Homeಮುಖಪುಟರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

ರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

"ಅಭಿವ್ಯಕ್ತಿ ಸ್ವಾತಂತ್ರದ ಹಕ್ಕು ಎಂದರೆ ದ್ವೇಷ ಭಾಷಣವನ್ನು ಉತ್ತೇಜಿಸುವ ಪರವಾನಗಿ ಎಂದರ್ಥವಲ್ಲ" ಎಂದು ಸಂಪಾದಕರ ಸಂಘ ತಿಳಿಸಿದೆ.

- Advertisement -
- Advertisement -

ರಿಪಬ್ಲಿಕ್ ಟಿವಿ ಪತ್ರಕರ್ತರ ವಿರುದ್ಧ ನೂರಾರು ಎಫ್‌ಐಆರ್ ದಾಖಲಾಗಿರುವುದು “ನೋವಿನ ಸಂಗತಿ” ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಟಿಆರ್‌ಪಿ ತಿರುಚಿರುವ ಪ್ರಕರಣ ಮತ್ತು ಮುಂಬೈ ಪೊಲೀಸರ ವಿರುದ್ಧ ಅಸಮಾಧಾನ ಉಂಟು ಮಾಡುವ ವಿಚಾರಗಳನ್ನು ಹರಡಿರುವ ಆರೋಪದಲ್ಲಿ ನೂರಾರು ಪತ್ರಕರ್ತರ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ “ರಿಪಬ್ಲಿಕ್ ಟಿವಿಯ ಪತ್ರಕರ್ತರ ವಿರುದ್ಧ ನೂರಾರು ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿರುವುದನ್ನು ನೋಡಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ನೋವಿನಿಂದ ಕೂಡಿದೆ” ಎಂದು ತಿಳಿಸಿದೆ.

“ನಾವು ತನಿಖೆಯ ಮೇಲೆ ಪ್ರಭಾವ ಬೀರಲು ಬಯಸುವುದಿಲ್ಲ, ತನಿಖೆಯಿಂದ ಟಿಆರ್‌ಪಿಗಳಲ್ಲಿ ಅಗತ್ಯವಾದ ಪಾರದರ್ಶಕತೆಯನ್ನು ತರುವ ಸಾಮರ್ಥ್ಯವಿದೆ ಎಂದು ನಾವು ನಂಬಿದ್ದೇವೆ. ಆದರೆ ಪತ್ರಕರ್ತರನ್ನು ಬಲಿಪಶು ಮಾಡುವುದು ತಕ್ಷಣವೇ ನಿಲ್ಲಬೇಕು. ಏಕೆಂದರೆ ಅನಿಯಂತ್ರಿತ ರಾಜ್ಯಾಧಿಕಾರ ಕೂಡ ಕೆಲಸ ಮಾಡುವ ಪತ್ರಕರ್ತರ ಹಿತಾಸಕ್ತಿಯ ಪರವಾಗಿಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ಎರಡು ದಿನಗಳಿಂದ ಮುಂಬೈ ಪೊಲೀಸ್ ಮತ್ತು ರಿಪಬ್ಲಿಕ್ ಟಿವಿ ನಡುವೆ ತೀವ್ರ ವಿವಾದ ಉಂಟಾಗಿದೆ. ರಿಪಬ್ಲಿಕ್ ಟಿವಿ ಮೇಲೆ ಟಿಆರ್‌ಪಿಗಳನ್ನು ತಿರುಚಿರುವ ಆರೋಪ ಮತ್ತು ಮುಂಬೈ ಪೊಲೀಸ್ ಆಯುಕ್ತ ಪರಮ್ ವೀರ್‌ ಸಿಂಗ್ ವಿರುದ್ಧ ಪ್ರಚೋದನಾತ್ಮಕ ಸುದ್ದಿ ಪ್ರಸಾರ ಮಾಡಿದೆ ಎಂಬ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿಯಲ್ಲಿ TRP ಹಗರಣದ ಸುದ್ದಿ ಪ್ರಸಾರವನ್ನು ತಡೆಯುವಂತೆ ಕೋರ್ಟ್‌ಗೆ‌‌ ಅರ್ಜಿ

