Homeಮುಖಪುಟಅತ್ಯಾಚಾರದ ದೂರು ದಾಖಲಿಸಲು 900 ಕಿ.ಮೀ ಪ್ರಯಾಣಿಸಿದ ಸಂತ್ರಸ್ತೆ!

ಅತ್ಯಾಚಾರದ ದೂರು ದಾಖಲಿಸಲು 900 ಕಿ.ಮೀ ಪ್ರಯಾಣಿಸಿದ ಸಂತ್ರಸ್ತೆ!

ಸಂತ್ರಸ್ತೆಯು ಲಖೌನದ ಠಾಣೆಯೊಂದರಲ್ಲಿ ದೂರು ನೀಡಲು ಮುಂದಾಗಿದ್ದಾಳೆ. ಆದರೆ ಪೊಲೀಸರು ದೂರು ದಾಖಲಿಸುವ ಬದಲು ರಾಜಿ ಮಾಡಿಕೊಳ್ಳಲು ಸೂಚಿಸಿದ್ದರು.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ದೇಶಾದ್ಯಂತ ಹೋರಾಟ ನಡೆಯುತ್ತಿರುವುದರ ನಡುವೆಯೆ ಮತ್ತೊಂದು ಅಮಾನುಷ ಅತ್ಯಾಚಾರದ ಪ್ರಕರಣ ಲಖನೌದಲ್ಲಿ ವರದಿಯಾಗಿದೆ. 22 ವರ್ಷದ ನೇಪಾಳಿ ಯುವತಿ ತನ್ನ ಪರಿಚಯಸ್ಥರಿಂದಲೇ ಪದೇ ಪದೇ ಲೈಂಗಿಕ ಕಿರುಕುಳ ಅನುಭವಿಸಿದ್ದಾಳೆ. ಕೊನೆಗೆ  ತನಗಾದ ಅನ್ಯಾಯದ ಬಗ್ಗೆ ದೂರು ದಾಖಲಿಸಲು ಆಕೆ ಬರೋಬ್ಬರಿ 900 ಕಿ.ಮೀ ದೂರದಲ್ಲಿರುವ ನಾಗ್ಪುರಕ್ಕೆ ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಿಸಿದ್ದಾಳೆ..

ಎರಡು ವರ್ಷಗಳ ಹಿಂದೆ ಕೆಲಸ ಅರಸಿ ಭಾರತಕ್ಕೆ ಬಂದಿದ್ದ ಯುವತಿಯ ಮೇಲೆ ಪ್ರವೀಣ್‌ ರಾಜ್‌ಪಾಲ್ ಯಾದವ್‌ ಎಂಬ ವ್ಯಕ್ತಿ ಅತ್ಯಾಚಾರ ನಡೆಸಿದ್ದ. ತನ್ನ ಮೊಬೈಲ್‌ನಲ್ಲಿ ಯುವತಿಯ ಆಕ್ಷೇಪಾರ್ಹ ಚಿತ್ರಗಳನ್ನು ಸೆರೆಹಿಡಿದುಕೊಂಡಿದ್ದಲ್ಲದೆ ವಿಡಿಯೊ ಕೂಡ ಚಿತ್ರಿಸಿಕೊಂಡಿದ್ದು, ಪೊಲೀಸರಿಗೆ ದೂರ ನೀಡದಂತೆ ಬ್ಲಾಕ್ ಮೇಲ್ ಮಾಡುತ್ತಿದ್ದ ಎಂದು ಯುವತಿ ಆರೋಪಿಸಿದ್ದಾಳೆ.

