Homeಮುಖಪುಟರೈತ ಹೋರಾಟಕ್ಕೆ ಗೆಲುವು: ನಾಳೆಯಿಂದಲೇ ಪಂಜಾಬ್, ಹರಿಯಾಣದಲ್ಲಿ ಭತ್ತ ಖರೀದಿಗೆ ಮುಂದಾದ ಸರ್ಕಾರ

ರೈತ ಹೋರಾಟಕ್ಕೆ ಗೆಲುವು: ನಾಳೆಯಿಂದಲೇ ಪಂಜಾಬ್, ಹರಿಯಾಣದಲ್ಲಿ ಭತ್ತ ಖರೀದಿಗೆ ಮುಂದಾದ ಸರ್ಕಾರ

ಕೇಂದ್ರವು ಅಕ್ಟೋಬರ್ 1 ರಿಂದ ಭತ್ತ ಕೊಳ್ಳಬೇಕಿತ್ತು. ಆದರೆ ಅದನ್ನು ಅಕ್ಟೋಬರ್ 11 ಕ್ಕೆ ಮುಂದೂಡಿತ್ತು. ಈಗ ರೈತರ ಹೋರಾಟ ಮಣಿದಿದೆ..

- Advertisement -
- Advertisement -

ಖಾರಿಫ್ ಭತ್ತ ಖರೀದಿ ಪ್ರಕ್ರಿಯೆಯನ್ನು ಮುಂದೂಡಿದ್ದ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಹರಿಯಾಣ ಮತ್ತು ಪಂಜಾಬ್ ರೈತರು ನಡೆಸಿದ ತೀವ್ರ ಹೋರಾಟಕ್ಕೆ ಜಯ ದೊರಕಿದೆ. ನಾಳೆಯಿಂದಲೇ (ಅಕ್ಟೋಬರ್ 03) ಭತ್ತ ಖರೀದಿ ಮಾಡಲಾಗುವುದು ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣೆ ಅಶ್ವಿನಿ ಕುಮಾರ್ ಚೌಬೆ ತಿಳಿಸಿದ್ದಾರೆ.

ಕೇಂದ್ರವು ಅಕ್ಟೋಬರ್ 1 ರಿಂದ ಭತ್ತ ಕೊಳ್ಳಬೇಕಿತ್ತು. ಆದರೆ ಅದನ್ನು ಅಕ್ಟೋಬರ್ 11 ಕ್ಕೆ ಮುಂದೂಡಿತ್ತು. ಇದರಿಂದ ಕೆರಳಿದ ರೈತರು ಕಳೆದೆರೆಡು ದಿನಗಳಿಂದ ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ತೀವ್ರಥರದ ಪ್ರತಿಭಟನೆ ನಡೆಸಿದ್ದರು.

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಉಪ ಮುಖ್ಯಮಂತ್ರಿ ದುಶ್ಯಂತ್ ಚೌತಲಾ ವಿರುದ್ಧ ಘೇರಾವ್ ಹಾಕಿ ಪ್ರತಿಭಟಿಸಿದ್ದರು. ಹಲವೆಡೆ ರೈತರ ಮೇಲೆ ಲಾಠಿಚಾರ್ಜ್, ಜಲಫಿರಂಗಿ ಸಿಡಿಸಲಾಗಿತ್ತು. ಹರಿಯಾಣದ ಜಜ್ಜಾರ್‌ನಲ್ಲಿ ಉಪ ಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ಅವರ ಕಾರ್ಯಕ್ರಮದ ವಿರುದ್ಧ ರೈತರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ರೈತರನ್ನು ತಡೆಯಲು ಭದ್ರತಾ ಸಿಬ್ಬಂದಿ ಜಲ ಫಿರಂಗಿ ಬಳಸಲಾಗಿತ್ತು.

