Homeಮುಖಪುಟರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

ರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

"ಅಭಿವ್ಯಕ್ತಿ ಸ್ವಾತಂತ್ರದ ಹಕ್ಕು ಎಂದರೆ ದ್ವೇಷ ಭಾಷಣವನ್ನು ಉತ್ತೇಜಿಸುವ ಪರವಾನಗಿ ಎಂದರ್ಥವಲ್ಲ" ಎಂದು ಸಂಪಾದಕರ ಸಂಘ ತಿಳಿಸಿದೆ.

- Advertisement -
- Advertisement -

ರಿಪಬ್ಲಿಕ್ ಟಿವಿ ಪತ್ರಕರ್ತರ ವಿರುದ್ಧ ನೂರಾರು ಎಫ್‌ಐಆರ್ ದಾಖಲಾಗಿರುವುದು “ನೋವಿನ ಸಂಗತಿ” ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಟಿಆರ್‌ಪಿ ತಿರುಚಿರುವ ಪ್ರಕರಣ ಮತ್ತು ಮುಂಬೈ ಪೊಲೀಸರ ವಿರುದ್ಧ ಅಸಮಾಧಾನ ಉಂಟು ಮಾಡುವ ವಿಚಾರಗಳನ್ನು ಹರಡಿರುವ ಆರೋಪದಲ್ಲಿ ನೂರಾರು ಪತ್ರಕರ್ತರ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ “ರಿಪಬ್ಲಿಕ್ ಟಿವಿಯ ಪತ್ರಕರ್ತರ ವಿರುದ್ಧ ನೂರಾರು ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿರುವುದನ್ನು ನೋಡಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ನೋವಿನಿಂದ ಕೂಡಿದೆ” ಎಂದು ತಿಳಿಸಿದೆ.

“ನಾವು ತನಿಖೆಯ ಮೇಲೆ ಪ್ರಭಾವ ಬೀರಲು ಬಯಸುವುದಿಲ್ಲ, ತನಿಖೆಯಿಂದ ಟಿಆರ್‌ಪಿಗಳಲ್ಲಿ ಅಗತ್ಯವಾದ ಪಾರದರ್ಶಕತೆಯನ್ನು ತರುವ ಸಾಮರ್ಥ್ಯವಿದೆ ಎಂದು ನಾವು ನಂಬಿದ್ದೇವೆ. ಆದರೆ ಪತ್ರಕರ್ತರನ್ನು ಬಲಿಪಶು ಮಾಡುವುದು ತಕ್ಷಣವೇ ನಿಲ್ಲಬೇಕು. ಏಕೆಂದರೆ ಅನಿಯಂತ್ರಿತ ರಾಜ್ಯಾಧಿಕಾರ ಕೂಡ ಕೆಲಸ ಮಾಡುವ ಪತ್ರಕರ್ತರ ಹಿತಾಸಕ್ತಿಯ ಪರವಾಗಿಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ಎರಡು ದಿನಗಳಿಂದ ಮುಂಬೈ ಪೊಲೀಸ್ ಮತ್ತು ರಿಪಬ್ಲಿಕ್ ಟಿವಿ ನಡುವೆ ತೀವ್ರ ವಿವಾದ ಉಂಟಾಗಿದೆ. ರಿಪಬ್ಲಿಕ್ ಟಿವಿ ಮೇಲೆ ಟಿಆರ್‌ಪಿಗಳನ್ನು ತಿರುಚಿರುವ ಆರೋಪ ಮತ್ತು ಮುಂಬೈ ಪೊಲೀಸ್ ಆಯುಕ್ತ ಪರಮ್ ವೀರ್‌ ಸಿಂಗ್ ವಿರುದ್ಧ ಪ್ರಚೋದನಾತ್ಮಕ ಸುದ್ದಿ ಪ್ರಸಾರ ಮಾಡಿದೆ ಎಂಬ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿಯಲ್ಲಿ TRP ಹಗರಣದ ಸುದ್ದಿ ಪ್ರಸಾರವನ್ನು ತಡೆಯುವಂತೆ ಕೋರ್ಟ್‌ಗೆ‌‌ ಅರ್ಜಿ

