Homeಮುಖಪುಟರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

ರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

"ಅಭಿವ್ಯಕ್ತಿ ಸ್ವಾತಂತ್ರದ ಹಕ್ಕು ಎಂದರೆ ದ್ವೇಷ ಭಾಷಣವನ್ನು ಉತ್ತೇಜಿಸುವ ಪರವಾನಗಿ ಎಂದರ್ಥವಲ್ಲ" ಎಂದು ಸಂಪಾದಕರ ಸಂಘ ತಿಳಿಸಿದೆ.

- Advertisement -
- Advertisement -

ರಿಪಬ್ಲಿಕ್ ಟಿವಿ ಪತ್ರಕರ್ತರ ವಿರುದ್ಧ ನೂರಾರು ಎಫ್‌ಐಆರ್ ದಾಖಲಾಗಿರುವುದು “ನೋವಿನ ಸಂಗತಿ” ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಟಿಆರ್‌ಪಿ ತಿರುಚಿರುವ ಪ್ರಕರಣ ಮತ್ತು ಮುಂಬೈ ಪೊಲೀಸರ ವಿರುದ್ಧ ಅಸಮಾಧಾನ ಉಂಟು ಮಾಡುವ ವಿಚಾರಗಳನ್ನು ಹರಡಿರುವ ಆರೋಪದಲ್ಲಿ ನೂರಾರು ಪತ್ರಕರ್ತರ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ “ರಿಪಬ್ಲಿಕ್ ಟಿವಿಯ ಪತ್ರಕರ್ತರ ವಿರುದ್ಧ ನೂರಾರು ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿರುವುದನ್ನು ನೋಡಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ನೋವಿನಿಂದ ಕೂಡಿದೆ” ಎಂದು ತಿಳಿಸಿದೆ.

“ನಾವು ತನಿಖೆಯ ಮೇಲೆ ಪ್ರಭಾವ ಬೀರಲು ಬಯಸುವುದಿಲ್ಲ, ತನಿಖೆಯಿಂದ ಟಿಆರ್‌ಪಿಗಳಲ್ಲಿ ಅಗತ್ಯವಾದ ಪಾರದರ್ಶಕತೆಯನ್ನು ತರುವ ಸಾಮರ್ಥ್ಯವಿದೆ ಎಂದು ನಾವು ನಂಬಿದ್ದೇವೆ. ಆದರೆ ಪತ್ರಕರ್ತರನ್ನು ಬಲಿಪಶು ಮಾಡುವುದು ತಕ್ಷಣವೇ ನಿಲ್ಲಬೇಕು. ಏಕೆಂದರೆ ಅನಿಯಂತ್ರಿತ ರಾಜ್ಯಾಧಿಕಾರ ಕೂಡ ಕೆಲಸ ಮಾಡುವ ಪತ್ರಕರ್ತರ ಹಿತಾಸಕ್ತಿಯ ಪರವಾಗಿಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ಎರಡು ದಿನಗಳಿಂದ ಮುಂಬೈ ಪೊಲೀಸ್ ಮತ್ತು ರಿಪಬ್ಲಿಕ್ ಟಿವಿ ನಡುವೆ ತೀವ್ರ ವಿವಾದ ಉಂಟಾಗಿದೆ. ರಿಪಬ್ಲಿಕ್ ಟಿವಿ ಮೇಲೆ ಟಿಆರ್‌ಪಿಗಳನ್ನು ತಿರುಚಿರುವ ಆರೋಪ ಮತ್ತು ಮುಂಬೈ ಪೊಲೀಸ್ ಆಯುಕ್ತ ಪರಮ್ ವೀರ್‌ ಸಿಂಗ್ ವಿರುದ್ಧ ಪ್ರಚೋದನಾತ್ಮಕ ಸುದ್ದಿ ಪ್ರಸಾರ ಮಾಡಿದೆ ಎಂಬ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿಯಲ್ಲಿ TRP ಹಗರಣದ ಸುದ್ದಿ ಪ್ರಸಾರವನ್ನು ತಡೆಯುವಂತೆ ಕೋರ್ಟ್‌ಗೆ‌‌ ಅರ್ಜಿ

