Homeಸಿನಿಮಾಕ್ರೀಡೆಆಸ್ಟ್ರೇಲಿಯಾ ಎದುರು ಜಯ: ಐತಿಹಾಸಿಕ ಬಾರ್ಡರ್ ಗವಾಸ್ಕರ್ ಸರಣಿ ಭಾರತದ ಮಡಿಲಿಗೆ

ಆಸ್ಟ್ರೇಲಿಯಾ ಎದುರು ಜಯ: ಐತಿಹಾಸಿಕ ಬಾರ್ಡರ್ ಗವಾಸ್ಕರ್ ಸರಣಿ ಭಾರತದ ಮಡಿಲಿಗೆ

- Advertisement -
- Advertisement -

ಬ್ರಿಸ್ಬೇನ್‌‌ನಲ್ಲಿ ನಡೆದ ಆಸ್ಟ್ರೇಲಿಯಾ-ಭಾರತ ನಡುವಿನ ಬಾರ್ಡರ್ ಗವಾಸ್ಕರ್ ಸರಣಿಯ ನಾಲ್ಕನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಭಾರತ ರೋಚಕ ಜಯಗಳಿಸಿದೆ. ಆ ಮೂಲಕ 2-1 ಅಂತರದಿಂದ ಸರಣಿ ತನ್ನದಾಗಿಸಿಕೊಂಡಿದೆ.

ಇಂದಿನ ಕೊನೆಯ ಪಂದ್ಯದ ಐದನೇ ದಿನದಾಟದಲ್ಲಿ ಭಾರತದ ಗೆಲುವಿಗೆ 328 ರನ್‌ಗಳ ಗುರಿ ಪಡೆದಿತ್ತು. ಶುಭ್‌ಮನ್ ಗಿಲ್ ಮತ್ತು ರಿಷಬ್ ಪಂತ್‌ರವರ ಅದ್ಭುತ ಬ್ಯಾಂಟಿಂಗ್‌ನಿಂದ ಭಾರತ ಮೂರು ವಿಕೆಟ್‌ಗಳ ಜಯ ಪಡೆಯಿತು.

ಮೊದಲು ಬ್ಯಾಟ್ ಮಾಡಿದ್ದ ಆಸ್ಟ್ರೇಲಿಯಾ ಪ್ರಥಮ ಇನ್ನಿಂಗ್ಸ್‌ನಲ್ಲಿ 369 ಮತ್ತು ದ್ವಿತೀಯ ಇನ್ನಿಂಗ್ಸ್‌ನಲ್ಲಿ 294 ರನ್ ಗಳಿಸಿತ್ತು. ಇದಕ್ಕೆ ಪ್ರತಿಯಾಗಿ ಮೊದಲ ಇನ್ನಿಂಗ್ಸ್‌ನಲ್ಲಿ 336 ರನ್ ಗಳಿಸಿದ್ದ ಭಾರತ, ಎರಡನೇ ಇನ್ನಿಂಗ್ಸ್‌ನಲ್ಲಿ 329 ರನ್ ಬಾರಿಸಿ ಜಯ ತನ್ನದಾಗಿಸಿಕೊಂಡಿತು.

ಕಳೆದ ಬಾರಿ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆದ್ದಿದ್ದ ಭಾರತ ಈ ಬಾರಿಯೂ ಸರಣಿ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿ ಟ್ರೋಫಿ ಉಳಿಸಿಕೊಂಡಿದೆ.

ಆರಂಭಿಕ ಆಟಗಾರ ಶುಭಮನ್‌ ಗಿಲ್ 146 ಎಸೆತಗಳಲ್ಲಿ 91 ರನ್ ಗಳಿಸಿ ಭದ್ರ ಬುನಾದಿ ಹಾಕಿಕೊಟ್ಟರೆ, ಮಧ್ಯಮ ಕ್ರಮಾಂದ ಆಟಗಾರ ರಿಷಬ್ ಪಂತ್ 138 ಎಸೆತಗಳಲ್ಲಿ 89 ರನ್ ರನ್ ಗಳಿಸಿ ಜಯದ ದಡ ಸೇರಿಸಿದರು.

ಟೆಸ್ಟ್ ಪಂದ್ಯ ಕೊನೆ ಕೊನೆಗೆ 20-20 ಪಂದ್ಯದ ರೀತಿ ಪರಿವರ್ತನೆಯಾಗಿತ್ತು. 100 ಓವರ್‌ಗಳಗೆ 5 ದಿನದಾಟ ಮುಕ್ತಾಯವಾಗಬೇಕಿದ್ದು ಅಷ್ಟರೊಳಗೆ ಭಾರತ 328 ರನ್ ಗಳಿಸಬೇಕಿತ್ತು. ಅಷ್ಟರಲ್ಲಿ ವಿಕೆಟ್ ಉಳಿಸಿಕೊಂಡರೆ ಡ್ರಾ, ವಿಕೆಟ್ ಕಳೆದುಕೊಂಡರೆ ಸೋಲು ಅನುಭವಿಸಬೇಕಿತ್ತು ಒಂದು ಹಂತದಲ್ಲಿ 33 ಎಸೆತಗಳಿಗೆ 19 ರನ್ ಬೇಕಿದ್ದಾಗ ವಾಷಿಂಗ್ಟನ್ ಸುಂದರ್ ಔಟ್ ಆಗಿ ಆತಂಕ ಮೂಡಿಸಿದ್ದರು. ಆದರೆ ಲೀಲಾಜಾಲವಾಗಿ ಬ್ಯಾಟ್ ಬೀಸಿದ ಪಂತ್ ಜಯ ತಂದುಕೊಟ್ಟರು.

ಶುಭ್‌ಮನ್ ಗಿಲ್, ರಿಷಬ್ ಪಂತ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ವಾಷಿಂಗ್‌ಟನ್ ಸುಂದರ್ ಮತ್ತು ನಟರಾಜನ್ ಈ ನಾಲ್ವರು ಯುವ ಆಟಗಾರರು ಅತ್ಯುತ್ತಮ ಪ್ರದರ್ಶನದಿಂದ ತಮ್ಮ ಟೆಸ್ಟ್ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ನಟರಾಜನ್ ಮೊದಲ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಗಳಿಸಿ ಗಮನ ಸೆಳೆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಮೊಹಮ್ಮದ್ ಸಿರಾಜ್ 5 ವಿಕೆಟ್ ಗಳಿಸಿ ಸಾಧನೆಗೈದರು.

ಇದನ್ನೂ ಓದಿ: 37 ಎಸೆತಗಳಲ್ಲಿ 100 ರನ್: 9 ಬೌಂಡರಿ, 11 ಸಿಕ್ಸರ್ ಸಿಡಿಸಿದ ‘ಅಜರ್’


ಇದನ್ನೂ ಓದಿ: ಮುಷ್ತಾಕ್ ಅಲಿ ಟ್ರೋಫಿ: ಚಾಂಪಿಯನ್ ಕರ್ನಾಟಕ ನಾಕ್ ‌ಔಟ್ ಹಂತದತ್ತ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...