Homeಮುಖಪುಟಮಹಿಳಾ ಸೇನಾಧಿಕಾರಿಗಳಿಗೆ ಮತ್ತೊಂದು ಜಯ: ಖಾಯಂ ಆಯೋಗಕ್ಕೆ ಸುಪ್ರೀಂ ಆದೇಶ

ಮಹಿಳಾ ಸೇನಾಧಿಕಾರಿಗಳಿಗೆ ಮತ್ತೊಂದು ಜಯ: ಖಾಯಂ ಆಯೋಗಕ್ಕೆ ಸುಪ್ರೀಂ ಆದೇಶ

- Advertisement -
- Advertisement -

ಸುಪ್ರೀಂ ಕೋರ್ಟ್‌ನಲ್ಲಿ 39 ಮಹಿಳಾ ಸೇನಾ ಅಧಿಕಾರಿಗಳು ನಡೆಸಿದ ಕಾನೂನು ಹೋರಾಟದಲ್ಲಿ ಗೆಲುವು ಸಾಧಿಸಿ, ಇದೀಗ ಶಾಶ್ವತ ಆಯೋಗವನ್ನು (Permanent Commission) ಪಡೆದುಕೊಂಡಿದ್ದಾರೆ. ನೂತನ ಖಾಯಂ ಆಯೋಗವನ್ನು ಏಳು ಕರ್ತವ್ಯದ ದಿನಗಳ ಒಳಗೆ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಸರ್ಕಾರಕ್ಕೆ ಆದೇಶಿಸಿದೆ.

ಪರ್ಮನೆಂಟ್ ಕಮಿಷನ್ (ಖಾಯಂ ಆಯೋಗ) ಎಂದರೆ ನಿವೃತ್ತಿಯವರೆಗೂ ಸೇನಾ ವೃತ್ತಿಯಲ್ಲಿ ಇರುವುದು. ಕಿರು ಸೇವಾ ಆಯೋಗವು 10 ವರ್ಷಗಳ ಅವಧಿಯದ್ದಾಗಿದೆ. ಖಾಯಂ ಆಯೋಗವನ್ನು ಪಡೆದುಕೊಳ್ಳಲು ಸಾಧ್ಯವಾಗದೆ ಇದ್ದರೆ ಅಧಿಕಾರಿಯು ನಾಲ್ಕು ವರ್ಷಗಳ ವಿಸ್ತರಣೆಯನ್ನು ಆಯ್ದುಕೊಳ್ಳಬಹುದಾಗಿದೆ.

ಖಾಯಂ ಆಯೋಗವನ್ನು ನಿರಾಕರಿಸಲ್ಪಟ್ಟಿದ್ದರಿಂದ ಕಿರು ಸೇವಾ ಆಯೋಗದ 71 ಮಹಿಳಾ ಅಧಿಕಾರಿಗಳು  ಶಾಶ್ವತ ಆಯೋಗಕ್ಕಾಗಿ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ 71 ಅಧಿಕಾರಿಗಳ ಪೈಕಿ 39 ಮಹಿಳಾ ಅಧಿಕಾರಿಗಳು ಖಾಯಂ ಆಯೋಗಕ್ಕೆ ಅರ್ಹರಾಗಿದ್ದಾರೆ. ಇನ್ನು ಏಳು ಮಂದಿ ವೈದ್ಯಕೀಯವಾಗಿ ಅಸಮರ್ಥರು ಹಾಗೂ 25 ಮಂದಿ ‘ಶಿಸ್ತಿನ ಸಮಸ್ಯೆ’ ಹೊಂದಿದ್ದಾರೆ ಎಂದು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿತ್ತು.

ತಿರಸ್ಕೃತರಾಗಿರುವ 25 ಮಹಿಳಾ ಅಧಿಕಾರಿಗಳು ಯಾವ ಕಾರಣಕ್ಕಾಗಿ ಶಾಶ್ವತ ಆಯೋಗಕ್ಕೆ ಅರ್ಹತೆ ಪಡೆದುಕೊಂಡಿಲ್ಲ ಎಂಬುದನ್ನು ವಿವರಿಸುವ ವಿಸ್ತೃತ ವರದಿ ನೀಡುವಂತೆ ಸುಪ್ರೀಂಕೋರ್ಟ್ ಒಕ್ಕೂಟ ಸರ್ಕಾರಕ್ಕೆ ಸೂಚಿಸಿತ್ತು.