ಕೇಂದ್ರದ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ ಮತ್ತು ಇತರ ರಾಜ್ಯ ಏಜೆನ್ಸಿಗಳು ಭತ್ತ ಕೊಳ್ಳುತ್ತವೆ. ಈಗಾಗಲೇ ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಬೆಳೆಗೆ ಹಾನಿಯಾಗುತ್ತಿದ್ದು, ಕೇಂದ್ರವು ಖಾರೀಫ್ ಭತ್ತ ಕೊಳ್ಳುವುದನ್ನು ತ್ವರಿತಗೊಳಿಸಬೇಕೆಂದು ರೈತರು ಒತ್ತಾಯಿಸಿ ಹೋರಾಟಕ್ಕಿಳಿದಿದ್ದರು. ಪಂಜಾಬ್ ಮತ್ತು ಹರಿಯಾಣ ರಾಜ್ಯಗಳು ಬಹುಪಾಲು ಭತ್ತ ಬೆಳೆಯುವುದರಿಂದ ಅಲ್ಲಿನ ಚಳವಳಿ ತೀವ್ರ ರೂಪ ಪಡೆದುಕೊಂಡಿತ್ತು. ಅದಕ್ಕೆ ಮಣಿದ ಸರ್ಕಾರ ನಾಳೆಯಿಂದಲೇ ಭತ್ತ ಖರೀದಿಗೆ ಮುಂದಾಗಿದೆ.

“ಇದು ರೈತರಿಗೆ ಸಂದ ದೊಡ್ಡ ಗೆಲುವು. ನಾಳೆಯಿಂದ ಹರಿಯಾಣ ಮತ್ತು ಪಂಜಾಬ್ ನಲ್ಲಿ ಖಾರಿಫ್ ಖರೀದಿ ಆರಂಭವಾಗಲಿದೆ. ರೈತರು ಸೇರಿದಂತೆ ಅವರ ಹೋರಾಟಕ್ಕೆ ಬೆಂಬಲ ನೀಡಿದ ಎಲ್ಲಾ ನಾಗರಿಕರಿಗೆ ಅಭಿನಂದನೆಗಳು” ಎಂದು ಸಂಯುಕ್ತ ಕಿಸಾನ್ ಮೋರ್ಚಾದ ಟ್ವಿಟರ್ ಹ್ಯಾಂಡಲ್ ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.

ಮತ್ತೊಮ್ಮೆ ರೈತ ಚಳುವಳಿ ಗೆದ್ದಿದೆ! ನಾಳೆ ಬೆಳಿಗ್ಗೆಯಿಂದ ಕೇಂದ್ರ ಸರ್ಕಾರ ಪಂಜಾಬ್ ಮತ್ತು ಹರಿಯಾಣದಲ್ಲಿ ಭತ್ತದ ಸಂಗ್ರಹವನ್ನು ಆರಂಭಿಸಲಿದೆ ಎಂದು ರೈತ ಹೋರಾಟಗಾರ ದೀಪಕ್ ಲಂಬಾ ತಿಳಿಸಿದ್ದಾರೆ.

ಪಂಜಾಬ್‌ನ ನೂತನ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿಯವರು ಇತ್ತೀಚಿನ ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ವೇಳೆ ಭತ್ತ ಖರೀದಿ ಪ್ರಕ್ರಿಯೆ ಮುಂದೂಡಿರುವುದನ್ನು ರದ್ದುಗೊಳಿಸಿ ಕೂಡಲೇ ಭತ್ತ ಖರೀದಿ ಮಾಡಬೇಕೆಂದು ಒತ್ತಾಯಿಸಿದ್ದರು. ಪಂಜಾಬ್ ರಾಜ್ಯವು ದೇಶದಲ್ಲಿಯೇ ಅತಿ ಹೆಚ್ಚು ಭತ್ತ ಬೆಳೆಯುವ ರಾಜ್ಯವಾಗಿದ್ದು ಕೇಂದ್ರದ ಕ್ರಮದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಚನ್ನಿ ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿದ್ದರು.


ಇದನ್ನೂ ಓದಿ: ಪಿಎಂ ಭೇಟಿಯಾದ ಪಂಜಾಬ್ ನೂತನ ಸಿಎಂ ಚನ್ನಿ: ಕೃಷಿ ಕಾಯ್ದೆಗಳನ್ನು ಕೈಬಿಡಲು ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...