Homeಮುಖಪುಟರೈತ ಹೋರಾಟಕ್ಕೆ ಗೆಲುವು: ನಾಳೆಯಿಂದಲೇ ಪಂಜಾಬ್, ಹರಿಯಾಣದಲ್ಲಿ ಭತ್ತ ಖರೀದಿಗೆ ಮುಂದಾದ ಸರ್ಕಾರ

ರೈತ ಹೋರಾಟಕ್ಕೆ ಗೆಲುವು: ನಾಳೆಯಿಂದಲೇ ಪಂಜಾಬ್, ಹರಿಯಾಣದಲ್ಲಿ ಭತ್ತ ಖರೀದಿಗೆ ಮುಂದಾದ ಸರ್ಕಾರ

ಕೇಂದ್ರವು ಅಕ್ಟೋಬರ್ 1 ರಿಂದ ಭತ್ತ ಕೊಳ್ಳಬೇಕಿತ್ತು. ಆದರೆ ಅದನ್ನು ಅಕ್ಟೋಬರ್ 11 ಕ್ಕೆ ಮುಂದೂಡಿತ್ತು. ಈಗ ರೈತರ ಹೋರಾಟ ಮಣಿದಿದೆ..

- Advertisement -
- Advertisement -

ಖಾರಿಫ್ ಭತ್ತ ಖರೀದಿ ಪ್ರಕ್ರಿಯೆಯನ್ನು ಮುಂದೂಡಿದ್ದ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಹರಿಯಾಣ ಮತ್ತು ಪಂಜಾಬ್ ರೈತರು ನಡೆಸಿದ ತೀವ್ರ ಹೋರಾಟಕ್ಕೆ ಜಯ ದೊರಕಿದೆ. ನಾಳೆಯಿಂದಲೇ (ಅಕ್ಟೋಬರ್ 03) ಭತ್ತ ಖರೀದಿ ಮಾಡಲಾಗುವುದು ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣೆ ಅಶ್ವಿನಿ ಕುಮಾರ್ ಚೌಬೆ ತಿಳಿಸಿದ್ದಾರೆ.

ಕೇಂದ್ರವು ಅಕ್ಟೋಬರ್ 1 ರಿಂದ ಭತ್ತ ಕೊಳ್ಳಬೇಕಿತ್ತು. ಆದರೆ ಅದನ್ನು ಅಕ್ಟೋಬರ್ 11 ಕ್ಕೆ ಮುಂದೂಡಿತ್ತು. ಇದರಿಂದ ಕೆರಳಿದ ರೈತರು ಕಳೆದೆರೆಡು ದಿನಗಳಿಂದ ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ತೀವ್ರಥರದ ಪ್ರತಿಭಟನೆ ನಡೆಸಿದ್ದರು.

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಉಪ ಮುಖ್ಯಮಂತ್ರಿ ದುಶ್ಯಂತ್ ಚೌತಲಾ ವಿರುದ್ಧ ಘೇರಾವ್ ಹಾಕಿ ಪ್ರತಿಭಟಿಸಿದ್ದರು. ಹಲವೆಡೆ ರೈತರ ಮೇಲೆ ಲಾಠಿಚಾರ್ಜ್, ಜಲಫಿರಂಗಿ ಸಿಡಿಸಲಾಗಿತ್ತು. ಹರಿಯಾಣದ ಜಜ್ಜಾರ್‌ನಲ್ಲಿ ಉಪ ಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ಅವರ ಕಾರ್ಯಕ್ರಮದ ವಿರುದ್ಧ ರೈತರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ರೈತರನ್ನು ತಡೆಯಲು ಭದ್ರತಾ ಸಿಬ್ಬಂದಿ ಜಲ ಫಿರಂಗಿ ಬಳಸಲಾಗಿತ್ತು.