ಮುಂಬೈ ಪೊಲೀಸ್ ಆಯುಕ್ತರ ವಿರುದ್ಧ “ಅಸಮಾಧಾನ” ಪ್ರಚೋದಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು, ರಿಪಬ್ಲಿಕ್ ಟಿವಿಯ ಪತ್ರಕರ್ತರ ವಿರುದ್ಧ ಹಲವಾರು ಎಫ್‌ಐಆರ್ ದಾಖಲಿಸಿದ್ದಾರೆ, ಅದರ ಕಾರ್ಯನಿರ್ವಾಹಕ ಸಂಪಾದಕ, ನಿರೂಪಕ, ಇಬ್ಬರು ವರದಿಗಾರರು ಮತ್ತು ಇತರ ಸಂಪಾದಕೀಯ ಸಿಬ್ಬಂದಿ ಸದಸ್ಯರ ವಿರುದ್ಧ ದೂರು ದಾಖಲಿಸಿದ್ದಾರೆ.

“ಅಭಿವ್ಯಕ್ತಿ ಸ್ವಾತಂತ್ರದ ಹಕ್ಕು ಎಂದರೆ ದ್ವೇಷ ಭಾಷಣವನ್ನು ಉತ್ತೇಜಿಸುವ ಪರವಾನಗಿ ಎಂದರ್ಥವಲ್ಲ” ಎಂದು ಸಂಪಾದಕರ ಸಂಘ ತಿಳಿಸಿದೆ. ಜೊತೆಗೆ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಅಸಹಜ ಸಾವನ್ನು ಮಾಧ್ಯಮಗಳು ವರದಿ ಮಾಡಿದ ರೀತಿಯನ್ನು ಗಿಲ್ಡ್ ಗಮನಿಸಿದೆ ಎಂದು ತಿಳಿಸಿದೆ.

ಇಂತಹ ವರದಿಗಳು “ಮಾಧ್ಯಮ ವಿಶ್ವಾಸಾರ್ಹತೆ ಮತ್ತು ವರದಿ ಮಾಡುವ ಮಿತಿಗಳ ಬಗ್ಗೆ ಸಮಸ್ಯೆಗಳನ್ನು ಹುಟ್ಟುಹಾಕುತ್ತದೆ” ಎಂದು ಗಿಲ್ಡ್ ತಿಳಿಸಿದೆ.

ಇಂತಹ ಸಮಸ್ಯೆಗಳು ಬಹಳ ಹಿಂದೆಯೇ ಪರಿಹರಿಸಬೇಕಾದ ಪ್ರಮುಖ ಸಮಸ್ಯೆಗಳಾಗಿವೆ. ಆದರೆ ಇಂದು ಉಲ್ಬಣಗೊಳಿಸಲಾಗುತ್ತಿದೆ. ಇದು ಚಾನಲ್‌ಗಳು ಜವಾಬ್ದಾರಿಯುತವಾಗಿ ವರ್ತಿಸುವ ಸಮಯ ಮತ್ತು ಅದರಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರ ಸುರಕ್ಷತೆಗೆ ಆದ್ಯತೆ ನೀಡುವ ಜೊತೆಗೆ ಮಾಧ್ಯಮಗಳ ಸಾಮೂಹಿಕ ವಿಶ್ವಾಸಾರ್ಹತೆಗೆ ಧಕ್ಕೆ ತರಬಾರದು ”ಎಂದು ಗಿಲ್ಡ್ ಹೇಳಿದೆ.

“ತನಿಖೆ ನಡೆಸುವ ಪೊಲೀಸರು ಚಾನಲ್‌ನ ಪತ್ರಕರ್ತರಿಗೆ ನೋವುಂಟು ಮಾಡುವುದು ಅಥವಾ ಯಾರನ್ನು  ಬಂಧಿಸುವುದಾಗಲಿ ಮಾಡಬಾರದು. ತನಿಖೆಯು ಮಾಧ್ಯಮ ಹಕ್ಕುಗಳನ್ನು ನಿಗ್ರಹಿಸುವ ಸಾಧನವಾಗಿ ಪರಿಣಮಿಸಬಾರದು ”ಎಂದು ಗಿಲ್ಡ್ ಹೇಳಿದೆ.


ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....