Homeಚಳವಳಿಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ಬಹುತೇಕ ಸುಡಗಾಡು ಸಿದ್ದ ದಲಿತ ಸಮುದಾಯದಿಂದ ಕೂಡಿದ ಅಂಚೆ ಸೋಮನಹಳ್ಳಿಯಲ್ಲಿ ಮದ್ಯದಂಗಡಿ ಸ್ಥಾಪನೆ ವಿರುದ್ಧ ತೀವ್ರ ಹೋರಾಟ ನಡೆದಿತ್ತು.

- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಸಿಂಗಟಗೆರೆ ಹೋಬಳಿಯ ಅಂಚೆ ಸೋಮನಹಳ್ಳಿ ಗ್ರಾಮದಲ್ಲಿ ಸ್ಥಾಪನೆಯಾಗಿದ್ದ ಮದ್ಯದಂಗಡಿ ತೆರವಿಗೆ ಮಹಿಳೆಯರು ನಡೆಸಿದ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ. ಅರವತ್ತು ದಿವಸದ ಒಳಗೆ ಮದ್ಯದ ಅಂಗಡಿಯನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಅಬಕಾರಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.

ಬಹುತೇಕ ಸುಡಗಾಡು ಸಿದ್ದ ದಲಿತ ಸಮುದಾಯದಿಂದ ಕೂಡಿದ ಅಂಚೆ ಸೋಮನಹಳ್ಳಿ ಒಂದು ಚಿಕ್ಕ ಗ್ರಾಮ. ಗ್ರಾಮಸ್ಥರ ವಿರೋಧದ ನಡುವೆಯೇ ಏಕಾಏಕಿ ಊರಿನಲ್ಲಿ ಮದ್ಯದಂಗಡಿ ತೆರೆಯಲು ಕೆಲವರು ಮುಂದಾಗಿದ್ದಾರೆ. ಇದು ಮಹಿಳೆಯ ಆಕ್ರೋಶಕ್ಕೆ ಕಾರಣವಾಗಿತ್ತು. ಕೂಲಿ ಕಾರ್ಮಿಕರಾಗಿರುವ ಇಲ್ಲಿನ ಜನರು ಜೀವನೋಪಾಯಕ್ಕೆ ಕೂಲಿಯಿಂದ ಬರುವ ಅಲ್ಪ ಆದಾಯವನ್ನೇ ನಂಬಿದ್ದಾರೆ. ಮದ್ಯದಂಗಡಿಯಿಂದ ಬಡ ಜನರ ಜೀವನ ಬೀದಿಗೆ ಬೀಳಲಿದೆ ಎಂಬ ಆತಂಕದಿಂದ ಮಹಿಳೆಯರು ನಿರಂತರವಾಗಿ ಪ್ರತಿಭಟನೆ ನಡೆಸಿದ್ದರು.

ಮದ್ಯದಂಗಡಿ ತೆರವಿಗೆ ಗ್ರಾಮ ಪಂಚಾಯತಿ ಸದಸ್ಯರಾದ ಸವಿತಾ ಪ್ರಸನ್ನ, ಸ್ಥಳೀಯ ಹೋರಾಟಗಾರ ಮಂಜುನಾಥ್‌ ನೇತೃತ್ವದಲ್ಲಿ ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದ್ದರು. ಅಂಚೆ ಸೋಮನಹಳ್ಳಿಯ ಬಹುತೇಕ ಜನರು ಅವಿದ್ಯಾವಂತ ಕೂಲಿ ಕಾರ್ಮಿಕರು. ಜನರ ಕಾನೂನಿನ ಅಜ್ಞಾನವನ್ನು ಅಸ್ತ್ರ ಮಾಡಿಕೊಂಡು ಕೆಲವರು ತಮ್ಮ ಲಾಭಕ್ಕಾಗಿ ಊರಿನ ಆರೋಗ್ಯವನ್ನು ಬಲಿಕೊಡಲು ಹೊರಟಿದ್ದಾರೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ದೂರು ದಾಖಲಿಸಿದ್ದರು.

ದೂರು ಆಲಿಸಿದ ಅಬಕಾರಿ ಜಿಲ್ಲಾ ನ್ಯಾಯಾಲಯ “ಅಂಚೆ ಸೋಮನಹಳ್ಳಿ ಗ್ರಾಮದ ಬಾಪೂಜಿ ಕಾಲೋನಿ ರಸ್ತೆಯಲ್ಲಿರುವ ಸರ್ವೇ ನಂ.38/12, ಸಂಖ್ಯೆ 323ರಲ್ಲಿ ಹೊಂದಿರುವ ಸಿಎಲ್‌-2 ಸನ್ನದನ್ನು ಸ್ಥಳೀಯ ನಿವಾಸಿಗಳಿಗೆ ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಅಬಕಾರಿ ಸನ್ನದುಗಳು (ಸಾಮಾನ್ಯ ಷರತ್ತುಗಳು) ನಿಯಮಾವಳಿ 1967ರ ನಿಯಮ 5(4)(ಎ)ರ ರೀತ್ಯಾ ಹಾಲಿ ಇರುವ ಸ್ಥಳದಿಂದ ಬೇರೊಂದು ಆಕ್ಷೇಪಣಾ ರಹಿತ ಸ್ಥಳಕ್ಕೆ 60 ದಿನಗಳೊಳಗಾಗಿ ಸ್ಥಳಾಂತರಿಸಿಕೊಳ್ಳಲು” ಆದೇಶಿಸಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಹೋರಾಟಗಾರರಾದ ಮಂಜುನಾಥ್‌ರವರು “ಕಾನೂನು ಸಂವಿಧಾನ ನಮ್ಮ ಕಡೆಯಿವೆ ಎಂಬುದನ್ನು ಈ ತೀರ್ಪು ನಮಗೆ ತೋರಿಸಿಕೊಟ್ಟಿದೆ. ನಾವು ಕಾನೂನು ರೀತಿ ಹೋರಾಡಿ ಜಯ ಗಳಿಸಬಹುದು ಎಂಬುದಕ್ಕೆ ಇದು ಉದಾಹರಣೆ. ಅಂಬೇಡ್ಕರ್‌ರವರ ಸಂವಿಧಾನದಿಂದ ನಾವು ಗೆದ್ದಿದ್ದೇವೆ” ಎಂದಿದ್ದಾರೆ.

ಈ ಹಿಂದೆ ನಾನುಗೌರಿ.ಕಾಂ ಈ ಹೋರಾಟದ ಕುರಿತು ವಿಸ್ತೃತವಾಗಿ ವರದಿ ಮಾಡಿತ್ತು. ಅದನ್ನು ಇಲ್ಲಿ ಓದಬಹುದು.

ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ


ಇದನ್ನೂ ಓದಿ: ಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...