Homeಮುಖಪುಟಹಿಂದಿ ಹೇರಿಕೆ ವಿರುದ್ಧದ ಹೋರಾಟಕ್ಕೆ ಜಯ: ಮೊಸರಿಗೆ ದಹಿ ಪದ ಬಳಸಬೇಕೆಂಬ ಆದೇಶ ವಾಪಸ್

ಹಿಂದಿ ಹೇರಿಕೆ ವಿರುದ್ಧದ ಹೋರಾಟಕ್ಕೆ ಜಯ: ಮೊಸರಿಗೆ ದಹಿ ಪದ ಬಳಸಬೇಕೆಂಬ ಆದೇಶ ವಾಪಸ್

- Advertisement -
- Advertisement -

ಮೊಸರು ಬದಲಿಗೆ ಹಿಂದಿ ಪದ ದಹಿ ಎಂದು ಬಳಸಬೇಕೆಂದು ಕರ್ನಾಟಕ ಮತ್ತು ತಮಿಳುನಾಡು ಹಾಲು ಒಕ್ಕೂಟಗಳಿಗೆ ನೀಡಿದ್ದ ನಿರ್ದೇಶನವನ್ನು ಕೇಂದ್ರ ಸರ್ಕಾರದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಇಂದು ವಾಪಸ್ ಪಡೆದಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಪ್ರಾಧಿಕಾರ, “Curd ಪದ ಬದಲಿಗೆ ಮೊಸರು, ಥಾಯಿರ್, ಪೆರುಗು ಇತ್ಯಾದಿ ಪ್ರಾದೇಶಿಕ ಪದಗಳನ್ನು ಬಳಸಬಹುದೆಂದು” ತಿಳಿಸಿದೆ.

ಜಯವಾಗಿದೆ.. ಜೈ ಕನ್ನಡಿಗ ದಹಿ ಹಿಂದಿ ಪದ ಬಳಕೆ ಕಡ್ಡಾಯ ಆದೇಶ ವಾಪಸ್ ಪಡೆದ fssai. ನಾವು ಸುಮ್ಮನಿರದೆ ಧ್ವನಿ ಎತ್ತಿದರೆ ಎಲ್ಲವೂ ಸಾಧ್ಯ.. ಹಿಂದಿಹೇರಿಕೆ ನಿಲ್ಲಲಿ.. ಇದಕ್ಕೆ ಧ್ವನಿಯಾದ ಎಲ್ಲ ಕನ್ನಡಿಗರಿಗೂ ಧನ್ಯವಾದಗಳು… ನಮ್ಮ ನಂದಿನಿ ನಮ್ಮ ಹೆಮ್ಮೆ ಎಂದು ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ ಟ್ವೀಟ್ ಮಾಡಿದ್ದಾರೆ.

ಈ ಮೊದಲು ಫುಡ್‌ ಸೇಫ್ಟಿ ಅಂಡ್ ಸ್ಟ್ಯಾಂಡರ್ಡ್ ಅಥಾರಿಟಿ ಆಫ್ ಇಂಡಿಯಾ ವಿರುದ್ಧ ತಮಿಳು ನಾಡು ಸಿಎಂ ಎಂ.ಕೆ ಸ್ಟಾಲಿನ್, ಕರ್ನಾಟಕ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದರು.

ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸಿರುವುದು,ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದು ತಪ್ಪು. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ನಂದಿನಿ ಕನ್ನಡಿಗರ ಆಸ್ತಿ, ಕನ್ನಡಿಗರ ಅಸ್ಮಿತೆ ಹಾಗೂ ಕನ್ನಡಿಗರ ಜೀವನಾಡಿ. ಇದು ಗೊತ್ತಿದ್ದರೂ ಹಿಂದಿ ಹೇರಿಕೆಯ ಅಹಂ ತೋರಲಾಗಿದೆ. ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್‌ ಶಾರವರು ಮಂಡ್ಯದ ಸಭೆಯೊಂದರಲ್ಲಿ, ಗುಜರಾತಿನ ಅಮುಲ್ ಜತೆ ನಂದಿನಿಯನ್ನು ವಿಲೀನ ಮಾಡುವುದಾಗಿ ಹೇಳಿದ್ದರು. ಹಿಂದಿ ಪದ ಮುದ್ರಣ ನಂದಿನಿ ಹೈಜಾಕಿನ ಅರಂಭವಾ? ಕನ್ನಡಕ್ಕೆ ಕೊಕ್ಕೆ ಹಾಕಿ ಹಿಂದಿಯನ್ನು ಮೆಲ್ಲಗೆ ಹೇರಿ ಇಡೀ ನಂದಿನಿ ಪದಾರ್ಥಗಳನ್ನು ಹಳ್ಳ ಹಿಡಿಸುವುದು ಇದರ ಹಿಂದಿರುವ ಘೋರ ಷಡ್ಯಂತ್ರ. ಆಮೇಲೆ, ನಂದಿನಿ ಉತ್ಪನ್ನಗಳು ಮಾರಾಟವಾಗುತ್ತಿಲ್ಲ ಎಂದು ಕಥೆ ಕಟ್ಟಿ, ಅದನ್ನು ಉಳಿಸುವ ನಾಟಕವಾಡಿ ನಂದಿನಿಯನ್ನು ಸಲೀಸಾಗಿ ಅಮುಲ್ ಜತೆಗೆ ವಿಲೀನ ಮಾಡುವ ಹುನ್ನಾರವಷ್ಟೇ ಇದು ಎಂದು ಕಿಡಿಕಾರಿದ್ದಾರೆ.

