Homeಮುಖಪುಟರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

ರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

"ಅಭಿವ್ಯಕ್ತಿ ಸ್ವಾತಂತ್ರದ ಹಕ್ಕು ಎಂದರೆ ದ್ವೇಷ ಭಾಷಣವನ್ನು ಉತ್ತೇಜಿಸುವ ಪರವಾನಗಿ ಎಂದರ್ಥವಲ್ಲ" ಎಂದು ಸಂಪಾದಕರ ಸಂಘ ತಿಳಿಸಿದೆ.

- Advertisement -
- Advertisement -

ರಿಪಬ್ಲಿಕ್ ಟಿವಿ ಪತ್ರಕರ್ತರ ವಿರುದ್ಧ ನೂರಾರು ಎಫ್‌ಐಆರ್ ದಾಖಲಾಗಿರುವುದು “ನೋವಿನ ಸಂಗತಿ” ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಟಿಆರ್‌ಪಿ ತಿರುಚಿರುವ ಪ್ರಕರಣ ಮತ್ತು ಮುಂಬೈ ಪೊಲೀಸರ ವಿರುದ್ಧ ಅಸಮಾಧಾನ ಉಂಟು ಮಾಡುವ ವಿಚಾರಗಳನ್ನು ಹರಡಿರುವ ಆರೋಪದಲ್ಲಿ ನೂರಾರು ಪತ್ರಕರ್ತರ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ “ರಿಪಬ್ಲಿಕ್ ಟಿವಿಯ ಪತ್ರಕರ್ತರ ವಿರುದ್ಧ ನೂರಾರು ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿರುವುದನ್ನು ನೋಡಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ನೋವಿನಿಂದ ಕೂಡಿದೆ” ಎಂದು ತಿಳಿಸಿದೆ.

“ನಾವು ತನಿಖೆಯ ಮೇಲೆ ಪ್ರಭಾವ ಬೀರಲು ಬಯಸುವುದಿಲ್ಲ, ತನಿಖೆಯಿಂದ ಟಿಆರ್‌ಪಿಗಳಲ್ಲಿ ಅಗತ್ಯವಾದ ಪಾರದರ್ಶಕತೆಯನ್ನು ತರುವ ಸಾಮರ್ಥ್ಯವಿದೆ ಎಂದು ನಾವು ನಂಬಿದ್ದೇವೆ. ಆದರೆ ಪತ್ರಕರ್ತರನ್ನು ಬಲಿಪಶು ಮಾಡುವುದು ತಕ್ಷಣವೇ ನಿಲ್ಲಬೇಕು. ಏಕೆಂದರೆ ಅನಿಯಂತ್ರಿತ ರಾಜ್ಯಾಧಿಕಾರ ಕೂಡ ಕೆಲಸ ಮಾಡುವ ಪತ್ರಕರ್ತರ ಹಿತಾಸಕ್ತಿಯ ಪರವಾಗಿಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ಎರಡು ದಿನಗಳಿಂದ ಮುಂಬೈ ಪೊಲೀಸ್ ಮತ್ತು ರಿಪಬ್ಲಿಕ್ ಟಿವಿ ನಡುವೆ ತೀವ್ರ ವಿವಾದ ಉಂಟಾಗಿದೆ. ರಿಪಬ್ಲಿಕ್ ಟಿವಿ ಮೇಲೆ ಟಿಆರ್‌ಪಿಗಳನ್ನು ತಿರುಚಿರುವ ಆರೋಪ ಮತ್ತು ಮುಂಬೈ ಪೊಲೀಸ್ ಆಯುಕ್ತ ಪರಮ್ ವೀರ್‌ ಸಿಂಗ್ ವಿರುದ್ಧ ಪ್ರಚೋದನಾತ್ಮಕ ಸುದ್ದಿ ಪ್ರಸಾರ ಮಾಡಿದೆ ಎಂಬ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿಯಲ್ಲಿ TRP ಹಗರಣದ ಸುದ್ದಿ ಪ್ರಸಾರವನ್ನು ತಡೆಯುವಂತೆ ಕೋರ್ಟ್‌ಗೆ‌‌ ಅರ್ಜಿ

