Homeಕರ್ನಾಟಕಪೋಕ್ಸೋ ಪ್ರಕರಣದ ದೂರು ತಿರುಚಿದ ಪೊಲೀಸರು : ಸಂತ್ರಸ್ತೆಯ ತಾಯಿ ಆರೋಪ

ಪೋಕ್ಸೋ ಪ್ರಕರಣದ ದೂರು ತಿರುಚಿದ ಪೊಲೀಸರು : ಸಂತ್ರಸ್ತೆಯ ತಾಯಿ ಆರೋಪ

- Advertisement -
- Advertisement -

​ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣವೊಂದನ್ನು ದಾಖಲಿಸುವ ವೇಳೆ ಸಂತ್ರಸ್ತೆಯ ತಾಯಿ ನೀಡಿದ ಮೂಲ ದೂರನ್ನು ತಿರುಚಿ, ಪೊಲೀಸರು ತಮಗೆ ಇಷ್ಟ ಬಂದಂತೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

​​ಅಪ್ರಾಪ್ತೆಯ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯ ಕೋರಿ ಆಕೆಯ ತಾಯಿ ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ಈ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್ ಆನಂದೇಗೌಡ ಸಂತ್ರಸ್ತೆ ಮತ್ತು ಆಕೆಯ ತಾಯಿ ನೀಡಿದ ನಿಖರವಾದ ಹೇಳಿಕೆಗಳನ್ನು ದಾಖಲಿಸಿಕೊಳ್ಳದೆ, ಪ್ರಕರಣದ ತೀವ್ರತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ದೂರಿನ ಅಂಶಗಳನ್ನು ಬದಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

​​ಈ ಕುರಿತು ಮಾತನಾಡಿರುವ ಸಂತ್ರಸ್ತೆಯ ತಾಯಿ, “ನಾನು ಮೊದಲೇ ಒಂದು ಹೇಳಿಕೆ ನೀಡಿದ್ದೆ. ಆದರೆ ಪೊಲೀಸರು ನೆಟ್‌ವರ್ಕ್ ಇಲ್ಲ ಎಂಬ ನೆಪ ಹೇಳಿ ಸಮಯ ಕಳೆದರು. ನಂತರ ನನಗೆ ತಿಳಿಯದಂತೆ ಬೇರೆಯದೇ ರೀತಿಯ ದೂರು ಪತ್ರ ಸಿದ್ಧಪಡಿಸಿ, ಅದರ ಮೇಲೆ ಸಹಿ ಹಾಕುವಂತೆ ಒತ್ತಡ ಹೇರಿದರು. ಅತ್ಯಂತ ಅವಸರವಾಗಿ ನನ್ನಿಂದ ಸಹಿ ಪಡೆದುಕೊಂಡಿದ್ದಾರೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಆರೋಪಿ ಕಿರಣ್ ಎಂ.ಎನ್ “ನನ್ನ ಮೇಲೆ ದೂರು ದಾಖಲಿಸಿದರೆ ನಿಮ್ಮ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದು ನನಗೆ ಮತ್ತು ನನ್ನ ಮಗಳಿಗೆ ಪೋನಿನ ಮೂಲಕ ಬೆದರಿಕೆ ಪತ್ರ ಕಳುಹಿಸಿದ್ದಾನೆ” ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ.

