Homeಕರ್ನಾಟಕ'ದಿಢೀರ್‌ ಆಗಿ ಕೆಲಸದಿಂದ ತೆಗೆದು ಹಾಕಲಾಗಿದೆ': ವಿಕ್ಟೋರಿಯ ಆಸ್ಪತ್ರೆಯಲ್ಲಿ ವಾರ್ಡ್‌ ಅಟೆಂಡರ್‌ಗಳಿಂದ ಪ್ರತಿಭಟನೆ

‘ದಿಢೀರ್‌ ಆಗಿ ಕೆಲಸದಿಂದ ತೆಗೆದು ಹಾಕಲಾಗಿದೆ’: ವಿಕ್ಟೋರಿಯ ಆಸ್ಪತ್ರೆಯಲ್ಲಿ ವಾರ್ಡ್‌ ಅಟೆಂಡರ್‌ಗಳಿಂದ ಪ್ರತಿಭಟನೆ

- Advertisement -
- Advertisement -

ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಕಳೆದ 10-25ವರ್ಷಗಳಿಂದ ವಾರ್ಡ್‌ ಅಟೆಂಡರ್ ಆಗಿ ಸೇವೆ ಸಲ್ಲಿಸುತ್ತಿದ್ದ ಕಾರ್ಮಿಕರನ್ನು ಇಂದು ಬೆಳ್ಲಗ್ಗೆಯಿಂದ ದಿಡೀರ್‌ ಆಗಿ ಕೆಲಸದಿಂದ ತೆಗೆದು ಹಾಕಲಾಗಿದ್ದು, ಸುಮಾರು 56 ಮಂದಿ ವಾರ್ಡ್‌ ಅಟೆಂಡರ್‌ಗಳು ಕೆಲಸವನ್ನು ಕಳೆದುಕೊಂಡು ನ್ಯಾಯಕ್ಕಾಗಿ ಕರ್ನಾಟಕ ಲೇಬರ್‌ ಯೂನಿಯನ್‌ ವಿಕ್ಟೋರಿಯಾ ಘಟಕದ ಆಶ್ರಯದಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಆಲ್‌ ಇಂಡಿಯಾ ಸೆಂಟ್ರಲ್‌ ಕೌನ್ಸಿಲ್‌ ಆಫ್‌ ಟ್ರೇಡ್‌ ಯೂನಿಯನ್ ರಾಜ್ಯ ಸಮಿತಿ ಸದಸ್ಯೆ ಮೈತ್ರೈಯಿ, ಇಲ್ಲಿನ ವಾರ್ಡ್‌ ಅಟೆಂಡರ್‌ಗಳು ಕಳೆದ 20-25 ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಅವರನ್ನು ದಿಢೀರ್‌ ಆಗಿ ಕೆಲಸದಿಂದ ತೆಗೆದು ಹಾಕಲಾಗಿದೆ. ಕಾಂಟ್ರ್ಯಾಕ್ಟರ್‌ ಮತ್ತು ವಿಕ್ಟೋರಿಯಾ ಆಸ್ಪತ್ರೆ ಈ ಆದೇಶವನ್ನು ನೀಡಿದೆ. ಈ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯ ಡೈರೆಕ್ಟರ್‌, ಮೆಡಿಕಲ್‌ ಸುಪರಿಂಡೆಂಟ್‌ ಡಾ.ದೀಪಕ್‌ ಹಾಗೂ ಡೀನ್‌ ಅವರಲ್ಲೂ ಮಾತುಕತೆಯನ್ನು ನಡೆಸಿದ್ದೇವೆ. ಅವರು ಈಗ ಏನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಆದ್ದರಿಂದ ಎಲ್ಲಾ ಸಿಬ್ಬಂದಿಗಳಿಗೆ ನ್ಯಾಯ ಸಿಗುವವರಿಗೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.