ಕೇಂದ್ರದ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ ಮತ್ತು ಇತರ ರಾಜ್ಯ ಏಜೆನ್ಸಿಗಳು ಭತ್ತ ಕೊಳ್ಳುತ್ತವೆ. ಈಗಾಗಲೇ ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಬೆಳೆಗೆ ಹಾನಿಯಾಗುತ್ತಿದ್ದು, ಕೇಂದ್ರವು ಖಾರೀಫ್ ಭತ್ತ ಕೊಳ್ಳುವುದನ್ನು ತ್ವರಿತಗೊಳಿಸಬೇಕೆಂದು ರೈತರು ಒತ್ತಾಯಿಸಿ ಹೋರಾಟಕ್ಕಿಳಿದಿದ್ದರು. ಪಂಜಾಬ್ ಮತ್ತು ಹರಿಯಾಣ ರಾಜ್ಯಗಳು ಬಹುಪಾಲು ಭತ್ತ ಬೆಳೆಯುವುದರಿಂದ ಅಲ್ಲಿನ ಚಳವಳಿ ತೀವ್ರ ರೂಪ ಪಡೆದುಕೊಂಡಿತ್ತು. ಅದಕ್ಕೆ ಮಣಿದ ಸರ್ಕಾರ ನಾಳೆಯಿಂದಲೇ ಭತ್ತ ಖರೀದಿಗೆ ಮುಂದಾಗಿದೆ.

“ಇದು ರೈತರಿಗೆ ಸಂದ ದೊಡ್ಡ ಗೆಲುವು. ನಾಳೆಯಿಂದ ಹರಿಯಾಣ ಮತ್ತು ಪಂಜಾಬ್ ನಲ್ಲಿ ಖಾರಿಫ್ ಖರೀದಿ ಆರಂಭವಾಗಲಿದೆ. ರೈತರು ಸೇರಿದಂತೆ ಅವರ ಹೋರಾಟಕ್ಕೆ ಬೆಂಬಲ ನೀಡಿದ ಎಲ್ಲಾ ನಾಗರಿಕರಿಗೆ ಅಭಿನಂದನೆಗಳು” ಎಂದು ಸಂಯುಕ್ತ ಕಿಸಾನ್ ಮೋರ್ಚಾದ ಟ್ವಿಟರ್ ಹ್ಯಾಂಡಲ್ ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.

ಮತ್ತೊಮ್ಮೆ ರೈತ ಚಳುವಳಿ ಗೆದ್ದಿದೆ! ನಾಳೆ ಬೆಳಿಗ್ಗೆಯಿಂದ ಕೇಂದ್ರ ಸರ್ಕಾರ ಪಂಜಾಬ್ ಮತ್ತು ಹರಿಯಾಣದಲ್ಲಿ ಭತ್ತದ ಸಂಗ್ರಹವನ್ನು ಆರಂಭಿಸಲಿದೆ ಎಂದು ರೈತ ಹೋರಾಟಗಾರ ದೀಪಕ್ ಲಂಬಾ ತಿಳಿಸಿದ್ದಾರೆ.

ಪಂಜಾಬ್‌ನ ನೂತನ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿಯವರು ಇತ್ತೀಚಿನ ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ವೇಳೆ ಭತ್ತ ಖರೀದಿ ಪ್ರಕ್ರಿಯೆ ಮುಂದೂಡಿರುವುದನ್ನು ರದ್ದುಗೊಳಿಸಿ ಕೂಡಲೇ ಭತ್ತ ಖರೀದಿ ಮಾಡಬೇಕೆಂದು ಒತ್ತಾಯಿಸಿದ್ದರು. ಪಂಜಾಬ್ ರಾಜ್ಯವು ದೇಶದಲ್ಲಿಯೇ ಅತಿ ಹೆಚ್ಚು ಭತ್ತ ಬೆಳೆಯುವ ರಾಜ್ಯವಾಗಿದ್ದು ಕೇಂದ್ರದ ಕ್ರಮದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಚನ್ನಿ ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿದ್ದರು.


ಇದನ್ನೂ ಓದಿ: ಪಿಎಂ ಭೇಟಿಯಾದ ಪಂಜಾಬ್ ನೂತನ ಸಿಎಂ ಚನ್ನಿ: ಕೃಷಿ ಕಾಯ್ದೆಗಳನ್ನು ಕೈಬಿಡಲು ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...