ಮುಂಬೈ ಪೊಲೀಸ್ ಆಯುಕ್ತರ ವಿರುದ್ಧ “ಅಸಮಾಧಾನ” ಪ್ರಚೋದಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು, ರಿಪಬ್ಲಿಕ್ ಟಿವಿಯ ಪತ್ರಕರ್ತರ ವಿರುದ್ಧ ಹಲವಾರು ಎಫ್‌ಐಆರ್ ದಾಖಲಿಸಿದ್ದಾರೆ, ಅದರ ಕಾರ್ಯನಿರ್ವಾಹಕ ಸಂಪಾದಕ, ನಿರೂಪಕ, ಇಬ್ಬರು ವರದಿಗಾರರು ಮತ್ತು ಇತರ ಸಂಪಾದಕೀಯ ಸಿಬ್ಬಂದಿ ಸದಸ್ಯರ ವಿರುದ್ಧ ದೂರು ದಾಖಲಿಸಿದ್ದಾರೆ.

“ಅಭಿವ್ಯಕ್ತಿ ಸ್ವಾತಂತ್ರದ ಹಕ್ಕು ಎಂದರೆ ದ್ವೇಷ ಭಾಷಣವನ್ನು ಉತ್ತೇಜಿಸುವ ಪರವಾನಗಿ ಎಂದರ್ಥವಲ್ಲ” ಎಂದು ಸಂಪಾದಕರ ಸಂಘ ತಿಳಿಸಿದೆ. ಜೊತೆಗೆ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಅಸಹಜ ಸಾವನ್ನು ಮಾಧ್ಯಮಗಳು ವರದಿ ಮಾಡಿದ ರೀತಿಯನ್ನು ಗಿಲ್ಡ್ ಗಮನಿಸಿದೆ ಎಂದು ತಿಳಿಸಿದೆ.

ಇಂತಹ ವರದಿಗಳು “ಮಾಧ್ಯಮ ವಿಶ್ವಾಸಾರ್ಹತೆ ಮತ್ತು ವರದಿ ಮಾಡುವ ಮಿತಿಗಳ ಬಗ್ಗೆ ಸಮಸ್ಯೆಗಳನ್ನು ಹುಟ್ಟುಹಾಕುತ್ತದೆ” ಎಂದು ಗಿಲ್ಡ್ ತಿಳಿಸಿದೆ.

ಇಂತಹ ಸಮಸ್ಯೆಗಳು ಬಹಳ ಹಿಂದೆಯೇ ಪರಿಹರಿಸಬೇಕಾದ ಪ್ರಮುಖ ಸಮಸ್ಯೆಗಳಾಗಿವೆ. ಆದರೆ ಇಂದು ಉಲ್ಬಣಗೊಳಿಸಲಾಗುತ್ತಿದೆ. ಇದು ಚಾನಲ್‌ಗಳು ಜವಾಬ್ದಾರಿಯುತವಾಗಿ ವರ್ತಿಸುವ ಸಮಯ ಮತ್ತು ಅದರಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರ ಸುರಕ್ಷತೆಗೆ ಆದ್ಯತೆ ನೀಡುವ ಜೊತೆಗೆ ಮಾಧ್ಯಮಗಳ ಸಾಮೂಹಿಕ ವಿಶ್ವಾಸಾರ್ಹತೆಗೆ ಧಕ್ಕೆ ತರಬಾರದು ”ಎಂದು ಗಿಲ್ಡ್ ಹೇಳಿದೆ.

“ತನಿಖೆ ನಡೆಸುವ ಪೊಲೀಸರು ಚಾನಲ್‌ನ ಪತ್ರಕರ್ತರಿಗೆ ನೋವುಂಟು ಮಾಡುವುದು ಅಥವಾ ಯಾರನ್ನು  ಬಂಧಿಸುವುದಾಗಲಿ ಮಾಡಬಾರದು. ತನಿಖೆಯು ಮಾಧ್ಯಮ ಹಕ್ಕುಗಳನ್ನು ನಿಗ್ರಹಿಸುವ ಸಾಧನವಾಗಿ ಪರಿಣಮಿಸಬಾರದು ”ಎಂದು ಗಿಲ್ಡ್ ಹೇಳಿದೆ.


ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...