Homeಮುಖಪುಟಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿಯಾಗಿ ಬಿಜೆಪಿ ನಾಯಕ ಸಿ.ಪಿ ರಾಧಾಕೃಷ್ಣನ್ ಆಯ್ಕೆ

ಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿಯಾಗಿ ಬಿಜೆಪಿ ನಾಯಕ ಸಿ.ಪಿ ರಾಧಾಕೃಷ್ಣನ್ ಆಯ್ಕೆ

- Advertisement -
- Advertisement -

ಸೆಪ್ಟೆಂಬರ್ 9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಅಭ್ಯರ್ಥಿಯಾಗಿ ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ (ಆ.17) ಘೋಷಿಸಿದೆ.

ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಧಾಕೃಷ್ಣನ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.

“ಮುಂದಿನ ಉಪರಾಷ್ಟ್ರಪತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಬೇಕೆಂದು ನಾವು ಬಯಸುತ್ತೇವೆ, ನಾವು ವಿರೋಧ ಪಕ್ಷದ ನಾಯಕರನ್ನು ಸಂಪರ್ಕಿಸಿದ್ದೇವೆ” ಎಂದು ರಾಧಾಕೃಷ್ಣನ್ ಅವರ ಹೆಸರನ್ನು ಘೋಷಿಸುತ್ತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ ನಡ್ಡಾ ಹೇಳಿದ್ದಾರೆ.

“ಸಿ.ಪಿ ರಾಧಾಕೃಷ್ಣನ್ ಅವರು ಒಬ್ಬ ಹಿರಿಯ, ಗೌರವಾನ್ವಿತ ವ್ಯಕ್ತಿ. ತಮಿಳುನಾಡಿನಲ್ಲಿ ಸಮಾಜದ ಎಲ್ಲಾ ವರ್ಗಗಳ ಜನರ ಗೌರವವನ್ನು ಅವರು ಗಳಿಸಿದ್ದಾರೆ” ಎಂದಿದ್ದಾರೆ.

ಮೈತ್ರಿಕೂಟದ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಎನ್‌ಡಿಎ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಅಧಿಕಾರ ನೀಡಿತ್ತು.

ಅವರು ಸ್ಪೂರ್ತಿದಾಯಕ ಉಪರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸವಿದೆ : ಮೋದಿ

ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿದ ಬಳಿಕ, ಪ್ರಧಾನಿ ಮೋದಿ ಅವರು ರಾಧಾಕೃಷ್ಣನ್ ಅವರನ್ನು ಶ್ಲಾಘಿಸಿದ್ದು, ಅವರು “ಸ್ಪೂರ್ತಿದಾಯಕ ಉಪರಾಷ್ಟ್ರಪತಿ” ಆಗುತ್ತಾರೆ ಎಂದು ಹೇಳಿದ್ದಾರೆ.

“ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಸಿ.ಪಿ ರಾಧಾಕೃಷ್ಣನ್ ಅವರು ಸಮರ್ಪಣೆ, ನಮ್ರತೆ ಮತ್ತು ಬುದ್ಧಿಶಕ್ತಿಯಿಂದ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ಅವರು ನಿರ್ವಹಿಸಿದ ವಿವಿಧ ಹುದ್ದೆಗಳಲ್ಲಿ, ಯಾವಾಗಲೂ ಸಮುದಾಯ ಸೇವೆ ಮತ್ತು ಅಂಚಿನಲ್ಲಿರುವವರ ಸಬಲೀಕರಣದತ್ತ ಗಮನಹರಿಸಿದ್ದಾರೆ” ಎಂದಿದ್ದಾರೆ.

“ಅವರು ತಮಿಳುನಾಡಿನಲ್ಲಿ ತಳಮಟ್ಟದಲ್ಲಿ ವ್ಯಾಪಕ ಕೆಲಸ ಮಾಡಿದ್ದಾರೆ. ಎನ್‌ಡಿಎ ಕುಟುಂಬವು ಅವರನ್ನು ನಮ್ಮ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಲು ನಿರ್ಧರಿಸಿದ್ದಕ್ಕೆ ನನಗೆ ಸಂತೋಷವಾಗಿದೆ” ಎಂದು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಸಿ.ಪಿ ರಾಧಾಕೃಷ್ಣನ್ ಅವರು ವಿವಿಧ ರಾಜ್ಯಗಳ ಸಂಸದರಾಗಿ ಮತ್ತು ರಾಜ್ಯಪಾಲರಾಗಿ ಶ್ರೀಮಂತ ಅನುಭವ ಹೊಂದಿದ್ದಾರೆ. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಚುರುಕಾಗಿದ್ದವು. ರಾಜ್ಯಪಾಲರಾಗಿದ್ದ ಅವಧಿಯಲ್ಲಿ, ಅವರು ಸಾಮಾನ್ಯ ನಾಗರಿಕರು ಎದುರಿಸುವ ಸವಾಲುಗಳನ್ನು ಪರಿಹರಿಸುವತ್ತ ಗಮನಹರಿಸಿದ್ದರು. ಈ ಅನುಭವಗಳು ಅವರಿಗೆ ಶಾಸಕಾಂಗ ಮತ್ತು ಸಾಂವಿಧಾನಿಕ ವಿಷಯಗಳ ಬಗ್ಗೆ ಅಪಾರ ಜ್ಞಾನವಿದೆ ಎಂಬುವುದನ್ನು ಖಚಿತಪಡಿಸಿದೆ. ‘ಅವರು ಸ್ಪೂರ್ತಿದಾಯಕ ಉಪರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸ ನನಗಿದೆ’ ಎಂದು ಮೋದಿ ಹೇಳಿದ್ದಾರೆ.

