Homeಮುಖಪುಟಇಂದು ಉಪರಾಷ್ಟ್ರಪತಿ ಚುನಾವಣೆ: ಕನಿಷ್ಠ 12 ಸಂಸದರು ಮತದಾನದಿಂದ ದೂರ ಉಳಿಯುವ ಸಾಧ್ಯತೆ

ಇಂದು ಉಪರಾಷ್ಟ್ರಪತಿ ಚುನಾವಣೆ: ಕನಿಷ್ಠ 12 ಸಂಸದರು ಮತದಾನದಿಂದ ದೂರ ಉಳಿಯುವ ಸಾಧ್ಯತೆ

- Advertisement -
- Advertisement -

ಜಗದೀಪ್ ಧನಕರ್ ಅವರ ಹಠಾತ್ ರಾಜೀನಾಮೆಯಿಂದ ತೆರವಾದ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು (ಸೆ.9, ಮಂಗಳವಾರ) ಚುನಾವಣೆ ನಡೆಯಲಿದೆ.

ಆಡಳಿತರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಕಣದಲ್ಲಿದ್ದು, ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ (ನಿವೃತ್ತ) ಬಿ. ಸುದರ್ಶನ್ ರೆಡ್ಡಿ ಅವರು ಸ್ಪರ್ಧಿಸಿದ್ದಾರೆ.

ವರದಿಗಳ ಪ್ರಕಾರ, ಎರಡು ಪ್ರಮುಖ ಪಕ್ಷಗಳ ಸುಮಾರು 12 ಸಂಸದರು ಮತದಾನದಿಂದ ದೂರ ಉಳಿಯುವ ಸಾಧ್ಯತೆ ಇದೆ. ಏಳು ಸದಸ್ಯರ ಬಿಜು ಜನತಾದಳ (ಬಿಜೆಡಿ) ಮತ್ತು ನಾಲ್ವರು ಸದಸ್ಯರ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ತಟಸ್ಥವಾಗಿರಲು ನಿರ್ಧರಿಸಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇನ್ನು ಸಂಖ್ಯಾಬಲ ಆಡಳಿತರೂಢ ಎನ್‌ಡಿಎ ಪರವಾಗಿದೆ. ಎನ್‌ಡಿಎ 425 ಸಂಸದರನ್ನು ಹೊಂದಿದ್ದರೆ, ವಿರೋಧ ಪಕ್ಷಕ್ಕೆ 324 ಸಂಸದರ ಬೆಂಬಲ ಇದೆ.

ಚುನಾವಣಾ ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸಲು ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಮತದಾನದ ಮುನ್ನಾದಿನದಂದು ತಮ್ಮ ತಮ್ಮ ಸಂಸದರೊಂದಿಗೆ ಪ್ರತ್ಯೇಕ ಸಭೆಗಳನ್ನು ನಡೆಸಿವೆ ಮತ್ತು ಅಣಕು ಸಮೀಕ್ಷೆಯನ್ನು ಸಹ ನಡೆಸಿವೆ. ಒಂದೇ ಒಂದು ಮತ ಕೂಡ ವ್ಯರ್ಥ ಮಾಡದೆ ಸರಿಯಾಗಿ ಚಲಾಯಿಸುವಂತೆ ಪ್ರಧಾನಿ ಮೋದಿ ಎನ್‌ಡಿಎ ಸಂಸದರಿಗೆ ಮನವಿ ಮಾಡಿದ್ದಾರೆ.

ಎನ್‌ಡಿ ಅಥವಾ ಇಂಡಿಯಾ ಬಣದ ಭಾಗವಲ್ಲದ ಪಕ್ಷಗಳಲ್ಲಿ, ಸಂಸತ್ತಿನಲ್ಲಿ 11 ಸದಸ್ಯರನ್ನು ಹೊಂದಿರುವ ವೈಎಸ್‌ಆರ್‌ ಕಾಂಗ್ರೆಸ್ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಿದೆ. ಬಿಜೆಡಿ ಮತ್ತು ಬಿಆರ್‌ಎಸ್‌ ಮತದಾನದಿಂದ ದೂರವಿರಲು ನಿರ್ಧರಿಸಿವೆ.

ಪ್ರಸ್ತುತ ಒಟ್ಟು ಮತಗಳ ಸಂಖ್ಯೆ 781 (ರಾಜ್ಯಸಭೆಯಿಂದ 238 ಮತ್ತು ಲೋಕಸಭೆಯಿಂದ 542) ಇದೆ. ಒಂದು ಲೋಕಸಭೆ ಮತ್ತು ಆರು ರಾಜ್ಯಸಭಾ ಸ್ಥಾನಗಳು ಪ್ರಸ್ತುತ ಖಾಲಿ ಇವೆ. ಹಾಗಾಗಿ, ಬಹುಮತದ ಸಂಖ್ಯೆ 391 ಆಗಿದೆ.

ಎಸ್‌ಎಡಿ ಸದಸ್ಯರೊಬ್ಬರು ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಲೋಕಸಭೆಯಲ್ಲಿರುವ ಏಳು ಸ್ವತಂತ್ರ ಸದಸ್ಯರಲ್ಲಿ ಮೂವರು ತಮ್ಮ ನಿಲುವನ್ನು ಇನ್ನೂ ಬಹಿರಂಗಪಡಿಸಿಲ್ಲ. ಮತ್ತೊಂದು ಬೆಳವಣಿಗೆಯೆಂದರೆ, ಆರ್‌ಎಲ್‌ಪಿ ಸಂಸದ ಹನುಮಾನ್ ಬೇನಿವಾಲ್ ಮತ್ತು ಆಜಾದ್ ಸಮಾಜ ಪಕ್ಷದ ಸಂಸದ ಚಂದ್ರಶೇಖರ್ ಆಜಾದ್ ಅವರು ಸೋಮವಾರ ಸಂಜೆ ತಡವಾಗಿ ಇಂಡಿಯಾ ಅಭ್ಯರ್ಥಿ ಸುದರ್ಶನ್ ರೆಡ್ಡಿ ಅವರನ್ನು ಭೇಟಿಯಾಗಿದ್ದಾರೆ. ಹಾಗಾಗಿ, ಅವರ ಬೆಂಬಲ ರೆಡ್ಡಿ ಅವರಿಗೆ ಸಿಗುವ ಸಾಧ್ಯತೆ ಇದೆ.

ಸಂಸದರು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸಂಸತ್ ಭವನದಲ್ಲಿ ತಮ್ಮ ಮತ ಚಲಾಯಿಸಲಿದ್ದಾರೆ. ಬಳಿಕ ಫಲಿತಾಂಶ ಪ್ರಕಟಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಮೊದಲ ಮತ ಚಲಾಯಿಸಲಿದ್ದಾರೆ.

BREAKING| ಬಿಹಾರ ಮತದಾರರಿಗೆ ಸಿಹಿ ಸುದ್ದಿ: ಗುರುತಿನ ಪುರಾವೆಯಾಗಿ ಆಧಾರ್ ಕಾರ್ಡ್ ಮಾನ್ಯವೆಂದು ಸುಪ್ರೀಂ ಕೋರ್ಟ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...