ಮುಂಬೈ ಪೊಲೀಸ್ ಆಯುಕ್ತರ ವಿರುದ್ಧ “ಅಸಮಾಧಾನ” ಪ್ರಚೋದಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು, ರಿಪಬ್ಲಿಕ್ ಟಿವಿಯ ಪತ್ರಕರ್ತರ ವಿರುದ್ಧ ಹಲವಾರು ಎಫ್‌ಐಆರ್ ದಾಖಲಿಸಿದ್ದಾರೆ, ಅದರ ಕಾರ್ಯನಿರ್ವಾಹಕ ಸಂಪಾದಕ, ನಿರೂಪಕ, ಇಬ್ಬರು ವರದಿಗಾರರು ಮತ್ತು ಇತರ ಸಂಪಾದಕೀಯ ಸಿಬ್ಬಂದಿ ಸದಸ್ಯರ ವಿರುದ್ಧ ದೂರು ದಾಖಲಿಸಿದ್ದಾರೆ.

“ಅಭಿವ್ಯಕ್ತಿ ಸ್ವಾತಂತ್ರದ ಹಕ್ಕು ಎಂದರೆ ದ್ವೇಷ ಭಾಷಣವನ್ನು ಉತ್ತೇಜಿಸುವ ಪರವಾನಗಿ ಎಂದರ್ಥವಲ್ಲ” ಎಂದು ಸಂಪಾದಕರ ಸಂಘ ತಿಳಿಸಿದೆ. ಜೊತೆಗೆ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಅಸಹಜ ಸಾವನ್ನು ಮಾಧ್ಯಮಗಳು ವರದಿ ಮಾಡಿದ ರೀತಿಯನ್ನು ಗಿಲ್ಡ್ ಗಮನಿಸಿದೆ ಎಂದು ತಿಳಿಸಿದೆ.

ಇಂತಹ ವರದಿಗಳು “ಮಾಧ್ಯಮ ವಿಶ್ವಾಸಾರ್ಹತೆ ಮತ್ತು ವರದಿ ಮಾಡುವ ಮಿತಿಗಳ ಬಗ್ಗೆ ಸಮಸ್ಯೆಗಳನ್ನು ಹುಟ್ಟುಹಾಕುತ್ತದೆ” ಎಂದು ಗಿಲ್ಡ್ ತಿಳಿಸಿದೆ.

ಇಂತಹ ಸಮಸ್ಯೆಗಳು ಬಹಳ ಹಿಂದೆಯೇ ಪರಿಹರಿಸಬೇಕಾದ ಪ್ರಮುಖ ಸಮಸ್ಯೆಗಳಾಗಿವೆ. ಆದರೆ ಇಂದು ಉಲ್ಬಣಗೊಳಿಸಲಾಗುತ್ತಿದೆ. ಇದು ಚಾನಲ್‌ಗಳು ಜವಾಬ್ದಾರಿಯುತವಾಗಿ ವರ್ತಿಸುವ ಸಮಯ ಮತ್ತು ಅದರಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರ ಸುರಕ್ಷತೆಗೆ ಆದ್ಯತೆ ನೀಡುವ ಜೊತೆಗೆ ಮಾಧ್ಯಮಗಳ ಸಾಮೂಹಿಕ ವಿಶ್ವಾಸಾರ್ಹತೆಗೆ ಧಕ್ಕೆ ತರಬಾರದು ”ಎಂದು ಗಿಲ್ಡ್ ಹೇಳಿದೆ.

“ತನಿಖೆ ನಡೆಸುವ ಪೊಲೀಸರು ಚಾನಲ್‌ನ ಪತ್ರಕರ್ತರಿಗೆ ನೋವುಂಟು ಮಾಡುವುದು ಅಥವಾ ಯಾರನ್ನು  ಬಂಧಿಸುವುದಾಗಲಿ ಮಾಡಬಾರದು. ತನಿಖೆಯು ಮಾಧ್ಯಮ ಹಕ್ಕುಗಳನ್ನು ನಿಗ್ರಹಿಸುವ ಸಾಧನವಾಗಿ ಪರಿಣಮಿಸಬಾರದು ”ಎಂದು ಗಿಲ್ಡ್ ಹೇಳಿದೆ.


ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...