Homeಕರ್ನಾಟಕ'ದಿಢೀರ್‌ ಆಗಿ ಕೆಲಸದಿಂದ ತೆಗೆದು ಹಾಕಲಾಗಿದೆ': ವಿಕ್ಟೋರಿಯ ಆಸ್ಪತ್ರೆಯಲ್ಲಿ ವಾರ್ಡ್‌ ಅಟೆಂಡರ್‌ಗಳಿಂದ ಪ್ರತಿಭಟನೆ

‘ದಿಢೀರ್‌ ಆಗಿ ಕೆಲಸದಿಂದ ತೆಗೆದು ಹಾಕಲಾಗಿದೆ’: ವಿಕ್ಟೋರಿಯ ಆಸ್ಪತ್ರೆಯಲ್ಲಿ ವಾರ್ಡ್‌ ಅಟೆಂಡರ್‌ಗಳಿಂದ ಪ್ರತಿಭಟನೆ

- Advertisement -
- Advertisement -

ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಕಳೆದ 10-25ವರ್ಷಗಳಿಂದ ವಾರ್ಡ್‌ ಅಟೆಂಡರ್ ಆಗಿ ಸೇವೆ ಸಲ್ಲಿಸುತ್ತಿದ್ದ ಕಾರ್ಮಿಕರನ್ನು ಇಂದು ಬೆಳ್ಲಗ್ಗೆಯಿಂದ ದಿಡೀರ್‌ ಆಗಿ ಕೆಲಸದಿಂದ ತೆಗೆದು ಹಾಕಲಾಗಿದ್ದು, ಸುಮಾರು 56 ಮಂದಿ ವಾರ್ಡ್‌ ಅಟೆಂಡರ್‌ಗಳು ಕೆಲಸವನ್ನು ಕಳೆದುಕೊಂಡು ನ್ಯಾಯಕ್ಕಾಗಿ ಕರ್ನಾಟಕ ಲೇಬರ್‌ ಯೂನಿಯನ್‌ ವಿಕ್ಟೋರಿಯಾ ಘಟಕದ ಆಶ್ರಯದಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಆಲ್‌ ಇಂಡಿಯಾ ಸೆಂಟ್ರಲ್‌ ಕೌನ್ಸಿಲ್‌ ಆಫ್‌ ಟ್ರೇಡ್‌ ಯೂನಿಯನ್ ರಾಜ್ಯ ಸಮಿತಿ ಸದಸ್ಯೆ ಮೈತ್ರೈಯಿ, ಇಲ್ಲಿನ ವಾರ್ಡ್‌ ಅಟೆಂಡರ್‌ಗಳು ಕಳೆದ 20-25 ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಅವರನ್ನು ದಿಢೀರ್‌ ಆಗಿ ಕೆಲಸದಿಂದ ತೆಗೆದು ಹಾಕಲಾಗಿದೆ. ಕಾಂಟ್ರ್ಯಾಕ್ಟರ್‌ ಮತ್ತು ವಿಕ್ಟೋರಿಯಾ ಆಸ್ಪತ್ರೆ ಈ ಆದೇಶವನ್ನು ನೀಡಿದೆ. ಈ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯ ಡೈರೆಕ್ಟರ್‌, ಮೆಡಿಕಲ್‌ ಸುಪರಿಂಡೆಂಟ್‌ ಡಾ.ದೀಪಕ್‌ ಹಾಗೂ ಡೀನ್‌ ಅವರಲ್ಲೂ ಮಾತುಕತೆಯನ್ನು ನಡೆಸಿದ್ದೇವೆ. ಅವರು ಈಗ ಏನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಆದ್ದರಿಂದ ಎಲ್ಲಾ ಸಿಬ್ಬಂದಿಗಳಿಗೆ ನ್ಯಾಯ ಸಿಗುವವರಿಗೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.

