Homeಮುಖಪುಟಇಂದು ಉಪರಾಷ್ಟ್ರಪತಿ ಚುನಾವಣೆ: ಕನಿಷ್ಠ 12 ಸಂಸದರು ಮತದಾನದಿಂದ ದೂರ ಉಳಿಯುವ ಸಾಧ್ಯತೆ

ಇಂದು ಉಪರಾಷ್ಟ್ರಪತಿ ಚುನಾವಣೆ: ಕನಿಷ್ಠ 12 ಸಂಸದರು ಮತದಾನದಿಂದ ದೂರ ಉಳಿಯುವ ಸಾಧ್ಯತೆ

- Advertisement -
- Advertisement -

ಜಗದೀಪ್ ಧನಕರ್ ಅವರ ಹಠಾತ್ ರಾಜೀನಾಮೆಯಿಂದ ತೆರವಾದ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು (ಸೆ.9, ಮಂಗಳವಾರ) ಚುನಾವಣೆ ನಡೆಯಲಿದೆ.

ಆಡಳಿತರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಕಣದಲ್ಲಿದ್ದು, ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ (ನಿವೃತ್ತ) ಬಿ. ಸುದರ್ಶನ್ ರೆಡ್ಡಿ ಅವರು ಸ್ಪರ್ಧಿಸಿದ್ದಾರೆ.

ವರದಿಗಳ ಪ್ರಕಾರ, ಎರಡು ಪ್ರಮುಖ ಪಕ್ಷಗಳ ಸುಮಾರು 12 ಸಂಸದರು ಮತದಾನದಿಂದ ದೂರ ಉಳಿಯುವ ಸಾಧ್ಯತೆ ಇದೆ. ಏಳು ಸದಸ್ಯರ ಬಿಜು ಜನತಾದಳ (ಬಿಜೆಡಿ) ಮತ್ತು ನಾಲ್ವರು ಸದಸ್ಯರ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ತಟಸ್ಥವಾಗಿರಲು ನಿರ್ಧರಿಸಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇನ್ನು ಸಂಖ್ಯಾಬಲ ಆಡಳಿತರೂಢ ಎನ್‌ಡಿಎ ಪರವಾಗಿದೆ. ಎನ್‌ಡಿಎ 425 ಸಂಸದರನ್ನು ಹೊಂದಿದ್ದರೆ, ವಿರೋಧ ಪಕ್ಷಕ್ಕೆ 324 ಸಂಸದರ ಬೆಂಬಲ ಇದೆ.

ಚುನಾವಣಾ ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸಲು ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಮತದಾನದ ಮುನ್ನಾದಿನದಂದು ತಮ್ಮ ತಮ್ಮ ಸಂಸದರೊಂದಿಗೆ ಪ್ರತ್ಯೇಕ ಸಭೆಗಳನ್ನು ನಡೆಸಿವೆ ಮತ್ತು ಅಣಕು ಸಮೀಕ್ಷೆಯನ್ನು ಸಹ ನಡೆಸಿವೆ. ಒಂದೇ ಒಂದು ಮತ ಕೂಡ ವ್ಯರ್ಥ ಮಾಡದೆ ಸರಿಯಾಗಿ ಚಲಾಯಿಸುವಂತೆ ಪ್ರಧಾನಿ ಮೋದಿ ಎನ್‌ಡಿಎ ಸಂಸದರಿಗೆ ಮನವಿ ಮಾಡಿದ್ದಾರೆ.

ಎನ್‌ಡಿ ಅಥವಾ ಇಂಡಿಯಾ ಬಣದ ಭಾಗವಲ್ಲದ ಪಕ್ಷಗಳಲ್ಲಿ, ಸಂಸತ್ತಿನಲ್ಲಿ 11 ಸದಸ್ಯರನ್ನು ಹೊಂದಿರುವ ವೈಎಸ್‌ಆರ್‌ ಕಾಂಗ್ರೆಸ್ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಿದೆ. ಬಿಜೆಡಿ ಮತ್ತು ಬಿಆರ್‌ಎಸ್‌ ಮತದಾನದಿಂದ ದೂರವಿರಲು ನಿರ್ಧರಿಸಿವೆ.

ಪ್ರಸ್ತುತ ಒಟ್ಟು ಮತಗಳ ಸಂಖ್ಯೆ 781 (ರಾಜ್ಯಸಭೆಯಿಂದ 238 ಮತ್ತು ಲೋಕಸಭೆಯಿಂದ 542) ಇದೆ. ಒಂದು ಲೋಕಸಭೆ ಮತ್ತು ಆರು ರಾಜ್ಯಸಭಾ ಸ್ಥಾನಗಳು ಪ್ರಸ್ತುತ ಖಾಲಿ ಇವೆ. ಹಾಗಾಗಿ, ಬಹುಮತದ ಸಂಖ್ಯೆ 391 ಆಗಿದೆ.

ಎಸ್‌ಎಡಿ ಸದಸ್ಯರೊಬ್ಬರು ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಲೋಕಸಭೆಯಲ್ಲಿರುವ ಏಳು ಸ್ವತಂತ್ರ ಸದಸ್ಯರಲ್ಲಿ ಮೂವರು ತಮ್ಮ ನಿಲುವನ್ನು ಇನ್ನೂ ಬಹಿರಂಗಪಡಿಸಿಲ್ಲ. ಮತ್ತೊಂದು ಬೆಳವಣಿಗೆಯೆಂದರೆ, ಆರ್‌ಎಲ್‌ಪಿ ಸಂಸದ ಹನುಮಾನ್ ಬೇನಿವಾಲ್ ಮತ್ತು ಆಜಾದ್ ಸಮಾಜ ಪಕ್ಷದ ಸಂಸದ ಚಂದ್ರಶೇಖರ್ ಆಜಾದ್ ಅವರು ಸೋಮವಾರ ಸಂಜೆ ತಡವಾಗಿ ಇಂಡಿಯಾ ಅಭ್ಯರ್ಥಿ ಸುದರ್ಶನ್ ರೆಡ್ಡಿ ಅವರನ್ನು ಭೇಟಿಯಾಗಿದ್ದಾರೆ. ಹಾಗಾಗಿ, ಅವರ ಬೆಂಬಲ ರೆಡ್ಡಿ ಅವರಿಗೆ ಸಿಗುವ ಸಾಧ್ಯತೆ ಇದೆ.

ಸಂಸದರು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸಂಸತ್ ಭವನದಲ್ಲಿ ತಮ್ಮ ಮತ ಚಲಾಯಿಸಲಿದ್ದಾರೆ. ಬಳಿಕ ಫಲಿತಾಂಶ ಪ್ರಕಟಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಮೊದಲ ಮತ ಚಲಾಯಿಸಲಿದ್ದಾರೆ.

BREAKING| ಬಿಹಾರ ಮತದಾರರಿಗೆ ಸಿಹಿ ಸುದ್ದಿ: ಗುರುತಿನ ಪುರಾವೆಯಾಗಿ ಆಧಾರ್ ಕಾರ್ಡ್ ಮಾನ್ಯವೆಂದು ಸುಪ್ರೀಂ ಕೋರ್ಟ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...