Homeಮುಖಪುಟಇಂದು ಉಪರಾಷ್ಟ್ರಪತಿ ಚುನಾವಣೆ: ಕನಿಷ್ಠ 12 ಸಂಸದರು ಮತದಾನದಿಂದ ದೂರ ಉಳಿಯುವ ಸಾಧ್ಯತೆ

ಇಂದು ಉಪರಾಷ್ಟ್ರಪತಿ ಚುನಾವಣೆ: ಕನಿಷ್ಠ 12 ಸಂಸದರು ಮತದಾನದಿಂದ ದೂರ ಉಳಿಯುವ ಸಾಧ್ಯತೆ

- Advertisement -
- Advertisement -

ಜಗದೀಪ್ ಧನಕರ್ ಅವರ ಹಠಾತ್ ರಾಜೀನಾಮೆಯಿಂದ ತೆರವಾದ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು (ಸೆ.9, ಮಂಗಳವಾರ) ಚುನಾವಣೆ ನಡೆಯಲಿದೆ.

ಆಡಳಿತರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಕಣದಲ್ಲಿದ್ದು, ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ (ನಿವೃತ್ತ) ಬಿ. ಸುದರ್ಶನ್ ರೆಡ್ಡಿ ಅವರು ಸ್ಪರ್ಧಿಸಿದ್ದಾರೆ.

ವರದಿಗಳ ಪ್ರಕಾರ, ಎರಡು ಪ್ರಮುಖ ಪಕ್ಷಗಳ ಸುಮಾರು 12 ಸಂಸದರು ಮತದಾನದಿಂದ ದೂರ ಉಳಿಯುವ ಸಾಧ್ಯತೆ ಇದೆ. ಏಳು ಸದಸ್ಯರ ಬಿಜು ಜನತಾದಳ (ಬಿಜೆಡಿ) ಮತ್ತು ನಾಲ್ವರು ಸದಸ್ಯರ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ತಟಸ್ಥವಾಗಿರಲು ನಿರ್ಧರಿಸಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇನ್ನು ಸಂಖ್ಯಾಬಲ ಆಡಳಿತರೂಢ ಎನ್‌ಡಿಎ ಪರವಾಗಿದೆ. ಎನ್‌ಡಿಎ 425 ಸಂಸದರನ್ನು ಹೊಂದಿದ್ದರೆ, ವಿರೋಧ ಪಕ್ಷಕ್ಕೆ 324 ಸಂಸದರ ಬೆಂಬಲ ಇದೆ.

ಚುನಾವಣಾ ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸಲು ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಮತದಾನದ ಮುನ್ನಾದಿನದಂದು ತಮ್ಮ ತಮ್ಮ ಸಂಸದರೊಂದಿಗೆ ಪ್ರತ್ಯೇಕ ಸಭೆಗಳನ್ನು ನಡೆಸಿವೆ ಮತ್ತು ಅಣಕು ಸಮೀಕ್ಷೆಯನ್ನು ಸಹ ನಡೆಸಿವೆ. ಒಂದೇ ಒಂದು ಮತ ಕೂಡ ವ್ಯರ್ಥ ಮಾಡದೆ ಸರಿಯಾಗಿ ಚಲಾಯಿಸುವಂತೆ ಪ್ರಧಾನಿ ಮೋದಿ ಎನ್‌ಡಿಎ ಸಂಸದರಿಗೆ ಮನವಿ ಮಾಡಿದ್ದಾರೆ.

ಎನ್‌ಡಿ ಅಥವಾ ಇಂಡಿಯಾ ಬಣದ ಭಾಗವಲ್ಲದ ಪಕ್ಷಗಳಲ್ಲಿ, ಸಂಸತ್ತಿನಲ್ಲಿ 11 ಸದಸ್ಯರನ್ನು ಹೊಂದಿರುವ ವೈಎಸ್‌ಆರ್‌ ಕಾಂಗ್ರೆಸ್ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಿದೆ. ಬಿಜೆಡಿ ಮತ್ತು ಬಿಆರ್‌ಎಸ್‌ ಮತದಾನದಿಂದ ದೂರವಿರಲು ನಿರ್ಧರಿಸಿವೆ.

ಪ್ರಸ್ತುತ ಒಟ್ಟು ಮತಗಳ ಸಂಖ್ಯೆ 781 (ರಾಜ್ಯಸಭೆಯಿಂದ 238 ಮತ್ತು ಲೋಕಸಭೆಯಿಂದ 542) ಇದೆ. ಒಂದು ಲೋಕಸಭೆ ಮತ್ತು ಆರು ರಾಜ್ಯಸಭಾ ಸ್ಥಾನಗಳು ಪ್ರಸ್ತುತ ಖಾಲಿ ಇವೆ. ಹಾಗಾಗಿ, ಬಹುಮತದ ಸಂಖ್ಯೆ 391 ಆಗಿದೆ.

ಎಸ್‌ಎಡಿ ಸದಸ್ಯರೊಬ್ಬರು ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಲೋಕಸಭೆಯಲ್ಲಿರುವ ಏಳು ಸ್ವತಂತ್ರ ಸದಸ್ಯರಲ್ಲಿ ಮೂವರು ತಮ್ಮ ನಿಲುವನ್ನು ಇನ್ನೂ ಬಹಿರಂಗಪಡಿಸಿಲ್ಲ. ಮತ್ತೊಂದು ಬೆಳವಣಿಗೆಯೆಂದರೆ, ಆರ್‌ಎಲ್‌ಪಿ ಸಂಸದ ಹನುಮಾನ್ ಬೇನಿವಾಲ್ ಮತ್ತು ಆಜಾದ್ ಸಮಾಜ ಪಕ್ಷದ ಸಂಸದ ಚಂದ್ರಶೇಖರ್ ಆಜಾದ್ ಅವರು ಸೋಮವಾರ ಸಂಜೆ ತಡವಾಗಿ ಇಂಡಿಯಾ ಅಭ್ಯರ್ಥಿ ಸುದರ್ಶನ್ ರೆಡ್ಡಿ ಅವರನ್ನು ಭೇಟಿಯಾಗಿದ್ದಾರೆ. ಹಾಗಾಗಿ, ಅವರ ಬೆಂಬಲ ರೆಡ್ಡಿ ಅವರಿಗೆ ಸಿಗುವ ಸಾಧ್ಯತೆ ಇದೆ.

ಸಂಸದರು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸಂಸತ್ ಭವನದಲ್ಲಿ ತಮ್ಮ ಮತ ಚಲಾಯಿಸಲಿದ್ದಾರೆ. ಬಳಿಕ ಫಲಿತಾಂಶ ಪ್ರಕಟಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಮೊದಲ ಮತ ಚಲಾಯಿಸಲಿದ್ದಾರೆ.

BREAKING| ಬಿಹಾರ ಮತದಾರರಿಗೆ ಸಿಹಿ ಸುದ್ದಿ: ಗುರುತಿನ ಪುರಾವೆಯಾಗಿ ಆಧಾರ್ ಕಾರ್ಡ್ ಮಾನ್ಯವೆಂದು ಸುಪ್ರೀಂ ಕೋರ್ಟ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...