Homeಚಳವಳಿಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ಬಹುತೇಕ ಸುಡಗಾಡು ಸಿದ್ದ ದಲಿತ ಸಮುದಾಯದಿಂದ ಕೂಡಿದ ಅಂಚೆ ಸೋಮನಹಳ್ಳಿಯಲ್ಲಿ ಮದ್ಯದಂಗಡಿ ಸ್ಥಾಪನೆ ವಿರುದ್ಧ ತೀವ್ರ ಹೋರಾಟ ನಡೆದಿತ್ತು.

- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಸಿಂಗಟಗೆರೆ ಹೋಬಳಿಯ ಅಂಚೆ ಸೋಮನಹಳ್ಳಿ ಗ್ರಾಮದಲ್ಲಿ ಸ್ಥಾಪನೆಯಾಗಿದ್ದ ಮದ್ಯದಂಗಡಿ ತೆರವಿಗೆ ಮಹಿಳೆಯರು ನಡೆಸಿದ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ. ಅರವತ್ತು ದಿವಸದ ಒಳಗೆ ಮದ್ಯದ ಅಂಗಡಿಯನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಅಬಕಾರಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.

ಬಹುತೇಕ ಸುಡಗಾಡು ಸಿದ್ದ ದಲಿತ ಸಮುದಾಯದಿಂದ ಕೂಡಿದ ಅಂಚೆ ಸೋಮನಹಳ್ಳಿ ಒಂದು ಚಿಕ್ಕ ಗ್ರಾಮ. ಗ್ರಾಮಸ್ಥರ ವಿರೋಧದ ನಡುವೆಯೇ ಏಕಾಏಕಿ ಊರಿನಲ್ಲಿ ಮದ್ಯದಂಗಡಿ ತೆರೆಯಲು ಕೆಲವರು ಮುಂದಾಗಿದ್ದಾರೆ. ಇದು ಮಹಿಳೆಯ ಆಕ್ರೋಶಕ್ಕೆ ಕಾರಣವಾಗಿತ್ತು. ಕೂಲಿ ಕಾರ್ಮಿಕರಾಗಿರುವ ಇಲ್ಲಿನ ಜನರು ಜೀವನೋಪಾಯಕ್ಕೆ ಕೂಲಿಯಿಂದ ಬರುವ ಅಲ್ಪ ಆದಾಯವನ್ನೇ ನಂಬಿದ್ದಾರೆ. ಮದ್ಯದಂಗಡಿಯಿಂದ ಬಡ ಜನರ ಜೀವನ ಬೀದಿಗೆ ಬೀಳಲಿದೆ ಎಂಬ ಆತಂಕದಿಂದ ಮಹಿಳೆಯರು ನಿರಂತರವಾಗಿ ಪ್ರತಿಭಟನೆ ನಡೆಸಿದ್ದರು.

ಮದ್ಯದಂಗಡಿ ತೆರವಿಗೆ ಗ್ರಾಮ ಪಂಚಾಯತಿ ಸದಸ್ಯರಾದ ಸವಿತಾ ಪ್ರಸನ್ನ, ಸ್ಥಳೀಯ ಹೋರಾಟಗಾರ ಮಂಜುನಾಥ್‌ ನೇತೃತ್ವದಲ್ಲಿ ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದ್ದರು. ಅಂಚೆ ಸೋಮನಹಳ್ಳಿಯ ಬಹುತೇಕ ಜನರು ಅವಿದ್ಯಾವಂತ ಕೂಲಿ ಕಾರ್ಮಿಕರು. ಜನರ ಕಾನೂನಿನ ಅಜ್ಞಾನವನ್ನು ಅಸ್ತ್ರ ಮಾಡಿಕೊಂಡು ಕೆಲವರು ತಮ್ಮ ಲಾಭಕ್ಕಾಗಿ ಊರಿನ ಆರೋಗ್ಯವನ್ನು ಬಲಿಕೊಡಲು ಹೊರಟಿದ್ದಾರೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ದೂರು ದಾಖಲಿಸಿದ್ದರು.

ದೂರು ಆಲಿಸಿದ ಅಬಕಾರಿ ಜಿಲ್ಲಾ ನ್ಯಾಯಾಲಯ “ಅಂಚೆ ಸೋಮನಹಳ್ಳಿ ಗ್ರಾಮದ ಬಾಪೂಜಿ ಕಾಲೋನಿ ರಸ್ತೆಯಲ್ಲಿರುವ ಸರ್ವೇ ನಂ.38/12, ಸಂಖ್ಯೆ 323ರಲ್ಲಿ ಹೊಂದಿರುವ ಸಿಎಲ್‌-2 ಸನ್ನದನ್ನು ಸ್ಥಳೀಯ ನಿವಾಸಿಗಳಿಗೆ ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಅಬಕಾರಿ ಸನ್ನದುಗಳು (ಸಾಮಾನ್ಯ ಷರತ್ತುಗಳು) ನಿಯಮಾವಳಿ 1967ರ ನಿಯಮ 5(4)(ಎ)ರ ರೀತ್ಯಾ ಹಾಲಿ ಇರುವ ಸ್ಥಳದಿಂದ ಬೇರೊಂದು ಆಕ್ಷೇಪಣಾ ರಹಿತ ಸ್ಥಳಕ್ಕೆ 60 ದಿನಗಳೊಳಗಾಗಿ ಸ್ಥಳಾಂತರಿಸಿಕೊಳ್ಳಲು” ಆದೇಶಿಸಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಹೋರಾಟಗಾರರಾದ ಮಂಜುನಾಥ್‌ರವರು “ಕಾನೂನು ಸಂವಿಧಾನ ನಮ್ಮ ಕಡೆಯಿವೆ ಎಂಬುದನ್ನು ಈ ತೀರ್ಪು ನಮಗೆ ತೋರಿಸಿಕೊಟ್ಟಿದೆ. ನಾವು ಕಾನೂನು ರೀತಿ ಹೋರಾಡಿ ಜಯ ಗಳಿಸಬಹುದು ಎಂಬುದಕ್ಕೆ ಇದು ಉದಾಹರಣೆ. ಅಂಬೇಡ್ಕರ್‌ರವರ ಸಂವಿಧಾನದಿಂದ ನಾವು ಗೆದ್ದಿದ್ದೇವೆ” ಎಂದಿದ್ದಾರೆ.

ಈ ಹಿಂದೆ ನಾನುಗೌರಿ.ಕಾಂ ಈ ಹೋರಾಟದ ಕುರಿತು ವಿಸ್ತೃತವಾಗಿ ವರದಿ ಮಾಡಿತ್ತು. ಅದನ್ನು ಇಲ್ಲಿ ಓದಬಹುದು.

ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ


ಇದನ್ನೂ ಓದಿ: ಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...