ಇಲ್ಲಿ ಹಿಂಬಾಗಿಲಿನಿಂದ ಅಲ್ಲ, ನೇರವಾಗಿಯೇ ಹಿಂದಿ ಹೇರಿಕೆ ಆಗಿದೆ. ಅದನ್ನು ಡಬಲ್ ಎಂಜಿನ್ ಬಿಜೆಪಿ ಸರಕಾರ ಹಾಗೂ ಅದರ ಕೀಲುಗೊಂಬೆ ಕೆಎಂಎಫ್ ಸದ್ದಿಲ್ಲದೆ ಒಪ್ಪಿಕೊಂಡಿವೆ. ಇದು ಕನ್ನಡ ವಿರೋಧಿ ಕೆಲಸ. ತಕ್ಷಣವೇ ದಹಿ ಪದ ಮುದ್ರಿಸುವುದನ್ನು ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕರ್ನಾಟಕದಲ್ಲಿ ಮಾರಾಟವಾಗುವ ನಂದಿನಿ ಮೊಸರಿಗೆ ಹಿಂದಿಯಲ್ಲಿ ಕಡ್ಡಾಯವಾಗಿ ‘ದಹಿ’ ಎಂದು ಹಾಕಬೇಕೆಂಬ ಕೇಂದ್ರ ಸರ್ಕಾರದ ಆದೇಶ ಮೂರ್ಖತನದ ಪರಮಾವಧಿ. ನಿಧಾನವಾಗಿ ನಂದಿನಿಯನ್ನು ಅಮುಲ್ ಜೊತೆ ವಿಲೀನಗೊಳಿಸುವ ಹುನ್ನಾರ. ಈ ರೀತಿಯ ಹಿಂದಿ ಹೇರಿಕೆ ಸಲ್ಲ. ಇದನ್ನು ನಾವು ವಿರೋಧಿಸುತ್ತೇವೆ. ಈ ಆದೇಶವನ್ನು ಕೇಂದ್ರ ಸರ್ಕಾರ ಈ ಕೂಡಲೇ ಹಿಂಪಡೆಯಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಇನ್ನೊಂದೆಡೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಹ ಹಿಂದಿ ಹೇರಿಕೆಯನ್ನು ವಿರೋಧಿಸಿದ್ದಾರೆ. “ನಮ್ಮದೇ ರಾಜ್ಯಗಳಲ್ಲಿ ತಮಿಳು ಮತ್ತು ಕನ್ನಡವನ್ನು ಹಿಮ್ಮೆಟ್ಟಿಸುವ, ಮೊಸರು ಪೊಟ್ಟಣಕ್ಕೂ ಹಿಂದಿಯಲ್ಲಿ ಬರೆಯುವಂತೆ ನಿರ್ದೇಶಿಸುವ ಮಟ್ಟಕ್ಕೆ ನಾಚಿಕೆಯಿಲ್ಲದೆ ಹಿಂದಿ ಹೇರಿಕೆ ಬಂದು ನಿಂತಿದೆ. ನಮ್ಮ ಮಾತೃಭಾಷೆಯನ್ನು ನಿರ್ಲಕ್ಷಿಸುವ ಇಂತಹ ನಿರ್ಲಜ್ಜ ಹೊಣೆಗಾರರನ್ನು ದಕ್ಷಿಣದಿಂದ ಶಾಶ್ವತವಾಗಿ ಬಹಿಷ್ಕರಿಸುವುದನ್ನು ಈ ಆದೇಶ ಖಚಿತಪಡಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಗೌರಿಶಂಕರ್‌ ಆಯ್ಕೆ ಅಸಿಂಧು ಆದೇಶವನ್ನ ಒಂದು ತಿಂಗಳು ಅಮಾನತಿನಲ್ಲಿರಿಸಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...