ಮುಂಬೈ ಪೊಲೀಸ್ ಆಯುಕ್ತರ ವಿರುದ್ಧ “ಅಸಮಾಧಾನ” ಪ್ರಚೋದಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು, ರಿಪಬ್ಲಿಕ್ ಟಿವಿಯ ಪತ್ರಕರ್ತರ ವಿರುದ್ಧ ಹಲವಾರು ಎಫ್‌ಐಆರ್ ದಾಖಲಿಸಿದ್ದಾರೆ, ಅದರ ಕಾರ್ಯನಿರ್ವಾಹಕ ಸಂಪಾದಕ, ನಿರೂಪಕ, ಇಬ್ಬರು ವರದಿಗಾರರು ಮತ್ತು ಇತರ ಸಂಪಾದಕೀಯ ಸಿಬ್ಬಂದಿ ಸದಸ್ಯರ ವಿರುದ್ಧ ದೂರು ದಾಖಲಿಸಿದ್ದಾರೆ.

“ಅಭಿವ್ಯಕ್ತಿ ಸ್ವಾತಂತ್ರದ ಹಕ್ಕು ಎಂದರೆ ದ್ವೇಷ ಭಾಷಣವನ್ನು ಉತ್ತೇಜಿಸುವ ಪರವಾನಗಿ ಎಂದರ್ಥವಲ್ಲ” ಎಂದು ಸಂಪಾದಕರ ಸಂಘ ತಿಳಿಸಿದೆ. ಜೊತೆಗೆ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಅಸಹಜ ಸಾವನ್ನು ಮಾಧ್ಯಮಗಳು ವರದಿ ಮಾಡಿದ ರೀತಿಯನ್ನು ಗಿಲ್ಡ್ ಗಮನಿಸಿದೆ ಎಂದು ತಿಳಿಸಿದೆ.

ಇಂತಹ ವರದಿಗಳು “ಮಾಧ್ಯಮ ವಿಶ್ವಾಸಾರ್ಹತೆ ಮತ್ತು ವರದಿ ಮಾಡುವ ಮಿತಿಗಳ ಬಗ್ಗೆ ಸಮಸ್ಯೆಗಳನ್ನು ಹುಟ್ಟುಹಾಕುತ್ತದೆ” ಎಂದು ಗಿಲ್ಡ್ ತಿಳಿಸಿದೆ.

ಇಂತಹ ಸಮಸ್ಯೆಗಳು ಬಹಳ ಹಿಂದೆಯೇ ಪರಿಹರಿಸಬೇಕಾದ ಪ್ರಮುಖ ಸಮಸ್ಯೆಗಳಾಗಿವೆ. ಆದರೆ ಇಂದು ಉಲ್ಬಣಗೊಳಿಸಲಾಗುತ್ತಿದೆ. ಇದು ಚಾನಲ್‌ಗಳು ಜವಾಬ್ದಾರಿಯುತವಾಗಿ ವರ್ತಿಸುವ ಸಮಯ ಮತ್ತು ಅದರಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರ ಸುರಕ್ಷತೆಗೆ ಆದ್ಯತೆ ನೀಡುವ ಜೊತೆಗೆ ಮಾಧ್ಯಮಗಳ ಸಾಮೂಹಿಕ ವಿಶ್ವಾಸಾರ್ಹತೆಗೆ ಧಕ್ಕೆ ತರಬಾರದು ”ಎಂದು ಗಿಲ್ಡ್ ಹೇಳಿದೆ.

“ತನಿಖೆ ನಡೆಸುವ ಪೊಲೀಸರು ಚಾನಲ್‌ನ ಪತ್ರಕರ್ತರಿಗೆ ನೋವುಂಟು ಮಾಡುವುದು ಅಥವಾ ಯಾರನ್ನು  ಬಂಧಿಸುವುದಾಗಲಿ ಮಾಡಬಾರದು. ತನಿಖೆಯು ಮಾಧ್ಯಮ ಹಕ್ಕುಗಳನ್ನು ನಿಗ್ರಹಿಸುವ ಸಾಧನವಾಗಿ ಪರಿಣಮಿಸಬಾರದು ”ಎಂದು ಗಿಲ್ಡ್ ಹೇಳಿದೆ.


ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...