ಇಂದು (ಸೋಮವಾರ) ಇಂಡಿಯಾ ಮೈತ್ರಿಕೂಟದ ಸಭೆ

ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಿ ಎನ್‌ಡಿಎ ಒಕ್ಕೂಟ ಸಿ.ಪಿ ರಾಧಾಕೃಷ್ಣನ್ ಅವರನ್ನು ಆಯ್ಕೆ ಮಾಡಿದರೆ, ಇತ್ತ ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾ ತಮ್ಮ ಅಭ್ಯರ್ಥಿ ಆಯ್ಕೆಗೆ ಇಂದು (ಆ.18 ಸೋಮವಾರ ) ಸಭೆ ನಡೆಸಲಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿಯ ಮನೆಯಲ್ಲಿ ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷಗಳ ನಾಯಕರು ಸಭೆ ಸೇರಿ ಚರ್ಚೆ ನಡೆಸಲಿದ್ದು, ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಸಾಧ್ಯತೆ ಇದೆ.

ಇದರ ಜೊತೆಗೆ, ಸ್ವಾತಂತ್ರ್ಯ ದಿನಾಚರಣೆ ವಿರಾಮದ ಬಳಿಕ ಮುಂದುವರಿಯುವ ಸಂಸತ್ ಅಧಿವೇಶದಲ್ಲಿ ವಿರೋಧ ಪಕ್ಷಗಳ ಕಾರ್ಯತಂತ್ರ, ಬಿಹಾರದಲ್ಲಿ ಎಸ್‌ಐಆರ್ ಮತ್ತು ಮತಗಳ್ಳತನದ ವಿರುದ್ದ ರಾಹುಲ್ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ‘ವೋಟರ್ ಅಧಿಕಾರ್ ಯಾತ್ರೆ’ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ.

ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರನ್ನು ಒಳಗೊಂಡ ಉಪರಾಷ್ಟ್ರಪತಿ ಆಯ್ಕೆ ಚುನಾವಣಾ ಪ್ರಕ್ರಿಯೆಯಲ್ಲಿ ಬಹುಮತ ಹೊಂದಿರುವ ಎನ್‌ಡಿಎ, ಸುಲಭ ಗೆಲುವು ಸಾಧಿಸುವ ನಿರೀಕ್ಷೆಯಿದೆ.

ವಿಶೇಷವಾಗಿ, ಎನ್‌ಡಿಎ ತನ್ನ ಒಕ್ಕೂಟದ ಎಲ್ಲಾ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳನ್ನು ಆಗಸ್ಟ್ 21 ರಂದು ನಡೆಯಲಿರುವ ಸಿಪಿ ರಾಧಾಕೃಷ್ಣನ್ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ದೆಹಲಿಗೆ ಆಹ್ವಾನಿಸಿದೆ.

ಸಿಪಿ ರಾಧಾಕೃಷ್ಣನ್ ಯಾರು?

ಚಂದ್ರಾಪುರಂ ಪೊನ್ನುಸ್ವಾಮಿ (ಸಿಪಿ) ರಾಧಾಕೃಷ್ಣನ್ ಅವರು ಪ್ರಸ್ತುತ ಮಹಾರಾಷ್ಟ್ರದ 24ನೇ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಜುಲೈ 31, 2024 ರಂದು ಈ ಹುದ್ದೆಯನ್ನು ವಹಿಸಿಕೊಂಡಿದ್ದಾರೆ.

ರಾಧಾಕೃಷ್ಣನ್ ಈ ಹಿಂದೆ ಫೆಬ್ರವರಿ 2023ರಿಂದ ಜುಲೈ 2024ರವರೆಗೆ ಜಾರ್ಖಂಡ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಮಾರ್ಚ್ ಮತ್ತು ಜುಲೈ 2024ರ ನಡುವೆ ತೆಲಂಗಾಣದ ರಾಜ್ಯಪಾಲರಾಗಿ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿಯನ್ನು ಹೊಂದಿದ್ದರು.

ಬಿಜೆಪಿಯ ಹಿರಿಯ ನಾಯಕರಾದ ರಾಧಾಕೃಷ್ಣನ್, ಕೊಯಮತ್ತೂರಿನಿಂದ ಎರಡು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು ಮತ್ತು ಈ ಹಿಂದೆ ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಸೆಪ್ಟೆಂಬರ್ 9ರಂದು ಉಪರಾಷ್ಟ್ರಪತಿ ಆಯ್ಕೆಗೆ ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ. ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆಗಸ್ಟ್ 25 ರವರೆಗೆ ತಮ್ಮ ನಾಮಪತ್ರಗಳನ್ನು ಹಿಂಪಡೆಯಬಹುದು.

ಸಂವಿಧಾನ ಅಪಾಯದಲ್ಲಿದೆ, ಬಿಜೆಪಿ ಅಧಿಕಾರದಲ್ಲಿರುವವರೆಗೆ ಜನರ ಹಕ್ಕುಗಳು ಸುರಕ್ಷಿತವಲ್ಲ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...