ಕಿರುಕುಳ ತಾಳಲಾರದೇ ಸಂತ್ರಸ್ತೆಯು ಲಖೌನದ ಠಾಣೆಯೊಂದರಲ್ಲಿ ದೂರು ನೀಡಲು ಮುಂದಾಗಿದ್ದಾಳೆ. ಆದರೆ ಆರೋಪಿ ಪ್ರವೀಣ್ ಯಾದವ್ ಸ್ಥಳೀಯ ಪೊಲೀಸರೊಂದಿಗೆ ಸಂಪರ್ಕ ಹೊಂದಿದ್ದರಿಂದ, ಪೊಲೀಸರು ದೂರು ದಾಖಲಿಸುವ ಬದಲು ರಾಜಿ ಮಾಡಿಕೊಳ್ಳಲು ಸೂಚಿಸಿದ್ದಾರೆ. ಕೊನೆಗೆ ನಾಗ್ಪುರದಲ್ಲಿ ವಾಸಿಸುತ್ತಿರುವ ತನ್ನ ನೇಪಾಳಿ ಸ್ನೇಹಿತೆ ಬಳಿಗೆ ಹೋಗುವುದು ಸೂಕ್ತವೆಂದು ತಿಳಿದು ಆರೋಪಿಯ ಕಣ್ತಪ್ಪಿಸಿ ಉತ್ತರ ಪ್ರದೇಶದ ಲಖನೌದಿಂದ ಮಹಾರಾಷ್ಟ್ರದ ನಾಗಪುರಕ್ಕೆ ಬಂದು ಅಲ್ಲಿನ ಕೊರಾಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಗುರುಗ್ರಾಮ: 25 ವರ್ಷದ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ, ತೀವ್ರ ಹಲ್ಲೆ

ಸ್ನೇಹಿತೆಯೊಬ್ಬರ ಮೂಲಕ ಆರೋಪಿ ಯಾದವ್ ಸಂತ್ರಸ್ತೆಗೆ ಈ ಹಿಂದೆ ಪರಿಚಿತರಾಗಿದ್ದಾರೆ.  ಯಾದವ್ ಆಕೆಯ ಆಕ್ಷೇಪಾರ್ಯ ಚಿತ್ರಗಳನ್ನು ಸೆರೆಹಿಡಿದು, ಆಕೆ ತನ್ನೊಂದಿಗೆ ಸಹಕರಿಸದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಸಿ ಸಂತ್ರಸ್ತೆಯನ್ನು ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ. ಅದೆಲ್ಲವನ್ನು ವಿಡಿಯೋ ಮಾಡಿಕೊಂಡು ನೇಪಾಳದ ಕಠ್ಮಂಡುವಿನಲ್ಲಿರುವ ಆಕೆಯ ಕುಟುಂಬಕ್ಕೆ ತಿಳಿಯಲು ಎಂದು ಆಕೆಯ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದ ಎಂದು ತಿಳಿದುಬಂದಿದೆ.

ಕೊರಾಡಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ವಜೀರ್ ಶೇಖ್ ಮಾತನಾಡಿ, ಯುವತಿ ದೂರು ನೀಡಲು ಕೊರಾಡಿಯ ಮಹಾದುಲಕ್ಕೆ ಬಂದಿದ್ದಾಳೆ. “ಮಹಿಳೆ ಆರಂಭದಲ್ಲಿ ಲಖನೌದಲ್ಲಿ ದೂರು ದಾಖಲಿಸಲು ಬಯಸಿದ್ದಳು ಆದರೆ ಪೊಲೀಸರು ರಾಜಿ ಮಾಡಿಕೊಳ್ಳಲು ಸೂಚಿಸಿದ್ದರಿಂದ ಯುವತಿ ಯುಪಿ ಪೊಲೀಸರ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದಾಳೆ” ಎಂದಿದ್ದಾರೆ.

ಕೊರಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಾಸವಾಗಿರುವ ಲಖನೌದಲ್ಲಿ ಈ ಘಟನೆ ನಡೆದಿದ್ದರಿಂದ ಅದನ್ನು ಈಗ ಉತ್ತರ ಪ್ರದೇಶ ಪೊಲೀಸರಿಗೆ ರವಾನಿಸಲಾಗಿದೆ ಎಂದು ನಗರ ಪೊಲೀಸ್ ಮುಖ್ಯಸ್ಥ ಅಮಿತೇಶ್ ಕುಮಾರ್ ತಿಳಿಸಿದ್ದಾರೆ.


ಇದನ್ನೂ ಓದಿ: ಹತ್ರಾಸ್‌‌ ಅತ್ಯಾಚಾರ: ಸಂತ್ರಸ್ಥೆಯ ತಂದೆಗೆ ಧಮಕಿ ಹಾಕುತ್ತಿರುವ ಜಿಲ್ಲಾಧಿಕಾರಿ ವಿಡಿಯೋ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...