Homeಮುಖಪುಟಮಹಿಳಾ ಸೇನಾಧಿಕಾರಿಗಳಿಗೆ ಮತ್ತೊಂದು ಜಯ: ಖಾಯಂ ಆಯೋಗಕ್ಕೆ ಸುಪ್ರೀಂ ಆದೇಶ

ಮಹಿಳಾ ಸೇನಾಧಿಕಾರಿಗಳಿಗೆ ಮತ್ತೊಂದು ಜಯ: ಖಾಯಂ ಆಯೋಗಕ್ಕೆ ಸುಪ್ರೀಂ ಆದೇಶ

- Advertisement -
- Advertisement -

ಸುಪ್ರೀಂ ಕೋರ್ಟ್‌ನಲ್ಲಿ 39 ಮಹಿಳಾ ಸೇನಾ ಅಧಿಕಾರಿಗಳು ನಡೆಸಿದ ಕಾನೂನು ಹೋರಾಟದಲ್ಲಿ ಗೆಲುವು ಸಾಧಿಸಿ, ಇದೀಗ ಶಾಶ್ವತ ಆಯೋಗವನ್ನು (Permanent Commission) ಪಡೆದುಕೊಂಡಿದ್ದಾರೆ. ನೂತನ ಖಾಯಂ ಆಯೋಗವನ್ನು ಏಳು ಕರ್ತವ್ಯದ ದಿನಗಳ ಒಳಗೆ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಸರ್ಕಾರಕ್ಕೆ ಆದೇಶಿಸಿದೆ.

ಪರ್ಮನೆಂಟ್ ಕಮಿಷನ್ (ಖಾಯಂ ಆಯೋಗ) ಎಂದರೆ ನಿವೃತ್ತಿಯವರೆಗೂ ಸೇನಾ ವೃತ್ತಿಯಲ್ಲಿ ಇರುವುದು. ಕಿರು ಸೇವಾ ಆಯೋಗವು 10 ವರ್ಷಗಳ ಅವಧಿಯದ್ದಾಗಿದೆ. ಖಾಯಂ ಆಯೋಗವನ್ನು ಪಡೆದುಕೊಳ್ಳಲು ಸಾಧ್ಯವಾಗದೆ ಇದ್ದರೆ ಅಧಿಕಾರಿಯು ನಾಲ್ಕು ವರ್ಷಗಳ ವಿಸ್ತರಣೆಯನ್ನು ಆಯ್ದುಕೊಳ್ಳಬಹುದಾಗಿದೆ.

ಖಾಯಂ ಆಯೋಗವನ್ನು ನಿರಾಕರಿಸಲ್ಪಟ್ಟಿದ್ದರಿಂದ ಕಿರು ಸೇವಾ ಆಯೋಗದ 71 ಮಹಿಳಾ ಅಧಿಕಾರಿಗಳು  ಶಾಶ್ವತ ಆಯೋಗಕ್ಕಾಗಿ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ 71 ಅಧಿಕಾರಿಗಳ ಪೈಕಿ 39 ಮಹಿಳಾ ಅಧಿಕಾರಿಗಳು ಖಾಯಂ ಆಯೋಗಕ್ಕೆ ಅರ್ಹರಾಗಿದ್ದಾರೆ. ಇನ್ನು ಏಳು ಮಂದಿ ವೈದ್ಯಕೀಯವಾಗಿ ಅಸಮರ್ಥರು ಹಾಗೂ 25 ಮಂದಿ ‘ಶಿಸ್ತಿನ ಸಮಸ್ಯೆ’ ಹೊಂದಿದ್ದಾರೆ ಎಂದು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿತ್ತು.

ತಿರಸ್ಕೃತರಾಗಿರುವ 25 ಮಹಿಳಾ ಅಧಿಕಾರಿಗಳು ಯಾವ ಕಾರಣಕ್ಕಾಗಿ ಶಾಶ್ವತ ಆಯೋಗಕ್ಕೆ ಅರ್ಹತೆ ಪಡೆದುಕೊಂಡಿಲ್ಲ ಎಂಬುದನ್ನು ವಿವರಿಸುವ ವಿಸ್ತೃತ ವರದಿ ನೀಡುವಂತೆ ಸುಪ್ರೀಂಕೋರ್ಟ್ ಒಕ್ಕೂಟ ಸರ್ಕಾರಕ್ಕೆ ಸೂಚಿಸಿತ್ತು.