ಈ ಬಗ್ಗೆ ವಾರ್ಡ್‌ ಅಟೆಂಡರ್‌ ಆಗಿ ಕೆಲಸ ಮಾಡುತ್ತಿದ್ದ ಶಶಿಕಲಾ ಅವರು ನಾನುಗೌರಿ.ಕಾಂ ಜೊತೆ ಮಾತನಾಡಿದ್ದು, ನಾನು 20 ವರ್ಷಗಳಿಂದ ವಿಕ್ಟೋರಿಯ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದೇನೆ, ಇಲ್ಲಿ 20ವರ್ಷ, 10ವರ್ಷ 7 ವರ್ಷ ಈಗೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದವರನ್ನು ದಿಡೀರ್‌ ಕೆಲಸದಿಂದ ತೆಗೆದು ಹಾಕಲಾಗಿದೆ. ಎರಡು ತಿಂಗಳಿನಿಂದ ನಮಗೆ ವೇತನ ಕೊಟ್ಟಿಲ್ಲ, ನಿನ್ನೆ ವೇತನ ಕೇಳಿದ್ದಕ್ಕೆ ಇವತ್ತು 56 ಮಂದಿಯನ್ನು ತೆಗೆದು ಹಾಕಲಾಗಿದೆ. ನಾವು ವಾರ್ಡ್‌ ಒಳಗೆ ಕೆಲಸ ಮಾಡುವವರು, ಈಗ ನೀವು ಬೇಡ ಎಂದು ನಮ್ಮನ್ನು ತೆಗೆದು ಹಾಕಿ ಸೆಕ್ಯೂರಿಟಿಯವರನ್ನು ನೇಮಕ ಮಾಡುವುದಾಗಿ ಹೇಳಿದ್ದಾರೆ. ಹೊಸ ಕಾಂಟ್ರಾಕ್ಟರ್‌ ಬಂದಾಗ ನಮ್ಮನ್ನು ತೆಗೆದುಕೊಳ್ಳುವುದಾಗಿಯೂ ಹೇಳಿದ್ದರು. ಆದರೆ ಈಗ ನಮ್ಮನ್ನು ತೆಗೆದು ಹಾಕಲಾಗಿದೆ. ನಾವು ಆಫೀಸರ್‌ ಆಗಿರುವ ಕವಿತಾ ಅವರನ್ನು ಭೇಟಿ ಮಾಡಿದಾಗ ಅವರು ಸುಪರಿಂಡೆಂಟ್‌ ಡಾ.ದೀಪಕ್‌  ಬರಬೇಕು, ಅವರ ಬಂದ ಮೇಲೆ ಹೇಳುತ್ತೇನೆ ಎಂದು ಹೇಳಿದ್ದರು. ಅವರು ನಿನ್ನೆ ಬಂದಿದ್ದರು ಆ ಬಳಿಕ ಈ ರೀತಿ ಕೆಲಸದಿಂದ ತೆಗೆದು ಹಾಕಿರುವ ಬಗ್ಗೆ ಸಂದೇಶ ಕಳುಹಿಸಿದ್ದಾರೆ. ಆದ್ದರಿಂದ ನಾವು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಭಟನಾ ನಿರತಾ ಬೀಬಿ ಆಯಿಶಾ ಅವರು ನಾನುಗೌರಿ.ಕಾಂ ಜೊತೆ ಮಾತನಾಡಿದ್ದು, ನಾನು ಮತ್ತು ನನ್ನ ಪತಿ ಇಲ್ಲಿ 15 ವರ್ಷಗಳಿಂದ ಕೆಲಸ ಮಾಡುತ್ತಿದ್ದೇವೆ. ಈಗ ಹೊಸ ಏಜೆನ್ಸಿ ಬಂದು ನಮ್ಮಿಬ್ಬರು ಸೇರಿ 56 ಮಂದಿಯನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ. ನಮ್ಮಿಬ್ಬರಿಗೂ ಕೆಲ ಇಲ್ಲದ ಕಾರಣ ನಮ್ಮ ಮನೆಯಲ್ಲಿ ಯಾರಿಗೂ ದುಡಿಮೆ ಇಲ್ಲದಾಗಿದೆ. ಮಕ್ಕಳು ಸಣ್ಣ ಸಣ್ಣವರಾಗಿದ್ದು ನಮಗೆ ಈಗ ದಿಕ್ಕು ತೋಚದಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೋದಿ ಆಡಳಿತದಲ್ಲಿ ಭಾರತದ ಇಮೇಜ್‌ ಜಾಗತಿಕವಾಗಿ ಸುಧಾರಿಸಿಲ್ಲ: ವರದಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...