ಇದನ್ನೂ ಓದಿ: ’ಲವ್ ಸ್ಟೋರಿ’: ಫ್ಯೂಡಲ್ ಮನಸ್ಥಿತಿಯ ತೆಲುಗು ಸಿನಿಮಾರಂಗದಲ್ಲೊಂದು ಸಣ್ಣ ಆಶಾವಾದದ ಮಿಂಚು

ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ಹಾಗೂ ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರನ್ನು ಒಳಗೊಂಡ ನ್ಯಾಯಪೀಠ, ಮಹಿಳಾ ಅಧಿಕಾರಿಗಳಿಗೆ ಖಾಯಂ ಆಯೋಗ ರಚಿಸುವಂತೆ ತೀರ್ಪು ನೀಡಿದೆ. ಅಲ್ಲದೆ, ಯಾವುದೇ ಅಧಿಕಾರಿಯನ್ನು ಸೇವೆಯಿಂದ ಬಿಡುಗಡೆ ಮಾಡಬಾರದು ಎಂದು ಅಕ್ಟೋಬರ್ 1ರಂದು ಮಧ್ಯಂತರ ಆದೇಶ ನೀಡಿತ್ತು.

ಈ ಹಿಂದೆ ಸುಪ್ರೀಂಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಅವರನ್ನು ಅನರ್ಹಗೊಳಿಸಲಾಗಿದೆ ಎಂದು ಮಹಿಳಾ ಅಧಿಕಾರಿಗಳ ಪರ ವಕಾಲತ್ತು ವಹಿಸಿದ್ದ ಹಿರಿಯ ವಕೀಲರಾದ ವಿ. ಮೋಹನ, ಹುಜೇಫಾ ಅಹ್ಮದಿ ಮತ್ತು ಮೀನಾಕ್ಷಿ ಅರೋರಾ ಆರೋಪಿಸಿದ್ದರು.

ಕಳೆದ ಮಾರ್ಚ್ ತಿಂಗಳಲ್ಲಿ ಸುಪ್ರೀಂಕೋರ್ಟ್ ಮಾನದಂಡವನ್ನು ತಲುಪಿದ ಕಿರಿಯ ಸೇವಾ ಆಯೋಗದ ಮಹಿಳಾ ಅಧಿಕಾರಿಗಳಿಗೆ ಖಾಯಂ ಆಯೋಗವನ್ನು ನೀಡಬೇಕೆಂದು ತೀರ್ಪು ನೀಡಿತ್ತು. ಈ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿತ್ತು.

ಮಹಿಳಾ ಅಧಿಕಾರಿಗಳಿಗೆ ಖಾಯಂ ಆಯೋಗವನ್ನು ನೀಡುವ ಸೇನೆಯ ಮೌಲ್ಯಮಾಪನ ಮಾನದಂಡವು ಅವರ ವಿರುದ್ಧ ವ್ಯವಸ್ಥಿತವಾಗಿ ತಾರತಮ್ಯ ಎಸಗುತ್ತಿದೆ ಎಂದು ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.

ಈ ಹಿಂದೆ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪಿನ ಪರಿಣಾಮವಾಗಿ ಜುಲೈ ತಿಂಗಳಿನಲ್ಲಿ 147 ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗವನ್ನು ನೀಡಲಾಗಿತ್ತು.

ಭಾರತೀಯ ಸೈನ್ಯದಲ್ಲಿ ಉನ್ನತ ನಾಯಕತ್ವದ ನೇತೃತ್ವಕ್ಕೆ ಸಶಕ್ತಗೊಳಿಸಲು ಶಾಶ್ವತ ಆಯೋಗ ಮಂಜೂರಾದ ಎಲ್ಲಾ ಮಹಿಳಾ ಅಧಿಕಾರಿಗಳನ್ನು ವಿಶೇಷ ತರಬೇತಿ ಕೋರ್ಸ್‌ಗಳಿಗೆ ಮತ್ತು ಸವಾಲಿನ ಮಿಲಿಟರಿ ಕಾರ್ಯಯೋಜನೆಗಳಿಗೆ ಒಳಪಡಿಸಲಾಗುತ್ತದೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆ ನೀಡಿತ್ತು.


ಇದನ್ನೂ ಓದಿ: ನಕ್ಸಲೈಟ್‌ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿ ಎಂದು ತೀರ್ಪಿತ್ತ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...