ಪೊಕ್ಸೋ ಪ್ರಕರಣದಲ್ಲಿ ರಾಜಿ ಪಂಚಾಯಿತಿಗೆ ಅವಕಾಶ ಇಲ್ಲದಿದ್ದರೂ, ನ್ಯಾಯ ಕೊಡಿಸುವುದಾಗಿ ಮಣಿಪುರಕ್ಕೆ ಕರೆದುಕೊಂಡು ಹೋಗಿ ಸಂತ್ರಸ್ತೆಯ ತಾಯಿಯಿಂದ ಲಕ್ಷಾಂತರ ರೂಪಾಯಿ ಹಣ ದುಂದು ವೆಚ್ಚ ಮಾಡಿಸಿ ಮೋಸ ಮಾಡಿ, ನಂತರ ಅವರಿಗೇ ಬೆದರಿಕೆ ಹಾಕುತ್ತಿರುವ ರಜನಿರಾಜ್ ಎಂಬ ಮಹಿಳೆಯ ಮೇಲೆ ಎಫ್‌ಐಆರ್ ದಾಖಲಿಸುವಂತೆ ​ದೂರಿನಲ್ಲಿ ಉಲ್ಲೇಖಿಸಲಾಗಿದ್ದರೂ, ಅವರ ಹೆಸರನ್ನು ಕೈಬಿಡಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂಬ ಅಂಶವೂ ಸಂತ್ರಸ್ತೆಯ ತಾಯಿಯ ಹೇಳಿಕೆಯಿಂದ ತಿಳಿದುಬಂದಿದೆ.

​​ಈ ಕುರಿತು ಮಾತನಾಡಿರುವ ‘ಮಹಿಳಾ ಮುನ್ನಡೆ’ ಸಂಘಟನೆಯ ಸಾಮಾಜಿಕ ಕಾರ್ಯಕರ್ತೆ ಪೂರ್ಣಿಮಾ, “ಪೊಲೀಸರು ಸಂತ್ರಸ್ತೆಯ ಪರವಾಗಿ ನಿಲ್ಲುವ ಬದಲು ಆರೋಪಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ. ತಾಯಿ-ಮಗಳು ನೀಡಿದ ದೂರಿನಂತೆ ಎಫ್‌ಐಆರ್ ದಾಖಲಿಸದೆ, ಇನ್ಸ್‌ಪೆಕ್ಟರ್ ತಮಗೆ ಬೇಕಾದಂತೆ ಬರೆದುಕೊಂಡಿದ್ದಾರೆ. ಇದನ್ನು ವಿರೋಧಿಸಿದಾಗ ಸಂತ್ರಸ್ತೆಯನ್ನೇ ಅಪರಾಧಿಯಂತೆ ಕಂಡು ಠಾಣೆಯಲ್ಲಿ ಕೂರಿಸುವ ಮೂಲಕ ದರ್ಪ ಪ್ರದರ್ಶಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

​ಈಗಾಗಲೇ ಈ ವಿಚಾರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್ಪಿ) ಮತ್ತು ಜಿಲ್ಲಾಧಿಕಾರಿಗಳ (ಡಿಸಿ) ಗಮನಕ್ಕೆ ತರಲಾಗಿದೆ. ಸಂತ್ರಸ್ತೆಗೆ ನ್ಯಾಯ ಸಿಗದಿದ್ದರೆ ಮತ್ತು ತಿರುಚಲಾದ ಎಫ್‌ಐಆರ್ ಅನ್ನು ಸರಿಪಡಿಸದಿದ್ದರೆ ಬೃಹತ್ ಪ್ರತಿಭಟನೆ ಮಾಡಿ ಪತ್ರಿಕಾಗೋಷ್ಠಿ ನಡೆಸುವುದಾಗಿ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಠಾಣೆಗೆ ಭೇಟಿ ನೀಡಿದ ಅತ್ಯಾಚಾರ ವಿರೋಧಿ ಆಂದೋಲನದ ನಿಯೋಗದಲ್ಲಿ ಪದಾಧಿಕಾರಿಗಳಾದ ಕರ್ನಾಟಕ ಜನಶಕ್ತಿಯ ಸಿದ್ದರಾಜು, ಕರ್ನಾಟಕ ರೈತ ಸಂಘದ ಲತಾಶಂಕರ್, ಮಹಿಳಾ ಮುನ್ನಡೆಯ ಶಿಲ್ಪ, ಗಂಗಾಧರ್ ಬಿಎಸ್‌ಪಿ, ರವಿ ಹಾಗೂ ಜಾಗೃತ ಕರ್ನಾಟಕದ ಜಗದೀಶ್ ನಗರಕೆರೆ ಇನ್ನೂ ಮುಂತಾದವರು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...