ಇದನ್ನೂ ಓದಿ: ’ಲವ್ ಸ್ಟೋರಿ’: ಫ್ಯೂಡಲ್ ಮನಸ್ಥಿತಿಯ ತೆಲುಗು ಸಿನಿಮಾರಂಗದಲ್ಲೊಂದು ಸಣ್ಣ ಆಶಾವಾದದ ಮಿಂಚು

ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ಹಾಗೂ ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರನ್ನು ಒಳಗೊಂಡ ನ್ಯಾಯಪೀಠ, ಮಹಿಳಾ ಅಧಿಕಾರಿಗಳಿಗೆ ಖಾಯಂ ಆಯೋಗ ರಚಿಸುವಂತೆ ತೀರ್ಪು ನೀಡಿದೆ. ಅಲ್ಲದೆ, ಯಾವುದೇ ಅಧಿಕಾರಿಯನ್ನು ಸೇವೆಯಿಂದ ಬಿಡುಗಡೆ ಮಾಡಬಾರದು ಎಂದು ಅಕ್ಟೋಬರ್ 1ರಂದು ಮಧ್ಯಂತರ ಆದೇಶ ನೀಡಿತ್ತು.

ಈ ಹಿಂದೆ ಸುಪ್ರೀಂಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಅವರನ್ನು ಅನರ್ಹಗೊಳಿಸಲಾಗಿದೆ ಎಂದು ಮಹಿಳಾ ಅಧಿಕಾರಿಗಳ ಪರ ವಕಾಲತ್ತು ವಹಿಸಿದ್ದ ಹಿರಿಯ ವಕೀಲರಾದ ವಿ. ಮೋಹನ, ಹುಜೇಫಾ ಅಹ್ಮದಿ ಮತ್ತು ಮೀನಾಕ್ಷಿ ಅರೋರಾ ಆರೋಪಿಸಿದ್ದರು.

ಕಳೆದ ಮಾರ್ಚ್ ತಿಂಗಳಲ್ಲಿ ಸುಪ್ರೀಂಕೋರ್ಟ್ ಮಾನದಂಡವನ್ನು ತಲುಪಿದ ಕಿರಿಯ ಸೇವಾ ಆಯೋಗದ ಮಹಿಳಾ ಅಧಿಕಾರಿಗಳಿಗೆ ಖಾಯಂ ಆಯೋಗವನ್ನು ನೀಡಬೇಕೆಂದು ತೀರ್ಪು ನೀಡಿತ್ತು. ಈ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿತ್ತು.

ಮಹಿಳಾ ಅಧಿಕಾರಿಗಳಿಗೆ ಖಾಯಂ ಆಯೋಗವನ್ನು ನೀಡುವ ಸೇನೆಯ ಮೌಲ್ಯಮಾಪನ ಮಾನದಂಡವು ಅವರ ವಿರುದ್ಧ ವ್ಯವಸ್ಥಿತವಾಗಿ ತಾರತಮ್ಯ ಎಸಗುತ್ತಿದೆ ಎಂದು ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.

ಈ ಹಿಂದೆ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪಿನ ಪರಿಣಾಮವಾಗಿ ಜುಲೈ ತಿಂಗಳಿನಲ್ಲಿ 147 ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗವನ್ನು ನೀಡಲಾಗಿತ್ತು.

ಭಾರತೀಯ ಸೈನ್ಯದಲ್ಲಿ ಉನ್ನತ ನಾಯಕತ್ವದ ನೇತೃತ್ವಕ್ಕೆ ಸಶಕ್ತಗೊಳಿಸಲು ಶಾಶ್ವತ ಆಯೋಗ ಮಂಜೂರಾದ ಎಲ್ಲಾ ಮಹಿಳಾ ಅಧಿಕಾರಿಗಳನ್ನು ವಿಶೇಷ ತರಬೇತಿ ಕೋರ್ಸ್‌ಗಳಿಗೆ ಮತ್ತು ಸವಾಲಿನ ಮಿಲಿಟರಿ ಕಾರ್ಯಯೋಜನೆಗಳಿಗೆ ಒಳಪಡಿಸಲಾಗುತ್ತದೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆ ನೀಡಿತ್ತು.


ಇದನ್ನೂ ಓದಿ: ನಕ್ಸಲೈಟ್‌ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿ ಎಂದು ತೀರ್ಪಿತ್ತ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...