕಲಾಪಗಳನ್ನು “ಅತ್ಯಂತ ಪಕ್ಷಪಾತದ ರೀತಿಯಲ್ಲಿ” ನಡೆಸುತ್ತಿದ್ದಾರೆ ಎಂದು ವಿಪಕ್ಷಗಳು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂವಿಧಾನದ ಪರಿಚ್ಛೇದ 67(ಬಿ) ಅಡಿಯಲ್ಲಿ ನೋಟಿಸ್ ಸಲ್ಲಿಸಲಾಗಿದ್ದು, ಈ ಪರಿಚ್ಛೇದವು ಕೌನ್ಸಿಲ್ ಆಫ್ ಸ್ಟೇಟ್ಸ್ ಅಥವಾ ರಾಜ್ಯಸಭೆಯಿಂದ ನಿರ್ಣಯವನ್ನು ಅಂಗೀಕರಿಸಿದರೆ ಮತ್ತು ಜನರ ಸದನ ಅಂದರೆ ಲೋಕಸಭೆ ಇದಕ್ಕೆ ಒಪ್ಪಿಗೆ ನೀಡಿದರೆ ಉಪ ರಾಷ್ಟ್ರಪತಿಯನ್ನು ಅವರ ಸ್ಥಾನದಿಂದ ವಜಾಗೊಳಿಸಬಹುದಾಗಿದೆ ಎಂದು ಹೇಳುತ್ತದೆ. ಉಪರಾಷ್ಟ್ರಪತಿ ಧನಕರ್

ಆದರೆ ಇದನ್ನು 14 ದಿನಗಳ ಮುಂಚೆ ನೋಟಿಸ್ ನೀಡಿ ನಿರ್ಣಯ ಮಂಡಿಸಬೇಕಾಗುತ್ತದೆ ಎಂದು ಹೇಳುತ್ತದೆ. ಈ ನಿಯಮವನ್ನು ಉಲ್ಲೇಖಿಸಿದ ಹರಿವಂಶ್ ಅವರು, ಡಿಸೆಂಬರ್ 10, 2024ರಂದು ನೀಡಿರುವ ನೋಟಿಸ್‌ ಡಿಸೆಂಬರ್ 24, 2024 ರ ನಂತರ ನಿರ್ಣಯ ಮಂಡಿಸಲು ಅನುಮತಿಸಲಾಗುತ್ತದೆ ಎಂದು ಹೇಳಿದ್ದಾರೆ. ಅದಾಗ್ಯೂ, ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 20 ರಂದು ಕೊನೆಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

ನಡೆಯುತ್ತಿರುವ ಅಧಿವೇಶನದಲ್ಲಿ ಅವಿಶ್ವಾಸ ನಿರ್ಣಯವನ್ನು ಸದನದ ಮುಂದೆ ತರಲು ಸಾಧ್ಯವಿಲ್ಲ ಎಂದು ತಿಳಿದಿದ್ದರೂ, “ದೇಶದ 2 ನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಮತ್ತು ಉಪರಾಷ್ಟ್ರಪತಿ ವಿರುದ್ಧ ದೋಷಾರೋಪಣೆಗಾಗಿ ಮಾತ್ರ” ಪ್ರತಿಪಕ್ಷಗಳು ನಿರ್ಣಯವನ್ನು ಮಂಡಿಸಿವೆ ಎಂದು ಉಪ ಸ್ಪೀಕರ್ ಹೇಳಿದ್ದಾರೆ.

ಇದನ್ನೂ ಓದಿ: ನರಸಿಂಗಾನಂದ್ ವಿರುದ್ಧ FIR ದಾಖಲಿಸುವ ಬದಲು ಎಕ್ಸ್‌ನಲ್ಲಿ ಏಕೆ ಪೋಸ್ಟ್ ಮಾಡಿದಿರಿ? – ಆಲ್ಟ್‌ನ್ಯೂಸ್ ಜುಬೇರ್‌ಗೆ ಹೈಕೋರ್ಟ್ ಪ್ರಶ್ನೆ

ನರಸಿಂಗಾನಂದ್ ವಿರುದ್ಧ FIR ದಾಖಲಿಸುವ ಬದಲು ಎಕ್ಸ್‌ನಲ್ಲಿ ಏಕೆ ಪೋಸ್ಟ್ ಮಾಡಿದಿರಿ? – ಆಲ್ಟ್‌ನ್ಯೂಸ್ ಜುಬೇರ್‌ಗೆ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...