ಈ ಬಗ್ಗೆ ವಾರ್ಡ್‌ ಅಟೆಂಡರ್‌ ಆಗಿ ಕೆಲಸ ಮಾಡುತ್ತಿದ್ದ ಶಶಿಕಲಾ ಅವರು ನಾನುಗೌರಿ.ಕಾಂ ಜೊತೆ ಮಾತನಾಡಿದ್ದು, ನಾನು 20 ವರ್ಷಗಳಿಂದ ವಿಕ್ಟೋರಿಯ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದೇನೆ, ಇಲ್ಲಿ 20ವರ್ಷ, 10ವರ್ಷ 7 ವರ್ಷ ಈಗೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದವರನ್ನು ದಿಡೀರ್‌ ಕೆಲಸದಿಂದ ತೆಗೆದು ಹಾಕಲಾಗಿದೆ. ಎರಡು ತಿಂಗಳಿನಿಂದ ನಮಗೆ ವೇತನ ಕೊಟ್ಟಿಲ್ಲ, ನಿನ್ನೆ ವೇತನ ಕೇಳಿದ್ದಕ್ಕೆ ಇವತ್ತು 56 ಮಂದಿಯನ್ನು ತೆಗೆದು ಹಾಕಲಾಗಿದೆ. ನಾವು ವಾರ್ಡ್‌ ಒಳಗೆ ಕೆಲಸ ಮಾಡುವವರು, ಈಗ ನೀವು ಬೇಡ ಎಂದು ನಮ್ಮನ್ನು ತೆಗೆದು ಹಾಕಿ ಸೆಕ್ಯೂರಿಟಿಯವರನ್ನು ನೇಮಕ ಮಾಡುವುದಾಗಿ ಹೇಳಿದ್ದಾರೆ. ಹೊಸ ಕಾಂಟ್ರಾಕ್ಟರ್‌ ಬಂದಾಗ ನಮ್ಮನ್ನು ತೆಗೆದುಕೊಳ್ಳುವುದಾಗಿಯೂ ಹೇಳಿದ್ದರು. ಆದರೆ ಈಗ ನಮ್ಮನ್ನು ತೆಗೆದು ಹಾಕಲಾಗಿದೆ. ನಾವು ಆಫೀಸರ್‌ ಆಗಿರುವ ಕವಿತಾ ಅವರನ್ನು ಭೇಟಿ ಮಾಡಿದಾಗ ಅವರು ಸುಪರಿಂಡೆಂಟ್‌ ಡಾ.ದೀಪಕ್‌  ಬರಬೇಕು, ಅವರ ಬಂದ ಮೇಲೆ ಹೇಳುತ್ತೇನೆ ಎಂದು ಹೇಳಿದ್ದರು. ಅವರು ನಿನ್ನೆ ಬಂದಿದ್ದರು ಆ ಬಳಿಕ ಈ ರೀತಿ ಕೆಲಸದಿಂದ ತೆಗೆದು ಹಾಕಿರುವ ಬಗ್ಗೆ ಸಂದೇಶ ಕಳುಹಿಸಿದ್ದಾರೆ. ಆದ್ದರಿಂದ ನಾವು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಭಟನಾ ನಿರತಾ ಬೀಬಿ ಆಯಿಶಾ ಅವರು ನಾನುಗೌರಿ.ಕಾಂ ಜೊತೆ ಮಾತನಾಡಿದ್ದು, ನಾನು ಮತ್ತು ನನ್ನ ಪತಿ ಇಲ್ಲಿ 15 ವರ್ಷಗಳಿಂದ ಕೆಲಸ ಮಾಡುತ್ತಿದ್ದೇವೆ. ಈಗ ಹೊಸ ಏಜೆನ್ಸಿ ಬಂದು ನಮ್ಮಿಬ್ಬರು ಸೇರಿ 56 ಮಂದಿಯನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ. ನಮ್ಮಿಬ್ಬರಿಗೂ ಕೆಲ ಇಲ್ಲದ ಕಾರಣ ನಮ್ಮ ಮನೆಯಲ್ಲಿ ಯಾರಿಗೂ ದುಡಿಮೆ ಇಲ್ಲದಾಗಿದೆ. ಮಕ್ಕಳು ಸಣ್ಣ ಸಣ್ಣವರಾಗಿದ್ದು ನಮಗೆ ಈಗ ದಿಕ್ಕು ತೋಚದಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೋದಿ ಆಡಳಿತದಲ್ಲಿ ಭಾರತದ ಇಮೇಜ್‌ ಜಾಗತಿಕವಾಗಿ ಸುಧಾರಿಸಿಲ್ಲ: ವರದಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...