Homeಸಿನಿಮಾಕ್ರೀಡೆಆಸ್ಟ್ರೇಲಿಯಾ ಎದುರು ಜಯ: ಐತಿಹಾಸಿಕ ಬಾರ್ಡರ್ ಗವಾಸ್ಕರ್ ಸರಣಿ ಭಾರತದ ಮಡಿಲಿಗೆ

ಆಸ್ಟ್ರೇಲಿಯಾ ಎದುರು ಜಯ: ಐತಿಹಾಸಿಕ ಬಾರ್ಡರ್ ಗವಾಸ್ಕರ್ ಸರಣಿ ಭಾರತದ ಮಡಿಲಿಗೆ

- Advertisement -
- Advertisement -

ಬ್ರಿಸ್ಬೇನ್‌‌ನಲ್ಲಿ ನಡೆದ ಆಸ್ಟ್ರೇಲಿಯಾ-ಭಾರತ ನಡುವಿನ ಬಾರ್ಡರ್ ಗವಾಸ್ಕರ್ ಸರಣಿಯ ನಾಲ್ಕನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಭಾರತ ರೋಚಕ ಜಯಗಳಿಸಿದೆ. ಆ ಮೂಲಕ 2-1 ಅಂತರದಿಂದ ಸರಣಿ ತನ್ನದಾಗಿಸಿಕೊಂಡಿದೆ.

ಇಂದಿನ ಕೊನೆಯ ಪಂದ್ಯದ ಐದನೇ ದಿನದಾಟದಲ್ಲಿ ಭಾರತದ ಗೆಲುವಿಗೆ 328 ರನ್‌ಗಳ ಗುರಿ ಪಡೆದಿತ್ತು. ಶುಭ್‌ಮನ್ ಗಿಲ್ ಮತ್ತು ರಿಷಬ್ ಪಂತ್‌ರವರ ಅದ್ಭುತ ಬ್ಯಾಂಟಿಂಗ್‌ನಿಂದ ಭಾರತ ಮೂರು ವಿಕೆಟ್‌ಗಳ ಜಯ ಪಡೆಯಿತು.

ಮೊದಲು ಬ್ಯಾಟ್ ಮಾಡಿದ್ದ ಆಸ್ಟ್ರೇಲಿಯಾ ಪ್ರಥಮ ಇನ್ನಿಂಗ್ಸ್‌ನಲ್ಲಿ 369 ಮತ್ತು ದ್ವಿತೀಯ ಇನ್ನಿಂಗ್ಸ್‌ನಲ್ಲಿ 294 ರನ್ ಗಳಿಸಿತ್ತು. ಇದಕ್ಕೆ ಪ್ರತಿಯಾಗಿ ಮೊದಲ ಇನ್ನಿಂಗ್ಸ್‌ನಲ್ಲಿ 336 ರನ್ ಗಳಿಸಿದ್ದ ಭಾರತ, ಎರಡನೇ ಇನ್ನಿಂಗ್ಸ್‌ನಲ್ಲಿ 329 ರನ್ ಬಾರಿಸಿ ಜಯ ತನ್ನದಾಗಿಸಿಕೊಂಡಿತು.

ಕಳೆದ ಬಾರಿ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆದ್ದಿದ್ದ ಭಾರತ ಈ ಬಾರಿಯೂ ಸರಣಿ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿ ಟ್ರೋಫಿ ಉಳಿಸಿಕೊಂಡಿದೆ.

ಆರಂಭಿಕ ಆಟಗಾರ ಶುಭಮನ್‌ ಗಿಲ್ 146 ಎಸೆತಗಳಲ್ಲಿ 91 ರನ್ ಗಳಿಸಿ ಭದ್ರ ಬುನಾದಿ ಹಾಕಿಕೊಟ್ಟರೆ, ಮಧ್ಯಮ ಕ್ರಮಾಂದ ಆಟಗಾರ ರಿಷಬ್ ಪಂತ್ 138 ಎಸೆತಗಳಲ್ಲಿ 89 ರನ್ ರನ್ ಗಳಿಸಿ ಜಯದ ದಡ ಸೇರಿಸಿದರು.

ಟೆಸ್ಟ್ ಪಂದ್ಯ ಕೊನೆ ಕೊನೆಗೆ 20-20 ಪಂದ್ಯದ ರೀತಿ ಪರಿವರ್ತನೆಯಾಗಿತ್ತು. 100 ಓವರ್‌ಗಳಗೆ 5 ದಿನದಾಟ ಮುಕ್ತಾಯವಾಗಬೇಕಿದ್ದು ಅಷ್ಟರೊಳಗೆ ಭಾರತ 328 ರನ್ ಗಳಿಸಬೇಕಿತ್ತು. ಅಷ್ಟರಲ್ಲಿ ವಿಕೆಟ್ ಉಳಿಸಿಕೊಂಡರೆ ಡ್ರಾ, ವಿಕೆಟ್ ಕಳೆದುಕೊಂಡರೆ ಸೋಲು ಅನುಭವಿಸಬೇಕಿತ್ತು ಒಂದು ಹಂತದಲ್ಲಿ 33 ಎಸೆತಗಳಿಗೆ 19 ರನ್ ಬೇಕಿದ್ದಾಗ ವಾಷಿಂಗ್ಟನ್ ಸುಂದರ್ ಔಟ್ ಆಗಿ ಆತಂಕ ಮೂಡಿಸಿದ್ದರು. ಆದರೆ ಲೀಲಾಜಾಲವಾಗಿ ಬ್ಯಾಟ್ ಬೀಸಿದ ಪಂತ್ ಜಯ ತಂದುಕೊಟ್ಟರು.

ಶುಭ್‌ಮನ್ ಗಿಲ್, ರಿಷಬ್ ಪಂತ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ವಾಷಿಂಗ್‌ಟನ್ ಸುಂದರ್ ಮತ್ತು ನಟರಾಜನ್ ಈ ನಾಲ್ವರು ಯುವ ಆಟಗಾರರು ಅತ್ಯುತ್ತಮ ಪ್ರದರ್ಶನದಿಂದ ತಮ್ಮ ಟೆಸ್ಟ್ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ನಟರಾಜನ್ ಮೊದಲ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಗಳಿಸಿ ಗಮನ ಸೆಳೆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಮೊಹಮ್ಮದ್ ಸಿರಾಜ್ 5 ವಿಕೆಟ್ ಗಳಿಸಿ ಸಾಧನೆಗೈದರು.

ಇದನ್ನೂ ಓದಿ: 37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’


ಇದನ್ನೂ ಓದಿ: ಮುಷ್ತಾಕ್ ಅಲಿ ಟ್ರೋಫಿ: ಚಾಂಪಿಯನ್ ಕರ್ನಾಟಕ ನಾಕ್ ‌ಔಟ್ ಹಂತದತ್ತ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...